ಮದುವಣಗಿತ್ತಿಯಂತೆ ಯಲ್ಲಮ್ಮನ ಗುಡ್ಡ ಸಿದ್ಧ

| ಕೋವಿಡ್‌ನಿಂದ ಕಳೆಗುಂದಿದ್ದ ಭರತ ಹುಣ್ಣಿಮೆ ಜಾತ್ರೆ | ಗುಡ್ದದ ಇಕ್ಕೆಲಗಳಲ್ಲಿ ಬೀಡುಬಿಟ್ಟ ಭಕ್ತರ ದಂಡು

Team Udayavani, Feb 5, 2023, 4:55 PM IST

yallamma

ಸವದತ್ತಿ: ಕೋವಿಡ್‌ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷ ಕಳೆಗುಂದಿದ್ದ ಭರತ ಹುಣ್ಣಿಮೆ ಜಾತ್ರೆಗೆ ಈ ಬಾರಿ ವಿಶೇಷ ಮೆರಗು ಬಂದಿದೆ. ರವಿವಾರ ನಡೆಯಲಿರುವ ಜಾತ್ರೆಯ ಅಂಗವಾಗಿ ಯಲ್ಲಮ್ಮನ ಗುಡ್ಡ ಮದುವಣಗಿತ್ತಿಯಂತೆ ಸಿದ್ಧಗೊಂಡಿದೆ. ದೇವಸ್ಥಾನ, ಪವಳಿಗಳನ್ನು ಶುಚಿಗೊಳಸಿ ತಳಿರು ತೋರಣಗಳಿಂದ ಅಮ್ಮನ ದೇವಸ್ಥಾನವನ್ನು ಅಲಂಕರಿಸಲಾಗಿದೆ. ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಒಂದೆಡೆ ಸೇರಿ ಜಾತ್ರೆ ಆಚರಿಸುವ ಅಮ್ಮನ ಸನ್ನಿ ಧಿಯಲ್ಲಿ ಮೂಲಸೌಕರ್ಯ ಒದಗಿಸುವ ಕಾರ್ಯ ನಡೆದಿದೆ. ಚಕ್ಕಡಿ, ಟ್ರಾಕ್ಟರ್‌, ಖಾಸಗಿ ವಾಹನ, ದ್ವಿಚಕ್ರ ವಾಹನಗಳ ಮೂಲಕ ದೇವಸ್ಥಾನದತ್ತ ಆಗಮಿಸುವ ಭಕ್ತರು ಇಲ್ಲಿಯೇ ಕೆಲ ದಿನಗಳವರೆಗೆ ವಾಸ್ತವ್ಯ ಹೂಡಿ, ದೇವಿಗೆ ಪರಡಿ ತುಂಬುತ್ತಾರೆ. ಪರಂಪರೆಯಂತೆ ಪೂಜಾ ಕೈಂಕರ್ಯ ನೆರವೇರಿಸುತ್ತಾರೆ. ಶನಿವಾರದಿಂದಲೇ ತಂಡೋಪತಂಡವಾಗಿ ಭಕ್ತರು ಗುಡ್ಡದತ್ತ ಹೆಜ್ಜೆ ಹಾಕುತ್ತಿದ್ದು, ಹಬ್ಬದ ವಾತಾವರಣ ನಿರ್ಮಾಣವಾಗಿದೆ. ರವಿವಾರ ಅದ್ಧೂರಿಯಾಗಿ ಜಾತ್ರೆ ಜರುಗಲಿದ್ದು, 20 ಲಕ್ಷಕ್ಕೂ ಅ ಧಿಕ ಭಕ್ತರು ಸೇರುವ ನಿರೀಕ್ಷೆಯಿದೆ. ದೂರದ ಊರುಗಳಿಂದ ವಿವಿಧ ವಾದ್ಯಮೇಳಗಳೊಂದಿಗೆ ಸಾಂಸ್ಕೃತಿಕ ಕುಣಿತ ಹಾಕುತ್ತಾ ಕಾಲ್ನಡಿಗೆ ಮೂಲಕ ಜೋಗತಿಯರು ದೇವರ ಮೂರ್ತಿ ಹೊತ್ತು ದೇವಸ್ಥಾನದತ್ತ ಹೆಜ್ಜೆ ಹಾಕುತ್ತಿರುವ ದೃಶ್ಯಗಳು ಕಾಣಸಿಗುತ್ತಿವೆ. ವರ್ಷಕ್ಕೊಮ್ಮೆ ಅತಿದೊಡ್ಡ ಪ್ರಮಾಣದಲ್ಲಿ ಜರುಗಲಿರುವ ಈ ಜಾತ್ರೆಗೆ ಸೇರಿದ ಅಸಂಖ್ಯಾತ ಭಕ್ತರನ್ನು ಕಣ್ತುಂಬಿಕೊಳ್ಳುವುದೇ ಸಂಭ್ರಮದ ಸಂಗತಿ. ಅತೀ ಹೆಚ್ಚು ಜನಸಂದಣಿಯಾಗುವ ಜಾತ್ರೆ ಇದಾಗಿದ್ದು, ಹುಣ್ಣಿಮೆಯ ಮೊದಲ ಹಾಗೂ ನಂತರದ ಮಂಗಳವಾರ, ಶುಕ್ರವಾರದಂದು ಜನಸಾಗರವೇ ಹರಿದುಬರಲಿದೆ. ಈಗಾಗಲೇ ಗುಡ್ಡದ  ಇಕ್ಕೆಲಗಳಲ್ಲಿ ಭಕ್ತರ ದಂಡು ಬೀಡುಬಿಟ್ಟಿದೆ.

