ಜಿಲ್ಲಾಡಳಿತ ಎಚ್ಚೆತ್ತುಕೊಳ್ಳದಿದ್ದರೆ ಭಕ್ತರಿಗೆ ಆಪತ್ತು


Team Udayavani, Feb 5, 2023, 4:03 PM IST

tdy-14

ಕನಕಪುರ: ಮಾದಪ್ಪನ ದರ್ಶನಕ್ಕೆ ತೆರಳಿದ್ದ ಭಕ್ತರು, ಕಳೆದ ವರ್ಷ ಕಾವೇರಿ ಪಾಲಾದ ಘಟನೆ ಮರುಕಳಿಸದಂತೆ ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದಿದ್ದರೆ ಭಕ್ತರ ಜೀವಕ್ಕೆ ಅಪಾಯದ ಆತಂಕ ಎದುರಾಗಲಿದೆ.

ಮಲೆ ಮಹದೇಶ್ವರನ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ಭಕ್ತರು ತೆರಳುವಾಗ ಸಂಗಮದ ಕೊಗ್ಗೆದೊಡ್ಡಿಯ ಬಳಿ ಕಾವೇರಿ ನದಿಯಲ್ಲಿ ಭಕ್ತರು ಕೊಚ್ಚಿ ಹೋದ ಘಟನೆ ಸಂಭವಿಸಿ ವರ್ಷವೇ ಕಳೆಯುತ್ತಾ ಬಂದಿದೆ. ಕಳೆದ ವರ್ಷಮಹಾಶಿವರಾತ್ರಿ ಅಂಗವಾಗಿ ಮಲೆ ಮಹದೇಶ್ವರನ ಬೆಟ್ಟಕ್ಕೆ ಹೋಗುವಾಗ ಸಂಗಮದ ಕಾವೇರಿ ನದಿ ದಾಟುವಾಗ ಹಲವಾರು ಭಕ್ತರು ನೀರಿನಲ್ಲಿ ಕೋಚ್ಚಿ ಹೋಗಿ ಕೆಲವರು ಪ್ರಾಣ ಕಳೆದುಕೊಂಡ ಘಟನೆ ಮರೆಯುವಂತದ್ದಲ್ಲ. ಮತ್ತೆ ಮಹಾಶಿವರಾತ್ರಿ ಸಮೀಪವಾಗುತ್ತಿದೆ. ಮಲೆ ಮಹದೇಶ್ವರನ ದರ್ಶನಕ್ಕೆಕಾಲ್ನಡಿಗೆಯಲ್ಲಿ ತೆರಳಲು ಈಗಾಗಲೇ ಲಕ್ಷಾಂತರ ಜನಭಕ್ತರು ಸಿದ್ಧತೆ ನಡೆಸಿದ್ದಾರೆ. ಕಳೆದ ವರ್ಷ ನಡೆದ ಘಟನೆ ಮಲೆ ಮಹದೇಶ್ವರನ ದರ್ಶನಕ್ಕೆ ಕಾಲ್ನಡಿಗೆಯಲ್ಲಿ ತೆರಳುವ ಭಕ್ತರಲ್ಲಿ ಆತಂಕ ಸೃಷ್ಟಿಸಿದೆ.

