ಪುತ್ತೂರು: ಇಂದಿನಿಂದ ಕೃಷಿ ಯಂತ್ರ ಮೇಳ

ತಲೆ ಎತ್ತಿದೆ ಪಾರಂಪರಿಕ ಗ್ರಾಮ : ಕನಸಿನ ಮನೆಯೂ ಸಿದ್ಧ

Team Udayavani, Feb 10, 2023, 10:54 AM IST

Untitled-1

ಪುತ್ತೂರು: ನೆಹರೂನಗರದ ವಿವೇಕಾನಂದ ಕಾಲೇಜ್‌  ಆಫ್‌ ಎಂಜಿನಿಯರಿಂಗ್‌ ಆಂಡ್‌ ಟೆಕ್ನಾಲಜಿಯ ಆವರಣದಲ್ಲಿ ಫೆ.10 ರಿಂದ 12 ರ ತನಕ 3 ದಿನಗಳ ಕಾಲ ನಡೆಯಲಿರುವ ಬೃಹತ್‌ ಕೃಷಿಯಂತ್ರ ಮೇಳ-2023 ಮತ್ತು ಕನಸಿನ ಮನೆ ಪ್ರದರ್ಶನಕ್ಕೆ ಇಡೀ ಮೈದಾನ ಸಿದ್ಧವಾಗಿದೆ.
ಮೇಳದ ಯಶಸ್ಸಿಗೆ ಎಂಜಿನಿಯರಿಂಗ್‌ ಕಾಲೇಜಿನ 1500 ವಿದ್ಯಾರ್ಥಿಗಳು, ಸಿಬಂದಿ ವರ್ಗ ಶ್ರಮಿಸುತ್ತಿದ್ದು ಪಾರಂಪರಿಕ ಶೈಲಿಯಲ್ಲಿ ಸ್ವಾಗತ ಕೋರಲು ಪೂರ್ಣ ತಯಾರಿ ನಡೆಸಲಾಗಿದೆ. ಒಂದೆಡೆ ಯಂತ್ರ, ಇನ್ನೊಂದೆಡೆ ಪ್ರಾತ್ಯಕ್ಷಿಕೆ, ಬಗೆ ಬಗೆಯ ಆಹಾರ ತಿನಿಸಿನ ಮಳಿಗೆ, ವಿವಿಧ ಜಾತಿಯ ಗಿಡಗಳ ನರ್ಸರಿ ಹೀಗೆ ಇಡೀ ಕೃಷಿ ಯಂತ್ರ ಮೇಳ ಜನರಿಗೆ ಒಂದು ಪ್ಯಾಕೇಜ್‌ ರೂಪದಲ್ಲಿ ಸೌಲಭ್ಯ ಒದಗಿಸಲು ಅಣಿಯಾಗಿದೆ. ಕಳೆದ ನಾಲ್ಕು ಕೃಷಿ ಯಂತ್ರ ಮೇಳದ ಅನುಭವ ಪರಿಣಾಮ ಈ ಬಾರಿ ಅಪೂರ್ವ ರೀತಿಯ ಸಿದ್ಧತೆ ನಡೆದಿದೆ. ಯಂತ್ರ ಮೇಳಕ್ಕೆ ಸಂಬಂಧಿಸಿದಂತೆ 140 ಮಳಿಗೆಗಳು ಮತ್ತು ಕನಸಿನ ಮನೆಗೆ ಸಂಬಂಧಪಟ್ಟ 83 ಮಳಿಗೆಗಳು ಮೈದಾನಕ್ಕೆ ದಾಪುಗಾಳಿಟ್ಟಿದೆ. ಅದಕ್ಕೆ ಬೇಕಾದ ಸ್ಟಾಲ್‌ಗ‌ಳನ್ನು ಸ್ಥಾಪಿಸಲಾಗಿದೆ. ಬಿಸಿಲು ಹಾಗೂ ಧೂಳು ತಾಕದಂತೆ ತೆಳು ಪರದೆ ಅಳವಡಿಸಲಾಗಿದೆ. ಅಟೋಮೊಬೈಲ್‌, ಆಹಾರ ಮಳಿಗೆಗಗಳು, ವ್ಯಾಪಾರ ಮಳಿಗೆ, ಸಾವಯವ ಸಿರಿ ಮಳಿಗೆಗಳು ಇಲ್ಲಿ ಇರಲಿದೆ. ಡ್ರೋನ್‌ ಮೂಲಕ ಔಷಧ ಸಿಂಪಡಣೆಗೆ ಅಡಿಕೆ ಮರಗಳನ್ನು ನೆಡಲಾಗಿದ್ದು ಡ್ರೋನ್‌ ಬಳಕೆಯ ಪ್ರಾತ್ಯಕ್ಷಿಕೆಯ ಅನುಭವ ಪಡೆದುಕೊಳ್ಳಲು ಅಡಿಕೆ ಬೆಳೆಗಾರರಿಗೆ ನೆರವಾಗಲಿದೆ. ಸುಸಜ್ಜಿತ ಕಾರ್ಬನ್‌ ಫೈಬರ್‌ ದೋಟಿಗಳ ಪ್ರದರ್ಶನ, ಜಲಕೃಷಿ ವಿಧಾನದ ಸಮಗ್ರ ಪರಿಚಯ, ಸ್ಥಳದಲ್ಲೇ ಮಣ್ಣಿನ ಪಾತ್ರೆಗಳ ತಯಾರಿ ಮತ್ತು ಮಾರಾಟ, ಪಾರಂಪರಿಕ ಮಾದರಿ ಗ್ರಾಮ ವಿಶೇಷ ಆಕರ್ಷಣೆಯಾಗಿ ಗಮನ ಸೆಳೆಯಲಿದೆ. ವೀಕ್ಷಣೆ, ಖರೀದಿಗೆ ಅನುಕೂಲ ರೀತಿಯಲ್ಲಿ ಮಳಿಗೆ ಸ್ಥಾಪಿಸಿದ್ದು ಮೂರು ದಿನದಲ್ಲಿ ಅಂದಾಜು 5 ಲಕ್ಷಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆ ಹೊಂದಲಾಗಿದೆ. ಸುಸಜ್ಜಿತ ಪಾರ್ಕಿಂಗ್‌ಗೂ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಪುತ್ತೂರು ನಗರದಲ್ಲಿ ಜಾಥಾ:
