ವನಿತಾ ಟಿ20 ವಿಶ್ವಕಪ್‌: ಭಾರತ ಪರಾಭವ; ಇಂಗ್ಲೆಂಡ್‌ ಅಜೇಯ


Team Udayavani, Feb 19, 2023, 6:51 AM IST

ENGLANDವನಿತಾ ಟಿ20 ವಿಶ್ವಕಪ್‌: ಭಾರತ ಪರಾಭವ; ಇಂಗ್ಲೆಂಡ್‌ ಅಜೇಯ

ಕೆಬೆರಾ: ವನಿತಾ ವಿಶ್ವಕಪ್‌ ಪಂದ್ಯಾವಳಿಯ 3ನೇ ಮುಖಾಮುಖಿಯಲ್ಲಿ ಭಾರತ ಪ್ರಬಲ ಇಂಗ್ಲೆಂಡ್‌ಗೆ 11 ರನ್ನುಗಳಿಂದ ಶರಣಾಗಿ ಮೊದಲ ಸೋಲನುಭವಿಸಿದೆ. ಇಂಗ್ಲೆಂಡ್‌ ಮೂರನ್ನೂ ಗೆದ್ದು “ಬಿ’ ವಿಭಾಗದಿಂದ ಸೆಮಿಫೈನಲ್‌ ಪ್ರವೇಶವನ್ನು ಬಹುತೇಕ ಖಚಿತಗೊಳಿಸಿದೆ.

ಮೊದಲು ಬ್ಯಾಟಿಂಗ್‌ ನಡೆಸಿದ ಇಂಗ್ಲೆಂಡ್‌ 7 ವಿಕೆಟಿಗೆ 151 ರನ್‌ ಪೇರಿಸಿದರೆ, ಭಾರತ 5ಕ್ಕೆ 140 ರನ್‌ ಮಾಡಿತು. ಕೌರ್‌ ಪಡೆಯ ಅಂತಿಮ ಎದುರಾಳಿ ಐರ್ಲೆಂಡ್‌. ಸೋಮವಾರದ ಈ ಪಂದ್ಯವನ್ನು ಭಾರತ ಗೆಲ್ಲಲೇಬೇಕಿದೆ.

ದೊಡ್ಡ ಮೊತ್ತದ ಚೇಸಿಂಗ್‌ ವೇಳೆ ಭಾರತ ಬಿರುಸಿನ ಆರಂಭ ಪಡೆಯಲು ವಿಫ‌ಲವಾಯಿತು. ಮಂಧನಾ ಒಂದು ಕಡೆ ಕ್ರೀಸ್‌ ಆಕ್ರಮಿಸಿಕೊಂಡು ಅರ್ಧ ಶತಕ (52) ಬಾರಿಸಿದರೂ ಅಗ್ರ ಕ್ರಮಾಂಕದ ಉಳಿದ ಬ್ಯಾಟರ್ ನಿಲ್ಲಲಿಲ್ಲ. ಶಫಾಲಿ (8), ಜೆಮಿಮಾ (13), ಕೌರ್‌ (4) ಆಟ ಬೇಗನೇ ಮುಗಿಯಿತು. ರಿಚಾ ಘೋಷ್‌ ಆಗಮಿಸುವಾಗ ಓವರ್‌ಗೆ 12 ರನ್‌ ಗಳಿಸಬೇಕಾದ ಒತ್ತಡವಿತ್ತು. ರಿಚಾ 34 ಎಸೆತಗಳಿಂದ 47 ರನ್‌ ಮಾಡಿ ಅಜೇಯರಾಗಿ ಉಳಿದರು (4 ಫೋರ್‌, 2 ಸಿಕ್ಸರ್‌).

5 ವಿಕೆಟ್‌ ಕಿತ್ತ ರೇಣುಕಾ
ವೇಗಿ ರೇಣುಕಾ ಸಿಂಗ್‌ 15 ರನ್ನಿಗೆ 5 ವಿಕೆಟ್‌ ಕಿತ್ತು ಜೀವನಶ್ರೇಷ್ಠ ಬೌಲಿಂಗ್‌ ದಾಖಲಿಸಿದರು. ಇಂಗ್ಲೆಂಡ್‌ನ‌ ಮೊದಲ ಮೂರೂ ವಿಕೆಟ್‌ ರೇಣುಕಾ ಪಾಲಾದವು. 3ನೇ ಎಸೆತದಲ್ಲೇ ಡೇನಿಯಲ್‌ ವ್ಯಾಟ್‌ಗೆ (0) ಪೆವಿಲಿಯನ್‌ ಹಾದಿ ತೋರಿಸಿದರು. ಮುಂದಿನ ಓವರ್‌ನ ಮೊದಲ ಎಸೆತದಲ್ಲೇ ಅಲೈಸ್‌ ಕ್ಯಾಪ್ಸಿ (3) ವಿಕೆಟ್‌ ಕಿತ್ತರು. ಬಳಿಕ ಓಪನರ್‌ ಸೋಫಿಯಾ ಡಂಕ್ಲಿ (10) ಅವರನ್ನು ಬೌಲ್ಡ್‌ ಮಾಡಿದರು.

