ಶೃಂಗೇರಿ ಶ್ರೀ ಶಾರದಾ ಪೀಠಕ್ಕೆ ಕುಮಾರಸ್ವಾಮಿ ಭೇಟಿ
Team Udayavani, Feb 26, 2023, 5:00 AM IST
ಶೃಂಗೇರಿ: ದಕ್ಷಿಣಾಮ್ನಾಯ ಶೃಂಗೇರಿ ಶ್ರೀ ಶಾರದಾ ಪೀಠಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶನಿವಾರ ಭೇಟಿ ನೀಡಿ ಜಗದ್ಗುರುಗಳ ಆಶೀರ್ವಾದ ಪಡೆದರು.
ನರಸಿಂಹವನದ ಗುರುಭವನದಲ್ಲಿ ಜಗದ್ಗುರು ಶ್ರೀ ಭಾರತೀತೀರ್ಥ ಸ್ವಾಮೀಜಿಗಳ ಆಶೀರ್ವಾದ ಪಡೆದು ಮಾತುಕತೆ ನಡೆಸಿದರು.
ನಂತರ ಶ್ರೀಮಠದ ಹೊರ ಆವರಣದ ಶ್ರೀ ಸುಬ್ರಮಣ್ಯ ದೇವಸ್ಥಾನ, ಶ್ರೀ ಜನಾರ್ಧನಸ್ವಾಮಿ, ಶ್ರೀ ವಿದ್ಯಾಶಂಕರ ದೇಗುಲ, ಶ್ರೀ ಶಂಕರಾಚಾರ್ಯ ಹಾಗೂ ಶ್ರೀ ತೋರಣ ಗಣಪತಿ ದೇವಸ್ಥಾನ ಹಾಗೂ ಶ್ರೀಮಠದ ಒಳ ಆವರಣದ ಶ್ರೀ ಶಕ್ತಿಗಣಪತಿ ಹಾಗೂ ಶ್ರೀ ಶಾರದಾಂಬೆಯ ದರ್ಶನ ಪಡೆದು ಪೂಜೆ ಸಲ್ಲಿಸಿದರು.
ಅವರೊಂದಿಗೆ ಪತ್ನಿ ಅನಿತಾ ಕುಮಾರಸ್ವಾಮಿ ಶ್ರೀಮಠಕ್ಕೆ ಭೇಟಿ ನೀಡಿದ್ದರು. ಜೆಡಿಎಸ್ ಮುಖಂಡರಾದ ದಿನೇಶ್ ಹೆಗ್ಡೆ, ಸುಂಕುರ್ಡಿ ವಿವೇಕಾನಂದ, ಮಲ್ಲೇಶ್, ವೆಂಕಪ್ಪಚಾರ್ಯ, ನವೀನ್, ಎಚ್.ಜಿ. ದೇವೇಂದ್ರ, ಜಮಾಲ್ ಸಾಬ್, ದಿವಾಕರ ಭಟ್ ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…