ಯಡಿಯೂರಪ್ಪ ಕನಸಿನ ಏರ್‌ಪೋರ್ಟ್‌ ಸಾಕಾರ

ಇಂದು ಪ್ರಧಾನಿ ಮೋದಿ ಅವರಿಂದ ಉದ್ಘಾಟನೆ

Team Udayavani, Feb 27, 2023, 6:45 AM IST

ಯಡಿಯೂರಪ್ಪ ಕನಸಿನ ಏರ್‌ಪೋರ್ಟ್‌ ಸಾಕಾರ; ಇಂದು ಪ್ರಧಾನಿ ಮೋದಿ ಅವರಿಂದ ಉದ್ಘಾಟನೆ

ಶಿವಮೊಗ್ಗ: ನಗರದ ಸೋಗಾನೆ ಬಳಿ ನಿರ್ಮಾಣವಾಗಿರುವ ವಿಮಾನ ನಿಲ್ದಾಣ ಕಡಿಮೆ ವೆಚ್ಚ , ಕಡಿಮೆ ಅವಧಿ, ಲೈಸೆನ್ಸ್‌ ಪಡೆಯುವ ವಿಷಯದಲ್ಲಿ ದೇಶದಲ್ಲಿನ ಎಲ್ಲ ದಾಖಲೆಗಳನ್ನು ಮುರಿದಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಕಂಡ ಕನಸು ಅವರ ಪುತ್ರ, ಸಂಸದ ರಾಘವೇಂದ್ರ ಅವರಿಂದ ನನಸಾಗಿದೆ.

2007ರಲ್ಲಿ ಯಡಿಯೂರಪ್ಪ ಉಪಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಶಿವಮೊಗ್ಗದ ಅಭಿವೃದ್ಧಿಗೆ ಹಲವು ಯೋಜನೆ ತಂದಿದ್ದರು. ವಿಮಾನ ನಿಲ್ದಾಣ ಮಾಡಿದರೆ ಕೈಗಾರಿಕೆ, ಪ್ರವಾಸೋದ್ಯಕ್ಕೆ ಉತ್ತೇಜನ ಸಿಗಲಿದೆ ಎಂದು ಚಿಂತನೆ ನಡೆಸಿ ಸೂಕ್ತ ಜಮೀನನ್ನು ಹುಡುಕಿದರು. ಸೋಗಾನೆ ಸಮೀಪದ 609.30 ಎಕರೆ ಸರಕಾರಿ, 169.39 ಎಕರೆ ಖಾಸಗಿ ಜಾಗದಲ್ಲಿ ಕಿರು ವಿಮಾನ ನಿಲ್ದಾಣ ಮಾಡಲು ಅನುಮೋದನೆ ನೀಡಲಾಗಿತ್ತು. ಟೆಂಡರ್‌ ಪಡೆದ ಗುತ್ತಿಗೆದಾರ ಅರೆಬೆರೆ ಕೆಲಸ ಮಾಡಿದ್ದರಿಂದ ಕಾಮಗಾರಿ ಸ್ಥಗಿತಗೊಂಡಿತ್ತು. 2015ರಲ್ಲಿ ಪಿಪಿಪಿ ಮಾದರಿಯಲ್ಲಿ ಮತ್ತೆ ಅನುಮೋದನೆ ನೀಡಲಾಗಿತ್ತು. 2018 ನವೆಂಬರ್‌ನಲ್ಲಿ ಸಮ್ಮಿಶ್ರ ಸರಕಾರದ ಆಡಳಿತವಿದ್ದಾಗ ವಿಮಾನ ನಿಲ್ದಾಣಕ್ಕೆ ಅನುಮೋದನೆ ನೀಡಲಾಗಿತ್ತು. ಆದರೆ ಯಾವುದೇ ಪ್ರಗತಿ ಕಾಣಲಿಲ್ಲ. 2019ರಲ್ಲಿ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಯಡಿಯೂರಪ್ಪ, ಅದೇ ವರ್ಷದ ನವೆಂಬರ್‌ನಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ಕಿರು ವಿಮಾನ ನಿಲ್ದಾಣ ಕಾಮಗಾರಿ ಕೈಗೊಳ್ಳಲು ಅನುಮೋದನೆ ನೀಡಿತು. ಡಿಸೆಂಬರ್‌ನಲ್ಲಿ ಎಟಿಆರ್‌-72 ಮಾದರಿಯ 2050 ಮೀಟರ್‌ ಉದ್ದದ ರನ್‌ವೇ ಹಾಗೂ ಭವಿಷ್ಯದಲ್ಲಿ 3050 ಮೀಟರ್‌ ರನ್‌ವೇಗೆ ವಿಸ್ತರಿಸಲು ಅನುಕೂಲವಾಗುವಂತೆ ಕಾಮಗಾರಿಗೆ ಅನುಮೋದನೆ ನೀಡಲಾಯಿತು. ಅಲ್ಲಿಂದ ಆರಂಭವಾದ ಕಾಮಗಾರಿ ಶರವೇಗದಲ್ಲಿ ಪೂರ್ಣಗೊಂಡು ಸೋಮವಾರ ಉದ್ಘಾಟನೆಯಾಗುತ್ತಿದೆ.

