ಫೆ. 13-15: ಇಂಡೋ-ಜಪಾನ್‌ ಅಂತಾರಾಷ್ಟ್ರೀಯ ಸಮ್ಮೇಳನ


Team Udayavani, Feb 12, 2023, 11:14 AM IST

indo japan

ಮಂಗಳೂರು: ನಿಟ್ಟೆ ವಿಶ್ವವಿದ್ಯಾನಿಲಯದ(ಪರಿಗಣಿತ) ದೇರಳಕಟ್ಟೆಯ ಕೆ.ಎಸ್‌.ಹೆಗ್ಡೆ ಮೆಡಿಕಲ್‌ ಕಾಲೇಜಿನ ಮಾನವ ಶರೀರ ಕ್ರಿಯಾಶಾಸ್ತ್ರ ವಿಭಾಗ ಮತ್ತು ಕೇಂದ್ರ ಸಂಶೋಧನ ಪ್ರಯೋಗಾಲವುಜಪಾನ್‌ನ ಮಿಯಾಝಾಕಿ ವಿ.ವಿ. ಸಹಯೋಗದೊಂದಿಗೆ ದೇರಳಕಟ್ಟೆಯಲ್ಲಿರುವ ಎ.ಬಿ. ಶೆಟ್ಟಿ ಮೆಮೋರಿಯಲ್‌ ಇನ್‌ಸ್ಟಿಟ್ಯೂಟ್‌ ಆಫ್ ಡೆಂಟಲ್‌ ಸಾಯನ್ಸಸ್‌ನ ಆವಿಷ್ಕಾರ್‌ ಆಡಿಯೋರಿಯಂನಲ್ಲಿ ಫೆ. 13ರಿಂದ 15ರ ವರೆಗೆ ಇಂಡೋ-ಜಪಾನ್‌ ಅಂತಾರಾಷ್ಟ್ರೀಯ ಸಮ್ಮೇಳನ (ಐಜೆಸಿಎಸ್‌ಪಿ-2023) ಹಮ್ಮಿಕೊಂಡಿದೆ.

ಭಾರತ ಸರಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗ (ಡಿಎಸ್‌ಟಿ) ಹಾಗೂ ಜಪಾನಿನ ಜಪಾನೀಸ್‌ ಸೊಸೈಟಿ ಫಾರ್‌ ಪ್ರೊಮೋಷನ್‌ ಆಫ್ ಸಾಯನ್ಸ್‌ (ಜೆಎಸ್‌ಪಿಎಸ್‌) ದ್ವಿಪಕ್ಷೀಯ ವೈಜ್ಞಾನಿಕ ಸಹಯೋಗ ಉತ್ತೇಜಿಸಲು ಪ್ರತಿ ವರ್ಷ ಸ್ಪರ್ಧಾತ್ಮಕ ರೀತಿಯಲ್ಲಿ ವೈಜ್ಞಾನಿಕ ಪ್ರಸ್ತಾವನೆಗಳನ್ನು ಆಹ್ವಾನಿಸುತ್ತದೆ.

ಈ ಜಂಟಿ ಪ್ರಸ್ತಾವನೆಗಳು ಭೌತವಿಜ್ಞಾನ, ರಾಸಾಯನಿಕ ವಿಜ್ಞಾನ, ಜೀವ ವಿಜ್ಞಾನ, ಕೃಷಿ, ಗಣಿತ, ಗಣಕ ವಿಜ್ಞಾನ, ಖಗೋಳ, ಭೂವಿಜ್ಞಾನ, ವಸ್ತು ವಿಜ್ಞಾನ ಮತ್ತು ಕೋವಿಡ್‌ಗೆ-19ಗೆ ಸಂಬಂಧಿಸಿದ ವಿಷಯಗಳು ಒಳಗೊಂಡಿರುತ್ತದೆ. ಅಂತೆಯೇ 2021ರ ಜಂಟಿ ಪ್ರಸ್ತಾವನೆಯಲ್ಲಿ ನಿಟ್ಟೆ ವಿಶ್ವವಿದ್ಯಾಲಯದ ವತಿಯಿಂದ ಸಲ್ಲಿಸಿದ ಪ್ರಸ್ತಾವನೆಯನ್ನು ಡಿಎಸ್‌ಟಿ ಮತ್ತು ಜೆಎಸ್‌ಪಿಎಸ್‌ ಅನುಮೋದಿಸಿದೆ.

ಭಾರತದಿಂದ ಸಲ್ಲಿಸಲ್ಪಟ್ಟಿದ್ದ ಒಟ್ಟು 146 ಪ್ರಸ್ತಾವನೆಗಳಲ್ಲಿ ಕೇವಲ 23 ಪ್ರಸ್ತಾವನೆಗಳು ಅನುಮೋದಿಸಲ್ಪಟ್ಟಿವೆ. ಆ ಪ್ರಯುಕ್ತ ಡಿಎಸ್‌ಟಿ ಮತ್ತು ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಬೆಂಬಲದೊಂದಿಗೆ “ಫ್ಯೂಚರ್‌ ಹೆಲ್ತ್‌ ಸ್ಟ್ರಾéಟಜಿ ಬೈ ಟ್ರಾನ್ಸ್‌ಡಿಸಿಪ್ಲೀನರಿ ಅಪ್ರೋಚ್‌’ ವಿಷಯದಲ್ಲಿ ಸಮ್ಮೇಳನ ಆಯೋಜಿಸಲಾಗಿದೆ.

ಈ ಸಮ್ಮೇಳನದಲ್ಲಿ ದೇಶ ವಿದೇಶಗಳ 400ಕ್ಕೂ ಅಧಿಕ ಸಂಶೋಧಕರು, ವಿದ್ಯಾರ್ಥಿಗಳು ವೈದ್ಯಕೀಯ ಕ್ಷೇತ್ರದಲ್ಲಿನ ಸುಧಾರಿತ ತಂತ್ರಜ್ಞಾನಗಳ ವಿಷಯವಾಗಿ ಉಪನ್ಯಾಸಗಳನ್ನು ನೀಡಲಿದ್ದಾರೆ ಎಂದು ಕೆ.ಎಸ್‌. ಹೆಗ್ಡೆ ಮೆಡಿಕಲ್‌ ಅಕಾಡೆಮಿಯ (ಕ್ಷೇಮ) ವೈಸ್‌ ಡೀನ್‌ ಡಾ| ಜಯಪ್ರಕಾಶ್‌ ಪಿ. ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಸಮ್ಮೇಳನದಲ್ಲಿ ಹೊಸದಿಲ್ಲಿಯ ಜಿ.ಬಿ. ಪಂತ್‌ ಆಸ್ಪತ್ರೆಯ ಹೃದಯ ತಜ್ಞ ಡಾ| ಮೋಹಿತ್‌ ಡಿ. ಗುಪ್ತಾ, ಐಐಟಿ, ಐಐಎಂಗಳಲ್ಲಿ ಮೌಲ್ಯ ಶಿಕ್ಷಣ ತರಬೇತುದಾರರಾಗಿರುವ ಡಾ| ಇ.ವಿ. ಸ್ವಾಮಿನಾಥನ್‌ ಪ್ರಮುಖ ಭಾಷಣ ಮಾಡಲಿದ್ದಾರೆ. ಸಮ್ಮೇಳನಕ್ಕೆ ಪೂರಕವಾಗಿ ಮಾನವ ಶರೀರಕ್ರಿಯಾಶಾಸ್ತ್ರ ವಿಭಾಗ, ಸಮುದಾಯ ವೈದ್ಯಕೀಯ ವಿಭಾಗ ಮತ್ತು ಕೇಂದ್ರ ಸಂಶೋಧನಾ ಪ್ರಯೋಗಾಲಯವು ಫೆ. 13ರಂದು ರಾಷ್ಟ್ರಮಟ್ಟದ ಪೂರ್ವಸಮ್ಮೇಳನ ಕಾರ್ಯಾಗಾರ ಹಮ್ಮಿಕೊಂಡಿದೆ ಎಂದರು. ಜಪಾನ್‌ ಮಿಯಾಝಾಕಿ ವಿ.ವಿ. ಪ್ರಾಧ್ಯಾಪಕ ಡಾ| ಹರೀಶ್‌ ಕುಮಾರ್‌ ಮಧ್ಯಸ್ಥ, “ಕ್ಷೇಮ’ದ ಪ್ರಾಧ್ಯಾಪಿಕೆ ಡಾ|ಸುಚೇತನಾ ಕುಮಾರಿ ಎನ್‌., ಸಹಾಯಕ ಪ್ರಾಧ್ಯಾಪಕ ಡಾ| ದಾಮೋದರ ಗೌಡ ಕೆ.ಎಂ. ಹಾಗೂ ಮೊದಲಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Monsoon: ಭತ್ತ ಬೇಸಾಯದ ನಿರೀಕ್ಷೆ ಮೂಡಿಸಿದ ಮಳೆ; ಉಳುಮೆಗೆ ಪೂರ್ವ ತಯಾರಿ

Monsoon: ಭತ್ತ ಬೇಸಾಯದ ನಿರೀಕ್ಷೆ ಮೂಡಿಸಿದ ಮಳೆ; ಉಳುಮೆಗೆ ಪೂರ್ವ ತಯಾರಿ

5

ಲಕ್ಷದ್ವೀಪ ಪ್ರವಾಸೋದ್ಯಮದ ಅವಕಾಶ ಬಳಸಿಕೊಳ್ಳುವಲ್ಲಿ ಮಂಗಳೂರು ಹಿನ್ನಡೆ

ISIS case: ಅಮ್ಮರ್‌ ಅಬ್ದುಲ್‌ಗೆ ಜಾಮೀನು

ISIS case: ಅಮ್ಮರ್‌ ಅಬ್ದುಲ್‌ಗೆ ಜಾಮೀನು

Mangaluru: ನಾಪತ್ತೆಯಾಗಿದ್ದ ಮಹಿಳೆ ವಿಮಾನ ನಿಲ್ದಾಣದಲ್ಲಿ ಪ್ರತ್ಯಕ್ಷ!

Mangaluru: ನಾಪತ್ತೆಯಾಗಿದ್ದ ಮಹಿಳೆ ವಿಮಾನ ನಿಲ್ದಾಣದಲ್ಲಿ ಪ್ರತ್ಯಕ್ಷ!

Theft Case: ಮನೆಯಿಂದ ಚಿನ್ನಾಭರಣ ಕಳವು

Theft Case: ಮನೆಯಿಂದ ಚಿನ್ನಾಭರಣ ಕಳವು

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.