ಉಡುಪಿ ಜಿಲ್ಲೆ: ಅಗ್ನಿ ಅವಘಡ ಪ್ರಮಾಣ ಇಳಿಮುಖ

ಕಳೆದ ವರ್ಷ ಒಟ್ಟಾರೆ 351 ಅಗ್ನಿಅವಘಡ - ಈ ವರ್ಷಾರಂಭದಲ್ಲೇ ಹೆಚ್ಚಳ; ತಿಂಗಳಲ್ಲಿಯೇ 93 ಪ್ರಕರಣ- ಮುನ್ನೆಚ್ಚರಿಕೆ ಅಗತ್ಯ

Team Udayavani, Feb 6, 2023, 10:17 AM IST

Fire accident

ಕುಂದಾಪುರ : ಉಡುಪಿ ಜಿಲ್ಲೆಯಲ್ಲಿ ಹಿಂದಿನ ವರ್ಷಗಳಿಗೆ ಹೋಲಿಸಿದರೆ ಕಳೆದ ವರ್ಷ ಕಾಡ್ಗಿಚ್ಚು , ಕೃಷಿ ಪ್ರದೇಶಕ್ಕೆ ಬೆಂಕಿಯಂತಹ ಅಗ್ನಿ ಅವಘಡ ಪ್ರಕರಣಗಳ ಸಂಖ್ಯೆ ಇಳಿಮುಖಗೊಂಡಿರುವುದು ಉತ್ತಮ ಬೆಳವಣಿಗೆಯಾಗಿದೆ. ಆದರೆ ಈ ವರ್ಷದ ಆರಂಭದಲ್ಲಿ ಮಾತ್ರ ಅಗ್ನಿ ಅವಘಡ ಪ್ರಕರಣಗಳು ಗರಿಷ್ಠ ಪ್ರಮಾಣದಲ್ಲಿ ಸಂಭವಿಸಿದೆ.

ಆದರೂ ಕೆಲವೊಂದು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡರೆ, ಇಂತಹ ಅವಘಡಗಳನ್ನು ತಡೆಗಟ್ಟಬಹುದು. ಕಳೆದ ವರ್ಷ ಜಿಲ್ಲೆಯಲ್ಲಿ ಒಟ್ಟಾರೆ 351 ಅಗ್ನಿ ಅವಘಡ ಪ್ರಕರಣಗಳು ಸಂಭವಿಸಿದ್ದರೆ, ಈ ವರ್ಷದ ಜನವರಿ ತಿಂಗಳೊಂದರಲ್ಲಿಯೇ ಬರೋಬ್ಬರಿ 93 ಪ್ರಕರಣಗಳು ವರದಿಯಾಗಿವೆ. ಇದಕ್ಕೂ ಹಿಂದಿನ ವರ್ಷಗಳಲ್ಲಿ ಅಂದರೆ ಕೊರೊನಾಗಿಂತಲೂ ಮುನ್ನ ವರ್ಷಕ್ಕೆ ಸುಮಾರು 800ರಷ್ಟು ಅಗ್ನಿ ಅವಘಡದಂತಹ ಪ್ರಕರಣಗಳು ಸಂಭವಿಸುತ್ತಿದ್ದವು. ಈಗ ಈ ಪ್ರಮಾಣ ಒಂದಷ್ಟರ ಮಟ್ಟಿಗೆ ಕಡಿಮೆಯಾಗಿರುವುದು ಒಳ್ಳೆಯ ಬೆಳವಣಿಗೆ.

ಕಾಡ್ಗಿಚ್ಚು ಪ್ರಕರಣವೇ ಜಾಸ್ತಿ ಪ್ರತಿ ವರ್ಷ ಕಾಡಿಗೆ ಬೆಂಕಿ, ಗೇರು ಬೀಜ ಪ್ಲಾಂಟೇಶನ್‌ನಲ್ಲಿ ಅಗ್ನಿ ಅನಾಹುತ, ಕೃಷಿ ಪ್ರದೇಶಗಳಿಗೆ ಬೆಂಕಿ ತಗುಲಿ ಹಾನಿಯಾಗುತ್ತಿರುವ ಪ್ರಕರಣಗಳೇ ಕಳೆದ ವರ್ಷವೂ ಜಾಸ್ತಿ ಇದೆ. ಅದರಲ್ಲೂ ಜನವರಿಯಿಂದ ಎಪ್ರಿಲ್‌ – ಮೇ ವರೆಗೆ ಬೇಸಗೆಯಲ್ಲಿ ದಿನಕ್ಕೆ 4-5
ಪ್ರಕರಣಗಳು ಸಂಭವಿಸುತ್ತಿದೆ. ಉಳಿದಂತೆ ಕೈಗಾರಿಕಾ ಕಟ್ಟಡಗಳು, ವಾಣಿಜ್ಯ ಕಟ್ಟಡ, ಗ್ಯಾಸ್‌ ಸೋರಿಕೆ, ಮಳಿಗೆಗಳಿಗೆ ಬೆಂಕಿಪ್ರಕರಣಗಳು ಸೇರಿವೆ.

