ಯಕ್ಷಗಾನ ದ್ರಾವಿಡ ಕಲೆ ಅಲ್ಲ, ಕನ್ನಡ ಸಾರದ ಭಾರತೀಯ ಕಲೆ: ಪ್ರಭಾಕರ ಜೋಷಿ


Team Udayavani, Feb 11, 2023, 11:42 PM IST

ಯಕ್ಷಗಾನ ದ್ರಾವಿಡ ಕಲೆ ಅಲ್ಲ, ಕನ್ನಡ ಸಾರದ ಭಾರತೀಯ ಕಲೆ: ಪ್ರಭಾಕರ ಜೋಷಿ

ಉಡುಪಿ: ಯಕ್ಷಗಾನ ದ್ರಾವಿಡ ಕಲೆ ಅಲ್ಲ. ಕನ್ನಡದ ಸಾರ ತುಂಬಿರುವ ಭಾರತೀಯ ಕಲೆ. ಕ್ರಿಕೆಟ್‌ನಲ್ಲಿ ಟೆಸ್ಟ್‌, ಒನ್‌ಡೇ, ಟಿ-20 ಇರುವಂತೆ ಯಕ್ಷಗಾನದಲ್ಲೂ ಕಾಲಮಿತಿ ಇರಬೇಕು. ಆದರೆ ಎಲ್ಲಿಯೂ ಮೂಲ ಆಶಯಕ್ಕೆ ಧಕ್ಕೆ ಆಗಬಾರದು. ಯಕ್ಷಗಾನದಲ್ಲಿ ಯಕ್ಷಗಾನೇತರ ಅಂಶಗಳು ತುಂಬಿಕೊಳ್ಳುತ್ತಿವೆ. ಅವುಗಳನ್ನು ತ್ಯಜಿಸಿ ಯಕ್ಷಗಾನಕ್ಕೆ ಅಗತ್ಯವಾಗಿ ಬೇಕಾದದ್ದನ್ನು ಉಳಿಸಿಕೊಳ್ಳಬೇಕಿದೆ ಎಂದು ಯಕ್ಷಗಾನ ಸಮ್ಮೇಳನಾಧ್ಯಕ್ಷ ಡಾ| ಎಂ. ಪ್ರಭಾಕರ ಜೋಷಿ ಅಭಿಪ್ರಾಯ ವ್ಯಕ್ತಪಡಿಸಿದರು.

ಸಮ್ಮೇಳನದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಶ್ರೀಕೃಷ್ಣ ಮಠಕ್ಕೂ ಯಕ್ಷಗಾನಕ್ಕೂ ಸಂಬಂಧವಿದೆ ಎಂದೂ ಹೇಳಲಾಗುತ್ತದೆ. ಇದರ ಕುರಿತಾಗಿ ಸಂಶೋಧನೆ ಕೈಗೊಳ್ಳಬಹುದು. ಇದು ದ್ರಾವಿಡ ಕಲೆಯಲ್ಲ. ಅಖೀಲ ಭಾರತೀಯ ಕಲೆ. ಕರಾವಳಿಯಲ್ಲಿ ಯಕ್ಷಗಾನ, ಕೇರಳದಲ್ಲಿ ಕಥಕ್ಕಳಿ, ಈಶಾನ್ಯ ರಾಜ್ಯಗಳಲ್ಲಿ ಬೇರೆ ಬೇರೆ ಹೆಸರುಗಳಲ್ಲಿ ಗುರುತಿಸಿಕೊಂಡು ವಿದೇಶಕ್ಕೂ ಹಬ್ಬಿದೆ. ಇದರಲ್ಲಿ ಶಾಸ್ತ್ರೀಯ, ಅಶಾಸ್ತ್ರೀಯ ಎಂಬುದಿಲ್ಲ. ಆದರೆ ಕಲೆಗೆ ಅತಿರೇಕದ ವಿಮರ್ಶೆ ಸಲ್ಲದು. ಕಲೆಯ ಪ್ರೋತ್ಸಾಹದ ದೃಷ್ಟಿಯಿಂದ ಶಿಕ್ಷಣ ನೀತಿಯಲ್ಲೂ ಅಮೂಲಾಗ್ರ ಬದಲಾವಣೆಯಾಗಬೇಕು ಎಂದು ಹೇಳಿದರು.

