ಕ್ಯೂಆರ್‌ ಕೋಡ್‌ನ‌ಲ್ಲಿ ಪೊಲೀಸರ ಕಾರ್ಯವೈಖರಿ ತಿಳಿಸಿ


Team Udayavani, Feb 23, 2023, 2:45 PM IST

tdy-9

ಬೆಂಗಳೂರು: ಪೊಲೀಸ್‌ ಇಲಾಖೆಯನ್ನು ಇನ್ನಷ್ಟು ಜನಸ್ನೇಹಿಯಾಗಿಸಲು ಆಗ್ನೇಯ ವಿಭಾಗದ ಪೊಲೀಸರು ಹೊಸ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಂಡಿದ್ದಾರೆ. ಈ ತಂತ್ರಜ್ಞಾನಕ್ಕೆ “ಲೋಕಸ್ಪಂದನ’ “ನಿಮ್ಮ ನುಡಿ, ನಮ್ಮ ನಡೆ’ ಎಂಬ ಹೆಸರಿಡಲಾಗಿದೆ.

ಪೊಲೀಸ್‌ ಠಾಣೆಗಳಿಗೆ ದೂರು ಹೊತ್ತು ಬರುವ ಸಾರ್ವಜನಿಕರಿಗೆ ಪೊಲೀಸರು ಯಾವ ರೀತಿ ಸ್ಪಂದಿಸಿದರು? ಹೇಗೆ ನಡೆಸಿಕೊಂಡರು? ಎಂಬ ಬಗ್ಗೆ ದೂರುದಾರರು ಠಾಣೆ ಹೊರಭಾಗದಲ್ಲಿರುವ ಕ್ಯೂಆರ್‌ ಕೋಡ್‌ ಸ್ಕ್ಯಾನ್‌ ಮಾಡಿ, ಪೊಲೀಸರ ಬಗ್ಗೆ ಅಭಿಪ್ರಾಯ ತಿಳಿಸಬಹುದು. ಜತೆಗೆ ಸ್ಟಾರ್‌ ಮೂಲಕ ಪೊಲೀಸರ ಕರ್ತವ್ಯವನ್ನು ಶ್ಲಾಘಿಸಬಹುದು. ಈ ಮೂಲಕ ಪೊಲೀಸರು ಮತ್ತು ಸಾರ್ವಜನಿಕರ ನಡುವಿನ ಬಾಂಧವ್ಯ ಹೆಚ್ಚಾಗಲಿದೆ.

ಜತೆಗೆ ಠಾಣಾ ಮಟ್ಟದ ಪೊಲೀಸರ ಕಾರ್ಯವೈಖರಿ ಹಿರಿಯ ಅಧಿಕಾರಿಗಳಿಗೆ ನೇರವಾಗಿ ದೊರೆಯಲಿದೆ. ಅದರಿಂದ ತಪ್ಪೆಸಗಿದ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮಕ್ಕೂ ನೆರವಾಗುತ್ತದೆ. ಕಳೆದ ಆರು ತಿಂಗಳಿಂದ ಈ ವ್ಯವಸ್ಥೆ ಜಾರಿಯಲ್ಲಿದ್ದು, ಆಗ್ನೇಯ ವಿಭಾಗ ಡಿಸಿಪಿ ಸಿ.ಕೆ.ಬಾಬಾರ ಈ ಹೊಸ ಪ್ರಯೋಗಕ್ಕೆ ಉತ್ತಮ ಸ್ಪಂದನೆ ದೊರೆಯುತ್ತಿದೆ.

