ಆಯುಷ್‌ ಪದವಿ: ಸೀಟು ಹಂಚಿಕೆ ಪ್ರಕಟ


Team Udayavani, Feb 7, 2023, 11:47 PM IST

ಆಯುಷ್‌ ಪದವಿ: ಸೀಟು ಹಂಚಿಕೆ ಪ್ರಕಟ

ಕುಂದಾಪುರ : ಆಯುಷ್‌ ಪದವಿ ಕಾಲೇಜಿನ ದಾಖಲಾತಿಗೆ ಸಂಬಂಧಿಸಿದಂತೆ ಸರಕಾರವು ಕೊನೆಗೂ ಸೀಟು ಹಂಚಿಕೆ ಮಾಡಿ, ಶುಲ್ಕವನ್ನು ನಿಗದಿಪಡಿಸಿ ಆದೇಶ ಹೊರಡಿಸಿದೆ. 8-9 ತಿಂಗಳಿನಿಂದ ಈ ಶೈಕ್ಷಣಿಕ ಸಾಲಿನ ಬಿಎಎಂಎಸ್‌ (ಬ್ಯಾಚುಲರ್‌ ಆಫ್‌ ಆಯುರ್ವೇದಿಕ್‌ ಮೆಡಿಸಿನ್‌ ಮತ್ತು ಸರ್ಜರಿ ಕೋರ್ಸ್‌) ಪದವಿ ಕಾಲೇಜುಗಳ ಆರಂಭಕ್ಕಾಗಿ ಸಾವಿರಾರು ಮಂದಿ ವಿದ್ಯಾರ್ಥಿಗಳು ಕಾಯುತ್ತಿದ್ದಾರೆ.

2022-23ನೇ ಸಾಲಿನ ರಾಜ್ಯದ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಖಾಸಗಿ ಆಯುರ್ವೇದ ಮತ್ತು ಯುನಾನಿ ವೈದ್ಯಕೀಯ ಮಹಾವಿದ್ಯಾಲಯಗಳ ಪದವಿ ಕೋರ್ಸ್‌ಗಳಿಗೆ ಸೀಟುಗಳನ್ನು ಹಂಚಿಕೆ ಮಾಡಲಾಗಿದೆ. ಶುಲ್ಕವನ್ನು ಸಹ ನಿಗದಿಗೊಳಿಸಲಾಗಿದೆ.

ಕಳೆದ ಶೈಕ್ಷಣಿಕ ಸಾಲಿನ ಪಿಯುಸಿ ಫಲಿತಾಂಶ ಪ್ರಕಟಗೊಂಡು 8-9 ತಿಂಗಳು ಕಳೆದಿದ್ದು, ಬಿಎಎಂಎಸ್‌ ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ಸಾವಿರಾರು ವಿದ್ಯಾರ್ಥಿಗಳು ನೀಟ್‌ ವೈದ್ಯಕೀಯ ಪ್ರವೇಶ ಪರೀಕ್ಷೆ ಬರೆದಿದ್ದರು. ರಾಜ್ಯ ಸರಕಾರ ಹಾಗೂ ಖಾಸಗಿ ಆಯುಷ್‌ ಕಾಲೇಜುಗಳ ನಡುವಿನ ಬಿಕ್ಕಟ್ಟಿನಿಂದಾಗಿ ದಾಖಲಾತಿ ಪ್ರಕ್ರಿಯೆಯೇ ಆರಂಭವಾಗಿರಲಿಲ್ಲ.