ಪ್ರತಿವರ್ಷ ಅಥವಾ ಎರಡು ವರ್ಷಕ್ಕೊಮ್ಮೆ ರಾಜ್ಯ ಸಮ್ಮೇಳನ, ಮೂರು ವರ್ಷಕ್ಕೊಮ್ಮೆ ಅಂತಾರಾಷ್ಟ್ರೀಯ ಸಮ್ಮೇಳನ ನಡೆಯಬೇಕು. ಪದ್ಮಶ್ರೀ, ಕೇಂದ್ರ ಅಕಾಡೆಮಿ ಪ್ರಶಸ್ತಿಗೆ ಯಕ್ಷಗಾನ ಕಲಾವಿದರನ್ನು ನಿರಂತರವಾಗಿ ಪರಿಗಣಿಸುವಂತೆ ಆಗಬೇಕು. ಸರಕಾರವು ಯಕ್ಷಗಾನ ಸಮಗ್ರ ಅಭಿವೃದ್ಧಿಗೆ 10 ಕೋ.ರೂ. ಮೀಸಲಿಡಬೇಕು. ಯಕ್ಷಗಾನವು ಅಭಿಮಾನ, ಅಭಿಯಾನ, ಅಭಿಜ್ಞಾನವಾಗಬೇಕು ಎಂದು ಹೇಳಿದರು.

ಸೇವೆಯ ಸ್ಮರಣೆ
ಕರಾವಳಿಯಲ್ಲಿ ಯಕ್ಷಗಾನ ಬೆಳೆಯಲು ಆಧುನಿಕ ಮಣಿಪಾಲದ ನಿರ್ಮಾತೃ ಡಾ| ಟಿ.ಎಂ.ಎ. ಪೈ, ಮಾಹೆ ವಿಶ್ವವಿದ್ಯಾಲಯ ಹಾಗೂ ಉದಯವಾಣಿ ದಿನಪತ್ರಿಕೆಯ ಯೋಗದಾನ ಸಾಕಷ್ಟಿದೆ. ಉದಯವಾಣಿ ದಿನಪತ್ರಿಕೆಯು ಅನೇಕ ರೀತಿಯಲ್ಲಿ ಕಲಾವಿದರನ್ನು ಪರಿಚಯಿಸುವಲ್ಲಿ ಸಹಕಾರಿಯಾಗಿದೆ ಎಂದು ಸಮ್ಮೇಳನಾಧ್ಯಕ್ಷರು ಸ್ಮರಿಸಿಕೊಂಡರು. ಅಕಾಡೆಮಿಯ ಮಾಜಿ ಅಧ್ಯಕ್ಷ ಪ್ರೊ| ಎಂ.ಎಲ್‌. ಸಾಮಗ ಅವರು ಸಮ್ಮೇಳನಾಧ್ಯಕ್ಷರ ಪರಿಚಯ ಮಾಡಿದರು.

ಸಮ್ಮೇಳನಾಧ್ಯಕ್ಷರೊಂದಿಗೆ ಸಂವಾದ
ಯಕ್ಷಗಾನದ ಸ್ವರೂಪ, ಸಂಚಲನೆ, ವಿಚಲನೆಗೆ ಸಂಬಂಧಿಸಿದಂತೆ ಸಾಂಪ್ರದಾಯಿಕ ಚೌಕಟ್ಟಿದೆ. ಕಲೆಯಲ್ಲಿ ಯಾವುದೇ ವಸ್ತು ಸ್ವತಂತ್ರವಾಗಿರದು. ಹೊಸತನವನ್ನು ತರುವಾಗ ವಿಚಲನೆ ಉಂಟಾಗುವುದು ಸ್ವಾಭಾವಿಕ. ರಂಗದಲ್ಲಿ ಕಂಡದ್ದು, ಕಲೆಯಲ್ಲ. ಮನಸ್ಸಿನಲ್ಲಿ ಪೂರ್ಣಗೊಳಿಸುವುದೇ ಯಕ್ಷಗಾನ ಕಲೆ. ವಸ್ತುವನ್ನು ಯಕ್ಷಗಾನೀಕರಿಸಬೇಕು, ಹೊರತು ಯಕ್ಷಗಾನವನ್ನು ವಸ್ತುವನ್ನಾಗಿಸಬಾರದು ಎಂದು ಸಂವಾದದಲ್ಲಿ ಡಾ| ಎಂ. ಪ್ರಭಾಕರ ಜೋಷಿ ಹೇಳಿದರು.