ಕೇಂದ್ರ ಸರ್ಕಾರದ ಇಲಾಖೆಗಳ ಜತೆ ನಿರಂತರ ಸಂಪರ್ಕ ಸಾಧಿಸಿದ ರಾಘವೇಂದ್ರ ಅವರು ಕಾಮಗಾರಿ ತ್ವರಿತಗತಿಯಲ್ಲಿ ಪೂರ್ಣಗೊಳ್ಳಲು ಕಾರಣರಾದರು. ಬಿಎಸ್‌ವೈ ರಾಜ್ಯ ಸರ್ಕಾರದಿಂದ ಸಿಗಬೇಕಾದ ಆರ್ಥಿಕ ಸಹಕಾರ, ಕಾಮಗಾರಿಗೆ ವೇಗ ನೀಡಿದರು.

ಕುವೆಂಪು ಹೆಸರು
ವಿಮಾನ ನಿಲ್ದಾಣಕ್ಕೆ ಹೆಸರಿಡುವ ವಿಚಾರದಲ್ಲಿ ದೊಡ್ಡ ಹೋರಾಟ, ಅಭಿಯಾನಗಳೇ ನಡೆದುಹೋದವು. ರಾಜ್ಯ ಸರ್ಕಾರ ಬಿಎಸ್‌ವೈ ಹೆಸರಿಡಲು ಸಂಪುಟದಲ್ಲಿ ಅನುಮೋದನೆ ನೀಡಿ ಕೇಂದ್ರಕ್ಕೆ ಕಳುಹಿಸಲು ತೀರ್ಮಾನ ಮಾಡಿತು. ಆದರೆ ದೊಡ್ಡತನ ಮೆರೆದ ಯಡಿಯೂರಪ್ಪ ನನ್ನ ಹೆಸರು ಬೇಡ, ಸಾಧನೆ ಮಾಡಿದ ಇತರೆ ಮಹನೀಯರ ಹೆಸರಿಡಿ ಎಂದು ಸರ್ಕಾರಕ್ಕೆ ಪತ್ರ ಬರೆದರು. ಕುವೆಂಪು, ಕೆಳದಿ ಶಿವಪ್ಪ ನಾಯಕ, ರಾಣಿ ಅಬ್ಬಕ್ಕ, ಕೆಳದಿ ಚನ್ನಮ್ಮ, ಅಕ್ಕಮಹಾದೇವಿ, ಬಸವಣ್ಣ, ಅಂಬೇಡ್ಕರ್‌ ಅನೇಕ ಹೆಸರುಗಳು ಶಿಫಾರಸುಗೊಂಡವು. ಈಚೆಗೆ ಸಿಎಂ ಮತ್ತೆ ಬಿಎಸ್‌ವೈ ಹೆಸರಿಡುವ ಬಗ್ಗೆ ಪ್ರಸ್ತಾಪಿಸಿದ್ದರು. ಎಲ್ಲದ್ದಕ್ಕೂ ತೆರೆ ಎಳೆದ ಯಡಿಯೂರಪ್ಪ ತಾವೇ ರಾಷ್ಟ್ರಕವಿ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕುವೆಂಪು ಅವರು ಹೆಸರು ಶಿಫಾರಸು ಮಾಡಿದರು. ಸರ್ಕಾರ ಸಂಪುಟದಲ್ಲಿ ಅನುಮೋದನೆ ಮಾಡಿ ಕೇಂದ್ರಕ್ಕೆ ಶಿಫಾರಸು ಮಾಡಿದೆ. ಕೆಲವೇ ದಿನಗಳಲ್ಲಿ ಕೇಂದ್ರದಿಂದ ಆದೇಶ ಹೊರಬೀಳುವ ಸಾಧ್ಯತೆ ಇದೆ.