ಬೇಸಿಕ್‌ ಮೊಬೈಲ್‌ ಬಳಕೆದಾರರಿಂದಲೂ ಪ್ರತಿಕ್ರಿಯೆ: ಹ್ಯಾಂಡ್ರೈಡ್‌ ಮೊಬೈಲ್‌ ಬಳಕೆದಾರರು ಮಾತ್ರವಲ್ಲ, ಬೇಸಿಕ್‌ ಮೊಬೈಲ್‌ ಬಳಕೆದಾರರು ಅಥವಾ ಬಳಸದವರು ಕೂಡ ಪೊಲೀಸರ ಬಗ್ಗೆ ಅಭಿಪ್ರಾಯವ್ಯಕ್ತಪಡಿಸಿದರು. ಠಾಣೆ ಹೊರಭಾಗದಲ್ಲಿ ಕ್ಯೂಆರ್‌ಕೋಡ್‌ ಅಂಟಿಸಿರುವ ಬಾಕ್ಸ್‌ ಕೆಳಗಡೆ ಕನ್ನಡ ಮತ್ತು ಇಂಗ್ಲಿಷ್‌ ಭಾಷೆಯಲ್ಲಿ ಚಲನ್‌ ಮಾದರಿಯಲ್ಲಿ ನಮೂನೆಗಳು ಇದೆ. ಅದರಲ್ಲಿ ಹತ್ತಾರು ಪ್ರಶ್ನೆಗಳು ಇದ್ದು, ಸರಿ/ಇಲ್ಲ ಎಂದು ಟಿಕ್‌ ಮಾಡಿ, ಲೆಟರ್‌ ಬಾಕ್ಸ್‌ನಲ್ಲಿ ಚಲನ್‌ ಹಾಕಬೇಕು. ಡಿಸಿಪಿ ಕಚೇರಿಯಲ್ಲಿರುವ ಸಿಬ್ಬಂದಿ ತಮ್ಮ ಬಳಿಯಿರುವ ಕೀ ಬಳಸಿ ಬಾಕ್ಸ್‌ನಲ್ಲಿರುವ ಚಲನ್‌ ಪಡೆದು ಡಿಸಿಪಿಗೆ ನೇರವಾಗಿ ನೀಡಲಿದ್ದಾರೆ.

ಡಿಪಿಗೆ ಕ್ಯೂಆರ್‌ಕೋಡ್‌ ಹಾಕಿ!: ಡಿಸಿಪಿ ಸೇರಿ ಆಗ್ನೇಯ ವಿಭಾಗದ ಪೊಲೀಸ್‌ ಅಧಿಕಾರಿಗಳು ತಮ್ಮ ಡಿಪಿಯಲ್ಲಿ ಕ್ಯೂಆರ್‌ಕೋಡ್‌ ಹಾಕಿಕೊಳ್ಳಬೇಕು. ರಾತ್ರಿ 10 ಅಥವಾ 11 ಗಂಟೆಯಿಂದ ಮರು ದಿನ ಮುಂಜಾನೆ 5 ಗಂಟೆ ಅವಧಿಯಲ್ಲಿ ಯಾವುದಾದರೂ ಅವಘಢ ಅಥವಾ ಬೇರೆ ಘಟನೆ ನಡೆಯಬಹುದು. ಈ ಅವಧಿಯಲ್ಲಿ ಅಧಿಕಾರಿಗಳು ವಿಶ್ರಾಂತಿ(ರಾತ್ರಿ ಪಾಳಿ ಹೊರತುಪಡಿಸಿ) ಪಡೆಯುತ್ತಿರುತ್ತಾರೆ. ಆಗ ಡಿಸಿಪಿ ಅಥವಾ ಠಾಣಾಧಿಕಾರಿಯ ಮೊಬೈಲ್‌ ಡಿಪಿ ಯನ್ನು ಸ್ಕ್ಯಾನ್‌ ಮಾಡುವ ಮೂಲಕ ದೂರುಗಳು ಅಥವಾ ಘಟನೆಯನ್ನು ಡಿಸಿಪಿಗೆ ಸಲ್ಲಿಸಬಹುದಾಗಿದೆ. ಅದರಿಂದ ಸಾರ್ವಜನಿಕರ ದೂರುಗಳು ಕಾಲ ವಿಳಂಬವಿಲ್ಲದೆ ಸಕಾಲದಲ್ಲಿ ಇತ್ಯರ್ಥವಾಗಲು ಅನುಕೂಲವಾಗುತ್ತದೆ.

6812 ಮಂದಿ ಅಭಿಪ್ರಾಯ ಸಂಗ್ರಹ : ಕಳೆದ ನವೆಂಬರ್‌ನಿಂದ ವಿಭಾಗದ 14 ಪೊಲೀಸ್‌ ಠಾಣೆಯ ವ್ಯಾಪ್ತಿಯಲ್ಲಿ ಕ್ಯೂಆರ್‌ಕೋಡ್‌ ಅಳವಡಿಸಲಾಗಿತ್ತು. ಇದುವರೆಗೂ 8662 ಮಂದಿ ಠಾಣೆಗಳಿಗೆ ಭೇಟಿ ನೀಡಿದ್ದರು. ಅದರಲ್ಲಿ 6812 ಮಂದಿ ಅಭಿಪ್ರಾಯ ನೀಡಿದ್ದಾರೆ. ಆಡುಗೋಡಿ-438, ಬಂಡೇ ಪಾಳ್ಯ-203, ಬೇಗೂರು-939, ಬೊಮ್ಮನಹಳ್ಳಿ-482, ಎಲೆಕ್ಟ್ರಾನಿಕ್‌ ಸಿಟಿ-421, ಎಚ್‌ಎಸ್‌ಆರ್‌ ಲೇಔಟ್‌- 197, ಹುಳಿಮಾವು-254, ಕೋರಮಂಗಲ-445, ಮಡಿವಾಳ-323, ಮೈಕೋ ಲೇಔಟ್‌-879, ಪರಪ್ಪನ ಅಗ್ರಹಾರ 422, ಸೆನ್‌ ಪೊಲೀಸ್‌ ಠಾಣೆ 787, ಸದ್ದುಗುಂಟೆಪಾಳ್ಯ 470, ತಿಲಕನಗರ 552 ಮಂದಿ ಇದುವರೆಗೂ ಪ್ರತಿಕ್ರಿಯಿಸಿದ್ದಾರೆ.

