ಗ್ರಾಮಿಣ ಭಾಗದಲ್ಲಿ ಬಸ್ ಸೌಕರ್ಯಕ್ಕೆ ಆಗ್ರಹ
3604 ಹೊಸ ಬಸ್ ಖರೀದಿಸಿ ವ್ಯವಸ್ಥೆ ಮಾಡುವ ಭರವಸೆ
Team Udayavani, Feb 23, 2023, 6:40 AM IST
ವಿಧಾನಸಭೆ: ಗ್ರಾಮೀಣ ಭಾಗದಲ್ಲಿ ಸಮರ್ಪಕ ಬಸ್ ಸೇವೆ ಒದಗಿಸಲು 3,604 ಹೊಸ ಬಸ್ ಖರೀದಿಗೆ ತೀರ್ಮಾನಿಸಲಾಗಿದೆ ಎಂದು ಇಂಧನ ಸಚಿವ ಸುನಿಲ್ಕುಮಾರ್ ತಿಳಿಸಿದ್ದಾರೆ.
ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ನ ತುಕಾರಾಂ ಪ್ರಸ್ತಾಪಕ್ಕೆ ಸಚಿವ ಶ್ರೀರಾಮುಲು ಪರವಾಗಿ ಉತ್ತರಿಸಿ, ಈ ಪೈಕಿ 800 ಬಸ್ ಕಲ್ಯಾಣ ಕರ್ನಾಟಕ ಭಾಗಕ್ಕೆ ಮೀಸಲಿರಿಸಲಾಗುವುದು ಎಂದರು.
ಗ್ರಾಮೀಣ ಭಾಗದಲ್ಲಿ ಬಸ್ ಸೇವೆ ಇಲ್ಲದೆ ಸಮಸ್ಯೆ ಉಂಟಾಗಿರುವ ಬಗ್ಗೆ ಸರ್ಕಾರದ ಗಮನಕ್ಕೆ ಬಂದಿದೆ. ಆದಷ್ಟು ಶೀಘ್ರ ಎಲ್ಲಿ ಅವಶ್ಯಕತೆ ಇದೆಯೋ ಅಲ್ಲಿ ಬಸ್ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು. ಇದಕ್ಕೂ ಮುನ್ನ ತುಕಾರಾಂ ಅವರು, ಕಲ್ಯಾಣ ಕರ್ನಾಟಕ ಭಾಗವನ್ನು ನಿರ್ಲಕ್ಷ್ಯ ಮಾಡಲಾಗಿದೆ. ಬಸ್ ಸೇವೆ ಇಲ್ಲದೆ ವಿದ್ಯಾರ್ಥಿಗಳು ಶಾಲಾ-ಕಾಲೇಜು ಬಿಡುವಂತಾಗಿದೆ ಎಂದು ಹೇಳಿದರು.
ಕಾಂಗ್ರೆಸ್ನ ಡಾ.ರಂಗನಾಥ್ ಸಹ ತಮ್ಮ ಕ್ಷೇತ್ರದಲ್ಲಿ ಬಸ್ ಸಮಸ್ಯೆ ಬಗ್ಗೆ ಪ್ರಸ್ತಾಪಿಸಿದರು. ಇದಕ್ಕೆ ಜೆಡಿಎಸ್ ಹಾಗೂ ಕಾಂಗ್ರೆಸ್ನ ಹಲವು ಸದಸ್ಯರು ಧ್ವನಿಗೂಡಿಸಿದರು.
ಸಚಿವ ಸುನಿಲ್ಕುಮಾರ್, ಎಲ್ಲ ಶಾಸಕರ ಅಭಿಪ್ರಾಯ ಪಡೆದು ಗ್ರಾಮೀಣ ಭಾಗಕ್ಕೆ ಬಸ್ ಸೇವೆ ಕಲ್ಪಿಸಲಾಗುವುದು. ಸರ್ಕಾರ ಈ ವಿಷಯದಲ್ಲಿ ಗಮನಹರಿಸಲಿದೆ ಎಂದು ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
MUST WATCH
ಹೊಸ ಸೇರ್ಪಡೆ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು