ವಿಧಾನಸಭೆ ಚುನಾವಣೆಗಳಲ್ಲಿ ಬಿಜೆಪಿಯ ಗೆಲುವಿನ ನಾಗಾಲೋಟ: ತ್ರಿವೇಣಿ ಎಂದು ಮೋದಿ ಬಣ್ಣನೆ
Team Udayavani, Mar 3, 2023, 7:16 AM IST
ವಿಧಾನಸಭೆ ಚುನಾವಣೆಗಳಲ್ಲಿ ಬಿಜೆಪಿಯ ಗೆಲುವಿನ ನಾಗಾಲೋಟವನ್ನು ಪ್ರಧಾನಿ ನರೇಂದ್ರ ಮೋದಿಯವರು, ಬಿಜೆಪಿ ಸರಕಾರಗಳ ಸಾಧನೆ, ತಮ್ಮ ಕಾರ್ಯವೈಖರಿ ಮತ್ತು ಪಕ್ಷದ ಕಾರ್ಯಕರ್ತರ ಬದ್ಧತೆಯ “ತ್ರಿವೇಣಿ’ ಎಂದು ಬಣ್ಣಿಸಿದ್ದಾರೆ.
ತ್ರಿಪುರಾ, ನಾಗಾಲ್ಯಾಂಡ್ ಮತ್ತು ಮೇಘಾಲಯ ಅಸೆಂಬ್ಲಿ ಚುನಾವಣೆಗಳ ಫಲಿತಾಂಶದ ಹಿನ್ನೆಲೆಯಲ್ಲಿ ದಿಲ್ಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಗುರುವಾರ ಸಂಜೆ ಪಕ್ಷದ ಪದಾಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, “ಈ ಫಲಿತಾಂಶಗಳು ಪ್ರಜಾಸತ್ತೆ ಮತ್ತು ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲೆ ಜನರ ನಂಬಿಕೆಯನ್ನು ತೋರಿಸಿದೆ. ಈಶಾನ್ಯ ರಾಜ್ಯಗಳ ಚುನಾವಣೆಗೆ ಈಗ ಎಷ್ಟು ಮಹತ್ವ ದೊರೆತಿದೆ ಎಂದರೆ, ಈ ಪ್ರದೇಶವು ದಿಲ್ಲಿಯಿಂದಲೂ ದೂರವಿಲ್ಲ, ದಿಲ್(ಹೃದಯ)ದಿಂದಲೂ ದೂರವಿಲ್ಲ ಎಂಬುದು ಸಾಬೀತಾಗಿದೆ’ ಎಂದಿದ್ದಾರೆ.
ಇದೇ ವೇಳೆ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಈಶಾನ್ಯ ರಾಜ್ಯಗಳಲ್ಲಿ ಪಕ್ಷದ ಯಶಸ್ಸಿನ ಕ್ರೆಡಿಟ್ ಅನ್ನು ಪ್ರಧಾನಿ ಮೋದಿಯವರಿಗೆ ನೀಡಿದ್ದಾರೆ. ಕಾಂಗ್ರೆಸ್ ಈಶಾನ್ಯವನ್ನು ಎಟಿಎಂ ರೀತಿ ಬಳಸಿಕೊಂಡಿತು. ಆದರೆ, ಬಿಜೆಪಿ ಈ ಭಾಗವನ್ನು ಭ್ರಷ್ಟಾಚಾರಮುಕ್ತ ಮಾಡಿ, ಶಾಂತಿ, ಅಭಿವೃದ್ಧಿ ನೆಲೆಸುವಂತೆ ಮಾಡಿತು ಎಂದೂ ನಡ್ಡಾ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