ಚಿತ್ರ ವಿಮರ್ಶೆ: ‘ಗೌಳಿ’ ದುನಿಯಾದಲ್ಲಿ ರೌದ್ರ ನರ್ತನ


Team Udayavani, Feb 25, 2023, 1:08 PM IST

kannada movie gowli review

ಮಾಸ್‌ ಪ್ರಿಯರಿಗೆ ಬೇಕಾದ ಆ್ಯಕ್ಷನ್‌, ಫ್ಯಾಮಿಲಿ ಆಡಿಯನ್ಸ್‌ಗೆ ಖುಷಿ ಕೊಡುವ ಸೆಂಟಿಮೆಂಟ್‌, ಒಂದು ಹೊಸದಾದ ಪರಿಸರ… ಇವೆಲ್ಲವೂ ಒಟ್ಟು ಸೇರಿದರೆ “ಗೌಳಿ’ಯಾಗುತ್ತದೆ. ಹೌದು, ಶ್ರೀನಗರ ಕಿಟ್ಟಿ ನಾಯಕರಾಗಿ ನಟಿಸಿರುವ “ಗೌಳಿ’ ಚಿತ್ರ ತೆರೆಕಂಡಿದೆ. ಒಂದು ಹೊಸ ಬಗೆಯ ಕಥೆಯೊಂದಿಗೆ ಕಿಟ್ಟಿ ಕಂಬ್ಯಾಕ್‌ ಮಾಡಿದ್ದಾರೆ

“ಗೌಳಿ’ ಒಂದು ಆ್ಯಕ್ಷನ್‌ ಸಿನಿಮಾ. ಹಾಗಂತ ಸುಖಾಸುಮ್ಮನೆ ಬಂದು ಹೋಗುವ ಆ್ಯಕ್ಷನ್‌ ಅಲ್ಲ. ಅದಕ್ಕೊಂದು ಕಾರಣವಿದೆ, ಪ್ರತೀಕಾರದ ಹಿಂದೆ ಒಂದು ನೋವಿದೆ.. ಹಾಗಾದರೆ “ಗೌಳಿ’ ಸಿನಿಮಾದ ಕಥೆಯೇನು? ತನ್ನ ಪ್ರೀತಿ- ಪಾತ್ರರನ್ನು ಉಳಿಸಿಕೊಳ್ಳಲು, ತನಗಾದ ಅನ್ಯಾಯಕ್ಕೆ ಸೇಡು ತೀರಿಸಿಕೊಳ್ಳಲು ಒಬ್ಬ ಮೃದು ಸ್ವಭಾವದ ವ್ಯಕ್ತಿ ಹೇಗೆ ಬದಲಾಗುತ್ತಾನೆ, ಆ ಬದಲಾವಣೆಯ ಪರಿಣಾಮ ಎಷ್ಟು ತೀವ್ರವಾಗಿರುತ್ತದೆ ಎಂಬ ಅಂಶದೊಂದಿಗೆ ಇಡೀ ಸಿನಿಮಾ ಸಾಗುತ್ತದೆ.

ಈ ಸಿನಿಮಾದ ಕಥೆಗೊಂದು ಪೂರಕವಾದ ಪರಿಸರವೊಂದನ್ನು ಕಟ್ಟಿಕೊಡಲಾಗಿದೆ. ಉತ್ತರ ಕನ್ನಡದ ಭಾಗದಲ್ಲಿ ನಡೆಯುವ ಕಥೆಯಾಗಿ “ಗೌಳಿ’ ಮೂಡಿಬಂದಿದೆ. ನಿರ್ದೇಶಕ ಸೂರ ತಮ್ಮ ಚೊಚ್ಚಲ ನಿರ್ದೇಶನದಲ್ಲಿ ಒಂದು ಆ್ಯಕ್ಷನ್‌ ಕಂ ಫ್ಯಾಮಿಲಿ ಡ್ರಾಮಾ ಚಿತ್ರವನ್ನು ನೀಟಾಗಿ ಕಟ್ಟಿಕೊಡಲು ಪ್ರಯ ತ್ನಿಸಿರುವುದು ಎದ್ದು ಕಾಣುತ್ತದೆ.

ಚಿತ್ರದಲ್ಲಿ ಖಡಕ್‌ ವಿಲನ್‌ಗಳಿದ್ದಾರೆ, ಅವರ ಅಬ್ಬರವಿದೆ, ಒಬ್ಬ ಮುಗ್ಧನ ಆಕ್ರಂದನವೂ ಇದೆ. ಜೊತೆ ಜೊತೆಗೆ ಒಂದು ರಿವೆಂಜ್‌ ಸ್ಟೋರಿಯೂ ಇದೆ. ಕಥೆಯ ಮೂಲ ಆಶಯದ ತೀವ್ರತೆಯನ್ನು ಹೆಚ್ಚಿಸುವ ಸಲುವಾಗಿ ಹಾಗೂ ನೋಡುಗರ ಕುತೂಹಲ ಹೆಚ್ಚಿಸುವ ಉದ್ದೇಶದಿಂದ ಇಲ್ಲಿ “ದುಷ್ಟ’ ಶಕ್ತಿಗಳು ಸ್ವಲ್ಪ ಹೆಚ್ಚೇ ಅಬ್ಬರಿಸಿವೆ. ನೋಡ ನೋಡುತ್ತಲೇ ಸಿನಿಮಾ ಹೆಚ್ಚು ಗಂಭೀರವಾಗುತ್ತಾ ಸಾಗುತ್ತದೆ. ಆ ಮಟ್ಟಿಗೆ “ಗೌಳಿ’ ಎಂದು ನೀಟಾದ ಸಿನಿಮಾ.

ನಾಯಕ ನಟ ಶ್ರೀನಗರ ಕಿಟ್ಟಿ ಪಾತ್ರಕ್ಕೆ ಹೊಂದಿಕೊಂಡಿದ್ದಾರೆ. ಫ್ಯಾಮಿಲಿ ಮ್ಯಾನ್‌ ಆಗಿ, ಜಿದ್ದಿಗೆ ಬಿದ್ದ ವ್ಯಕ್ತಿಯಾಗಿ ಕಿಟ್ಟಿ ಇಷ್ಟಾಗುತ್ತಾರೆ. ನಾಯಕಿ ಪಾವನಾ, ರಂಗಾಯಣ ರಘು ತಮ್ಮ ಪಾತ್ರಕ್ಕೆ ನ್ಯಾಯ ಒದಗಿಸಿದ್ದಾರೆ. ನೆಗೆಟಿವ್‌ ಶೇಡ್‌ನಲ್ಲಿ ಶರತ್‌ ಲೋಹಿತಾಶ್ವ, ಯಶ್‌ ಶೆಟ್ಟಿ ಅಬ್ಬರಿಸಿದ್ದಾರೆ.

ರವಿಪ್ರಕಾಶ್‌ ರೈ

ಟಾಪ್ ನ್ಯೂಸ್

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

Bharjari gandu movie review

Bharjari Gandu Review; ಹಳ್ಳಿ ಅಡ್ಡದಲ್ಲಿ ಭರ್ಜರಿ ಆ್ಯಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.