ರಕ್ಷಣಾ ಕರೆ-115 ಪ್ರಕರಣ

ನೀರಿಗೆ ಬಿದ್ದು ಮುಳುಗಿರುವುದು, ನೀರಲ್ಲಿ ಕೊಚ್ಚಿಕೊಂಡು ಹೋಗಿರುವುದು, ಕೆರೆಗೆ ಬಿದ್ದಿರುವ ಘಟನೆಗಳು ಸೇರಿದಂತೆ ಒಟ್ಟಾರೆ ಕಳೆದ ವರ್ಷ ಜಿಲ್ಲೆಯಲ್ಲಿ 4 ಅಗ್ನಿ ಶಾಮಕ ಠಾಣೆಗಳಿಗೆ ರಕ್ಷಣೆಗಾಗಿ 115 ಕರೆಗಳು ಬಂದಿವೆ. ಉಡುಪಿ ಅಗ್ನಿ ಶಾಮಕ ಠಾಣೆಗೆ 49, ಕಾರ್ಕಳ ಠಾಣೆಗೆ 17, ಕುಂದಾಪುರಕ್ಕೆ 19, ಬೈಂದೂರಿಗೆ 24 ಹಾಗೂ ಮಲ್ಪೆ ಠಾಣೆಗೆ 6 ಕರೆಗಳು ಬಂದಿವೆ.

ಅಗ್ನಿಶಾಮಕ ಠಾಣಾವಾರು ಅಗ್ನಿಅವಘಡ ಪ್ರಕರಣ ಠಾಣೆ

                                   2022          2023 (ಜನವರಿ)
ಉಡುಪಿ                         149               28
ಕಾರ್ಕಳ                         103               20
ಕುಂದಾಪುರ                   50                20
ಬೈಂದೂರು                   19                 15
ಮಲ್ಪೆ                             30                10
ಒಟ್ಟು                             351               93

“ಜಾಗೃತಿ ಅವಶ್ಯ”
ಹಿಂದಿನ ವರ್ಷಗಳಿಗೆ ಹೋಲಿಸಿದರೆ ಇತ್ತೀಚಿಗೆ‌ ಅಂದರೆ ಕೊರೊನಾದ ಅನಂತರದಿಂದ ಅಗ್ನಿ ಅವಘಡ ಪ್ರಕರಣಗಳ ಸಂಖ್ಯೆ ಒಂದಷ್ಟು ಕಡಿಮೆಯಾಗಿದೆ. ಕಾಡ್ಗಿಚ್ಚು ಪ್ರಕರಣ ಸಹ ಇಳಿಮುಖವಾಗಿದೆ. ಬೇಸಗೆಯಲ್ಲಿ ಆಗಾಗ್ಗೆ ಅಲ್ಲಲ್ಲಿ ಸಂಭವಿಸುತ್ತಿರುತ್ತದೆ. ಕೆಲವೊಂದು ಕಡೆಗಳಲ್ಲಿ ಮುನ್ನೆಚ್ಚರಿಕೆಯ ಜಾಗೃತಿ ವಹಿಸಿದರೆ ಖಂಡಿತ ನಿಯಂತ್ರಣ ಸಾಧ್ಯ.– ಎಚ್‌.ಎಂ. ವಸಂತ ಕುಮಾರ್‌, ಉಡುಪಿ ಜಿಲ್ಲಾ ಅಗ್ನಿ ದಳದ ಅಧಿಕಾರಿ

ಯಾವುದೇ ಅವಘಡ ಸಂಭವಿಸಿದಾಗ ತುರ್ತು ಕರೆಗಾಗಿ 112 ಅಥವಾ 101ಕ್ಕೆ ಕರೆ ಮಾಡಬಹುದು
ಉಡುಪಿ ಅಗ್ನಿ ಶಾಮಕ ಠಾಣೆ –
0820-2520333
ಮಲ್ಪೆ ಅಗ್ನಿ ಶಾಮಕ ಠಾಣೆ –
0820-2537222
ಕುಂದಾಪುರ ಅಗ್ನಿ ಶಾಮಕ ಠಾಣೆ –
08254-200724, 08254-230724
ಬೈಂದೂರು ಅಗ್ನಿ ಶಾಮಕ ಠಾಣೆ-
08254-251101, 08254-251102
ಕಾರ್ಕಳ ಅಗ್ನಿ ಶಾಮಕ ಠಾಣೆ –
08258-232223

-ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-thekkatte

ತೆಕ್ಕಟ್ಟೆ: ಅಪಾಯದಲ್ಲಿದ್ದ ನವಿಲಿನ ರಕ್ಷಣೆ

9-

KMC: ಅಂತರಾಷ್ಟ್ರೀಯ ಥಲಸ್ಸೇಮಿಯಾ ದಿನ ಆಚರಣೆ; ಥಲಸ್ಸೆಮಿಯಾ ಕ್ಲಿನಿಕ್ ಪ್ರಾರಂಭ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಹಾಸಭೆ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಹಾಸಭೆ

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.