ಸರ್ಕಾರ ಯೋಜನೆಗಳ ಟೆಂಡರ್ ಮೊತ್ತ ಹೆಚ್ಚಿಸಿಕೊಂಡು ಭ್ರಷ್ಟಾಚಾರ ಮಾಡುತ್ತಿದೆ: ಕಾಂಗ್ರೆಸ್ ಆರೋಪ


Team Udayavani, Feb 15, 2023, 10:13 AM IST

TDY-4

ಬೆಂಗಳೂರು: ಈ ಸರ್ಕಾರದ ಅವಧಿ ಇನ್ನು ಒಂದು ತಿಂಗಳು ಮಾತ್ರ. ಬಜೆಟ್ ಅಧಿವೇಶನದ ನಂತರ ಮುಂದಿನ ತಿಂಗಳು 7-10 ರ ಒಳಗೆ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ. ಬಿಜೆಪಿ ಸರ್ಕಾರ ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ, ಸಣ್ಣ ನೀರಾವರಿ, ಇಂಧನ ಸೇರಿದಂತೆ ಎಲ್ಲ ಇಲಾಖೆಗಳಲ್ಲಿ ಟೆಂಡರ್ ಗಳನ್ನು ತರಾತುರಿಯಲ್ಲಿ ಸಿದ್ಧಪಡಿಸುತ್ತಿದೆ. 500 ಕೋಟಿ ರೂ ಮೌಲ್ಯದ ಟೆಂಡರ್ ಇದ್ದರೆ ಅದರ ಅಂದಾಜು ಮೊತ್ತವನ್ನು 1000 ಕೋಟಿಯಷ್ಟು ಮಾಡಿಸಿದ್ದಾರೆ. ಈ ಬಗ್ಗೆ ನಾವು ಎಲ್ಲ ರೀತಿಯ ದಾಖಲೆ ನೀಡಲು ಸಿದ್ಧವಿದ್ದೇವೆ ಎಂದು ಕಾಂಗ್ರೆಸ್‌ ಹೇಳಿದೆ.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲಾ, ಸಿದ್ದರಾಮಯ್ಯ, ಡಿ. ಕೆ. ಶಿವಕುಮಾರ್ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.

ಪ್ರಮುಖ ಇಲಾಖೆಗಳಲ್ಲಿ ಪ್ರತಿ ಟೆಂಡರ್ ಮೊತ್ತವನ್ನು ದುಪ್ಪಟ್ಟು ಮಾಡಿ ಕೆಲವನ್ನು ಸಂಪುಟದಲ್ಲಿ ತೀರ್ಮಾನಿಸಿ ನೀಡಿದರೆ, ಮತ್ತೆ ಕೆಲವನ್ನು ಸಂಪುಟದ ತೀರ್ಮಾನವಿಲ್ಲದೇ ಕೇವಲ 7 ದಿನಗಳ ಅಲ್ಪಾವಧಿಯಲ್ಲೇ ನೀಡುತ್ತಿದ್ದಾರೆ. ಶಾಸಕರುಗಳಿಗೆ ಇದರ ಉಸ್ತುವಾರಿ ವಹಿಸಿ, ಅವರೇ ಗುತ್ತಿಗೆದಾರರನ್ನು ಗುರುತಿಸಿ ಟೆಂಡರ್ ನೀಡುವ ಜವಾಬ್ದಾರಿ ನೀಡಲಾಗಿದೆ. ಈ ಶಾಸಕರು ಬೀದಿ, ಬೀದಿಯಲ್ಲಿ ಗುತ್ತಿಗೆದಾರರಿಗೆ ಆಹ್ವಾನ ನೀಡಿ ಈ ಟೆಂಡರ್ ಪಡೆಯಲು ಚುನಾವಣೆಗೂ ಮುನ್ನ ಇಂತಿಷ್ಟು ಹಣ ನೀಡಬೇಕು ಎಂದು ಹೇಳುತ್ತಿದ್ದಾರೆ. ಈ ವಿಚಾರವಾಗಿ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಕೂಡ ದೂರು ನೀಡಿದ್ದಾರೆ ಎಂದರು.