5ನೇ ಓವರ್‌ನಲ್ಲಿ 29ಕ್ಕೆ 3 ವಿಕೆಟ್‌ ಬಿದ್ದ ಬಳಿಕ ನಥಾಲಿ ಸ್ಕಿವರ್‌ ಮತ್ತು ನಾಯಕಿ ಹೀತರ್‌ ನೈಟ್‌ (28) 51 ರನ್‌ ಜತೆಯಾಟ ನಿಭಾಯಿಸಿದರು. ಈ ಜೋಡಿಯನ್ನು ಬೇರ್ಪಡಿಸಿದವರು ಶಿಖಾ ಪಂಡೆ. ಬಳಿಕ ಸ್ಕಿವರ್‌-ಜೋನ್ಸ್‌ 40 ರನ್‌ ಜತೆಯಾಟ ನಡೆಸಿದರು.

ಇಂಗ್ಲೆಂಡ್‌ ಪರ ನಥಾಲಿ ಸ್ಕಿವರ್‌ 50, ಆ್ಯಮಿ ಜೋನ್ಸ್‌ 40 ಮತ್ತು ನಾಯಕಿ ಹೀತರ್‌ ನೈಟ್‌ 28 ರನ್‌ ಬಾರಿಸಿ ತಂಡದ ಮೊತ್ತವನ್ನು ನೂರೈವತ್ತರ ಗಡಿ ದಾಟಿಸುವಲ್ಲಿ ಯಶಸ್ವಿಯಾದರು.

ಸಂಕ್ಷಿಪ್ತ ಸ್ಕೋರ್‌
ಇಂಗ್ಲೆಂಡ್‌-7 ವಿಕೆಟಿಗೆ 151 (ಸ್ಕಿವರ್‌ 50, ಜೋನ್ಸ್‌ 40, ನೈಟ್‌ 28, ರೇಣುಕಾ 15ಕ್ಕೆ 5). ಭಾರತ-5 ವಿಕೆಟಿಗೆ 140 (ಮಂಧನಾ 52, ರಿಚಾ ಔಟಾಗದೆ 47, ಗ್ಲೆನ್‌ 27ಕ್ಕೆ 2).

 

ಟಾಪ್ ನ್ಯೂಸ್

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

1-qwewqewqe

Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thailand Open Super 500: ಸಾತ್ವಿಕ್‌ – ಚಿರಾಗ್‌ ಕ್ವಾರ್ಟರ್‌ಫೈನಲಿಗೆ

Thailand Open Super 500: ಸಾತ್ವಿಕ್‌ – ಚಿರಾಗ್‌ ಕ್ವಾರ್ಟರ್‌ಫೈನಲಿಗೆ

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ

Sandeep Lamichhane: ಅತ್ಯಾಚಾರ ಆರೋಪ; ಲಮಿಚಾನೆ ಮುಕ್ತ

Sandeep Lamichhane: ಅತ್ಯಾಚಾರ ಆರೋಪ; ಲಮಿಚಾನೆ ಮುಕ್ತ

31

Italian Open 2024: ಬೋಪಣ್ಣ ಜೋಡಿಗೆ ಸೋಲು

Virat kohli spoke about his post-retirement life

Virat Kohli; ನಿವೃತ್ತಿಯ ಬಗ್ಗೆ ಮಾತನಾಡಿದ ವಿರಾಟ್..; ಫ್ಯಾನ್ಸ್ ಗೆ ಆತಂಕತಂದ ಕೊಹ್ಲಿ ಮಾತು

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

baby 2

Ballari: ತಿಪ್ಪೆಗುಂಡಿಯಲ್ಲಿ ಸಿಕ್ಕಿದ್ದ ಹೆಣ್ಣುಮಗುವನ್ನು ದತ್ತು ಪಡೆದ ವಿದೇಶಿ ದಂಪತಿ

1-wqewqewqe

MLC Election; ಕೊರಿಯರ್‌ ಕಚೇರಿಯಲ್ಲಿ ಅಪಾರ ಗಿಫ್ಟ್ ಬಾಕ್ಸ್‌!!

school

RTE; ಶಿಕ್ಷಣ ಹಕ್ಕು ಕಾಯ್ದೆ ಅರ್ಜಿ ಅವಧಿ ವಿಸ್ತರಣೆ

crime (2)

Belagavi: ಇರಿದು ಯುವಕನ ಕೊಲೆ; ಆರೋಪಿಯ ಸೋದರಿಯನ್ನು ಪ್ರೀತಿಸುತ್ತಿದ್ದುದು ಕಾರಣ

Thailand Open Super 500: ಸಾತ್ವಿಕ್‌ – ಚಿರಾಗ್‌ ಕ್ವಾರ್ಟರ್‌ಫೈನಲಿಗೆ

Thailand Open Super 500: ಸಾತ್ವಿಕ್‌ – ಚಿರಾಗ್‌ ಕ್ವಾರ್ಟರ್‌ಫೈನಲಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.