ಮಹಾಶಿವರಾತ್ರಿ ಅಂಗವಾಗಿ ಪ್ರತಿವರ್ಷ ತಾಲೂಕು ಜಿಲ್ಲೆ ಹಾಗೂ ರಾಜ್ಯದ ನಾನಾ ಭಾಗಗಳಿಂದ ಲಕ್ಷಾಂತರ ಜನ ಭಕ್ತರು ಕಾಲ್ನಡಿಗೆಯಲ್ಲಿ ಬೆಟ್ಟ ತಲುಪಿ ಮಲೆ ಮಹಾದೇಶ್ವರನ ದರ್ಶನ ಪಡೆಯುವುದು ನೂರಾರು ವರ್ಷಗಳಿಂದ ನಡೆದುಕೊಂಡು ಬಂದಿದೆ. ಮಹಾಶಿವರಾತ್ರಿಗೂ ಒಂದು ವಾರಗಳ ಮುನ್ನವೇ ಮಹದೇಶ್ವರನ ಬೆಟ್ಟಕ್ಕೆ ಕಾಲ್ನಡಿಗೆ ಆರಂಭ ಮಾಡುವ ಭಕ್ತರು, ಮಹಾಶಿವರಾತ್ರಿಯಂದು ಬೆಟ್ಟದಲ್ಲಿ ಜಾಗರಣೆ ಮಾಡಿ ದೇವರ

ದರ್ಶನ ಪಡೆದರೆ ಎಂತಹ ಹರಕೆಗಳಿದ್ದರೂ ಈಡೇರುತ್ತವೆ ಎಂಬ ನಂಬಿಕೆ ಭಕ್ತರಲ್ಲಿದೆ. ಹಾಗಾಗಿ, ಪ್ರತಿ ವರ್ಷ ಹರಕೆ ಹೊರುವ ಲಕ್ಷಾಂತರ ಭಕ್ತರು ಇಷ್ಟಾರ್ಥ ಸಿದ್ಧಿಗಾಗಿ ಪ್ರತಿ ವರ್ಷ ಮಲೆ ಮಹದೇಶ್ವರನ ಬೆಟ್ಟಕ್ಕೆ ಪಾದಯಾತ್ರೆ ಮಾಡುತ್ತಾರೆ.

ಕಳೆದ ವರ್ಷ ನೀರು ಪಾಲಾದ ಭಕ್ತರು: ಏಳಗಹಳ್ಳಿ ಮಾರ್ಗವಾಗಿ ಸಂಗಮದ ಕೊಗ್ಗೆದೊಡ್ಡಿ ಬಳಿಭಕ್ತರು ಕಾವೇರಿ ನದಿ ದಾಟುವಾಗಕಳೆದ ವರ್ಷ ಹಲವಾರು ಭಕ್ತರುನೀರಿನಲ್ಲಿ ಕೊಚ್ಚಿ ಹೋಗಿದ್ದರು. ಕೆಲವರು ಪ್ರಾಣ ಕಳೆದುಕೊಂಡಿದ್ದರು. ತಡರಾತ್ರಿ ನಾಲ್ಕು ಗಂಟೆಸಮಯದಲ್ಲಿ ಕಾವೇರಿ ನದಿ ದಾಟುವಾಗ ರಕ್ಷಣೆಗೆಂದು ಒಂದು ದಡದಿಂದ ಮತ್ತೂಂದು ದಡಕ್ಕೆಕಟ್ಟಿದ ಹಗ್ಗ ಹಿಡಿದು ಭಕ್ತರು ಸಾಗುವಾಗ ಕಾವೇರಿ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿ ನೀರಿನ ರಭಸಕ್ಕೆ ರಕ್ಷಣೆಗೆಂದು ಕಟ್ಟಿದ್ದ ಹಗ್ಗ ತುಂಡರಿದು ಹಲವಾರು ಭಕ್ತರು ಕೊಚ್ಚಿ ಹೋಗಿದ್ದರು. ಜೊತೆಗಿದ್ದ ಭಕ್ತರು ಕೆಲವರನ್ನು ರಕ್ಷಣೆ ಮಾಡಿದರು. ಇನ್ನು ಕೆಲವರು ಕಾಣೆಯಾಗಿದ್ದರು. ಒಂದೆ ರಡು ಮೃತದೇಹಗಳು ಹನೂರು ತಾಲೂಕಿನ ವ್ಯಾಪ್ತಿ ಯಲ್ಲಿ ಪತ್ತೆಯಾಗಿದ್ದವು. ಈ ಘಟನೆ ನಡೆದು ವರ್ಷ ಕಳೆದಿದ್ದರೂ, ಜನರ ಮನಸ್ಸಿನಿಂದ ಇನ್ನು ಮಾಸಿಲ್ಲ.