ದಾಖಲೆ-ದಾಖಲೆ
ಶಿವಮೊಗ್ಗ ವಿಮಾನ ನಿಲ್ದಾಣವು ಹಲವು ದಾಖಲೆಗಳಿಗೆ ಸಾಕ್ಷಿಯಾಗಿದೆ. ವಿಮಾನ ನಿಲ್ದಾಣಕ್ಕೆ ಸರ್ಕಾರಿ ಭೂಮಿ ಸಿಕ್ಕಿದ್ದರಿಂದ ಭೂಸ್ವಾಧೀನ ವೆಚ್ಚದಲ್ಲಿ ಸಾಕಷ್ಟು ಉಳಿತಾಯವಾಗಿದೆ. ವಿಮಾನ ನಿಲ್ದಾಣದ ಕಟ್ಟಡ, ರನ್‌ವೇ, ಕಾಂಪೌಂಡ್‌, ಇತರೆ ಕಾಮಗಾರಿಗಳಿಗೆ 449.22 ಕೋಟಿ ರೂ. ಖರ್ಚಾಗಿದೆ. ಇದೆಲ್ಲಕ್ಕಿಂತ ಮುಖ್ಯವಾಗಿ ಆಗಿದ್ದು ಲೈಸೆನ್ಸ್‌. ಈವರೆಗೆ ನಿರ್ಮಾಣವಾಗಿರುವ ಎಲ್ಲ ವಿಮಾನ ನಿಲ್ದಾಣಗಳು ಲೈಸೆನ್ಸ್‌ ಪಡೆಯಲು ಉದ್ಘಾಟನೆ ದಿನದಿಂದ ಕನಿಷ್ಠ ಆರು ತಿಂಗಳು ತೆಗೆದುಕೊಂಡಿವೆ.

ಶಿವಮೊಗ್ಗ ವಿಮಾನ ನಿಲ್ದಾಣ ಮಾತ್ರ ಲೈಸೆನ್ಸ್‌ ಪ್ರಕ್ರಿಯೆ ಪೂರ್ಣಗೊಳಿಸಿಯೇ ಉದ್ಘಾಟನೆಯಾಗುತ್ತಿದೆ. ಇದಕ್ಕೆ ಪ್ರಮುಖ ಕಾರಣ ಸಂಸದ ರಾಘವೇಂದ್ರರ ಪರಿಶ್ರಮ. ಲೈಸೆನ್ಸ್‌ ನೀಡುವ ಡೈರಕ್ಟರ್‌ ಜನರಲ್‌ ಆಫ್‌ ಸಿವಿಲ್‌ ಏವಿಯೇಷನ್‌ (ಡಿಜಿಸಿಎ) ಅವರನ್ನು ಕಾಮಗಾರಿ ನಡುವೆ ಕರೆಸಿ ಸಲಹೆ ಪಡೆಯಲಾಗಿತ್ತು. ಅವರ ಶಿಫಾರಸುಗಳ ಆಧಾರದ ಮೇಲೆ ಕಾಮಗಾರಿ ನಡೆಸಲಾಗಿತ್ತು. ಫೆಬ್ರವರಿ ಮೊದಲ ವಾರದಲ್ಲಿ ಬಂದಿದ್ದ ಈ ತಂಡ 75 ತಕರಾರುಗಳನ್ನು ನೋಟಿಸ್‌ ಮಾಡಿತ್ತು. ವಾರದೊಳಗೆ ಅದನ್ನು ಪೂರ್ಣಗೊಳಿಸಿ ಲೈಸೆನ್ಸ್‌ ಪಡೆಯಲಾಗಿದೆ.