ಸೀಟು ಹಂಚಿಕೆ ವಿವರ
ಸರಕಾರಿ, ಅನುದಾನಿತ, ಖಾಸಗಿ ಅನುದಾನ ರಹಿತ ಆಯುರ್ವೇದ ಮತ್ತು ಯುನಾನಿ ವೈದ್ಯಕೀಯ ಕಾಲೇಜುಗಳಲ್ಲಿ ಲಭ್ಯವಿರುವ ಸೀಟುಗಳ ಪೈಕಿ ಶೇ. 15 ಆಲ್‌ ಇಂಡಿಯಾ ಕೋಟಾ, ಉಳಿದಂತೆ ರಾಜ್ಯ ಸರಕಾರ ಹಾಗೂ ಆಡಳಿತ ಮಂಡಳಿಯ ಕೋಟಾಗಳನ್ನು ಹಂಚಿಕೆ ಮಾಡಲಾಗಿದೆ. ಇದರಂತೆ ಸರಕಾರಿ ಹಾಗೂ ಅನುದಾನಿತ ಕಾಲೇಜುಗಳಲ್ಲಿ ಶೇ. 85ರಷ್ಟು, ಖಾಸಗಿ ಕಾಲೇಜುಗಳ ಶೇ. 100ರಷ್ಟು ಸೀಟುಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದಲೇ ಹಂಚಿಕೆ ಮಾಡಲಾಗಿದೆ. ಇನ್ನು ಸರಕಾರಿ, ಅನುದಾನಿತ ಕಾಲೇಜುಗಳ ಶೇ. 15ರ ಆಲ್‌ ಇಂಡಿಯಾ ಕೋಟಾದಲ್ಲಿ ಆಯುಷ್‌ ಮಂತ್ರಾಲಯದ ಮೂಲಕ, ಖಾಸಗಿ ಕಾಲೇಜುಗಳ ಶೇ.15 ರ ಸೀಟುಗಳನ್ನು ರಾಜ್ಯ ಕೌನ್ಸಿಲಿಂಗ್‌ ಏಜೆನ್ಸಿ ಮೂಲಕ ಹಂಚಿಕೆ ಮಾಡುವಂತೆ ಆಯುಷ್‌ ಮಂತ್ರಾಲಯ ಸೂಚಿಸಿದೆ.

ಇನ್ನು ರಾಜ್ಯ ಖಾಸಗಿ ಮಹಾವಿದ್ಯಾಲಯಗಳ ಫೆಡರೇಷನ್‌ ಹಾಗೂ ಆಡಳಿತ ಮಂಡಳಿಗಳ ಪ್ರತಿನಿಧಿಗಳು ಆಡಳಿತ ಮಂಡಳಿ ಕೋಟಾಗೆ ನಿಗದಿಪಡಿಸಿರುವ ಶುಲ್ಕವನ್ನು ಪರಿಷ್ಕರಿಸಿ, ವಾರ್ಷಿಕ 6 ಲಕ್ಷ ರೂ.ಗೆ ಏರಿಸಲು ಕೋರಿದ್ದರು. ಆದರೆ ಕೊರೊನಾ ಕಾರಣಕ್ಕೆ ಆಡಳಿತ ಮಂಡಳಿ ಹಾಗೂ ಎನ್‌ಆರ್‌ಐ ಕೋಟಾ ಸೀಟುಗಳ ಶುಲ್ಕವನ್ನು ಕಳೆದ ವರ್ಷ ನಿಗದಿಪಡಿಸಿದ್ದನ್ನೇ ಮುಂದುವರಿಸಲು ತೀರ್ಮಾನಿಸಲಾಗಿದೆ.

ಉದಯವಾಣಿ ವರದಿ
ಆಯುಷ್‌ ಪದವಿ ಕಾಲೇಜು ಆರಂಭವಾಗದಿರುವ ಬಗ್ಗೆ, ವಿದ್ಯಾರ್ಥಿಗಳು ಇದರಿಂದ ತೊಂದರೆ ಅನುಭವಿಸುತ್ತಿರುವ ಕುರಿತಂತೆ “ಉದಯವಾಣಿ’ಯು ಜ. 21ರಂದು ಮುಖಪುಟದಲ್ಲಿ “ಸರಕಾರ – ಖಾಸಗಿ ಬಿಕ್ಕಟ್ಟು; ವಿದ್ಯಾರ್ಥಿಗಳಿಗೆ ಇಕ್ಕಟ್ಟು’ ಎನ್ನುವುದಾಗಿ ವಿಶೇಷ ವರದಿ ಪ್ರಕಟಿಸಿತ್ತು. ಆ ಬಳಿಕ ವೈದ್ಯಕೀಯ ಶಿಕ್ಷಣ ಸಚಿವ ಡಾ| ಕೆ. ಸುಧಾಕರ್‌ ಅವರು ಸಭೆ ನಡೆಸಿ, ಶೀಘ್ರ ತ್ವರಿತ ಕ್ರಮಕೈಗೊಳ್ಳಲು ಸಂಬಂಧಪಟ್ಟ ಆಯುಷ್‌ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದರು.

ಟಾಪ್ ನ್ಯೂಸ್

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.