ಭಾರತದ ದೃಷ್ಟಿಕೋನ ಬದಲಿಸುವ ಮೈ ಹೀರೋ!
Team Udayavani, Feb 24, 2023, 2:56 PM IST
“ಮೈ ಹೀರೋ’ – ಹೀಗೊಂದು ಹೆಸರಿನ ಸಿನಿಮಾ ಸೆಟ್ಟೇರಿದೆ. ಇತ್ತೀಚೆಗೆ ನಡೆದ “ಮೈ ಹೀರೋ’ ಸಿನಿಮಾದ ಮುಹೂರ್ತ ಸಮಾರಂಭದಲ್ಲಿ ಹಾಜರಿದ್ದ ಹಿರಿಯ ನಟ ದತ್ತಣ್ಣ, ಮಹಾಲಕ್ಷ್ಮೀ ಸೇರಿದಂತೆ ಚಿತ್ರದ ಪ್ರಮುಖ ಕಲಾವಿದರು ಮತ್ತು ತಂತ್ರಜ್ಞರು ಹಾಜರಿದ್ದು, ಚಿತ್ರೀಕರಣಕ್ಕೆ ಚಾಲನೆ ನೀಡಿದರು. ಮೂಲತಃ ರಂಗಭೂಮಿ ಕಲಾವಿದರಾಗಿರುವ, ಸ್ಯಾನ್ ಫ್ರಾನ್ಸಿಸ್ಕೊ ಫಿಲಂ ಸ್ಕೂಲ್ನಲ್ಲಿ ನಿರ್ದೇಶನ ತರಬೇತಿ ಮತ್ತು ಮುಂಬೈನ “ಅನುಪಮ್ ಖೇರ್ ಫಿಲಂ ಇನ್ಸ್ಟಿಟ್ಯೂಟ್’ನಲ್ಲಿ ಅಭಿನಯ ತರಬೇತಿ ಪಡೆದಿರುವ ಯುವ ಪ್ರತಿಭೆ ಅವಿನಾಶ್ ವಿಜಯಕುಮಾರ್ “ಮೈ ಹೀರೋ’ ಸಿನಿಮಾವನ್ನು “ಎ ವಿ ಸ್ಟುಡಿಯೋಸ್’ ಬ್ಯಾನರಿನಲ್ಲಿ ನಿರ್ಮಿಸಿ, ನಿರ್ದೇಶಿಸಿ ತೆರೆಗೆ ತರುತ್ತಿದ್ದಾರೆ.
ಮುಹೂರ್ತದ ಬಳಿಕ ಮಾತನಾಡಿದ ನಿರ್ದೇಶಕ ಅವಿನಾಶ್ ವಿಜಯಕುಮಾರ್, “ಇದೊಂದು ಸಾಮಾಜಿಕ ಸಮಸ್ಯೆಯನ್ನು ಇಟ್ಟುಕೊಂಡು ಮಾಡುತ್ತಿರುವ ಸಿನಿಮಾ. ಅಮೆರಿಕಾದಿಂದ ಭಾರತಕ್ಕೆ ಬಂದ ಅಧಿಕಾರಿಯೊಬ್ಬರಿಗೆ ಇಲ್ಲೊಬ್ಬ ಹುಡುಗನ ಪರಿಚಯವಾಗುತ್ತದೆ. ಇವರಿಬ್ಬರ ನಡುವೆ ಈ ಸಿನಿಮಾದ ಕಥೆ ಸಾಗುತ್ತದೆ. ಕೆಲವು ಸಿನಿಮಾಗಳಲ್ಲಿ ಭಾರತವನ್ನು ಬಡ ರಾಷ್ಟ್ರ ಎಂದು ಬಿಂಬಿಸಲಾಗುತ್ತದೆ. ಆದರೆ ಈ ಸಿನಿಮಾದಲ್ಲಿ ಭಾರತವನ್ನು ಬೇರೆಯದೇ ರೀತಿಯಲ್ಲಿ ತೋರಿಸುತ್ತಿದ್ದೇವೆ. ಸಿನಿಮಾ ನೋಡಿದ ಮೇಲೆ ಪ್ರತಿಯೊಬ್ಬರಿಗೂ ಭಾರತವನ್ನು ನೋಡುವ ದೃಷ್ಟಿಯೂ ಬದಲಾಗಬಹುದು’ ಎಂದರು.
ಇನ್ನು “ಮೈ ಹೀರೋ’ ಸಿನಿಮಾದಲ್ಲಿ ಹಾಲಿವುಡ್ ನಟ ಜಿಲಾಲಿ ರೆಜ್ ಕಲ್ಲಾಹ್ ಹಾಗೂ ಬಾಲನಟ ವೇದಿಕ್ ಕೌಶಿಕ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಹಿರಿಯ ನಟ ದತ್ತಣ್ಣ ಪುರೋಹಿತನಾಗಿ, ಪ್ರಕಾಶ್ ಬೆಳವಾಡಿ ಜಿಲ್ಲಾಧಿಕಾರಿ ಪಾತ್ರದಲ್ಲಿ, ಮತ್ತೂಂದು ಪ್ರಮುಖ ಪಾತ್ರದಲ್ಲಿ ನಿರಂಜನ್ ದೇಶಪಾಂಡೆ ಅಭಿನಯಿಸುತ್ತಿದ್ದಾರೆ. ಚಿಕ್ಕಮಗಳೂರಿನಲ್ಲಿ ಮೊದಲ ಹಂತದ ಚಿತ್ರೀಕರಣ ನಡೆಯಲಿದ್ದು, ಆ ನಂತರ ಮಧ್ಯಪ್ರದೇಶ ಹಾಗೂ ಯುಎಸ್ಎ ನಲ್ಲೂ ಚಿತ್ರೀಕರಣ ನಡೆಸುವ ಯೋಜನೆಯಲ್ಲಿದೆ ಚಿತ್ರತಂಡ. ಇಲ್ಲಿನ ತಂತ್ರಜ್ಞರ ಜೊತೆ ಹಾಲಿವುಡ್ನ ಕೆಲ ತಂತ್ರಜ್ಞರು ಈ ಸಿನಿಮಾದಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!