ಪ್ರಧಾನಿ ವಿಮಾನ ಇಳಿಯಲು ಗ್ರೀನ್‌ ಸಿಗ್ನಲ್‌
ವಿಮಾನ ನಿಲ್ದಾಣ ಉದ್ಘಾಟನೆಗೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ವಿಮಾನವು ಇದೇ ನಿಲ್ದಾಣದಲ್ಲಿ ಲ್ಯಾಂಡ್‌ ಆಗುತ್ತಿರುವುದು ಮತ್ತೊಂದು ದಾಖಲೆ. ಲೈಸೆನ್ಸ್‌ ಪ್ರಕ್ರಿಯೆ ತಡವಾಗಿದ್ದರೆ ಪ್ರಧಾನಿ ಅವರು ಹೆಲಿಕಾಪ್ಟರ್‌ ಮೂಲಕ ಆಗಮಿಸುವ ಸಾಧ್ಯತೆ ಇತ್ತು. ಸಂಸದ ಬಿ.ವೈ.ರಾಘವೇಂದ್ರ ಹಾಗೂ ಬಿಎಸ್‌ವೈ ಆಶಯದಂತೆ ಲೈಸೆನ್ಸ್‌ ಸಿಕ್ಕಿದ್ದು ಪ್ರಧಾನಿಯವರ ವಿಮಾನ ಇಲ್ಲೇ ಲ್ಯಾಂಡ್‌ ಆಗಲಿದೆ. ಈಗಾಗಲೇ ವಾಯುಪಡೆಯ ಎರಡು ವಿಮಾನಗಳು ಬಂದು ಪ್ರಯೋಗಾರ್ಥ ಹಾರಾಟ ನಡೆಸಿದ್ದು, ಪ್ರಧಾನಿ ವಿಮಾನ ಇಳಿಯಲು ಗ್ರೀನ್‌ ಸಿಗ್ನಲ್‌ ಸಿಕ್ಕಿದೆ.

ವಿಮಾನ ನಿಲ್ದಾಣ ವಿಶೇಷತೆ
ರಾತ್ರಿ ಕಾರ್ಯಾಚರಣೆ, ಸಣ್ಣ ವಿಮಾನಗಳಿಂದ ಏರ್‌ಬಸ್‌ವರೆಗೆ ಎಲ್ಲ ರೀತಿಯ ವಿಮಾನಗಳು ಇಲ್ಲಿ ಲ್ಯಾಂಡ್‌ ಆಗಬಹುದು. ಮಲೆನಾಡು, ಮಧ್ಯ ಕರ್ನಾಟಕದ ಮೊದಲ ವಿಮಾನ ನಿಲ್ದಾಣ ಎಂಬ ಹೆಗ್ಗಳಿಕೆಯ ಇದು ಕೈಗಾರಿಕೆ, ಮಲೆನಾಡು ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲಿದೆ. ಪ್ರಸ್ತುತ ಶಿವಮೊಗ್ಗ-ಬೆಂಗಳೂರು ಮಾರ್ಗಕ್ಕೆ ಸ್ಟಾರ್‌
ಏರ್ ವೇಸ್ ಮುಂದೆ ಬಂದಿದೆ.

