ಸಂಸತ್ನಲ್ಲಿ ಅದಾನಿ ವಿಚಾರ ಸದ್ದು, ಮೋದಿ ವಿರುದ್ಧ ಖರ್ಗೆ ಗುಡುಗು
Team Udayavani, Feb 8, 2023, 10:50 PM IST
ನವದೆಹಲಿ: ಉದ್ಯಮಿ ಗೌತಮ್ ಅದಾನಿ ಅವರ ಆಸ್ತಿ ಎರಡೂವರೆ ವರ್ಷಗಳಲ್ಲಿ ಹೆಚ್ಚಳವಾದದ್ದು ಹೇಗೆ ಎಂದು ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರಶ್ನಿಸಿದ್ದಾರೆ. ರಾಜ್ಯಸಭೆಯಲ್ಲಿ ಬುಧವಾರ ಮಾತನಾಡಿದ ಅವರು, 2014ರಲ್ಲಿ ಪ್ರಧಾನಿ ಮೋದಿ “ನಾ ಖಾವೋಂಗಾ, ನಾ ಖಾನೇ ದೋಂಗಾ’ ಎಂದಿದ್ದರು. ದೇಶದ ಕೆಲವೇ ಕೆಲವು ಉದ್ಯಮಿಗಳು ಜನರ ಹಾಗೂ ದೇಶದ ಸಂಪತ್ತನ್ನು ಹೊಂದಿದ್ದಾರೆ. ಅದಕ್ಕೆ ಪ್ರಧಾನಿ ಏಕೆ ಆಸ್ಪದ ನೀಡಿದರು ಎಂದು ಪ್ರಶ್ನಿಸಿದರು. ಅದಾನಿಯವರ ಆಸ್ತಿ ಹೆಚ್ಚಾಗಿರುವುದರಲ್ಲಿ ಏನಾದರೂ ಜಾದೂ ನಡೆದಿದೆಯೇ ಎಂದು ಲಘು ಧಾಟಿಯಲ್ಲಿ ಚುಚ್ಚಿದರು.
ಪ್ರಧಾನಿಯವರ ವಿರುದ್ಧ ಬಿಬಿಸಿ ನಿರ್ಮಿಸಿದ ವಿವಾದಾತ್ಮಕ ಸಾಕ್ಷ್ಯಚಿತ್ರ, ಪಠಾಣ್ ಸಿನಿಮಾ ವಿರುದ್ಧ ಕೇಂದ್ರ ಸರ್ಕಾರ, ಬಿಜೆಪಿ ಮತ್ತು ಸಂಘ ಪರಿವಾರದ ಸದಸ್ಯರು ಟೀಕೆ ಮಾಡಿದ್ದರು ಮತ್ತು ವಿರೋಧಿಸಿದ್ದರು. ಇದರಿಂದಾಗಿಯೇ ಅದನ್ನು ಜನರು ಹೆಚ್ಚಿನ ಪ್ರಮಾಣದಲ್ಲಿ ನೋಡಿದ್ದಾರೆ. ವಿವಿಗಳನ್ನೂ ಪ್ರದರ್ಶನಗೊಂಡಿದೆ. ಹೀಗಾಗಿ, ನೀವು ಯಾವುದನ್ನು ಹೆಚ್ಚಾಗಿ ವಿರೋಧಿಸುತ್ತಿರೋ, ಅದನ್ನು ಜನ ಹೆಚ್ಚು ವೀಕ್ಷಿಸುತ್ತಾರೆ. ಸಾಕ್ಷ್ಯಚಿತ್ರದಿಂದ ನಿಮಗೆ ತೊಂದರೆ ಇಲ್ಲ ಎಂದಾದಮೇಲೆ ಪ್ರತಿಕ್ರಿಯಿಸಬಹುದಿತ್ತು ಎಂದಿದ್ದಾರೆ.
