24.93 ಲಕ್ಷ ಮೌಲ್ಯದ ಅಡುಗೆ ಎಣ್ಣೆ ಕಳ್ಳತನ ಪ್ರಕರಣ: ಮೂರೇ ದಿನದಲ್ಲಿ ಕಳ್ಳರು ಅಂದರ್
ಮಂಗಳೂರಿನಿಂದ ಹೊರಟಿದ್ದ ಲಾರಿ ತಡೆದು ಕಳ್ಳತನ ಮಾಡಿದ್ದ ಖದೀಮರು
Team Udayavani, Feb 21, 2023, 8:19 PM IST
ಬೆಳಗಾವಿ: ಮಂಗಳೂರಿನಿಂದ ನಿಪ್ಪಾಣಿ ಕಡೆಗೆ ಲಾರಿಯಲ್ಲಿ ಅಡುಗೆ ಎಣ್ಣೆ ತೆಗೆದುಕೊಂಡು ಹೋಗುವಾಗ ತಡೆದು ಕಳ್ಳತನ ಮಾಡಿದ್ದ ಆರೋಪಿಗಳನ್ನು ಮೂರೇ ದಿನದಲ್ಲಿ ಪತ್ತೆ ಹಚ್ಚಿ 24.93 ಲಕ್ಷ ರೂ. ಮೌಲ್ಯದ ಅಡುಗೆ ಎಣ್ಣೆ ವಶಪಡಿಸಿಕೊಳ್ಳುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಇಬ್ಬರು ಆರೋಪಿಗಳನ್ನು ಮಂಗಳವಾರ ಬಂಧಿಸಿದ ಹಿರೇಬಾಗೇವಾಡಿ ಪೊಲೀಸರು ಬಂಧಿತರಿಂದ 23,93,560 ರೂ. ಮೌಲ್ಯದ 878 ಅಡುಗೆ ಎಣ್ಣೆ ಟನ್ಗಳು ಹಾಗೂ 14 ಬಾಕ್ಸ್ ಎಣ್ಣೆ ಪೌಚ್ಗಳು, ದ್ವಿಚಕ್ರ ವಾಹನ ಸೇರಿ ಒಟ್ಟು 24,23,560 ರೂ. ಮೌಲ್ಯದ ವಸ್ತು ವಶಪಡಿಸಿಕೊಂಡಿದ್ದಾರೆ. ಫೆ. 15ರಂದು ಮಂಗಳೂರಿನಿಂದ ಅಡುಗೆ ಎಣ್ಣೆ ತುಂಬಿಕೊಂಡು ಲಾರಿ ನಿಪ್ಪಾಣಿ ಕಡೆಗೆ ಹೊರಟಿತ್ತು.
ಉಡುಪಿ ಜಿಲ್ಲೆಯ ಪಡುಬಿದ್ರೆಯ ಇಸ್ಮಾಯಿಲ್ ನವಾಸ್ ಕೆ. ಇಬ್ರಾಹಿಮ್ ಎಂಬವರು ತಮ್ಮ ಲಾರಿ ಚಾಲಕರಾದ ಅಸ್ಸಾಂ ರಾಜ್ಯದ ಇಬ್ರಾಹಿಮ್ ಅಲಿ ಅಬ್ದುಲ್ಮಜಿದ್ ಹಾಗೂ ಸಾಹೇಬ್ ಅಲಿ ಹುಸೇನ್ ನಿಪ್ಪಾಣಿಗೆ ಹೊರಟಿದ್ದರು. ಹಿರೇಬಾಗೇವಾಡಿ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಬಡೇಕೊಳ್ಳಮಠ ಬಳಿ 30.38 ಲಕ್ಷ ರೂ. ಮೌಲ್ಯದ 1,465 ಅಡುಗೆ ಎಣ್ಣೆಯ ಟನ್ ಹಾಗೂ 80 ಪೌಚ್ ಬಾಕ್ಸ್ ಗಳನ್ನು ಕಳ್ಳತನ ಮಾಡಿರುವ ಬಗ್ಗೆ ಹಿರೇಬಾಗೇವಾಡಿ ಠಾಣೆಯಲ್ಲಿ ದೂರು ನೀಡಿದ್ದರು.
ಗ್ರಾಮೀಣ ಎಸಿಪಿ ಗೋಪಾಲಕೃಷ್ಣ ಗೌಡರ ಮಾರ್ಗದರ್ಶನದಲ್ಲಿ ಹಿರೇಬಾಗೇವಾಡಿ ಇನ್ಸಪೆಕ್ಟರ್ ಅಮರೇಶ ಬಿ. ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೂರೇ ದಿನದಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ.
ಇದನ್ನೂ ಓದಿ: ಹಾಡುಹಗಲೇ ಶಾಲಾ ಶಿಕ್ಷಕಿಯ ಹತ್ಯೆ: ದುಷ್ಕರ್ಮಿಗಳ ಪತ್ತೆಗೆ ಶೋಧ ಕಾರ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ
ಕಾಂಗ್ರೆಸ್ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಹಾಳು ಮಾಡುತ್ತಿದೆ:ವಿ.ಪ. ಸದಸ್ಯ ಎಸ್.ವಿ. ಸಂಕನೂರ
Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ
ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ
Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ
MUST WATCH
ಹೊಸ ಸೇರ್ಪಡೆ
Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು
Bellary; ರಾಜ್ಯದ ಶಿಕ್ಷಣದ ಸ್ಥಿತಿ ಅಧೋಗತಿಗೆ ತಲುಪಿದೆ; ಎನ್.ರವಿಕುಮಾರ್
Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ
Mandagadde; ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದ ಬಸ್ ; ಹಲವರಿಗೆ ಗಾಯ !
Colon Cancer; ಸಂಕೇತಗಳು ಮತ್ತು ಲಕ್ಷಣಗಳು, ರೋಗನಿರ್ಣಯ ಮತ್ತು ಚಿಕಿತ್ಸೆ