ಸಿಸಿ ಕ್ಯಾಮೆರಾಗಳ ನಿಗಾ
300 ಪೊಲೀಸ್‌, 500 ಗೃಹರಕ್ಷಕ ಸಿಬ್ಬಂದಿ ನಿಯೋಜಿಸಿ ಬಿಗಿಭದ್ರತೆಗೆ ಒತ್ತು ಕೊಡಲಾಗಿದೆ. ಭಕ್ತರ ಚಲನವಲನ ಮೇಲೆ ನಿಗಾಯಿರಿಸಲು ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. ಪೊಲೀಸ್‌ ಇಲಾಖೆ ಸಂಚಾರ ಸಮಸ್ಯೆಯಾಗದಂತೆ ಸೂಕ್ತ ಕ್ರಮ ಜರುಗಿಸಿದೆ.

ವಿಶೇಷ ಬಸ್‌ ವ್ಯವಸ್ಥೆ
ಜಾತ್ರೆಗೆ ಬರುವ ಭಕ್ತರಿಗೆ ಅನುಕೂಲ ಕಲ್ಪಿಸಲು ಸಾರಿಗೆ ಸಂಸ್ಥೆ ವಿಶೇಷ ಬಸ್‌ ವ್ಯವಸ್ಥೆ ಕಲ್ಪಿಸಿದೆ. ಬೆಳಗಾವಿ, ಚಿಕ್ಕೋಡಿ, ಧಾರವಾಡ, ನರಗುಂದ, ಸವದತ್ತಿ ಮತ್ತಿತರ ಘಟಕಗಳಿಂದ ಬಸ್‌ಗಳು ನಿರಂತರವಾಗಿ ಕಾರ್ಯಾಚರಣೆ ನಡೆಸುತ್ತಿವೆ. ಗದಗ, ರೋಣ, ಬಳ್ಳಾರಿ, ರಾಯಚೂರ, ಸಿಂಧನೂರುಗಳಿಂದ ಆಗಮಿಸುವ ಭಕ್ತರಿಗೆ ವಾಹನ ನಿಲುಗಡೆಗಾಗಿ ವ್ಯವಸ್ಥೆ ಕಲ್ಪಿಸಲಾಗಿದೆ. ಉಗರಗೋಳದ ಕಿರಿದಾದ ರಸ್ತೆಯಲ್ಲಿ ದಟ್ಟಣೆಯಿಂದಾಗಿ ಸಮಸ್ಯೆ ಎದುರಿಸುವುದು ಸರ್ವೇ ಸಾಮಾನ್ಯದಂತಿದೆ.

-ಡಿ.ಎಸ್‌. ಕೊಪ್ಪದ

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.