ಕ್ಯಾಂಪ್ಕೋ ಸಂಸ್ಥೆ, ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನ, ವಿವೇಕಾನಂದ ವಿದ್ಯಾವರ್ಧಕ ಸಂಘ, ವಿವೇಕಾನಂದ ಕಾಲೇಜ್‌ ಆಫ್‌ ಎಂಜಿನಿಯರಿಂಗ್‌ ಆ್ಯಂಡ್‌ ಟೆಕ್ನಾಲಜಿ ಪುತ್ತೂರು ಮತ್ತು ಮಂಗಳೂರು ವಿಶ್ವವಿದ್ಯಾನಿಲಯ ಇದರ ಸಂಯುಕ್ತ ಆಶ್ರಯದಲ್ಲಿ ಪುತ್ತೂರಿನ ವಿವೇಕಾನಂದ ಕಾಲೇಜ್‌ ಆಫ್‌ ಎಂಜಿನಿಯರಿಂಗ್‌ ಆ್ಯಂಡ್‌ ಟೆಕ್ನಾಲಜಿಯ ಆವರಣದಲ್ಲಿ ಫೆ. 10 ರಿಂದ 12 ತನಕ 3 ದಿನಗಳ ಕಾಲ 5ನೇ ಕೃಷಿಯಂತ್ರ ಮೇಳ-2023 ಮತ್ತು ಕನಸಿನ ಮನೆ ಪ್ರದರ್ಶನವೂ ನಡೆಯಲಿದ್ದು ಈ ಕಾರ್ಯಕ್ರಮಗಳ ಬಗ್ಗೆ ರೈತಾಪಿ ವರ್ಗಕ್ಕೆ ಮತ್ತು ಜನತೆಗೆ ಮಾಹಿತಿ ನೀಡುವ ಸಲುವಾಗಿ ಕ್ಯಾಂಪ್ಕೋ ಸಿಬಂದಿ ಮತ್ತು ವಿವೇಕಾನಂದ ಕಾಲೇಜ್‌ ಆಫ್‌ ಎಂಜಿನಿಯರಿಂಗ್‌ ಆ್ಯಂಡ್‌ ಟೆಕ್ನಾಲಜಿಯ ವಿದ್ಯಾರ್ಥಿಗಳು ಮತ್ತು ಸಿಬಂದಿ ಪುತ್ತೂರು ನಗರದಲ್ಲಿ ಜಾಥಾ ನಡೆಸಿದರು. ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ಅವರು ಕ್ಯಾಂಪ್ಕೋ ಚಾಕಲೇಟ್‌ ಕಾರ್ಖಾನೆಯ ಬಳಿ ಜಾಥಾಕ್ಕೆ ಚಾಲನೆ ನೀಡಿದರು. ದರ್ಬೆ ವೃತ್ತದಲ್ಲಿ ವಿವೇಕಾನಂದ ಎಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಸಿಬಂದಿ ಸೇರಿಕೊಂಡು ಜಾಥಾವನ್ನು ಮುನ್ನಡೆಸಿದರು. ಜಾಥಾವು ದರ್ಬೆಯಿಂದ ಮುಖ್ಯ ರಸ್ತೆಯಲ್ಲಿ ಸಾಗಿ ಬಸ್‌ ನಿಲ್ದಾಣ, ವೆಂಕಟ್ರಮಣ ದೇಗುಲ, ಅಂಚೆ ಕಚೇರಿಯ ಮುಂಬದಿಯಿಂದ ಶ್ರೀಧರ ಭಟ್‌ ಅವರ ಅಂಗಡಿಯ ಮುಂದಾಗಿ ಕಿಲ್ಲೆ ಮೈದಾನದಲ್ಲಿ ಸಮಾಪನಗೊಂಡಿತು. ಯಂತ್ರಮೇಳ ಮತ್ತು ಸುವರ್ಣ ಮಹೋತ್ಸವ ಆಚರಣೆಯ ಕರಪತ್ರಗಳನ್ನು ಹಂಚಲಾಯಿತು. ಕ್ಯಾಂಪ್ಕೋ ವ್ಯವಸ್ಥಾಪಕ ನಿರ್ದೇಶಕ ಎಚ್‌. ಎಂ.ಕೃಷ್ಣ ಕುಮಾರ್‌, ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಸತೀಶ್‌ ರಾವ್‌ ಪಿ., ಕಾರ್ಯದರ್ಶಿ ಡಾ ಕೆ.ಎಂ.ಕೃಷ್ಣ ಭಟ್‌, ವಿವೇಕಾನಂದ ಕಾಲೇಜ್‌ ಆಫ್‌ ಎಂಜಿನಿಯರಿಂಗ್‌ ಎಂಡ್‌ ಟೆಕ್ನಾಲಜಿಯ ಆಡಳಿತ ಮಂಡಳಿಯ ಅಧ್ಯಕ್ಷ ವಿಶ್ವಾಸ್‌ ಶೆಣೈ, ಸಂಚಾಲಕ ಸುಬ್ರಮಣ್ಯ ಭಟ್‌.ಟಿ.ಎಸ್‌., ಕೋಶಾಧಿಕಾರಿ ಮುರಳೀಧರ ಭಟ್‌, ಯಂತ್ರಮೇಳದ ಸಂಯೋಜಕ ರವಿಕೃಷ್ಣ ಡಿ.ಕಲ್ಲಾಜೆ, ನಿರ್ದೇಶಕರಾದ ಸಂತೋಷ್‌ ಕುತ್ತಮೊಟ್ಟೆ, ಪ್ರಾಂಶುಪಾಲ ಡಾ|ಮಹೇಶ್‌ ಪ್ರಸನ್ನ.ಕೆ ಮೊದಲಾದವರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ

