ಮೂಡಿಗೆರೆ: ಕಾಡಂಚಿನ ಗ್ರಾಮಗಳಲ್ಲಿ ಕಾಡಾನೆಗಳ ಹಿಂಡಿನ ದಾಂಧಲೆ
Team Udayavani, Feb 16, 2023, 10:28 AM IST
ಚಿಕ್ಕಮಗಳೂರು: ಜಿಲ್ಲೆಯ ಕಾಡಂಚಿನ ಗ್ರಾಮಗಳಲ್ಲಿ ಕಾಡಾನೆಗಳ ಹಿಂಡಿನ ದಾಂಧಲೆ ಹೆಚ್ಚಾಗಿದ್ದು, ಮೂಡಿಗೆರೆ ತಾಲೂಕಿನ ಕುಂಬರಡಿ ಗ್ರಾಮದಲ್ಲಿ ಆರಕ್ಕೂ ಹೆಚ್ಚು ಕಾಡಾನೆಗಳು ರಂಪಾಟ ಆರಂಭಿಸಿದೆ.
ಕುಂಬರಡಿ ಗ್ರಾಮಕ್ಕೆ ಲಗ್ಗೆ ಇಟ್ಟಿದ್ದ ಆರಕ್ಕೂ ಅಧಿಕವಿರುವ ಕಾಡಾನೆ ಹಿಂಡು ಅಡಕೆ ಸೇರಿದಂತೆ ಕೃಷಿಗೆ ಹಾನಿ ಮಾಡುತ್ತಿವೆ. ಆನೆಗಳನ್ನು ಕಾಡಿಗಟ್ಟಲು ಅರಣ್ಯ ಇಲಾಖೆ ಸಿಬ್ಬಂದಿ, ಗ್ರಾಮಸ್ಥರು ಹರಸಾಹಸ ಪಡುತ್ತಿದ್ದು, ಆನೆ ಓಡಿಸುವುದೇ ದುಸ್ಥರವಾಗಿದೆ.
ಇದನ್ನೂ ಓದಿ:ಮುಖ್ಯಮಂತ್ರಿಗೆ ಕಾಯುತ್ತಿದೆ ಪುತ್ತೂರು ಸರಕಾರಿ ಬಸ್ ನಿಲ್ದಾಣ
ಪಟಾಕಿ ಸಿಡಿಸಿ, ಗುಂಡು ಹಾರಿಸಿ ಕಾಡಾನೆಗಳನ್ನು ಓಡಿಸಲು ಯತ್ನಿಸಲಾಗುತ್ತಿದ್ದು, ಪಟಾಕಿಯ ಸದ್ದು ಕೇಳಿ ಓಡುವ ಆನೆಗಳು ಮತ್ತೆ ಊರಿಗೆ ದಾಳಿ ಮಾಡುತ್ತಿವೆ. ಇದರಿಂದ ಮಲೆನಾಡ ಕಾಡಂಚಿನ ಗ್ರಾಮಗಳ ಜನತೆ ಕಾಡಾನೆ ಭಯದಿಂದ ಬದುಕಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heavy rain ಕಾಫಿನಾಡಲ್ಲಿ ಮುಂದುವರಿದ ಗಾಳಿ- ಮಳೆ ಅಬ್ಬರ: ಜನಜೀವನ ಅಸ್ತವ್ಯಸ್ತ
Rain: ಕಳಸ ತಾಲೂಕಿನಾದ್ಯಂತ ಭಾರೀ ಗಾಳಿ-ಮಳೆ; ಜನಜೀವನ ಅಸ್ತವ್ಯಸ್ತ, ವಿದ್ಯುತ್ ಸಂಪರ್ಕ ಕಡಿತ
Madhu Bangarappa ಸಂತ್ರಸ್ತರನ್ನು ಹೇಗೆ ಕಾಪಾಡಬೇಕು ಎನ್ನುವ ಬಗ್ಗೆಯೂ ಯೋಚಿಸಿ
Chikkamagaluru: ಗುಂಡೇಟಿನಿಂದ ಯುವಕ ಸಾವು: ಹೆಚ್ಚಿದ ಅನುಮಾನ
Chikkamagaluru: ಸರ್ಕಾರಿ ಜಾಗಕ್ಕೆ ಎರಡು ಸಮುದಾಯಗಳ ನಡುವೆ ಮಾರಾಮಾರಿ