ಮಂಗಳೂರು: ಜೈಲಿಗೆ ಮಾದಕ ವಸ್ತು ಸಾಗಾಟ ಯತ್ನ: ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ
Team Udayavani, Feb 17, 2023, 9:27 PM IST
ಮಂಗಳೂರು: ಜಿಲ್ಲಾ ಕಾರಾಗೃಹದಲ್ಲಿರುವ ವಿಚಾರಣಾಧೀನ ಕೈದಿಗಳಿಗೆ ನಿಷೇಧಿತ ಮಾದಕ ವಸ್ತು ಕೊಂಡೊಯ್ಯುತ್ತಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ದೀಕ್ಷಿತ್ ಕಾಪಿಕಾಡು ಮತ್ತು ಅಭಿಷೇಕ್ ಬಂಧಿತ ಆರೋಪಿಗಳು. ಇವರು ಗುರುವಾರ ಕಾರಾಗೃಹದಲ್ಲಿರುವ ವಿಚಾರಣಾಧೀನ ಕೈದಿಗಳಿಗೆ ನೀಡಲೆಂದು ನಿಷೇಧಿತ ಮಾದಕ ವಸ್ತುಗಳಾದ ಎಂಡಿಎಂಎ ಮತ್ತು ಗಾಂಜಾ ವೀಡ್ ಆಯಿಲ್ ಅನ್ನು ಕೊಂಡೊಯ್ಯುತ್ತಿದ್ದರು. ಈ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
ಆರೋಪಿಗಳಿಂದ 15,000 ರೂ. ಮೌಲ್ಯದ 3 ಗ್ರಾಂ ಎಂಡಿಎಂಎ ಹಾಗೂ ಸುಮಾರು 5,000 ರೂ. ಮೌಲ್ಯದ 1.30 ಗ್ರಾಂ ಗಾಂಜಾ ವೀಡ್ ಆಯಿಲ್, ಮೊಬೈಲ್ ಫೋನ್ ಸ್ವಾಧೀನಪಡಿಸಿಕೊಳ್ಳಲಾಗಿದೆ. ಆರೋಪಿಗಳು ಬೇಕರಿ ತಿನಿಸುಗಳೊಂದಿಗೆ ಉಪ್ಪಿನಕಾಯಿ ಪ್ಯಾಕೆಟ್ನಲ್ಲಿ ಮಾದಕ ವಸ್ತುವನ್ನಿಟ್ಟು ಕೊಂಡೊಯ್ಯಲು ಯತ್ನಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಮಂಗಳೂರು: ನಕಲಿ ನೋಟು ಚಲಾವಣೆ… ಅಪರಾಧಿಗೆ 4 ವರ್ಷ ಶಿಕ್ಷೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ
Lok Sabha Polls: ಸ್ಟ್ರಾಂಗ್ ರೂಂಗಳಲ್ಲಿ ಮತಯಂತ್ರಗಳು ಸುಭದ್ರ
Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ
MUST WATCH
ಹೊಸ ಸೇರ್ಪಡೆ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!