ತಮಿಳುನಾಡಿನಲ್ಲಿ RSS ಪಥ ಸಂಚಲನ: ವಿಚಾರಣೆ ಮಾರ್ಚ್ 17 ಕ್ಕೆ ಮುಂದೂಡಿದ ಸುಪ್ರೀಂ

5 ರಂದು ತಮಿಳುನಾಡಿನಲ್ಲಿ ಯಾವುದೇ ರೂಟ್ ