ಬಳ್ಳಾರಿಯಲ್ಲಿ ಶಾ ಸಂಚಲನ; ಬಿಜೆಪಿ ಚಾಣಕ್ಯ ಇಂದು ರಾಜ್ಯಕ್ಕೆ

ಹಳೆ ಮೈಸೂರಿಗೂ ರಣತಂತ್ರ

Team Udayavani, Feb 23, 2023, 7:14 AM IST

ಬಳ್ಳಾರಿಯಲ್ಲಿ ಶಾ ಸಂಚಲನ; ಬಿಜೆಪಿ ಚಾಣಕ್ಯ ಇಂದು ರಾಜ್ಯಕ್ಕೆ

ಬೆಂಗಳೂರು:  ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಲೇಬೇಕು ಎಂದು ಹಠ ತೊಟ್ಟಿರುವ ಬಿಜೆಪಿ, ಅಗತ್ಯವಿರುವ ಎಲ್ಲ ತಂತ್ರಗಾರಿಕೆಗಳನ್ನು ನಡೆಸುತ್ತಿದೆ. ಇದರ ಅಂಗವಾಗಿಯೇ ಗುರುವಾರ ಮತ್ತೊಂದು ಬಾರಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ರಾಜ್ಯಕ್ಕೆ ಆಗಮಿಸಲಿದ್ದು, ಬಳ್ಳಾರಿ ಜಿಲ್ಲೆ ಮತ್ತು ಬೆಂಗಳೂರಿನಲ್ಲಿ ಪಕ್ಷದ ನಾಯಕರ ಜತೆ ಮಾತುಕತೆ ನಡೆಸಲಿದ್ದಾರೆ.

ಬಳ್ಳಾರಿ ಜಿಲ್ಲೆ, ಹಳೆ ಮೈಸೂರು ಮತ್ತು ರಾಜಧಾನಿಯನ್ನು ಗಮನದಲ್ಲಿರಿಸಿಕೊಂಡು ಅಮಿತ್‌ ಶಾ ಕಾರ್ಯತಂತ್ರ ರೂಪಿಸಿಕೊಂಡೇ ಬರುತ್ತಿದ್ದಾರೆ. ಈ ಭಾಗಗಳಲ್ಲಿ ಬಿಜೆಪಿಯ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿ ಮಹತ್ವದ ಸಭೆ ನಡೆಸಲಿದ್ದಾರೆ.  ಚುನಾವಣೆ ದೃಷ್ಟಿಯಿಂದ ಇದೊಂದು ಮಹತ್ವದ ಸಭೆ ಎಂದೇ ವಿಶ್ಲೇಷಿಸಲಾಗುತ್ತಿದೆ.

ಗುರುವಾರ ಮಧ್ಯಾಹ್ನ ಅವರು ಬಳ್ಳಾರಿಯ ಸಂಡೂರಿಗೆ ಆಗಮಿಸಲಿದ್ದು, ಅಲ್ಲಿ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಮೂಲಕ ಕಲ್ಯಾಣ ಕರ್ನಾಟಕ ಭಾಗದಲ್ಲಿ ಕೇಸರಿ ಪಡೆಯನ್ನು ಬಡಿದೆಬ್ಬಿಸುವ ಕಾರ್ಯವನ್ನು ನಡೆಸಲಿದ್ದಾರೆ.   ಜನಾರ್ದನ ರೆಡ್ಡಿ ಹೊಸ ಪಕ್ಷ ಸ್ಥಾಪನೆ ಬಳಿಕ ಬಿಜೆಪಿಗೆ ಆಗಲಿರುವ ಹಾನಿಯನ್ನು ಸರಿಪಡಿಸಲು ಪ್ರಯತ್ನಿಸಲಿದ್ದಾರೆ.

ಪ್ರಮುಖ ವಿಚಾರವೆಂದರೆ,  ಕಾಂಗ್ರೆಸ್‌ನ  ಕೋಟೆ ಯಾಗಿದ್ದ ಬಳ್ಳಾರಿ   ಜಿಲ್ಲೆಯಲ್ಲಿ ರೆಡ್ಡಿ ಸಹೋ ದರರ ಪ್ರಾಬಲ್ಯದಿಂದಾಗಿ  ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದಿದ್ದರೂ ಸಂಡೂರು ಮಾತ್ರ ಕಾಂಗ್ರೆಸ್‌ನ ಭದ್ರ ಕೋಟೆಯಾಗಿಯೇ ಉಳಿದುಕೊಂಡಿದೆ.

ಹೀಗಿರುವಾಗ ಅಮಿತ್‌ ಶಾ ಅವರ ಬಹಿರಂಗ ಸಭೆಗೆ ಸಂಡೂರನ್ನು ಆಯ್ಕೆ ಮಾಡಿಕೊಂಡಿರುವುದು ರಾಜಕೀಯ ವಲಯದಲ್ಲಿ  ಚರ್ಚೆಗೆ ಕಾರಣವಾಗಿದೆ.

