ಪೂರ್ಣವಾಗದ ಅನುಮೋದಿತ ಬಿಪಿಎಲ್‌ ಅರ್ಜಿ ವಿಲೇ!


Team Udayavani, Mar 1, 2023, 7:50 AM IST

ಪೂರ್ಣವಾಗದ ಅನುಮೋದಿತ ಬಿಪಿಎಲ್‌ ಅರ್ಜಿ ವಿಲೇ!

ಉಡುಪಿ: ಅರ್ಹ ಫ‌ಲಾನುಭವಿಗಳಿಗೆ ಆದ್ಯತ ಪಡಿತರ ಚೀಟಿ (ಬಿಪಿಎಲ್‌ ಕಾರ್ಡ್‌) ವಿತರಣೆ ಪ್ರಕ್ರಿಯೆ ಆರಂಭವಾಗಿದ್ದು, ಹೊಸದಾಗಿ 2,921 ಕುಟುಂಬಗಳಿಗೆ ಬಿಪಿಎಲ್‌ ಕಾರ್ಡ್‌ ಒದಗಿಸಲಾಗಿದೆ. 1,446 ಕುಟುಂಬಗಳಿಗೆ ಕಾರ್ಡ್‌ ನೀಡಲು ಬಾಕಿಯಿದೆ.

ಉಡುಪಿ ಜಿಲ್ಲೆಯ 7 ತಾಲೂಕುಗಳಿಂದ ಹೊಸದಾಗಿ ಬಿಪಿಎಲ್‌ ಕಾರ್ಡ್‌ಗಳಿಗೆ 11,151 ಕುಟುಂಬಗಳಿಂದ ಅರ್ಜಿ ಸಲ್ಲಿಕೆಯಾಗಿತ್ತು. ಅದರಲ್ಲಿ 10,465 ಕುಟುಂಬ ಬಿಪಿಎಲ್‌ ಕಾರ್ಡ್‌ ಪಡೆಯಲು ಅರ್ಹವಿದೆ ಎಂಬುದನ್ನು ಪರಿಶೀಲನೆ ವೇಳೆ ಖಾತರಿಪಡಿಸಲಾಗಿತ್ತು. ಆದರೆ ಇದರಲ್ಲಿ 4,367 ಕುಟುಂಬಗಳಿಗೆ ಮಾತ್ರ ಕಾರ್ಡ್‌ ಹಂಚಿಕೆಗೆ ಸರಕಾರ ಅನುಮೋದನೆ ನೀಡಿದೆ. 6,098 ಕುಟುಂಬಗಳಿಗೆ ಬಿಪಿಎಲ್‌ ಕಾರ್ಡ್‌ ನೀಡಲು ಸರಕಾರ ಇನ್ನೂ ಆದೇಶ ನೀಡಿಲ್ಲ. ಸರಕಾರ ಒಪ್ಪಿಗೆ ಸೂಚಿಸಿರುವ 4,367 ಕುಟುಂಬಗಳಲ್ಲಿ 1,446 ಕುಟುಂಬಗಳಿಗೆ ಇನ್ನೂ ಕಾರ್ಡ್‌ ಹಂಚಿಕೆ ಅಧಿಕಾರಿಗಳಿಂದ ಸಾಧ್ಯವಾಗಿಲ್ಲ.

ದ.ಕ. ಜಿಲ್ಲೆಯ 9 ಕಂದಾಯ ತಾಲೂಕುಗಳಿಂದ 15,464 ಅರ್ಜಿ ಬಂದಿದ್ದು, 14,739 ಖಾತರಿಪಡಿಸಿ, 725 ತಿರಸ್ಕರಿಸಲಾಗಿದೆ. ಈವರೆಗೆ 9,979 ಕುಟುಂಬಗಳಿಗೆ ಕಾರ್ಡ್‌ ವಿತರಿಸಲಾಗಿದ್ದು, 4,760 ಹಂಚಿಕೆಗೆ ಬಾಕಿಯಿದೆ.

