ದೇಶದ ಈ ನಗರಗಳಲ್ಲಿ ಹೈಟೆಕ್ ವಿಮಾನ ನಿಲ್ದಾಣಗಳ ವಿನ್ಯಾಸದಂತೆ ರೈಲ್ವೆ ನಿಲ್ದಾಣಗಳ ಅಭಿವೃದ್ಧಿ…
ಪ್ರಮುಖ ರೈಲ್ವೆ ನಿಲ್ದಾಣಗಳ ಪ್ರಸ್ತಾವಿತ ವಿನ್ಯಾಸದ ಕಿರುನೋಟ ಇಲ್ಲಿದೆ…
Team Udayavani, Mar 1, 2023, 1:36 PM IST
New Delhi Railway Station
ನವದೆಹಲಿ: ಭಾರತೀಯ ರೈಲ್ವೆ ಇದೀಗ ದೇಶಾದ್ಯಂತ ಪ್ರಮುಖ ನಗರಗಳಲ್ಲಿ ರೈಲ್ವೆ ನಿಲ್ದಾಣಗಳನ್ನು ವಿಮಾನ ನಿಲ್ದಾಣಗಳಂತೆ ಪುನರಾಭಿವೃದ್ಧಿಪಡಿಸಲು ಮುಂದಾಗಿದೆ. ಆ ನಿಟ್ಟಿನಲ್ಲಿ ಅಮೃತ್ ಭಾರತ್ ಯೋಜನೆಯಡಿ ದೇಶದಲ್ಲಿ ಆಯ್ದ ರೈಲ್ವೆ ನಿಲ್ದಾಣಗಳಿಗೆ ಆಧುನಿಕ ಸ್ಪರ್ಶ ನೀಡಲಿದ್ದು, ಪ್ರಮುಖ ರೈಲ್ವೆ ನಿಲ್ದಾಣಗಳ ಪ್ರಸ್ತಾವಿತ ವಿನ್ಯಾಸದ ಕಿರುನೋಟ ಇಲ್ಲಿದೆ…
ಇದನ್ನೂ ಓದಿ:ಸಿದ್ದರಾಮಯ್ಯ ಅವರೇ ನಾನು ನಿಮ್ಮಿಂದ ಆಡಳಿತ ಕಲಿಯಬೇಕಾಗಿಲ್ಲ: ಹೆಚ್ ಡಿಕೆ
ನವದೆಹಲಿ ರೈಲ್ವೆ ನಿಲ್ದಾಣ: 2022ರಲ್ಲಿ ಕೇಂದ್ರ ಸರ್ಕಾರ ನವದೆಹಲಿಯ ರೈಲ್ವೆ ನಿಲ್ದಾಣವನ್ನು ಅಂದಾಜು 4,700 ಕೋಟಿ ರೂಪಾಯಿ ವೆಚ್ಚದಲ್ಲಿ ಪುನರ್ ನಿರ್ಮಾಣ ಮಾಡುವುದಾಗಿ ಘೋಷಿಸಿತ್ತು. ರಾಷ್ಟ್ರರಾಜಧಾನಿ ನವದೆಹಲಿಯ ರೈಲ್ವೆ ನಿಲ್ದಾಣವು ಪ್ರತಿ ದಿನ ಸರಾಸರಿ 3.6 ಮಿಲಿಯನ್ ಪ್ರಯಾಣಿಕರನ್ನು ನಿಭಾಯಿಸುತ್ತಿದೆ.
ಬೆಂಗಳೂರು ಕಂಟೋನ್ಮೆಂಟ್ ರೈಲ್ವೆ ನಿಲ್ದಾಣ:
ಬೆಂಗಳೂರು ರಾಜಧಾನಿಯಲ್ಲಿ ಹಲವು ಪುನರಾಭಿವೃದ್ಧಿ ಯೋಜನೆಗಳಲ್ಲಿ ಬೆಂಗಳೂರು ಕಂಟೋನ್ಮೆಂಟ್ ರೈಲ್ವೆ ನಿಲ್ದಾಣವೂ ಸೇರಿದ್ದು, ಈ ನಿಟ್ಟಿನಲ್ಲಿ ಹಂತ, ಹಂತವಾಗಿ 480 ಕೋಟಿ ರೂ. ವೆಚ್ಚದಲ್ಲಿ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣ ಪುನರ್ ಅಭಿವೃದ್ಧಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ.
ಮುಂಬೈಯ ಛತ್ರಪತಿ ಶಿವಾಜಿ ಟರ್ಮಿನಲ್: ಜನನಿಬಿಢ ಪ್ರದೇಶವಾಗಿರುವ ವಾಣಿಜ್ಯ ನಗರಿ ಮುಂಬೈಯ ಛತ್ರಪತಿ ಶಿವಾಜಿ ರೈಲ್ವೆ ನಿಲ್ದಾಣಕ್ಕೆ ಆಧುನಿಕ ಸ್ಪರ್ಶ ನೀಡಲು ಮುಂದಾಗಿದ್ದು, ಬರೋಬ್ಬರಿ 18,000 ಕೋಟಿ ರೂ. ವೆಚ್ಚದಲ್ಲಿ ರೈಲ್ವೆ ನಿಲ್ದಾಣ ಅಭಿವೃದ್ಧಿ ಮಾಡಲಾಗುವುದು ಎಂದು ಇಲಾಖೆ ತಿಳಿಸಿದೆ.