ಮುಂಜಾಗೃತ ಕ್ರಮ ಅಗತ್ಯ: ಸಾರಿಗೆ ಮಾರ್ಗದಲ್ಲಿ ಭಕ್ತರುಮಹದೇಶ್ವರನ ಬೆಟ್ಟತಲುಪಬೇಕಾದರೆ 180 ಕಿಲೋಮೀಟರ್‌ ಕಾಲ್ನಡಿಗೆಯಲ್ಲಿಸಾಗಬೇಕು. ಆದರೆ, ಸಂಗಮದಲ್ಲಿ ಕಾವೇರಿ ನದಿ ದಾಟಿ ಹೋದರೆ ಕೇವಲ 70 ಕಿಲೋಮೀಟರ್‌ನಲ್ಲಿ ಬೆಟ್ಟ ತಲುಪಬಹುದು. ಜೊತೆಗೆ ಏಳಗಳ್ಳಿಯ ತಾಯಿ ಮುದ್ದಮ್ಮನ ದರ್ಶನ ಪಡೆದು ಪಾದಯಾತ್ರೆ ಮಾಡುವುದು ಮತ್ತೂಂದು ಕಾರಣ. ಹಾಗಾಗಿ, ಮಹಾಶಿವರಾತ್ರಿ ಅಂಗವಾಗಿ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಮಾಡುವ ಭಕ್ತರುಏಳಗಳ್ಳಿ ಗ್ರಾಮದಲ್ಲಿ ತಾಯಿ ಮುದ್ದಮ್ಮನ ದರ್ಶನ ಪಡೆದು ಹೋಗುತ್ತಾರೆ. ಹಲವಾರು ವರ್ಷಗಳಿಂದಭಕ್ತರು ಇದೇ ಮಾರ್ಗದಲ್ಲಿ ಮಾದಪ್ಪನ ದರ್ಶನಪಡೆಯುತ್ತಿದ್ದರೂ, ಜಿಲ್ಲಾಡಳಿತ ಮಾತ್ರ ಲಕ್ಷಾಂತರ ಭಕ್ತರಿಗೆ ಯಾವುದೇ ರಕ್ಷಣಾ ಅಥವಾ ಮುಂಜಾಗೃತ ಕ್ರಮ ಕೈಗೊಳ್ಳದೆ ಇರುವುದುಮಾತ್ರ ವಿಪರ್ಯಾಸ.

ಭಕ್ತರ ಧಾರ್ಮಿಕ ಯಾತ್ರೆ: ಕಾವೇರಿ ವನ್ಯ ಜೀವಿ ಧಾಮದಲ್ಲಿ ಸಾವಿರಾರು ಜನರು ಗುಂಪಾಗಿ ಓಡಾಡಲು ಅವಕಾಶವಿಲ್ಲ. ಆದರೂ, ಅರಣ್ಯ ಇಲಾಖೆ ಅಧಿಕಾರಿ ಗಳು ಲಕ್ಷಾಂತರ ಭಕ್ತರ ಧಾರ್ಮಿಕ ಯಾತ್ರೆಗೆ ಯಾವುದೇ ಅಡ್ಡಿ ಮಾಡಿಲ್ಲ. ಅಲ್ಲದೆ ಪ್ರತಿವರ್ಷ ಕಾಲ್ನಡಿಗೆಯಲ್ಲಿ ಕಾವೇರಿ ನದಿಯಲ್ಲಿ ಸಾಗುವ ಭಕ್ತರರಕ್ಷಣೆಗೆ ಒಂದು ದಡದಿಂದ ಮತ್ತೂಂದು ದಡಕ್ಕೆ ಹಗ್ಗ ಕಟ್ಟಿ ಭಕ್ತರಿಗೆ ನೆರವಾಗಿದ್ದಾರೆ. ಇನ್ನಾದರೂ ಜಿಲ್ಲಾಡಳಿತಎಚ್ಚೆತ್ತುಕೊಂಡು ಕಳೆದ ವರ್ಷ ನಡೆದ ಅವಘಡ ಸಂಭವಿಸದಂತೆ ನೊಡಿಕೊಳ್ಳಬೇಕಿದೆ.

