ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಜನತೆ


Team Udayavani, Feb 27, 2023, 12:17 PM IST

tdy-7

ಕನಕಪುರ: ನಗರದಲ್ಲಿ ನಗರಸಭೆ ಅಧಿಕಾರಿ ಸಿಬ್ಬಂದಿಗಳ ನಿರ್ಲಕ್ಷದಿಂದ ಸ್ವತ್ಛತೆ ಮರೀಚಿಕೆಯಾಗಿ ಸಾರ್ವಜನಿಕರಿಗೆ ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ ಎಂದು ಧಮ್ಮ ದೀವಿಗೆ ಚಾರಿಟಬಲ್‌ ಟ್ರಸ್ಟ್‌ ಅಧ್ಯಕ್ಷ ಮಲ್ಲಿಕಾರ್ಜುನ್‌ ಆಕ್ರೋಶ ವ್ಯಕ್ತಪಡಿಸಿದ್ದರು.

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನಗರಸಭೆ ತುರ್ತು ಸಂದರ್ಭಗಳಲ್ಲಿ ಯಾವುದೇ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳದೆ ಹೊಣೆಗೇಡಿತನ ಪ್ರದರ್ಶನ ಮಾಡುತ್ತಿದೆ. ಇದರ ಪರಿಣಾಮ ನಗರದಲ್ಲಿ ಸ್ವತ್ಛತೆ ಮರೀಚಿಕೆಯಾಗಿದೆ ಎಂದು ಆರೋಪಿಸಿದರು.

ವಾರ್ಡ್‌ಗಳಲ್ಲಿ ನಾನಾ ಸಮಸ್ಯೆ: ಕೆಲ ದಿನಗಳಿಂದ ಕೆಲವು ನೌಕರರು ಪ್ರತಿಭಟನೆ ಮಾಡುತ್ತಿದ್ದಾರೆ. ಆದರೆ, ಕಾಯಂ ನೌಕರರು ಇದ್ದರೂ ಸಹ ಅವರಿಂದ ನಗರದಲ್ಲಿ ಆಗಬೇಕಿದ್ದ ಕೆಲಸ ಕಾರ್ಯಗಳನ್ನು ಮಾಡುವ ಇಚ್ಛಾಸಕ್ತಿ ತೋರುತ್ತಿಲ್ಲ. ಕೆಲವು ವಾರ್ಡ್ ಗಳಲ್ಲಿ ಈಗಾಗಲೇ ನೀರಿನ ಸಮಸ್ಯೆ ಸಹ ತಲೆದೋರಿದೆ. ಕೆಲ ನೌಕ ರರು ಪ್ರತಿಭಟನೆ ಮಾಡುತ್ತಿರುವುದನ್ನೇ ನೆಪ ಮಾಡಿಕೊಂಡು ಬೇಜವಾಬ್ದಾರಿತನ ಪ್ರದರ್ಶನ ಮಾಡುತ್ತಿದ್ದಾರೆ. ಇದರಿಂದ ಸಾರ್ವಜನಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.

ವಸ್ತು ಪ್ರದರ್ಶನಕಿದ್ಯಾ ಚಿರಶಾಂತಿ ವಾಹನ? ಕಳೆದ ನಾಲ್ಕು ದಿನಗಳಿಂದ ದಿನ ಬಳಕೆ ಹಾಗೂ ಕುಡಿಯುವ ನೀರಿನ ಪೂರೈಕೆ ಅಸಮರ್ಪಕವಾಗಿದೆ. ನಗರಕ್ಕೆ ಕಾವೇರಿ ನೀರು ಪೂರೈಸುವ ಪೈಪ್ಲೆ„ನ್‌ ಒಡೆದು ಕುಡಿಯುವ ನೀರಿನ ಪೂರೈಕೆ ಸ್ಥಗಿತಗೊಂಡಿದೆ. ಅದರ ದುರಸ್ತಿಗೆ ಸರಿಯಾದ ಕ್ರಮಗಳನ್ನು ಕೈಗೊಳ್ಳದೆ ವಿಳಂಬ ಮಾಡುತ್ತಿದ್ದಾರೆ. ದಿನಬಳಕೆ ನೀರನ್ನು ಸಮರ್ಪಕವಾಗಿ ಪೂರೈಸುತ್ತಿಲ್ಲ. ನಗರಸಭೆ ಇದ್ದು ಇಲ್ಲದಂತಾಗಿದೆ. ನಗರದಲ್ಲಿ ಯಾರಾದರೂ ಮೃತಪಟ್ಟರೆ ಚಿರಶಾಂತಿ ವಾಹನ ವಸ್ತು ಪ್ರದರ್ಶನಕ್ಕೆ ಇಟ್ಟಂತಾಗಿದೆ. ಲಕ್ಷಾಂತರ ರೂ.ವ್ಯಯಿಸಿ ವಾಹನ ಖರೀದಿಸಿರುವ ನಗರಸಭೆ ಅಧಿ ಖಾರಿಗಳು, ಈ ವಾಹನಕ್ಕೆ ಚಾಲಕನನ್ನೇ ನೇಮಿಸಿಲ್ಲ. ವಾಹನ ಇದ್ದರೇ ಚಾಲಕನಿ ಲ್ಲ, ಇಂಧನವಿಲ್ಲ ಎಂಬ ಸಬೂಬುಗಳನ್ನು ಹೇಳಿ ಸಾರ್ವಜನಿಕರ ಬಳಕೆಗೆ ಕೊಡದೆ ವಾಹನ ತುಕ್ಕು ಹಿಡಿಯುತ್ತಿದೆ ಎಂದು ದೂರಿದರು.

