ಟೆಸ್ಟ್ ತಂಡಕ್ಕೆ ಉಪನಾಯಕನ ಅಗತ್ಯವೇನಿದೆ? ರಾಹುಲ್ ಭವಿಷ್ಯದ ಬಗ್ಗೆ ಶಾಸ್ತ್ರಿ ಅಭಿಪ್ರಾಯ


Team Udayavani, Feb 26, 2023, 1:04 PM IST

Shastri said that he always had the belief that India didn’t need a vice-captain

ಮುಂಬೈ: ಭಾರತದ ಟೆಸ್ಟ್ ತಂಡದ ಉಪನಾಯಕ ಸ್ಥಾನವನ್ನು ಕೆಎಲ್ ರಾಹುಲ್ ಕಳೆದುಕೊಂಡಿರುವ ಕುರಿತು ರವಿ ಶಾಸ್ತ್ರಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಟೀಂ ಇಂಡಿಯಾಗೆ ಉಪನಾಯಕನ ಅಗತ್ಯವಿಲ್ಲ ಎಂದು ನಾನು ಯಾವಾಗಲೂ ನಂಬುತ್ತೇನೆ ಎಂದು ಹೇಳಿದರು.

ಸದ್ಯ ನಡೆಯುತ್ತಿರುವ ಬಾರ್ಡರ್- ಗಾವಸ್ಕರ್ ಟ್ರೋಫಿಯ ಮೊದಲೆರಡು ಪಂದ್ಯಗಳಿಗೆ ಕೆಎಲ್ ರಾಹುಲ್ ಅವರು ತಂಡದ ಉಪ ನಾಯಕರಾಗಿದ್ದರು. ಆದರೆ ಕಳಪೆ ಫಾರ್ಮ್ ನ ಕಾರಣದಿಂದ ಅವರು ಹುದ್ದೆ ಕಳೆದುಕೊಂಡಿದ್ದಾರೆ. ಸದ್ಯ ತಂಡದಲ್ಲಿ ಯಾರನ್ನೂ ಉಪನಾಯಕನ ಸ್ಥಾನಕ್ಕೆ ನೇಮಿಸಲಾಗಿಲ್ಲ.

ಐಸಿಸಿ ಪಾಡ್ ಕಾಸ್ಟ್ ಗೆ ಮಾತನಾಡಿದ ರವಿ ಶಾಸ್ತ್ರಿ, ಟೀಂ ಇಂಡಿಯಾಗೆ ಉಪ ನಾಯಕನ ಅಗತ್ಯವಿಲ್ಲ ಎಂದಿದ್ದಾರೆ.

ಇದನ್ನೂ ಓದಿ:ರಬಕವಿ-ಬನಹಟ್ಟಿ: ಜನರು ಮತ್ತೊಮ್ಮೆ ಬಿಜೆಪಿ ಗೆಲ್ಲಿಸುವ ವಿಶ್ವಾಸದಲ್ಲಿದ್ದಾರೆ: ಬೊಮ್ಮಾಯಿ

“ಉಪ ನಾಯಕನ ಬಗ್ಗೆ ತಂಡದ ಮ್ಯಾನೇಜ್ ಮೆಂಟ್ ನಿರ್ಧಾರ ಮಾಡುತ್ತದೆ. ರಾಹುಲ್ ನ ಫಾರ್ಮ್ ಬಗ್ಗೆ, ಆತನ ಮನಸ್ಥಿತಿಯ ಬಗ್ಗೆ ಅವರಿಗೆ ಗೊತ್ತು. ನನ್ನ ಪ್ರಕಾರ ತವರಿನ ಸರಣಿಗೆ ತಂಡಕ್ಕೆ ಉಪನಾಯಕನ ಅಗತ್ಯವಿಲ್ಲ. ಉತ್ತಮ ತಂಡದೊಂದಿಗೆ ಕಣಕ್ಕಿಳಿಯಲಿ. ಒಂದು ವೇಳೆ ನಾಯಕ ಮೈದಾನದಿಂದ ಹೊರಹಗಬೇಕಾದರೆ ಬೇರೆ ಯಾರ ಬಳಿ ಆ ಕ್ಷಣಕ್ಕೆ ಜವಾಬ್ದಾರಿ ನೀಡಲಿ” ಎಂದಿದ್ದಾರೆ.

“ಉಪನಾಯಕನು ಉತ್ತಮ ಪ್ರದರ್ಶನ ನೀಡದಿದ್ದರೆ ಅವನ ಸ್ಥಾನವನ್ನು ಯಾರಾದರೂ ವಹಿಸಿಕೊಳ್ಳಬಹುದು; ಹೇಗೂ ಉಪನಾಯಕನೆಂಬ ಟ್ಯಾಗ್ ಇರುವುದಿಲ್ಲ. ತವರಿನ ಪರಿಸ್ಥಿತಿಯಲ್ಲಿ ನಾನು ಎಂದಿಗೂ ಉಪನಾಯಕನನ್ನು ಇಷ್ಟಪಡುವುದಿಲ್ಲ” ಎಂದು ಶಾಸ್ತ್ರಿ ಹೇಳಿದ್ದಾರೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.