ಇದನ್ನೂ ಓದಿ: ಕೆನಡಾ: ರಾಮ ಮಂದಿರದ ಮೇಲೆ ಹಿಂದೂ ವಿರೋಧಿ ಬರಹ; ಸೂಕ್ತ ಕ್ರಮಕ್ಕೆ ಆಗ್ರಹ

ಬಿಜೆಪಿ ಶಾಸಕರು, ಮಂತ್ರಿಗಿರಿ ಸಿಗದವರಿಗೆ ಈ ರೀತಿ ಟೆಂಡರ್ ಹಂಚುತ್ತಿದ್ದಾರೆ. ಈ ವಿಚಾರವಾಗಿ ಶಾಸಕರು, ಗುತ್ತಿಗೆದಾರರು ನಮಗೆ ಮಾಹಿತಿ ನೀಡಿ ತಮ್ಮ ಅಳಲು ತೋಡಿಕೊಂಡಿದ್ದಾರೆ. ಹಳೆ ಕಾಮಗಾರಿಯ ಸಾವಿರಾರು ಕೋಟಿ ಹಣ ಬಾಕಿ ಉಳಿಸಿಕೊಂಡಿದ್ದು, ಯಾರು ಮಂತ್ರಿಗಳು ಹಾಗೂ ಸರ್ಕಾರಕ್ಕೆ ಕಮಿಷನ್ ನೀಡುತ್ತಾರೋ ಅವರ ಬಿಲ್ ಮಾತ್ರ ಪಾಸ್ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ನೂತನ ಟೆಂಡರ್ ಗಳನ್ನು ಪಾರದರ್ಶಕವಾಗಿ, ಅರ್ಹ ಗುತ್ತಿಗೆದಾರರಿಗೆ ನೀಡುತ್ತಿಲ್ಲ. ಉದಾಹರಣೆಗೆ ಶಿವರಾಮ ಕಾರಂತ್ ಲೇಔಟ್ ನಿರ್ಮಾಣಕ್ಕೆ ಜಮೀನು ವಶಪಡಿಸಿಕೊಳ್ಳದೇ ಟೆಂಡರ್ ಕರೆಯಲಾಗಿದೆ. ಅಲ್ಲದೆ ಮುಂಗಡವಾಗಿ ಹಣ ಬಿಡುಗಡೆ ಮಾಡಿ ಗುತ್ತಿಗೆದಾರರಿಂದ ಹಣ ವಸೂಲಿ ಮಾಡುತ್ತಿದ್ದಾರೆ. ಈ ಬಗ್ಗೆ ನಮ್ಮ ಬಳಿ ಎಲ್ಲ ದಾಖಲೆಗಳಿವೆ ಎಂದರು.

ಬೆಂಗಳೂರು ನಗರದಲ್ಲಿ ಯಾವುದಾದರೂ ಕೆಲಸ ಆಗಬೇಕಾದರೆ ಸಿಎಂ ಕಚೇರಿಯಲ್ಲಿ ಡೀಲ್ ಆಗುತ್ತಿವೆ. ಬೆಂಗಳೂರಿನ ರಸ್ತೆ ಗುಂಡಿ ಮುಚ್ಚಲು ಸರ್ಕಾರ 7100 ಕೋಟಿ ವೆಚ್ಚ ಮಾಡಿರುವುದಾಗಿ ತಿಳಿಸಿದ್ದು, ಯಾವ ರಸ್ತೆ ಗುಂಡಿ ಮುಕ್ತವಾಗಿದೆ? ಈ ರೀತಿ ಭ್ರಷ್ಟಾಚಾರ ಮಾಡುವ ಮೂಲಕ ರಾಜ್ಯವನ್ನು ದೇಶದ ಭ್ರಷ್ಟಾಚಾರದ ರಾಜಧಾನಿಯನ್ನಾಗಿ ಮಾಡಿದ್ದಾರೆ. ಈ ಸರ್ಕಾರದ ಭ್ರಷ್ಟಾಚಾರದ ವಿರುದ್ದ ನಾವು ಹೋರಾಟ ಮಾಡುತ್ತೇವೆ. ಸರ್ಕಾರ, ಗುತ್ತಿಗೆದಾರರು, ಅಧಿಕಾರಿಗಳಿಗೆ ಈ ಸಂದರ್ಭದಲ್ಲಿ ಎಚ್ಚರಿಕೆ ನೀಡುತ್ತಿದ್ದೇವೆ. ನಮ್ಮ ಸರ್ಕಾರ ಮುಂದೆ ಅಧಿಕಾರಕ್ಕೆ ಬಂದ ನಂತರ ಕಳೆದ 6 ತಿಂಗಳಿಂದ ನಡೆಸಲಾಗಿರುವ ಅಕ್ರಮ ಟೆಂಡರ್ ಗಳನ್ನು ನಾವು ರದ್ದು ಮಾಡಲಿದ್ದೇವೆ. ಎಲ್ಲ ಟೆಂಡರ್ ತನಿಖೆ ಮಾಡಿಸುತ್ತೇವೆ. ಆ ಮೂಲಕ ಈ ಭ್ರಷ್ಟಾಚಾರದ ಕೂಪವನ್ನು ಕಿತ್ತುಹಾಕುತ್ತೇವೆ ಎಂದು ಹೇಳಿದ್ದಾರೆ.

ಶಾಸಕರು ಪ್ರತಿ ಗುತ್ತಿಗೆದಾರರ ಮನೆ ಮನೆಗೆ ಹೋಗಿ ಕಮಿಷನ್ ನೀಡಿ ಟೆಂಡರ್ ಪಡೆಯುವಂತೆ ಒತ್ತಡ ಹಾಕುತ್ತಿದ್ದಾರೆ. ಎಲ್ಲ ಇಲಾಖೆಗಳಲ್ಲೂ ಇಂತಹ ಅಕ್ರಮ ನಡೆಯುತ್ತಿವೆ ಎಂದು ಆರೋಪ ಮಾಡಿದೆ.