ಪೌರಾಯುಕ್ತರಿಲ್ಲ: ನಗರಸಭೆ ಪೌರಾ ಯುಕ್ತರು ವರ್ಗಾವಣೆಗೊಂಡು ಹಲವು ದಿನಗಳು ಕಳೆಯುತ್ತಾ ಬಂದಿದೆ. ಪ್ರಭಾರ ಪೌರಾಯುಕ್ತರು ಮತ್ತು ಎಇಇ ಧನಂಜಯ ಹಾಗೂ ನಗರಸಭೆ ಸಿಬ್ಬಂದಿ ಅಧಿಕಾರಿಗಳು ಸಾರ್ವಜನಿಕರಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ. ಸಾರ್ವಜನಿಕರು ಕಚೇರಿಗೆ ಅಲೆದಾ ಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಬೇಸಿಗೆ ಆರಂಭವಾಗುತ್ತಿದೆ. ವಾಹನಗಳ ಓಡಾಟದಿಂದ ನಗರದಲ್ಲಿ ಸಂಪೂರ್ಣವಾಗಿ ಧೂಳು ಆವರಿಸಿ, ಸಾರ್ವಜನಿಕರು ಓಡಾಟಕ್ಕೂ ತೊಂದರೆ ಯಾಗಿದೆ. ಧೂಳಿನಿಂದ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಇಷ್ಟಾದರೂ ನಗರಸಭೆ ಅಧಿಕಾರಿಗಳು ಮಾತ್ರ ರಸ್ತೆಗೆ ನೀರನ್ನು ಸಿಂಪಡಿಸಲು ಮುಂದಾಗಿಲ್ಲ. ಜಿಲ್ಲಾಧಿಕಾರಿಗಳು ಮತ್ತು ಯೋಜನಾಧಿಕಾರಿಗಳು ಕೂಡಲೇ ಇತ್ತ ಗಮನಹರಿಸಿ ಇರುವ ಕಾಯಂ ನೌಕರರನ್ನು ಸರಿಯಾದ ರೀತಿಯಲ್ಲಿ ಬಳಸಿಕೊಂಡು ನಗರದಲ್ಲಿ ಸ್ವತ್ಛತೆ ನೀರಿನ ಪೂರೈಕೆಗೆ ಅಗತ್ಯ ಕ್ರಮ ಕೈಗೊಂಡು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.

ನೀರಿನ ಪೈಪ್‌ನಲ್ಲಿ ಚರಂಡಿ ನೀರು ಮಿಶ್ರಣ : ನಗರದಲ್ಲಿ ನಗರಸಭೆಯಿಂದ ಕೈಗೊಳ್ಳುವ ಚರಂಡಿ ಇತರೆ ಕಾಮಗಾರಿಗಳಿಗೆ ಗುತ್ತಿಗೆದಾರರು ಎಲ್ಲೆಂದರಲ್ಲಿ ಜಲ್ಲಿ ಮರಳು ಸುರಿದು ಜನರ ಓಡಾಟಕ್ಕೆ ತೊಂದರೆ ಮಾಡಿದ್ದಾರೆ. ಚರಂಡಿ ಕಾಮಗಾರಿ ಆರಂಭಿಸಿ ತಿಂಗಳುಗಳೇ ಕಳೆದರೂ ಕಾಮಗಾರಿ ಮುಗಿದಿಲ್ಲ. ಜನ ತಮ್ಮ ಮನೆಗಳಿಗೆ ಓಡಾಡಲು ಆಗದ ಪರಿಸ್ಥಿತಿ ನಿರ್ಮಾಣವಾಗಿದೆ. ಕಾಮಗಾರಿ ವಿಳಂಬದಿಂದ ಚರಂಡಿ ನೀರು ಸರಾಗವಾಗಿ ಹರಿದು ಹೋಗದೇ ದುರ್ನಾತ ಬೀರಿದೆ. ನಗರಸಭೆಗೆ ಮಾಹಿತಿ ನೀಡಿದರು ಯಾ ವುದೇ ಪ್ರಯೋಜನವಾಗಿಲ್ಲ. ಕಾಮಗಾರಿ ವೇಳೆ ಕುಡಿಯುವ ನೀರಿನ ಪೈಪ್‌ ಗಳು ಒಡೆದು ದಿನಬಳಕೆಗೂ ಯೋಗ್ಯವಲ್ಲದ ಕಲುಷಿತ ನೀರು ಮನೆಗಳಿಗೆ ಪೂರೈಕೆಯಾಗುತ್ತಿದೆ ಅದನ್ನು ದುರಸ್ತಿ ಮಾಡಿಸುವ ಗೋಜಿಗೆ ಹೋಗಿಲ್ಲ .