ನಿಯಮ
ಒಂದು ಜಿಲ್ಲೆಯಲ್ಲಿ ನಿರ್ದಿಷ್ಟ ಪ್ರಮಾಣದಷ್ಟು ಬಿಪಿಎಲ್‌ ಕಾರ್ಡ್‌ ಮಾತ್ರ ಇರಬೇಕು ಎಂಬ ನಿಯಮವಿದೆ. ಶೇ. 100ರಷ್ಟು ಜನಸಂಖ್ಯೆಯಲ್ಲಿ ಎಲ್ಲರಿಗೂ ಬಿಪಿಎಲ್‌ ಕಾರ್ಡ್‌ ನೀಡಲು ಸಾಧ್ಯವಿಲ್ಲ. ಬಡತನ ರೇಖೆಗಿಂತ ಕೆಳಗಿರುವವರಿಗೆ ಮಾತ್ರ ನೀಡಲಾಗುತ್ತಿದೆ. ಅರ್ಜಿ ಸಲ್ಲಿಸಿದವರಲ್ಲಿ ಎಲ್ಲರೂ ಅರ್ಹರಿದ್ದರೂ ನಿರ್ದಿಷ್ಟ ಪ್ರಮಾಣ ಮೀರದಂತೆ ಅದರಲ್ಲಿ ಹಂತಹಂತವಾಗಿ ವಿತರಣೆ ಮಾಡಲಾಗುತ್ತದೆ. ಹೀಗಾಗಿ ಉಭಯ ಜಿಲ್ಲೆಯಲ್ಲಿ 25,104 ಕುಟುಂಬಗಳು ಅರ್ಹವಿದ್ದರೂ 14,346 ಕುಟುಂಬಗಳಿಗೆ ಮಾತ್ರ ವಿತರಣೆಗೆ ಸರಕಾರ ಅನುಮೋದನೆ ನೀಡಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ರಾತ್ರಿ ಪಾಳಿ ಇದ್ದಂತೆ
ಬಿಪಿಎಲ್‌ ಕಾರ್ಡ್‌ ಕೋರಿ ಬಂದಿರುವ ಅರ್ಜಿಗಳನ್ನು ಪರಿಶೀಲಿಸಿ, ಅದನ್ನು ಜಿಲ್ಲಾ ಮಟ್ಟಕ್ಕೆ ಕಳುಹಿಸಲಾಗುತ್ತದೆ. ಜಿಲ್ಲೆಯಿಂದ ರಾಜ್ಯಕ್ಕೆ ಕಳುಹಿಸಿ, ರಾಜ್ಯದಿಂದ ಅನುಮೋದನೆ ಪಡೆದು ಹಂಚಿಕೆ ಮಾಡಲಾಗುತ್ತದೆ. ಹಂಚಿಕೆ ಮಾಡುವ ಪ್ರಕ್ರಿಯೆಯು ಆಹಾರ ನಿರೀಕ್ಷಕರ ಮೂಲಕ ಮಾಡಲಾಗುತ್ತದೆ. ಆನ್‌ಲೈನ್‌ ಮೂಲಕವೇ ಪ್ರಕ್ರಿಯೆ ನಡೆಯುವುದರಿಂದ ಇದರ ಲಿಂಕ್‌ ತೆರೆದುಕೊಳ್ಳುವುದೇ ಸಂಜೆ 5ರ ಅನಂತರ ಮತ್ತು ರಾತ್ರಿ 8ಕ್ಕೆ ಕ್ಲೋಸ್‌ ಆಗುತ್ತದೆ. ಈ ಅವಧಿಯೊಳಗೆ ಆಹಾರ ನಿರೀಕ್ಷಕರು ಲಾಗಿನ್‌ ಆಗಿ ಅನುಮೋದನೆ ನೀಡಬೇಕು. ಇದೊಂದು ರೀತಿಯಲ್ಲಿ ರಾತ್ರಿ ಪಾಳಿಯಿದ್ದಂತೆ ಎಂದು ಆಹಾರ ನಿರೀಕ್ಷಕರು ಹೇಳುತ್ತಿದ್ದಾರೆ.

15 ದಿನ ಮಾತ್ರ ಅವಕಾಶ
ಅನುಮೋದಿತ ಅರ್ಜಿಗಳನ್ನು ಅಂಗೀಕರಿಸಿಲು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರ ಇಲಾಖೆಯಿಂದ ತಿಂಗಳು ಪೂರ್ತಿ ಅವಕಾಶ ನೀಡುವುದಿಲ್ಲ. ಬದಲಾಗಿ ಪ್ರತೀ ತಿಂಗಳ ಅಥವಾ ಎರಡು ಮೂರು ತಿಂಗಳಿಗೆ ಒಮ್ಮೆ 15 ದಿನಗಳ ಅವಕಾಶ ಮಾತ್ರ ನೀಡಲಾಗುತ್ತದೆ. ಈ ಅವಧಿಯಲ್ಲೇ ಅನುಮೋದನೆಯನ್ನು ಆಹಾರ ನಿರೀಕ್ಷಕರು ನೀಡಬೇಕಾಗುತ್ತದೆ. ಇದಕ್ಕಾಗಿ ಪ್ರತ್ಯೇಕ ಸಮಯ ನೀಡುವುದಿಲ್ಲ.

ಟಾಪ್ ನ್ಯೂಸ್

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-doddanagudde

ದೊಡ್ಡಣ್ಣಗುಡ್ಡೆ: ಕ್ಷೇತ್ರದಲ್ಲಿ ಬ್ರಹ್ಮಕಲಾಶೋತ್ಸವದ ಪೂರ್ವಭಾವಿ ಕಾರ್ಯಕ್ರಮ ಸಂಪನ್ನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ

Theft Case ಬುಡ್ನಾರು: ಮನೆಗೆ ನುಗ್ಗಿ ಕಳವು; ಆರೋಪಿಯ ಬಂಧನ

Theft Case ಬುಡ್ನಾರು: ಮನೆಗೆ ನುಗ್ಗಿ ಕಳವು; ಆರೋಪಿಯ ಬಂಧನ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

9-davangere

Davangere: ಮರ ಬಿದ್ದು ಕಾರು ಜಖಂ; ಚಾಲಕ ಪ್ರಾಣಾಪಾಯದಿಂದ ಪಾರು

8-doddanagudde

ದೊಡ್ಡಣ್ಣಗುಡ್ಡೆ: ಕ್ಷೇತ್ರದಲ್ಲಿ ಬ್ರಹ್ಮಕಲಾಶೋತ್ಸವದ ಪೂರ್ವಭಾವಿ ಕಾರ್ಯಕ್ರಮ ಸಂಪನ್ನ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

raichur

Raichur: ಗೇಟ್ ಹಾರಿ ಕಳವು ಮಾಡಿದ ಮಹಿಳೆ; ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.