ಅನಾರೋಗ್ಯ ಪೀಡಿತ ತಂದೆಯನ್ನೇ ಕೊಲೆಗೈದ ಮಗ
Team Udayavani, Feb 7, 2023, 5:34 PM IST
ದೆಹಲಿ: ಅನಾರೋಗ್ಯ ಪೀಡಿತ ತಂದೆ ತನ್ನ ಹಾಸಿಗೆ ಯಲ್ಲಿ ಮೂತ್ರ ಮಾಡಿದ್ದಾರೆಂಬ ಕಾರಣಕ್ಕೆ ಮಗನೇ ತಂದೆಯನ್ನು ಕೊಂದ ಘಟನೆ ದೆಹಲಿಯಲ್ಲಿ ನಡೆದಿದೆ. ತಾಯಿಯ ಸಂಶಯದ ಹಿನ್ನಲೆ ತನಿಖೆ ನಡೆಸಿದಾಗ ಮಗನೇ ತಂದೆಯನ್ನು ಕೊಲೆಗೈದ ಸಂಗತಿ ಬೆಳಕಿಗೆ ಬಂದಿದೆ.
20 ವರ್ಷದ ಸುಮಿತ್ ಕುಮಾರ್ ತನ್ನ 45 ವರ್ಷ ಪ್ರಾಯದ ಪಾರ್ಶ್ವವಾಯುವಿಗೆ ತುತ್ತಾಗಿದ್ದ ತಂದೆ ರಾಜೇಂದ್ರ ಕುಮಾರ್ ಜೊತೆ ಮದ್ಯಪಾನ ಮಾಡುತ್ತಿದ್ದ ಸಂದರ್ಭ ತಂದೆ ತನ್ನ ಹಾಸಿಗೆಯಲ್ಲೇ ಮೂತ್ರ ವಿಸರ್ಜನೆ ಮಾಡಿದರೆಂಬ ಕಾರಣಕ್ಕೆ ತಂದೆಯನ್ನೇ ಕೊಲೆಗೈದ ಘಟನೆ ಬೆಚ್ಚಿಬೀಳಿಸಿದೆ.
ಅನಾರೋಗ್ಯದಿಂದ ಮೃತಪಟ್ಟಿದ್ದಾರೆಂದುಕೊಂಡ ಪೋಲಿಸರು ತಾಯಿಯ ಸಂಶಯದ ಹಿನ್ನಲೆ ಮಗನನ್ನು ವಿಚಾರಣೆ ನಡೆಸಿದಾಗ ಸತ್ಯಾಂಶ ಹೊರಬಿದ್ದಿದೆ.
ʻಮೃತ ರಾಜೇಂದ್ರ ಕುಮಾರ್ ಅನಾರೋಗ್ಯಕ್ಕೆ ತುತ್ತಾಗಿ ಕಳೆದ ಎರಡು ವರ್ಷಗಳಿಂದ ಹಾಸಿಗೆ ಹಿಡಿದಿದ್ದರು. ಹಾಗಾಗಿ ಮಗನಿಂದಲೇ ಅವರ ಕೊಲೆಯಾದ ಬಗ್ಗೆ ನಮಗೆ ಯಾವುದೇ ಸಂಶಯವಿರಲಿಲ್ಲ. ತಾಯಿಯ ಸಂಶಯ ಆಧರಿಸಿ ತನಿಖೆ ಮಾಡಿದಾಗ ನಿಜಾಂಶ ತಿಳಿದುಬಂದಿದೆʼ ಎಂದು ಡಿಸಿಪಿ ಶ್ವೇತಾ ಚಹ್ವಾಣ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