ಆಯಾ ತಪ್ಪಿದರೆ ಅನಾಹುತ :  ಬೊಮ್ಮಸಂದ್ರ ಕಾಲ್ಕಡ ಮಾರ್ಗವಾಗಿ ಸಂಗಮದ ಕೊಗ್ಗೆದೊಡ್ಡಿ ಬಳಿ ಕಾವೇರಿ ನದಿ ದಾಟಿ ಅರಣ್ಯದಲ್ಲೇ ಹೋಗುವ ಭಕ್ತರು, ಕಾಡು ಪ್ರಾಣಿಗಳು ಯಾವಾಗ ಎಲ್ಲ ಹೇಗೆ ದಾಳಿ ಮಾಡುತ್ತವೂ ಎಂಬ ಜೀವ ಭಯದಲ್ಲೆ ಸಾಗಬೇಕಾದಅನಿವಾರ್ಯತೆಯೂ ಭಕ್ತರಿಗಿದೆ. ಸಂಗಮದ ಕೊಗ್ಗೆದೊಡ್ಡಿಯ ಬಳಿ ಕಾವೇರಿನದಿ ದಾಟುವಾಗ ಭಕ್ತರು ಎಚ್ಚರಿಕೆಯಿಂದ ಜೀವ ಕೈಯಲ್ಲಿಡಿದುಕೊಂಡೆಸಾಗಬೇಕು. ಆಯಾ ತಪ್ಪಿದರೆ ಅನಾಹುತ ಕಟ್ಟಿಟ್ಟ ಬುತ್ತಿ. ನದಿಯಲ್ಲಿ ಸಾಗುವಾಗ ಕಲ್ಲುಗಳ ಮೇಲೆ ಕಾಲು ಜಾರಿ ಬಿದ್ದಿರುವ ಉದಾಹರಣೆಗಳು ಇವೆ.

ಅಗತ್ಯ ಕ್ರಮ ಕೈಗೊಳ್ಳಿ : 

ಈಗಾಗಲೇ ಮಹಾಶಿವರಾತ್ರಿ ಸಮೀಪವಾಗುತ್ತಿದೆ. ಮಹಾದೇಶ್ವರನ ಬೆಟ್ಟಕ್ಕೆ ಕಾಲ್ನಡಿಗೆ ತೆರಳಲು ಭಕ್ತರು ಸಹ ಸಿದ್ಧತೆಯಲ್ಲಿದ್ದಾರೆ. ಹಾಗಾಗಿ, ಮಹದೇಶ್ವರನ ಬೆಟ್ಟಕ್ಕೆ ಕನ್ನಡಿಗೆಯಲ್ಲಿತೆರಳುವ ಭಕ್ತರು ಸಂಗಮದ ಕಾವೇರಿ ನದಿಯಲ್ಲಿ ಸುರಕ್ಷಿತವಾಗಿ ಒಂದು ಕಡೆಯಿಂದ ಮತ್ತೂಂದು ಕಡೆಗೆ ಓಡಾಡಲು ಅಗತ್ಯ ಕ್ರಮ ಕೈಗೊಂಡು ಜಿಲ್ಲಾಡಳಿತ ಭಕ್ತರಿಗೆ ರಕ್ಷಣೆ ನೀಡಬೇಕು ಎಂಬುದು ಭಕ್ತರ ಒತ್ತಾಯವಾಗಿದೆ.