ಅಹಮದಾಬಾದ್ ಜಂಕ್ಷನ್ ರೈಲ್ವೆ ನಿಲ್ದಾಣ:
ಗುಜರಾತ್ ನ ಪ್ರಮುಖ ಅಹಮದಾಬಾದ್ ರೈಲ್ವೆ ನಿಲ್ದಾಣದ ಪುನರಾಭಿವೃದ್ಧಿ ಕಾರ್ಯ ಈ ವರ್ಷದ ಏಪ್ರಿಲ್ ತಿಂಗಳಿನಲ್ಲಿ ಆರಂಭಗೊಳ್ಳಲಿದ್ದು, ಇದೇ ರೀತಿ ಸಾಬರ್ ಮತಿ, ಗಾಂಧಿಗ್ರಾಮ್, ಮಣಿನಗರ್, ಚಂದ್ಲೋಡಿಯಾ ಮತ್ತು ಅಸರ್ವಾ ನಿಲ್ದಾಣಗಳನ್ನೂ ಪುನರಾಭಿವೃದ್ಧಿ ಮಾಡಲಾಗುವುದು ಎಂದು ವರದಿ ತಿಳಿಸಿದೆ.
ಚೆನ್ನೈ ಎಗ್ಮೋರ್ ರೈಲ್ವೆ ನಿಲ್ದಾಣ:
ದಕ್ಷಿಣ ಭಾರತದ ರೈಲ್ವೆ ವಲಯದಲ್ಲಿ ಎರಡನೇ ಅತೀ ದೊಡ್ಡ ರೈಲ್ವೆ ನಿಲ್ದಾಣವಾದ ಚೆನ್ನೈನ ಎಗ್ಮೋರ್ ರೈಲ್ವೆ ನಿಲ್ದಾಣವನ್ನು ಆಧುನಿಕ ಸೌಲಭ್ಯದೊಂದಿಗೆ ಅಂತಾರಾಷ್ಟ್ರೀಯ ದರ್ಜೆಗೆ ಏರಿಸಲು ಭಾರತೀಯ ರೈಲ್ವೆ ಮುಂದಾಗಿದೆ.
ಉದಯ್ ಪುರ್ ರೈಲ್ವೆ ನಿಲ್ದಾಣ:
ರಾಜಸ್ಥಾನದ ಉದಯ್ ಪುರ್ ರೈಲ್ವೆ ನಿಲ್ದಾಣವನ್ನು 354 ಕೋಟಿ ರೂಪಾಯಿ ವೆಚ್ಚದಲ್ಲಿ ಪುನರಾಭಿವೃದ್ಧಿ ಮಾಡಲು ಅನುದಾನ ಬಿಡುಗಡೆ ಮಾಡಲಾಗಿದ್ದು, ಐದು ಹಂತಗಳಲ್ಲಿ ಮುಂದಿನ ಮೂರು ವರ್ಷಗಳಲ್ಲಿ ಕೆಲಸವನ್ನು ಪೂರ್ಣಗೊಳಿಸಲು ನಿರ್ಧರಿಸಲಾಗಿದೆ ಎಂದು ಇಲಾಖೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Share Market Business: ಷೇರು ವಹಿವಾಟು-ದಕ್ಷಿಣ ಭಾರತ ಮಹಿಳೆಯರೇ ಮುಂಚೂಣಿಯಲ್ಲಿದ್ದಾರೆ!
Stock Market- 4ನೇ ಹಂತದ ಮತದಾನ: ಬಾಂಬೆ ಷೇರುಪೇಟೆ ಸೂಚ್ಯಂಕ 750 ಅಂಕ ಕುಸಿತ
Election result ಅನಿಶ್ಚಿತತೆ: 1,062 ಅಂಕ ಕುಸಿದ ಸೆನ್ಸೆಕ್ಸ್
Air India: ಪೈಲಟ್ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್ ಇಂಡಿಯಾ ವಿಮಾನ ಸಂಚಾರ ರದ್ದು
Share Market; ರೇಖಾ ಜುಂಜುನ್ವಾಲಾಗೆ ಒಂದೇ ದಿನ 800 ಕೋಟಿ ರೂ. ನಷ್ಟ!
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Bihar: ಕಸ್ಟಡಿಯಲ್ಲಿದ್ದ ಅಪ್ರಾಪ್ತ ವಯಸ್ಕ ಪತ್ನಿ,ಪತಿ ಸಾವು; ಗ್ರಾಮಸ್ಥರಿಂದ ಠಾಣೆ ಧ್ವಂಸ
Re Release; ಭರ್ಜರಿ ಓಪನಿಂಗ್ ಪಡೆದ ಉಪ್ಪಿ ‘ಎ’
ಪತ್ನಿ ಹತ್ಯೆಗೈದು ಶವದೊಂದಿಗೆ ಸೆಲ್ಫಿ: ಸಂಬಂಧಿಕರಿಗೆ ಫೋಟೋ ಕಳುಹಿಸಿ ತಾನೂ ನೇಣಿಗೆ ಶರಣಾದ
Gurucharan Singh: ನಾಪತ್ತೆಯಾಗಿದ್ದ ಕಿರುತೆರೆ ನಟ ಮನೆಗೆ ವಾಪಾಸ್; ಹೋಗಿದ್ದೆಲ್ಲಿಗೆ?
Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