Shivraj tangadagi

Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Monsoon: ಭತ್ತ ಬೇಸಾಯದ ನಿರೀಕ್ಷೆ ಮೂಡಿಸಿದ ಮಳೆ; ಉಳುಮೆಗೆ ಪೂರ್ವ ತಯಾರಿ

Monsoon: ಭತ್ತ ಬೇಸಾಯದ ನಿರೀಕ್ಷೆ ಮೂಡಿಸಿದ ಮಳೆ; ಉಳುಮೆಗೆ ಪೂರ್ವ ತಯಾರಿ

5

ಲಕ್ಷದ್ವೀಪ ಪ್ರವಾಸೋದ್ಯಮದ ಅವಕಾಶ ಬಳಸಿಕೊಳ್ಳುವಲ್ಲಿ ಮಂಗಳೂರು ಹಿನ್ನಡೆ

ISIS case: ಅಮ್ಮರ್‌ ಅಬ್ದುಲ್‌ಗೆ ಜಾಮೀನು

ISIS case: ಅಮ್ಮರ್‌ ಅಬ್ದುಲ್‌ಗೆ ಜಾಮೀನು

Mangaluru: ನಾಪತ್ತೆಯಾಗಿದ್ದ ಮಹಿಳೆ ವಿಮಾನ ನಿಲ್ದಾಣದಲ್ಲಿ ಪ್ರತ್ಯಕ್ಷ!

Mangaluru: ನಾಪತ್ತೆಯಾಗಿದ್ದ ಮಹಿಳೆ ವಿಮಾನ ನಿಲ್ದಾಣದಲ್ಲಿ ಪ್ರತ್ಯಕ್ಷ!

Theft Case: ಮನೆಯಿಂದ ಚಿನ್ನಾಭರಣ ಕಳವು

Theft Case: ಮನೆಯಿಂದ ಚಿನ್ನಾಭರಣ ಕಳವು

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

1-qwewqewqe

Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.