ಬೈಕ್ ಸ್ಕಿಡ್ ಆಗಿ ಬಿದ್ದ ವೇಳೆ ಅಪರಿಚಿತ ವಾಹನ ಹರಿದು ಸವಾರ ಸಾವು
Team Udayavani, Feb 11, 2023, 10:48 PM IST
ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರ ಅಡ್ಯಾರ್ಕಟ್ಟೆಯ ಬಳಿ ಶುಕ್ರವಾರ ರಾತ್ರಿ ಬೈಕ್ ಸ್ಕಿಡ್ ಆಗಿ ಬಿದ್ದ ವೇಳೆ ಅಪರಿಚಿತ ವಾಹನ ಹರಿದ ಪರಿಣಾಮ ಸವಾರ ಯುವಕ ಸ್ಥಳದಲ್ಲೇ ಮೃತಪಟ್ಟದ್ದಾರೆ.
ವಿಟ್ಲ ಸಮೀಪದ ಮಾಣಿಲ ಪಕಳಕುಂಜ ಬಾಳೆಕಾನ ನಿವಾಸಿ ಕಾರ್ತಿಕ್ ಮಣಿಯಾಣಿ (24) ಮೃತಪಟ್ಟ ಯುವಕ. ರಾತ್ರಿ ನಗರದಲ್ಲಿ ಡೆಕೋರೇಷನ್ ಕೆಲಸ ಮುಗಿಸಿ ಕಾರ್ತಿಕ್ ಅವರು ರಾತ್ರಿ 10 ಗಂಟೆ ವೇಳೆಗೆ ಮನೆಗೆ ತೆರಳುತ್ತಿದ್ದಾಗ ನಗರ ಹೊರವಲಯದ ಅಡ್ಯಾರ್ಕಟ್ಟೆ ಬಳಿ ಬೈಕ್ ಸ್ಕಿಡ್ ಆಗಿ ಡಿವೈಡರ್ಗೆ ತಾಗಿ ರಸ್ತೆಯ ಇನ್ನೊಂದು ಬದಿಯಲ್ಲಿ ಬಿದ್ದಿದ್ದಾರೆ. ಈ ವೇಳೆ ಫರಂಗಿಪೇಟೆ ಕಡೆಯಿಂದ ಮಂಗಳೂರಿಗೆ ಬರುತ್ತಿದ್ದ ವಾಹನವೊಂದು ಕಾರ್ತಿಕ್ ಅವರ ಮೇಲೆಯೇ ಹರಿದ ಪರಿಣಾಮ ಮೃತಪಟ್ಟಿದ್ದಾರೆ. ಮಂಗಳೂರು ಸಂಚಾರ ದಕ್ಷಿಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಆದಾಯಕ್ಕಿಂತ ಅಧಿಕ ಆಸ್ತಿ: ಲೋಕೋಪಯೋಗಿ ಎಂಜಿನಿಯರ್ ಖುಲಾಸೆ