ಯಕ್ಷಗಾನದ ಪ್ರಬೋಧನೆ ಮಾಡಬಲ್ಲ ಗ್ರಂಥಾಲಯವನ್ನು ದೇವಾಲಯಗಳು ಸ್ಥಾಪಿಸಿ, ಪುಸ್ತಕಗಳನ್ನು ಓದಿ ಅರ್ಥ ಮಾಡಿಕೊಂಡು ಕಲಾವಿದರಿಗೆ ವಿವರಿಸುವ ಯಕ್ಷಗಾನದ ಪರಿಣಿತಿ ಇರುವ ಶಿಕ್ಷಕರನ್ನು ನೇಮಿಸಬೇಕು. ಇದರಿಂದಾಗಿ ಯುವ ಕಲಾವಿದರಿಗೆ ಯಕ್ಷಗಾನದ ಪ್ರಯೋಗದ ಜತೆಗೆ ಮೌಲ್ಯಗಳ ಅರಿವಾಗುತ್ತದೆ. ಪ್ರಸ್ತುತ ಸ್ತ್ರೀ-ಪುರುಷ ಪಾತ್ರಧಾರಿಗಳು ಸಮಾನವಾಗಿ ರಂಗಸ್ಥಳದಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ಇದರಲ್ಲಿ ಸಾಮಾಜಿಕ ಮತ್ತು ರಾಜಕೀಯ ಬದಲಾವಣೆಯಾಗಬೇಕಿದೆ ಎಂದರು.

ಯಕ್ಷಗಾನದ ಕಲಾ ಪ್ರಕಾರವಾಗಿ ತಾಳಮದ್ದಲೆಯನ್ನು ಅಂಗೀಕರಿಸಿಕೊಂಡಿದ್ದೇವೆ. ವಾಚಕದಲ್ಲಿ ಯಕ್ಷಗಾನೀಯತೆ ಇದ್ದರೆ ತಾಳಮದ್ದಳೆ ಅರ್ಥಗರ್ಭಿತವಾಗಲಿದೆ ಎಂದು ಹೇಳಿದರು.
ಹಿರಿಯ ಸಾಹಿತಿ ಅಂಬಾತನಯ ಮುದ್ರಾಡಿ, ಹಿರಿಯ ವಿದ್ವಾಂಸ ಡಾ| ರಮಾನಂದ ಬನಾರಿ ಉಪಸ್ಥಿತರಿದ್ದರು. ಸಂವಾದಕಾರರಾಗಿ ಕಲಾವಿದ ವಾಸುದೇವ ರಂಗಭಟ್‌ ನಿರ್ವಹಿಸಿದರು.