ಸಂಡೂರಿನ ಕಾರ್ಯಕ್ರಮವನ್ನು ಮುಗಿಸಿ ಸಂಜೆ ಬೆಂಗಳೂರಿಗೆ ಆಗಮಿಸುವ ಅಮಿತ್‌ ಶಾ ಪುರಭವನದಲ್ಲಿ ಆಯೋಜಿಸಿರುವ “ಭಾರತದ ರಾಜಕೀಯದಲ್ಲಿ 65 ವರ್ಷಗಳು ಮತ್ತು ನರೇಂದ ಮೋದಿ ಅವಧಿಯ ಮಾದರಿ ಬದಲಾವಣೆಗಳು’ ಎಂಬ ವಿಚಾರ ಸಂಕಿರಣದಲ್ಲಿ ಭಾಗವಹಿಸಲಿದ್ದಾರೆ. ಅನಂತರ ಖಾಸಗಿ ಹೊಟೇಲ್‌ನಲ್ಲಿ ಆಯೋಜಿಸಿರುವ ಬಿಜೆಪಿಯ ಮಹತ್ವದ ಸಭೆಯಲ್ಲಿ  ಭಾಗಿಯಾಗಲಿದ್ದಾರೆ. ಈ ಸಭೆಯಲ್ಲಿ ಬೆಂಗಳೂರು ನಗರದ ಶಾಸಕರು, ಪರಾಜಿತ ಅಭ್ಯರ್ಥಿಗಳು, ಸಂಸದರು ಹಾಗೂ ಹಿರಿಯ ನಾಯಕರ ಜತೆಗೆ ಸಭೆ ನಡೆಸಲಿದ್ದಾರೆ.

ಬಲವರ್ಧನೆಗೆ ರೂಟ್‌ ಮ್ಯಾಪ್‌
ಬೆಂಗಳೂರಿನಲ್ಲಿ ನಡೆಯುವ ಸಭೆಯಲ್ಲಿ ರಾಜಧಾನಿಗೆ  ಹೊಂದಿಕೊಂಡಿರುವ ಜಿಲ್ಲೆಗಳಲ್ಲಿ ಪಕ್ಷದ ಬಲವರ್ಧನೆ ಕಾರ್ಯತಂತ್ರದ ಬಗ್ಗೆಯೂ ಚರ್ಚೆಯಾಗಲಿದೆ.  ಹಳೆ ಮೈಸೂರು ಭಾಗದಲ್ಲಿ ಪಕ್ಷದ ಬಲವರ್ಧನೆಗೆ ಅಮಿತ್‌ ಶಾ  ರೂಟ್‌ ಮ್ಯಾಪ್‌ ನಿಗದಿ ಮಾಡಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

voter

EC; ಮೊದಲ 4 ಹಂತದ ಚುನಾವಣೆಯಲ್ಲಿ ಶೇ.67 ಮತದಾನ

kejriwal 2

ಜೂ.4ರ ಬಳಿಕ ಐಎನ್‌ಡಿಐಎ ಸರಕಾರ: ಅರವಿಂದ ಕೇಜ್ರಿವಾಲ್‌

Amit Shah

ತುಸು ಬಿಸಿ ಹೆಚ್ಚಾದರೆ ರಾಹುಲ್‌ ಬ್ಯಾಂಕಾಕ್‌ಗೆ ಓಟ: ಅಮಿತ್‌ ಶಾ

congress

Congress ತಮಿಳುನಾಡಿನಲ್ಲಿ ಸ್ವಂತ ಬಲದಿಂದ ಸರಕಾರ ರಚನೆ ಯಾವಾಗ?: ಕೆ.ಸೆಲ್ವ ಪೆರುಂತಗೈ

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

baby 2

Ballari: ತಿಪ್ಪೆಗುಂಡಿಯಲ್ಲಿ ಸಿಕ್ಕಿದ್ದ ಹೆಣ್ಣುಮಗುವನ್ನು ದತ್ತು ಪಡೆದ ವಿದೇಶಿ ದಂಪತಿ

1-wqewqewqe

MLC Election; ಕೊರಿಯರ್‌ ಕಚೇರಿಯಲ್ಲಿ ಅಪಾರ ಗಿಫ್ಟ್ ಬಾಕ್ಸ್‌!!

school

RTE; ಶಿಕ್ಷಣ ಹಕ್ಕು ಕಾಯ್ದೆ ಅರ್ಜಿ ಅವಧಿ ವಿಸ್ತರಣೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-wqeqewqe

Traffic ದಂಡವನ್ನು ತಪ್ಪಿಸಲು ಹೆಲ್ಮೆಟ್‌ ಧರಿಸಿ ಕಾರು ಚಾಲನೆ!

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

rain

Kerala; ಮೂರ್ನಾಲ್ಕು ದಿನ ಭಾರಿ ಮಳೆ: ಹವಾಮಾನ ಇಲಾಖೆ

marriage 2

Wedding gifts ಪಟ್ಟಿ ಇರಿಸಿಕೊಳ್ಳುವುದು ಕಡ್ಡಾಯ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.