ಟಾಪ್ ನ್ಯೂಸ್

Jaishankar

Mind Game; ಪಾಶ್ಚಿಮಾತ್ಯ ಮಾಧ್ಯಮಗಳ ವಿರುದ್ಧ ಕಿಡಿ ಕಾರಿದ ಜೈಶಂಕರ್

crime (2)

Hubli: ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯ ಭೀಕರ ಹತ್ಯೆ!

1-wwqwewq

Vijayapura NTPC ಚಿಮಣಿ ಮೇಲಿಂದ ಬಿದ್ದು UP ಮೂಲದ ಕಾರ್ಮಿಕ ಸಾವು

ISREL

Rafah; ಇಸ್ರೇಲ್ ಗೆ 1 ಬಿಲಿಯನ್ ಡಾಲರ್ ನ ಶಸ್ತ್ರಾಸ್ತ್ರ ಕಳುಹಿಸುತ್ತಿರುವ ಅಮೆರಿಕ

1-wqqqwe

Rajasthan; ಗಣಿಯಲ್ಲಿ ಲಿಫ್ಟ್ ಕುಸಿದು ಸಂಕಷ್ಟಕ್ಕೆ ಸಿಲುಕಿದ್ದ 14 ಮಂದಿಯ ರಕ್ಷಣೆ

24-kasaragodu

Parkನಲ್ಲಿ ಯುವತಿಯೊಂದಿಗೆ ಅನುಚಿತ ವರ್ತನೆ; ಕೇಂದ್ರ ವಿ.ವಿ.ಯ ವಿವಾದಿತ ಅಧ್ಯಾಪಕನ ಸೆರೆ

Update Android Mobile: Central Govt Warning to Users

Android ಮೊಬೈಲ್‌ ಅಪ್ಡೇಟ್ ಮಾಡಿ: ಬಳಕೆದಾರರಿಗೆ ಕೇಂದ್ರ ಸರ್ಕಾರ ಎಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime (2)

Hubli: ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯ ಭೀಕರ ಹತ್ಯೆ!

HD Revanna ಕೋರ್ಟ್‌ ಮೇಲೆ ನಂಬಿಕೆ ಇದೆ ನಿರ್ದೋಷಿಯಾಗುವೆ

HD Revanna ಕೋರ್ಟ್‌ ಮೇಲೆ ನಂಬಿಕೆ ಇದೆ ನಿರ್ದೋಷಿಯಾಗುವೆ

CM Siddaramaiah ಚುನಾವಣೆ ಅನಂತರ ಬಿಜೆಪಿಯ ಭಿನ್ನಮತದ ಮಹಾಸ್ಫೋಟ

CM Siddaramaiah ಚುನಾವಣೆ ಅನಂತರ ಬಿಜೆಪಿಯ ಭಿನ್ನಮತದ ಮಹಾಸ್ಫೋಟ

CM Siddaramaiah: ಸಿಎಂ,ಡಿಸಿಎಂ ಕಾವೇರಿ ನಿವಾಸದಲ್ಲಿ ಮಹತ್ವದ ​ಸಭೆ

CM Siddaramaiah: ಸಿಎಂ,ಡಿಸಿಎಂ ಕಾವೇರಿ ನಿವಾಸದಲ್ಲಿ ಮಹತ್ವದ ​ಸಭೆ

ಜರ್ಮನಿ ಅಧಿಕಾರಿಗಳ ಜತೆ ಸಂಪರ್ಕ; ಪ್ರಜ್ವಲ್‌ ಪತ್ತೆ ಮಾಹಿತಿ ಕಲೆ ಹಾಕುತ್ತಿರುವ ಅಧಿಕಾರಿಗಳು

German ಅಧಿಕಾರಿಗಳ ಜತೆ ಸಂಪರ್ಕ; ಪ್ರಜ್ವಲ್‌ ಪತ್ತೆ ಮಾಹಿತಿ ಕಲೆ ಹಾಕುತ್ತಿರುವ ಅಧಿಕಾರಿಗಳು

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Jaishankar

Mind Game; ಪಾಶ್ಚಿಮಾತ್ಯ ಮಾಧ್ಯಮಗಳ ವಿರುದ್ಧ ಕಿಡಿ ಕಾರಿದ ಜೈಶಂಕರ್

crime (2)

Hubli: ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯ ಭೀಕರ ಹತ್ಯೆ!

1-wwqwewq

Vijayapura NTPC ಚಿಮಣಿ ಮೇಲಿಂದ ಬಿದ್ದು UP ಮೂಲದ ಕಾರ್ಮಿಕ ಸಾವು

ISREL

Rafah; ಇಸ್ರೇಲ್ ಗೆ 1 ಬಿಲಿಯನ್ ಡಾಲರ್ ನ ಶಸ್ತ್ರಾಸ್ತ್ರ ಕಳುಹಿಸುತ್ತಿರುವ ಅಮೆರಿಕ

police USA

London: ಚಾಕುವಿನಿಂದ ಇರಿದು ಭಾರತೀಯ ಮೂಲದ ಮಹಿಳೆಯ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.