ವಿಶೇಷ ವಿನ್ಯಾಸ
ವಿಮಾನ ನಿಲ್ದಾಣದ ಟರ್ಮಿನಲ್‌ ಕಟ್ಟಡದ ವಿನ್ಯಾಸವು ಅರಳಿದ ಕಮಲದ ಆಕಾರದಲ್ಲಿದ್ದು ಆಕಾಶದಿಂದ ಸ್ಪಷ್ಟವಾಗಿ ಗೋಚರಿಸುತ್ತದೆ. ಕಮಲ ಆಕಾರದ ಬಗ್ಗೆ ಸಾಕಷ್ಟು ವಿರೋಧಗಳು ವ್ಯಕ್ತವಾಗಿದ್ದವು. ತಾಂತ್ರಿಕವಾಗಿ ಇದು ಕಾರ್ಯಸಾಧುವೇ ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿದ್ದವು. ಆದರೆ ಅಂದುಕೊಂಡಿದ್ದಕ್ಕಿಂತ ಉತ್ತಮವಾಗಿ ಟರ್ಮಿನಲ್‌ ಮೂಡಿಬಂದಿದೆ.

ನಿವೇಶನ ಪರಿಹಾರ
ವಿಮಾನ ನಿಲ್ದಾಣಕ್ಕೆ ಜಾಗ ಕೊಟ್ಟವರಿಗೆ ನಿವೇಶನ ಕೊಡುವ ವಿಚಾರದಲ್ಲಿ ಬದ್ಧತೆ ಪ್ರದರ್ಶಿಸಿರುವ ಬಿಎಸ್‌ವೈ ಪ್ರತಿ ಕುಟುಂಬಕ್ಕೆ ಒಂದು ನಿವೇಶನ ಕೊಡಲು ಸಿದ್ಧತೆ ನಡೆಸಿದ್ದಾರೆ. ಕೆಎಚ್‌ಬಿ ವತಿಯಿಂದ ಊರಗಡೂರು ಬಳಿ ಅಭಿವೃದ್ಧಿಪಡಿಸಿರುವ ಲೇಔಟ್‌ನ ಸೈಟುಗಳನ್ನು ಕೊಡಲು ಸರ್ಕಾರದ ಜತೆ ಪತ್ರ ವ್ಯವಹಾರ ನಡೆಸಲಾಗಿದೆ. ಲೇಔಟ್‌ ನಿರ್ಮಾಣ ವೆಚ್ಚ 36 ಕೋಟಿಯನ್ನು ಸರ್ಕಾರವೇ ಭರಿಸಿ ನಿವೇಶನ ಕೊಡಲು ಸಿದ್ಧತೆ ನಡೆದಿದೆ.

-ಶರತ್‌ ಭದ್ರಾವತಿ

ಟಾಪ್ ನ್ಯೂಸ್

crime (2)

Hubli: ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯ ಭೀಕರ ಹತ್ಯೆ!

1-wwqwewq

Vijayapura NTPC ಚಿಮಣಿ ಮೇಲಿಂದ ಬಿದ್ದು UP ಮೂಲದ ಕಾರ್ಮಿಕ ಸಾವು

ISREL

Rafah; ಇಸ್ರೇಲ್ ಗೆ 1 ಬಿಲಿಯನ್ ಡಾಲರ್ ನ ಶಸ್ತ್ರಾಸ್ತ್ರ ಕಳುಹಿಸುತ್ತಿರುವ ಅಮೆರಿಕ

1-wqqqwe

Rajasthan; ಗಣಿಯಲ್ಲಿ ಲಿಫ್ಟ್ ಕುಸಿದು ಸಂಕಷ್ಟಕ್ಕೆ ಸಿಲುಕಿದ್ದ 14 ಮಂದಿಯ ರಕ್ಷಣೆ

24-kasaragodu

Parkನಲ್ಲಿ ಯುವತಿಯೊಂದಿಗೆ ಅನುಚಿತ ವರ್ತನೆ; ಕೇಂದ್ರ ವಿ.ವಿ.ಯ ವಿವಾದಿತ ಅಧ್ಯಾಪಕನ ಸೆರೆ

Update Android Mobile: Central Govt Warning to Users

Android ಮೊಬೈಲ್‌ ಅಪ್ಡೇಟ್ ಮಾಡಿ: ಬಳಕೆದಾರರಿಗೆ ಕೇಂದ್ರ ಸರ್ಕಾರ ಎಚ್ಚರಿಕೆ

ರಘುಪತಿ ಭಟ್‌

ಈಗಿನ ಬಿಜೆಪಿಯಲ್ಲಿ ಚಮಚಾಗಿರಿಗೆ ಟಿಕೆಟ್‌!: ಟಿಕೆಟ್‌ ವಂಚಿತ ರಘುಪತಿ ಭಟ್‌ ಬಿರುನುಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-araga