ಸಮ್ಮೇಳನಾಧ್ಯಕ್ಷರ ಒತ್ತಾಸೆ
– ಯಕ್ಷಗಾನದ ವಿವಿಧ ತಿಟ್ಟು, ಮೇಳಗಳು, ತಾಳಮದ್ದಳೆ, ಮೂಡಲ ಪಾಯ, ಘಟ್ಟದ ಕೋರೆ, ಕೇಳಿಕೆ ಸಹಿತ ತಿಟ್ಟುಗಳ ಲಭ್ಯ ಪಾರಂಪರಿಕ ರೂಪಗಳ ತಜ್ಞ ದಾಖಲೀಕರಣ ಆಗಬೇಕು
– ದೇವಾಲಯಗಳ ಮೇಳಗಳನ್ನು ಸಾಂಸ್ಕೃತಿಕ ನೀತಿಯೊಂದಿಗೆ ವ್ಯವಸ್ಥಿತ ಗೊಳಿಸಲು ತಜ್ಞರ ಸಮಿತಿ ಆಗಬೇಕುಯಕ್ಷಗಾನ ಕಲೆ, ಕಲಾವಿದ, ಮೇಳಗಳು, ಗ್ರಂಥಗಳ ಸಮಗ್ರ ಡಾಟಾಬೇಸ್‌ ಸಿದ್ಧವಾಗಬೇಕು
– ಕಲಾವಿದರಿಗೆ ಭವಿಷ್ಯ ನಿಧಿ ಸಿಗಬೇಕು.
– ಹತ್ತುವರ್ಷ ಪೂರೈಸಿರುವ ಯಕ್ಷಗಾನ ಕಲಾಕೇಂದ್ರಗಳಿಗೆ ಖಾಯಂ ಅನುದಾನ ಸಿಗಬೇಕು.
– ದೇವಾಲಯಗಳಿಗೆ ಕಲಾ ನೀತಿ ಅನುಷ್ಠಾನ ಮಾಡಬೇಕು.
– ರಾಷ್ಟ್ರೀಯ, ಅಂತಾರಾಷ್ಟ್ರೀಯ ಕಲೋತ್ಸವದಲ್ಲಿ ಯಕ್ಷಗಾನಕ್ಕೆ ಅವಕಾಶ ಸಿಗಬೇಕು, ಇದಕ್ಕಾಗಿ ರಾಜ್ಯ ಸಭಾ ಸದಸ್ಯರೂ ಆದ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಕಾರ್ಯಪಡೆ ಸ್ಥಾಪಿಸಬೇಕು.
– ಯಕ್ಷಗಾನಕ್ಕೆ ಯುನೆಸ್ಕೋ ಮಾನ್ಯತೆ ಸಿಗುವಂತೆ ಪ್ರಯತ್ನ ಪುನರ್‌ ಆರಂಭಿಸಬೇಕು.
– ಯಕ್ಷಗಾನ ದಿರಿಸು ಉಳಿಸಲು ಗೆಜ್ಜೆಬ್ಯಾಂಕ್‌ ಸ್ಥಾಪಿಸಬೇಕು ಎಂಬುದು ಸೇರಿದಂತೆ 28 ಒತ್ತಾಸೆಗಳನ್ನು ಪ್ರಸ್ತಾವಿಸಿದರು.

ಟಾಪ್ ನ್ಯೂಸ್

Minister Parameshwara ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಹದಗೆಟ್ಟಿಲ್ಲ

Minister Parameshwara ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಹದಗೆಟ್ಟಿಲ್ಲ

