ನನಗೆ ಯಾವತ್ತೂ ಜಾತಿ ಅಡ್ಡ ಬಂದಿರಲಿಲ್ಲ


Team Udayavani, Feb 22, 2023, 6:16 AM IST

ನನಗೆ ಯಾವತ್ತೂ ಜಾತಿ ಅಡ್ಡ ಬಂದಿರಲಿಲ್ಲ

ಪಿ.ಜಿ.ಆರ್‌.ಸಿಂಧ್ಯಾ, ಮಾಜಿ ಸಚಿವರು
ಚುನಾವಣೆಗಳು ಅಂದರೆ ಆಗ ಜನರೇ ಅಭ್ಯರ್ಥಿಗೆ 50 ರೂ.ನಿಂದ 1 ಸಾವಿರ ರೂ.ವರೆಗೆ ಎಲೆ ಅಡಿಕೆಯಲ್ಲಿ ಹಣವಿಟ್ಟು ಕಾಲು ಮುಟ್ಟಿ, ನೀರು ಹಾಕಿ ಆರತಿ ಬೆಳಗಿ ಆಶೀರ್ವಾದ ಮಾಡೋರು. ಈಗ ಅದು “ರಿವರ್ಸ್‌” ಆಗಿದೆ. ಆಗಲೂ ಸ್ವಲ್ಪ ಮಟ್ಟಿಗೆ ಜಾತೀಯತೆ ಹಾಗೂ ಹಣಕಾಸಿನ ವ್ಯವಹಾರಗಳು ಇದ್ದವು. ಈಗ ಅದು “ಮಿತಿ ಮೀರಿದೆ. ಜಾತಿ ಹಾಗೂ ಹಣದ ಪ್ರಭಾವ ಇದಕ್ಕಿಂತ ಜಾಸ್ತಿ ಆಗೋಕೆ ಸಾಧ್ಯವಿಲ್ಲದಂತಹ ಸ್ಥಿತಿ ತಲುಪಿದ್ದೇವೆ. ಈಗ ಜಾತಿ ಹಾಗೂ ಹಣದ ಪ್ರಮಾಣ ವಿಪರೀತ ಆಗಿದೆ.

ಆಗಿನ ಚುನಾವಣೆಗಳಲ್ಲಿ ಜನ ಗುಂಪು ಕಟ್ಟಿಕೊಂಡು ಹಿಂಸಾಚಾರಗಳು ನಡೆಯುತ್ತಿದ್ದವು. ಈಗ ಅದು ಸುಧಾರಣೆ ಆಗಿದೆ. ರಾಜ್ಯದಲ್ಲಿ ಚುನಾವಣ ಹಿಂಸಾಚಾರಗಳು ಅತ್ಯಂತ ಕಡಿಮೆಯಾಗಿವೆ. ಚುನಾವಣ ಆಯೋಗ ನಿರ್ಬಂಧ ಹಾಕಿರುವುದರಿಂದ ರಾತ್ರಿ 10 ಗಂಟೆಗೆ ಪ್ರಚಾರ ಅಂತ್ಯಗೊಳ್ಳುತ್ತೆ. ಆಗ ಮುಂಜಾನೆ 2 ಗಂಟೆ, 3 ಗಂಟೆವರೆಗೂ ಪ್ರಚಾರಸಭೆಗಳು ನಡೆಯುತ್ತಿದ್ದವು. ಜನ ನಮಗಾಗಿ ಕಾಯೋರು. ಆಗ ರಾಜಕಾರಣಿಗಳ ಬಗ್ಗೆ ವಿಶ್ವಾಸವಿತ್ತು, ಅವರು ಹೇಳುವುದನ್ನೆಲ್ಲ ನಂಬುತ್ತಿದ್ದರು, ಆದರೆ ಈಗ ನಂಬುವುದಿಲ್ಲ. ಇದು ಆಗಿನ-ಈಗಿನ ಚುನಾವಣೆಗಳಿಗಿರುವ ವ್ಯತ್ಯಾಸಗಳು.