ನಗರಸಭೆ ಕಸಸಾಗಣೆ ಮಾಡುವ ವಾಹನ ಚಾಲಕರ ಪ್ರತಿಭಟನೆಯಿಂದ ನಗರದ ವಾರ್ಡ್‌ಗಳಲ್ಲಿ ರಸ್ತೆ ಬದಿಗಳಲ್ಲಿ ಕಸದ ರಾಶಿ ಬಿದ್ದಿದೆ. ನಾಲ್ಕು ದಿನಗಳಿಂದ ಕಸ ವಿಲೇವಾರಿ ಆಗಿಲ್ಲ. ನಗರದಲ್ಲಿ ಕುಡಿಯುವ ನೀರಿನ ಪೂರೈಕೆ ಕಳೆದ ನಾಲ್ಕು ದಿನಗಳಿಂದ ಸ್ಥಗಿತಗೊಂಡಿದೆ ನಗರಸಭೆ ಅವ್ಯವಸ್ಥೆಯ ಆಗರವಾಗಿ ಮಾರ್ಪಟ್ಟಿದೆ. ಕ್ಷೇತ್ರದ ಜನಪ್ರತಿನಿ ಧಿಗಳು ಮಧ್ಯಪ್ರವೇಶ ಮಾಡಿ ಪ್ರತಿಭಟನೆ ಮಾಡುತ್ತಿರುವ ನೌಕರರ ಮನವೊಲಿಸಲಿ. ಸ್ಟುಡಿಯೋ ಚಂದ್ರು, ,ನಗರಸಭಾ ಸದಸ್ಯ

ಟಾಪ್ ನ್ಯೂಸ್

2nd PUC Exam-2 Result Declared; 35.25% students passed

2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ

13

Poonam Pandey: ನನ್ನ ಬೆತ್ತಲೆ ವಿಡಿಯೋ ಲೀಕ್‌ ಮಾಡಿದ್ದೇ ನನ್ನ ಮಾಜಿ ಗೆಳೆಯ – ಪೂನಂ ಪಾಂಡೆ

12-hondisi-bareyiri

YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

9

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿದ್ದ ಪತ್ನಿ ಮೇಲೆ ಬ್ಲೇಡ್‌ನಿಂದ ಹಲ್ಲೆ ಮಾಡಿ ಪರಾರಿಯಾದ ಪತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewqewe

Ramanagara; ಅಪ್ರಾಪ್ತ ಮಕ್ಕಳ ಮೈಯನ್ನು ಕಾದ ಕಬ್ಬಿಣದಿಂದ ಸುಟ್ಟ ಮದ್ಯವ್ಯಸನಿ ತಂದೆ

crime

Ramanagara: ತಂದೆಯಿಂದಲೇ ಮಗನ ಕೊಲೆ.!

Bengaluru-Mysuru Expressway; 15 ದಿನಗಳ‌ಲ್ಲಿ 12 ಸಾವಿರ ವಾಹನಗಳಿಗೆ ದಂಡ!

Bengaluru-Mysuru Expressway; 15 ದಿನಗಳ‌ಲ್ಲಿ 12 ಸಾವಿರ ವಾಹನಗಳಿಗೆ ದಂಡ!

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು

Magadi; ಕಾರಿಗೆ ಅಡ್ಡ ಬಂದ ಕುದುರೆ, ವಾಹನಗಳ ಸರಣಿ ಅಪಘಾತ; ಐವರಿಗೆ ಗಂಭೀರ ಗಾಯ

Magadi; ಕಾರಿಗೆ ಅಡ್ಡ ಬಂದ ಕುದುರೆ, ವಾಹನಗಳ ಸರಣಿ ಅಪಘಾತ; ಐವರಿಗೆ ಗಂಭೀರ ಗಾಯ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

2nd PUC Exam-2 Result Declared; 35.25% students passed

2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ

15-indi

Indi: ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಬಾಲಕರು ಮೃತ್ಯು

14-thirthahalli

Thirthahalli: ಸಾಲ ಬಾಧೆಯಿಂದ ರೈತ ಆತ್ಮಹತ್ಯೆ

13

Poonam Pandey: ನನ್ನ ಬೆತ್ತಲೆ ವಿಡಿಯೋ ಲೀಕ್‌ ಮಾಡಿದ್ದೇ ನನ್ನ ಮಾಜಿ ಗೆಳೆಯ – ಪೂನಂ ಪಾಂಡೆ

13-ragini-dance

Ragini Dwivedi; ಸಂಜು ಜೊತೆ ರಾಗಿಣಿ ಡ್ಯಾನ್ಸ್‌ ; ಮಂಗ್ಲಿ ಹಾಡಿಗೆ ಭರ್ಜರಿ ಸ್ಟೆಪ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.