ದಕ್ಷ ಗೃಹ ಸಚಿವರು ಬೇಕಾಗಿದ್ದಾರೆ: ಬಿಜೆಪಿ

Karnataka ದಕ್ಷ ಗೃಹ ಸಚಿವರು ಬೇಕಾಗಿದ್ದಾರೆ: ಬಿಜೆಪಿ

ಕಾನೂನು ಸುವ್ಯವಸ್ಥೆ ಕಾಪಾಡಿ: ಡಿಜಿಪಿಗೆ ಬಿಜೆಪಿ ಆಗ್ರಹ

Karnataka ಕಾನೂನು ಸುವ್ಯವಸ್ಥೆ ಕಾಪಾಡಿ: ಡಿಜಿಪಿಗೆ ಬಿಜೆಪಿ ಆಗ್ರಹ

Madhu Bangarappa ಸಂತ್ರಸ್ತರನ್ನು ಹೇಗೆ ಕಾಪಾಡಬೇಕು ಎನ್ನುವ ಬಗ್ಗೆಯೂ ಯೋಚಿಸಿ

Madhu Bangarappa ಸಂತ್ರಸ್ತರನ್ನು ಹೇಗೆ ಕಾಪಾಡಬೇಕು ಎನ್ನುವ ಬಗ್ಗೆಯೂ ಯೋಚಿಸಿ

Karnataka MLC Election; ಆಗ್ನೇಯ ಶಿಕ್ಷಕರ ಕ್ಷೇತ್ರ: 15 ಮಂದಿ ಅಂತಿಮ

Karnataka MLC Election; ಆಗ್ನೇಯ ಶಿಕ್ಷಕರ ಕ್ಷೇತ್ರ: 15 ಮಂದಿ ಅಂತಿಮ

SSLC Exam 2 ಪರಿಷ್ಕೃತ ವೇಳಾಪಟ್ಟಿ: ಜೂ.14ರಿಂದ ಪರೀಕ್ಷೆ

SSLC Exam 2 ಪರಿಷ್ಕೃತ ವೇಳಾಪಟ್ಟಿ: ಜೂ.14ರಿಂದ ಪರೀಕ್ಷೆ

police crime

Hubli; ನೇಹಾ & ಅಂಜಲಿ ಹತ್ಯೆ ಪ್ರಕರಣ: ಡಿಸಿಪಿ ತಲೆದಂಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minister Parameshwara ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಹದಗೆಟ್ಟಿಲ್ಲ

Minister Parameshwara ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಹದಗೆಟ್ಟಿಲ್ಲ

badminton

ಥಾಯ್ಲೆಂಡ್‌ ಓಪನ್‌ : ಪ್ರಶಸ್ತಿ ಸುತ್ತಿಗೆ ಚಿರಾಗ್‌-ಸಾತ್ವಿಕ್‌

ದಕ್ಷ ಗೃಹ ಸಚಿವರು ಬೇಕಾಗಿದ್ದಾರೆ: ಬಿಜೆಪಿ

Karnataka ದಕ್ಷ ಗೃಹ ಸಚಿವರು ಬೇಕಾಗಿದ್ದಾರೆ: ಬಿಜೆಪಿ

ಕಾನೂನು ಸುವ್ಯವಸ್ಥೆ ಕಾಪಾಡಿ: ಡಿಜಿಪಿಗೆ ಬಿಜೆಪಿ ಆಗ್ರಹ

Karnataka ಕಾನೂನು ಸುವ್ಯವಸ್ಥೆ ಕಾಪಾಡಿ: ಡಿಜಿಪಿಗೆ ಬಿಜೆಪಿ ಆಗ್ರಹ

Madhu Bangarappa ಸಂತ್ರಸ್ತರನ್ನು ಹೇಗೆ ಕಾಪಾಡಬೇಕು ಎನ್ನುವ ಬಗ್ಗೆಯೂ ಯೋಚಿಸಿ

Madhu Bangarappa ಸಂತ್ರಸ್ತರನ್ನು ಹೇಗೆ ಕಾಪಾಡಬೇಕು ಎನ್ನುವ ಬಗ್ಗೆಯೂ ಯೋಚಿಸಿ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Minister Parameshwara ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಹದಗೆಟ್ಟಿಲ್ಲ

Minister Parameshwara ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಹದಗೆಟ್ಟಿಲ್ಲ

badminton

ಥಾಯ್ಲೆಂಡ್‌ ಓಪನ್‌ : ಪ್ರಶಸ್ತಿ ಸುತ್ತಿಗೆ ಚಿರಾಗ್‌-ಸಾತ್ವಿಕ್‌

ದಕ್ಷ ಗೃಹ ಸಚಿವರು ಬೇಕಾಗಿದ್ದಾರೆ: ಬಿಜೆಪಿ

Karnataka ದಕ್ಷ ಗೃಹ ಸಚಿವರು ಬೇಕಾಗಿದ್ದಾರೆ: ಬಿಜೆಪಿ

ಕಾನೂನು ಸುವ್ಯವಸ್ಥೆ ಕಾಪಾಡಿ: ಡಿಜಿಪಿಗೆ ಬಿಜೆಪಿ ಆಗ್ರಹ

Karnataka ಕಾನೂನು ಸುವ್ಯವಸ್ಥೆ ಕಾಪಾಡಿ: ಡಿಜಿಪಿಗೆ ಬಿಜೆಪಿ ಆಗ್ರಹ

Madhu Bangarappa ಸಂತ್ರಸ್ತರನ್ನು ಹೇಗೆ ಕಾಪಾಡಬೇಕು ಎನ್ನುವ ಬಗ್ಗೆಯೂ ಯೋಚಿಸಿ

Madhu Bangarappa ಸಂತ್ರಸ್ತರನ್ನು ಹೇಗೆ ಕಾಪಾಡಬೇಕು ಎನ್ನುವ ಬಗ್ಗೆಯೂ ಯೋಚಿಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.