ನನ್ನ ಸ್ವಂತ ದುಡ್ಡು ಅಂತ ಹೇಳಿ ಆಗ ಖರ್ಚು ಮಾಡಿದ್ದು 1 ರಿಂದ 2 ಲಕ್ಷ ಅಷ್ಟೆ. ಜನರೇ ಸಿಕ್ಕಾಪಟ್ಟೆ ಸ್ವಂತ ಹಣ ಖರ್ಚು ಮಾಡೋರು, ಎಲ್ಲರೂ ಸಹಾಯ ಮಾಡಿದರು. ನನಗೆ ಮೊದಲ ಎಲೆಕ್ಷನ್‌ನಲ್ಲಿ ಕರೆಕ್ಟಾಗಿ ಹಳ್ಳಿಗಳೇ ಗೊತ್ತಿರಲಿಲ್ಲ. ಯಾವ ಹಳ್ಳಿ, ಯಾವ ಜಾತಿ ಏನೆಂಬುದೇ ತಿಳಿದಿರಲಿಲ್ಲ. ನನಗೆ ಜಾತಿ ಅನ್ನೋದು ಕೊನೆಯವರೆಗೂ ಗೊತ್ತಾಗಲಿಲ್ಲ. ನಾನು ಕನಕಪುರದಿಂದ 6 ಸಲ ಗೆದ್ದಿದ್ದರೂ ಯಾವತ್ತೂ ಜಾತಿ ಅಡ್ಡ ಬರಲಿಲ್ಲ. ಕ್ಷೇತ್ರ ಮರು ವಿಂಗಡಣೆ ಆಗಿದ್ದರಿಂದ ಬೇರೆ ಕಡೆ ಹೋಗಬೇಕಾಯಿತು.

ಆಗಲೂ “ಇಷ್ಯು” ಇತ್ತು
ಇವೆಲ್ಲದರ ನಡುವೆಯೂ ನನ್ನ ವೈಯಕ್ತಿಕ ಅಭಿಪ್ರಾಯ ಹೇಳುವುದಾದರೆ ಬಹುತೇಕರು ವಿಷಯಾಧಾರಿತದ ಮೇಲೆ ಮತ ಕೊಡುತ್ತಾರೆ. ಇದು ಆಗಲೂ ಅಷ್ಟೇ-ಈಗಲೂ ಅಷ್ಟೇ. ಕರ್ನಾಟಕದಲ್ಲಿ ಮೊದಲನೇ ಕಾಂಗ್ರೆಸ್‌ಯೇತರ ಸರಕಾರವೆಂದರೆ ರಾಮಕೃಷ್ಣ ಹೆಗಡೆ ನಾಯಕತ್ವದ ಜನತಾ ಸರಕಾರ. ಆ Óರ‌ಕಾರ ಬರಬೇಕಾದರೆ ಆಗಿನ ಮುಖ್ಯಮಂತ್ರಿ ಆರ್‌. ಗುಂಡೂರಾವ್‌ ಬಗ್ಗೆ ಬಹಳ ಅಪಪ್ರಚಾರ ನಡೆಯಿತು. ಇವತ್ತಿಗೆ ಹೋಲಿಸಿದರೆ ಆಗ ಅವರು ಮಾಡಿದ್ದು ನಥಿಂಗ್‌. ಆಗ ಒಂದು ಹೆಲಿಕಾಪ್ಟರ್‌ ಇಟ್ಟುಕೊಂಡಿದ್ದರು, ಈಗ ನೂರು ಹೆಲಿಕಾಪ್ಟರ್‌ಗಳು ಬಳಕೆಯಾಗುತ್ತಿವೆ. ಒಂದು ಹೆಲಿಕಾಪ್ಟರ್‌ಗೆ ಗುಂಡೂರಾಯರ ಮೇಲೆ ಬಹಳ ಕೆಟ್ಟ ಪ್ರಚಾರ ನಡೆಯಿತು. ಆಮೇಲೆ ಗೋಕಾಕ್‌ ವರದಿ ಜಾರಿ ವಿಷಯದಲ್ಲೂ ಅವರ ಮಾತುಗಳು ಸರಿ ಹೋಗಲಿಲ್ಲ, ಕನ್ನಡ ಚಳವಳಿ ಹೋರಾಟಗಾರರು, ಕನ್ನಡ ಸಂಘಟನೆಗಳು, ರೈತರು, ದಲಿತ ಸಂಘಟನೆಗಳ ಸಹ ಸರಕಾರದ ವಿರುದ್ಧ ನಿಂತವು. ಗುಂಡೂರಾಯರು ಮತ್ತು ಕಾಂಗ್ರೆಸ್‌ ವಿರುದ್ಧದ ವಾತಾವರಣ ಸೃಷ್ಟಿಯಾಗಿ ಆ ಪಕ್ಷ ಹಿನ್ನಡೆ ಅನುಭವಿಸಿತು. ವಿಶೇಷವಾಗಿ ಬಂಗಾರಪ್ಪ ಸಹ ಬಂಡಾಯದ ಬಾವುಟ ಹಾರಿಸಿದ್ದರಿಂದ ಜನತಾ ಸರಕಾರ ಬಂತು. ಇದು “ಇಷ್ಯು’ ಮೇಲೆ ನಡೆದ ಚುನಾವಣೆ, ಅನಂತರ 1985 ರಲ್ಲಿ ಹೆಗಡೆ ನಾಯಕತ್ವದಲ್ಲಿ ಚುನಾವಣೆ “ಇಷ್ಯು’ ಮೇಲೆ ನಡೆಯಿತು. ಹೆಗಡೆ ಅವರದು “ಒಳ್ಳೆಯ ಆಡಳಿತ’ ಎಂಬ ವಿಷಯದ ಮೇಲೆ ನಡೆದ ಚುನಾವಣೆ. ಈ ರೀತಿ ಪ್ರತೀ ಚುನಾವಣೆಯೂ ವಿಷಯಾಧಾರಿತದ ಮೇಲೆ ನಡೆಯುತ್ತಿವೆ.

