ಮಾಸಾಂತ್ಯಕ್ಕೆ ಇಳಿಯುತ್ತಾ ತೈಲ ಬೆಲೆ?
Team Udayavani, Feb 16, 2023, 7:55 AM IST
ಹೊಸದಿಲ್ಲಿ: ಏರುತ್ತಿರುವ ಚಿಲ್ಲರೆ ಹಣದುಬ್ಬರವನ್ನು ನಿಯಂ ತ್ರಿಸುವ ಸಲುವಾಗಿ ಕೇಂದ್ರ ಸರಕಾರ ಮೆಕ್ಕೆಜೋಳ, ತೈಲ ಸಹಿತ ಕೆಲವು ಉತ್ಪನ್ನಗಳ ಮೇಲಿನ ತೆರಿಗೆಯನ್ನು ಕಡಿತಗೊಳಿಸುವ ಬಗ್ಗೆ ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.
ಇದು ಜಾರಿಯಾದರೆ ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಯಾಗುವ ಸಾಧ್ಯತೆಯಿದೆ.
ಫೆಬ್ರವರಿ ತಿಂಗಳ ಹಣದುಬ್ಬರ ದತ್ತಾಂಶ ಬಿಡುಗಡೆಯಾದ ಬಳಿಕ ಈ ಬಗ್ಗೆ ಅಂತಿಮ ತೀರ್ಮಾನ ಹೊರಬೀಳಬಹುದು ಎಂದು ಅಂದಾಜಿಸಲಾಗಿದೆ. ಕಳೆದ ಡಿಸೆಂಬರ್ನಲ್ಲಿ ಶೇ.5.72 ರಷ್ಟಿದ್ದ ಚಿಲ್ಲರೆ ಹಣದುಬ್ಬರ ಈ ಜನವರಿಯಲ್ಲಿ ಶೇ.6.52ಕ್ಕೆ ಏರಿಕೆಯಾಗಿದೆ. ಹಾಲು, ಮೆಕ್ಕೆಜೋಳ, ಸೋಯಾ ಎಣ್ಣೆಯ ಬೆಲೆಗಳು ಕೂಡ ಹಣದುಬ್ಬರ ಸಮಸ್ಯೆಯನ್ನು ಮತ್ತಷ್ಟು ಹೆಚ್ಚಿಸುವ ಸಾಧ್ಯತೆಯಿದೆ. ಹೀಗಾಗಿ ಶೇ.60ರಷ್ಟು ಆಮದು ಶುಲ್ಕ ಇರುವಂಥ ಮೆಕ್ಕೆಜೋಳದಂಥ ವಸ್ತುಗಳ ಆಮದು ಶುಲ್ಕ ಇಳಿಕೆ ಮಾಡುವುದರ ಜತೆಗೆ ತೈಲದ ತೆರಿಗೆಯನ್ನೂ ಇಳಿಸುವ ಚಿಂತನೆ ಸರಕಾರಕ್ಕಿದೆ ಎಂದು ಹೇಳಲಾಗಿದೆ.
ಜಿಎಸ್ಟಿ ವ್ಯಾಪ್ತಿಗೆ ತೈಲ; ರಾಜ್ಯಗಳ ಒಪ್ಪಿಗೆ ಬಾಕಿ
ರಾಜ್ಯಗಳ ನಡುವೆ ಒಮ್ಮತ ಮೂಡಿಬಂದ ಬಳಿಕ ಜಿಎಸ್ಟಿ ವ್ಯಾಪ್ತಿಗೆ ಪೆಟ್ರೋಲಿಯಂ ಉತ್ಪನ್ನಗಳನ್ನೂ ತರಲಾಗುತ್ತದೆ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಇಂಡಸ್ಟ್ರಿ ಚೇಂಬರ್ ಪಿಎಚ್ಡಿಸಿಸಿ ಸದಸ್ಯರೊಂದಿಗೆ ಬಜೆಟ್ ಅನಂತರದ ಸಂವಾದದಲ್ಲಿ ಮಾತನಾಡಿದ ಅವರು, ಪ್ರಸ್ತುತ ಕಚ್ಚಾ ತೈಲ, ಮೋಟಾರ್ ಸ್ಪಿರಿಟ್, ಹೈಸ್ಪೀಡ್ ಡೀಸೆಲ್, ನೈಸರ್ಗಿಕ ಅನಿಲ, ವೈಮಾನಿಕ ಇಂಧನವನ್ನು ಜಿಎಸ್ಟಿ ವ್ಯಾಪ್ತಿಯಿಂದ ಹೊರಗಿಡಲಾಗಿದೆ. ಯಾವಾಗಿನಿಂದ ಇವುಗಳನ್ನೂ ವ್ಯಾಪ್ತಿಗೆ ತರಬೇಕು ಎಂಬುದನ್ನು ಜಿಎಸ್ಟಿ ಮಂಡಳಿ ನಿರ್ಣಯಿಸಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!