ಭಕ್ತರ ರಕ್ಷಣೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಪತ್ರ :

ಕಳೆದ ವರ್ಷ ಸಂಗಮದಲ್ಲಿ ನಡೆದ ಅವಘಡ ಮರುಕಳಿಸಿದಂತೆ ಎಚ್ಚರಿಕೆ ವಹಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಪ್ರತಿವರ್ಷ ಬೆಂಗಳೂರು ಗ್ರಾಮಾಂತರ ಹಾಗೂ ಜಿಲ್ಲೆಯನಾನಾ ಭಾಗಗಳಿಂದ ಲಕ್ಷಾಂತರ ಭಕ್ತರು ಮಹಾಶಿವರಾತ್ರಿ ಅಂಗವಾಗಿ ಮಲೆ ಮಹದೇಶ್ವರನ ಬೆಟ್ಟಕ್ಕೆ ಹೊಗುವ ಪದ್ಧತಿ ಇದೆ.ಕಳೆದ ವರ್ಷ ಕಾಲ್ನಡಿಗೆಯಲ್ಲಿ ತೆರಳುವಾಗ ಕಾವೇರಿ ನದಿಯಲ್ಲೇ ಐದಾರು ಮಂದಿ ಭಕ್ತರು ಕೊಚ್ಚಿ ಹೋಗಿದ್ದರು. ಹಾಗಾಗಿ,ಪ್ರತಿ ವರ್ಷದಂತೆ ಈ ವರ್ಷವೂ ಸಹ ಲಕ್ಷಾಂತರ ಮಂದಿ ಭಕ್ತರು, ಕಾಲ್ನಡಿಗೆಯಲ್ಲಿ ತೆರಳುವುದರಿಂದ ಭಕ್ತರಿಗೆಅನುಕೂಲವಾಗುವಂತೆ ನದಿಯ ನೀರನ್ನು ಕಡಿಮೆ ಮಾಡಿ ಕಾಡುಪ್ರಾಣಿಗಳಿಂದ ರಕ್ಷಣೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡಿ ಭಕ್ತರಿಗೆ ಅನುಕೂಲ ಕಲ್ಪಿಸಿ ಜೊತೆಗೆ ಮುಂಜಾಗ್ರತೆ ಕ್ರಮ ಕೈಗೊಳ್ಳುವಂತೆ ಪತ್ರ ಬರೆದಿದ್ದಾರೆ.

ಕಳೆದ ವರ್ಷ ಮಾದಪ್ಪನ ಬೆಟ್ಟಕ್ಕೆ ಹೋಗುವಾಗ ನಡೆದಿರುವ ಘಟನೆ ಮರುಕಳಿಸದಂತೆ ಮುನ್ನೆಚ್ಚರಿಕೆವಹಿಸಲು ಈಗಾಗಲೇ ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗಿದೆ. ಈ ಸಂಬಂಧ ಜಿಲ್ಲಾಧಿಕಾರಿಗಳು ಸಭೆ ಕರೆದು ಅಗತ್ಯ ಕ್ರಮ ಕೈಗೊಳ್ಳಲು ತಿರ್ಮಾನಿಸುವುದಾಗಿತಿಳಿಸಿದ್ದಾರೆ. ಭಕ್ತರ ಸುರಕ್ಷತೆಗೆ ಶೀಘ್ರದಲ್ಲೇ ಸಭೆಕರೆದು ತಿರ್ಮಾನ ಕೈಗೊಳ್ಳಲಾಗುವುದು.– ಶಿವಕುಮಾರ್‌, ಗ್ರೇಡ್‌-2 ತಹಶೀಲ್ದಾರ್‌

-ಬಿ.ಟಿ.ಉಮೇಶ್‌, ಬಾಣಗಹಳ್ಳಿ

ಟಾಪ್ ನ್ಯೂಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 29  ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 29  ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.