-ಎಂ.ಎನ್‌.ಗುರುಮೂರ್ತಿ

ಟಾಪ್ ನ್ಯೂಸ್

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

1-24–monday

Daily Horoscope: ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆ, ಉದ್ಯಮದಲ್ಲಿ ಪ್ರಗತಿ

Renuka Swamy Case;ಸ್ಥಳ ಮಹಜರು ವೇಳೆ ಮುಗುಳು ನಕ್ಕ ಪವಿತ್ರಾ ಗೌಡ

Renuka Swamy Case;ಸ್ಥಳ ಮಹಜರು ವೇಳೆ ಮುಗುಳು ನಕ್ಕ ಪವಿತ್ರಾ ಗೌಡ

Monsoon ಮಳೆ ಅಧಿಕ ಸರಿದ ಬರದ ಕಾರ್ಮೋಡ

Monsoon ಮಳೆ ಅಧಿಕ ಸರಿದ ಬರದ ಕಾರ್ಮೋಡ

Government ಪೊಲೀಸ್‌ ವರ್ಗ: ಹೊಸ ನೀತಿ ಶೀಘ್ರ?

Government ಪೊಲೀಸ್‌ ವರ್ಗ: ಹೊಸ ನೀತಿ ಶೀಘ್ರ?

PM Vishwakarma Yojana: ಉಭಯ ಜಿಲ್ಲೆಗಳಲ್ಲಿ ನಿರೀಕ್ಷಿತ ನೋಂದಣಿ ಆಗಿಲ್ಲ

PM Vishwakarma Yojana: ಉಭಯ ಜಿಲ್ಲೆಗಳಲ್ಲಿ ನಿರೀಕ್ಷಿತ ನೋಂದಣಿ ಆಗಿಲ್ಲ

ರೇಣುಕಾಸ್ವಾಮಿಗೆ ಕರೆಂಟ್‌ ಶಾಕ್‌ ಕೊಟ್ಟಿದ್ದ ಮೆಗ್ಗರ್‌ಗೆ ತಲಾಶ್‌!

ರೇಣುಕಾಸ್ವಾಮಿಗೆ ಕರೆಂಟ್‌ ಶಾಕ್‌ ಕೊಟ್ಟಿದ್ದ ಮೆಗ್ಗರ್‌ಗೆ ತಲಾಶ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

1-24–monday

Daily Horoscope: ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆ, ಉದ್ಯಮದಲ್ಲಿ ಪ್ರಗತಿ

Renuka Swamy Case;ಸ್ಥಳ ಮಹಜರು ವೇಳೆ ಮುಗುಳು ನಕ್ಕ ಪವಿತ್ರಾ ಗೌಡ

Renuka Swamy Case;ಸ್ಥಳ ಮಹಜರು ವೇಳೆ ಮುಗುಳು ನಕ್ಕ ಪವಿತ್ರಾ ಗೌಡ

Monsoon ಮಳೆ ಅಧಿಕ ಸರಿದ ಬರದ ಕಾರ್ಮೋಡ

Monsoon ಮಳೆ ಅಧಿಕ ಸರಿದ ಬರದ ಕಾರ್ಮೋಡ

Government ಪೊಲೀಸ್‌ ವರ್ಗ: ಹೊಸ ನೀತಿ ಶೀಘ್ರ?

Government ಪೊಲೀಸ್‌ ವರ್ಗ: ಹೊಸ ನೀತಿ ಶೀಘ್ರ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.