SSLC: ಉತ್ತಮ ಅಂಕ ಪಡೆದ ವಿದ್ಯಾರ್ಥಿನಿಯರನ್ನು ಅಭಿನಂದಿಸಿದ ಶಾಸಕ ಆರಗ ಜ್ಞಾನೇಂದ್ರ

ಜಮೀನು ಗಲಾಟೆ; ಕುಡಗೋಲಿನಿಂದ ಹಲ್ಲೆ ಮಾಡಿ ಹಾಡಹಗಲೇ ಸಂಬಂಧಿಯ ಕೊಲೆ

Shimoga ಜಮೀನು ಗಲಾಟೆ; ಕುಡಗೋಲಿನಿಂದ ಹಲ್ಲೆ ಮಾಡಿ ಹಾಡಹಗಲೇ ಸಂಬಂಧಿಯ ಕೊಲೆ

Shimoga: ಆಟೋಗೆ ಕ್ಯಾಂಟರ್ ಡಿಕ್ಕಿ, ವಿದ್ಯಾರ್ಥಿನಿ ಸಾವು; ಸಿಸಿಟಿವಿಯಲ್ಲಿ ದೃಶ್ಯ ಸೆರೆ

Shimoga: ಆಟೋಗೆ ಕ್ಯಾಂಟರ್ ಡಿಕ್ಕಿ, ವಿದ್ಯಾರ್ಥಿನಿ ಸಾವು; ಸಿಸಿಟಿವಿಯಲ್ಲಿ ದೃಶ್ಯ ಸೆರೆ

Shivamogga: ಪೊಲೀಸರ ಮೇಲೆ ಹಲ್ಲೆ ಯತ್ನ… ರೌಡಿ ಶೀಟರ್ ಶೋಹಿಬ್ ಕಾಲಿಗೆ ಗುಂಡೇಟು

Shivamogga: ಪೊಲೀಸರ ಮೇಲೆ ಹಲ್ಲೆ ಯತ್ನ… ರೌಡಿ ಶೀಟರ್ ಶೋಹಿಬ್ ಕಾಲಿಗೆ ಗುಂಡೇಟು

Road Mishap ಶಿಕಾರಿಪುರ: ಕಾರು-ಟ್ರ್ಯಾಕ್ಟರ್ ಡಿಕ್ಕಿ; ತಂದೆ-ಮಗಳು ಸಾವು

Road Mishap ಶಿಕಾರಿಪುರ: ಕಾರು-ಟ್ರ್ಯಾಕ್ಟರ್ ಡಿಕ್ಕಿ; ತಂದೆ-ಮಗಳು ಸಾವು

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

crime (2)

Hubli: ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯ ಭೀಕರ ಹತ್ಯೆ!

1-wwqwewq

Vijayapura NTPC ಚಿಮಣಿ ಮೇಲಿಂದ ಬಿದ್ದು UP ಮೂಲದ ಕಾರ್ಮಿಕ ಸಾವು

ISREL

Rafah; ಇಸ್ರೇಲ್ ಗೆ 1 ಬಿಲಿಯನ್ ಡಾಲರ್ ನ ಶಸ್ತ್ರಾಸ್ತ್ರ ಕಳುಹಿಸುತ್ತಿರುವ ಅಮೆರಿಕ

police USA

London: ಚಾಕುವಿನಿಂದ ಇರಿದು ಭಾರತೀಯ ಮೂಲದ ಮಹಿಳೆಯ ಹತ್ಯೆ

1-wqqqwe

Rajasthan; ಗಣಿಯಲ್ಲಿ ಲಿಫ್ಟ್ ಕುಸಿದು ಸಂಕಷ್ಟಕ್ಕೆ ಸಿಲುಕಿದ್ದ 14 ಮಂದಿಯ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.