ಜನಸ್ನೇಹಿ ಪೊಲೀಸ್‌ ವ್ಯವಸ್ಥೆಯನ್ನು ಇನ್ನಷ್ಟು ಬಲಗೊಳಿಸಲು “ಲೋಕ ಸ್ಪಂದನ’ “ನಿಮ್ಮ ನುಡಿ, ನಮ್ಮ ನಡೆ’ ಎಂಬ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಅದರಿಂದ ಪೊಲೀಸರ ಕಾರ್ಯವೈಖರಿಯನ್ನು ಸಾರ್ವಜನಿಕರು ನೇರವಾಗಿ ಡಿಸಿಪಿ ಕಚೇರಿಗೆ ತಲುಪಿಸಬಹುದು. – ಸಿ.ಕೆ.ಬಾಬಾ, ಆಗ್ನೇಯ ವಿಭಾಗ ಡಿಸಿಪಿ 

ಟಾಪ್ ನ್ಯೂಸ್

1-wqeqweqeqw

Prajwal Pen Drive: ಡಿಸಿಎಂ ವಿರುದ್ಧ ರಾಮನಗರದಲ್ಲಿ ಜೆಡಿಎಸ್-ಬಿಜೆಪಿ ಪ್ರತಿಭಟನೆ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

1-wewewqeeq

Relaxed mood; ಮೊಮ್ಮಗಳೊಂದಿಗೆ ಆಟವಾಡಿದ ಕೇಂದ್ರ ಸಚಿವ‌ ಪ್ರಹ್ಲಾದ ಜೋಶಿ

1-weqwwqe

Birla; ಸಂಗೀತ ಕ್ಷೇತ್ರ ತೊರೆಯುವ ಕಠಿನ ನಿರ್ಧಾರ ತಳೆದ ಅನನ್ಯಶ್ರೀ ಬಿರ್ಲಾ

ʼಸಲಾರ್‌ʼನ ʼಶಿವ್‌ ಮನ್ನಾರ್‌ʼಗೂ ʼಕೆಜಿಎಫ್‌ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್

ʼಸಲಾರ್‌ʼನ ʼಶಿವ್‌ ಮನ್ನಾರ್‌ʼಗೂ ʼಕೆಜಿಎಫ್‌ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

1-ewqeqwqewq

Gundlupete; ಸತತ‌ 25 ದಿನಗಳ ಕಾಲ ಕೂಂಬಿಂಗ್ ಯಶಸ್ವಿ:ಪುಂಡಾನೆ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ

Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ

1-wqe-wewq

Cryptocurrency ವೆಬ್‌ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1-wqeqweqeqw

Prajwal Pen Drive: ಡಿಸಿಎಂ ವಿರುದ್ಧ ರಾಮನಗರದಲ್ಲಿ ಜೆಡಿಎಸ್-ಬಿಜೆಪಿ ಪ್ರತಿಭಟನೆ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

1-wewewqeeq

Relaxed mood; ಮೊಮ್ಮಗಳೊಂದಿಗೆ ಆಟವಾಡಿದ ಕೇಂದ್ರ ಸಚಿವ‌ ಪ್ರಹ್ಲಾದ ಜೋಶಿ

1-weqwwqe

Birla; ಸಂಗೀತ ಕ್ಷೇತ್ರ ತೊರೆಯುವ ಕಠಿನ ನಿರ್ಧಾರ ತಳೆದ ಅನನ್ಯಶ್ರೀ ಬಿರ್ಲಾ

ʼಸಲಾರ್‌ʼನ ʼಶಿವ್‌ ಮನ್ನಾರ್‌ʼಗೂ ʼಕೆಜಿಎಫ್‌ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್

ʼಸಲಾರ್‌ʼನ ʼಶಿವ್‌ ಮನ್ನಾರ್‌ʼಗೂ ʼಕೆಜಿಎಫ್‌ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.