ಅನುದಾನಿತ ಶಾಲೆಗಳಿಗೆ ಶಿಕ್ಷಕರ ಭರ್ತಿಗೆ ಒಕ್ಕೊರಲ ಒತ್ತಾಯ
Team Udayavani, Feb 17, 2023, 5:40 AM IST
ಬೆಂಗಳೂರು: ರಾಜ್ಯದ ಖಾಸಗಿ ಅನುದಾನಿತ ಶಾಲಾ- ಕಾಲೇಜುಗಳಲ್ಲಿ 2016ರಿಂದ ಈಚೆಗೆ ಖಾಲಿಯಾಗಿರುವ ಬೋಧಕ ಹುದ್ದೆಗಳ ಭರ್ತಿಗೆ ಸರಕಾರ ಕ್ರಮ ಕೈಗೊಳ್ಳುವಂತೆ ಸಭಾಪತಿ ಬಸವರಾಜ ಹೊರಟ್ಟಿಯೂ ಸೇರಿದಂತೆ ಪಕ್ಷಾತೀತವಾಗಿ ಒತ್ತಾಯ ಕೇಳಿಬಂತು. ಕೊನೆಗೆ ಈ ಸಂಬಂಧ ಫೆ. 23ರಂದು ಸಭೆ ನಡೆಸಿ ಅಲ್ಲಿ ತೀರ್ಮಾನ ಕೈಗೊಳ್ಳಲು ಸಭಾಪತಿಗಳು ಸೂಚಿಸಿದರು.
ಗುರುವಾರ ನಿಯಮ 72ರ ಅಡಿ ಜೆಡಿಎಸ್ನ ಮರಿತಿಬ್ಬೇಗೌಡ ವಿಷಯ ಪ್ರಸ್ತಾವಿಸಿ, ಕಳೆದ ಏಳು ವರ್ಷಗಳಿಂದ ಬೋಧಕರ ಹುದ್ದೆಗಳು ಖಾಲಿ ಇವೆ. ಬೋಧಕರಿಲ್ಲದೆ ಖಾಸಗಿ ಅನುದಾನಿತ ಕನ್ನಡ ಮಾಧ್ಯಮ ಶಾಲೆಗಳು ಮುಚ್ಚುವ ಹಂತಕ್ಕೆ ಬಂದಿವೆ. ಮಂಜೂರಾದ ಹುದ್ದೆಗಳ ಭರ್ತಿಗೆ ವಿಳಂಬ ಮಾಡುವುದು ಸರಿಯಲ್ಲ. 2022ರವರೆಗೂ ಖಾಲಿಯಾದ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಇದಕ್ಕೆ ದನಿಗೂಡಿಸಿದ ಆಡಳಿತ ಪಕ್ಷದ ಮುಖ್ಯ ಸಚೇತಕ ನಾರಾಯಣಸ್ವಾಮಿ, ನನ್ನ ಕ್ಷೇತ್ರದಲ್ಲಿ ಐದು ಜಿಲ್ಲೆಗಳು ಬರುತ್ತಿದ್ದು, ಸುಮಾರು 60 ಶಾಲೆಗಳಿವೆ. ಅಲ್ಲೆಲ್ಲ ಒಬ್ಬರು ಗರಿಷ್ಠ ಇಬ್ಬರು ಶಿಕ್ಷಕರಿದ್ದಾರೆ. ಒಂದೆಡೆ ನಾವು ಗುಣಾತ್ಮಕ ಶಿಕ್ಷಣ ಬೇಕು ಎನ್ನುತ್ತೇವೆ. ಮತ್ತೂಂದೆಡೆ ಶೇ. ನೂರರಷ್ಟು ಫಲಿತಾಂಶವನ್ನೂ ಬಯಸುತ್ತೇವೆ. ಇದು ಹೇಗೆ ಸಾಧ್ಯ? ಈ ವಿಚಾರದಲ್ಲಿ ನನ್ನದೂ ಆಕ್ಷೇಪ ಇದೆ ಎಂದು ಹೇಳಿದರು.
ಇದಕ್ಕೆ ಉತ್ತರಿಸಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಮೊದಲಿಗೆ 2015ರ ಪೂರ್ವದಲ್ಲಿ ಖಾಲಿಯಾಗಿರುವ ಹುದ್ದೆಗಳ ಭರ್ತಿ ಮಾಡಿ ಬಳಿಕ 2016ರ ಅನಂತರದ ಖಾಲಿ ಹುದ್ದೆಗಳ ಭರ್ತಿಗೆ ನಿಯಮಾನುಸಾರ ಪರಿಶೀಲಿಸುವುದಾಗಿ ತಿಳಿಸಿದರು. ಮಧ್ಯಪ್ರವೇಶಿಸಿದ ಸಭಾಪತಿ ಹೊರಟ್ಟಿ, ಈ ಸಂಬಂಧ ಫೆ. 23ರಂದು ಸಭೆ ನಿಗದಿ ಮಾಡಿ. ಈ ಸಭೆಗೆ ಹಣಕಾಸು ಇಲಾಖೆ ಅಧಿಕಾರಿಗಳನ್ನು ಕರೆಸಿ ಚರ್ಚಿಸೋಣ. ಈ ಸಭೆಯ ಅಧ್ಯಕ್ಷತೆ ನಾನೇ ವಹಿಸುತ್ತೇನೆ ಎಂದು ಸಚಿವರಿಗೆ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ
ಕಾಂಗ್ರೆಸ್ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಹಾಳು ಮಾಡುತ್ತಿದೆ:ವಿ.ಪ. ಸದಸ್ಯ ಎಸ್.ವಿ. ಸಂಕನೂರ
Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ
ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ
Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ
MUST WATCH
ಹೊಸ ಸೇರ್ಪಡೆ
Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!
Swindon Borough ಕೌನ್ಸಿಲ್ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ
W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ
Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು
Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