ಇದೇ ವೇಳೆ ದೇಶದ ಸಮಸ್ಯೆಗಳನ್ನೂ ನೋಡಿಯೂ ಪ್ರಧಾನಿ ತುಟಿ ಬಿಚ್ಚುತ್ತಿಲ್ಲ, ತಮಗೆ ತೊಂದರೆಯಾಗುವ ಸಂದರ್ಭ ಬಂದರೆ ಅವರು ಮೌನಿಬಾಬನಂತೆ ಆಗಿಬಿಡುತ್ತಾರೆ ಎಂದು ಖರ್ಗೆ ಟೀಕಿಸಿದರು.
ಖರ್ಗೆಗೆ ಸೂಚನೆ:
ಪ್ರಧಾನಿ ಮೋದಿ ಅವರನ್ನು ಮೌನಿ ಬಾಬಾ ಎಂದ ಖರ್ಗೆ ಅವರ ಹೇಳಿಕೆಗೆ ಸಭಾಪತಿ ಜಗದೀಶ್ ಧಂಕರ್ ಆಕ್ಷೇಪ ವ್ಯಕ್ತ ಪಡಿಸಿದರು. ನೀವು ಹಿರಿಯ ನಾಯಕರು, ಇಂಥ ಪದಪ್ರಯೋಗಗಳು ನಿಮಗೆ ತಕ್ಕದ್ದಲ್ಲ. ಘನತೆಗೆ ತಕ್ಕಂತೆ ಮಾತನಾಡಿ ಎಂದು ಖರ್ಗೆ ಅವರಿಗೆ ಮನವರಿಕೆ ಮಾಡಿದ್ದಾರೆ.
ಖರ್ಗೆ ಶಾಲಿನ ದರ 56 ಸಾವಿರ!
ಖರ್ಗೆ, 56,332 ರೂ.ಗಳ ಮೌಲ್ಯದ ಲೂಯಿಸ್ ವಿಟಾನ್ ಬ್ರ್ಯಾಂಡ್ನ ಶಾಲು ಧರಿಸಿದ್ದರು. ಈ ವಿಚಾರ ಬಿಜೆಪಿಗರಿಂದ ಟೀಕೆಗೆ ಗುರಿಯಾಗಿದೆ. ಬಿಜೆಪಿ ರಾಷ್ಟ್ರೀಯ ವಕ್ತಾರರಾದ ಶೆಹಜಾದ್ ಪೂನಾವಾಲಾ ಈ ಕುರಿತು ಟ್ವೀಟ್ ಮಾಡಿದ್ದಾರೆ. ಅನುಸರಿಸುವ ಆಯ್ಕೆಯೊಂದು, ಬೋಧನೆಯೊಂದು ಎಂದು ಶೀರ್ಷಿಕೆ ನೀಡಿದ್ದಾರೆ.ಅಲ್ಲದೇ, ಖರ್ಗೆ ಅವರ ಫೋಟೋ ಹಾಗೂ ಮೋದಿ ಅವರ ಫೋಟೋಗಳನ್ನು ಹೋಲಿಕೆ ಮಾಡಿದ್ದಾರೆ. ಮೋದಿ ಅವರು ಧರಿಸಿದ್ದ ವೇಸ್ಕೋಟ್ ಮರುಬಳಕೆ ಪ್ಲಾಸಿಕ್ನಿಂದ ತಯಾರಿಸಲಾಗಿದೆ ಇದು ಸುಸ್ಥಿರ ಅಭಿವೃದ್ಧಿ ಮತ್ತು ಪರಿಸರ ಸ್ನೇಹಿಯ ಸೂಚಕದ ಫ್ಯಾಶನ್. ಅದೇ ಖರ್ಗೆ ಅವರ ಶಾಲು ? ಈ ಬಗ್ಗೆ ಏನು ಹೇಳಲಾಗುವುದಿಲ್ಲ ಎಂದು ಪರೋಕ್ಷವಾಗಿ ಟೀಕಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು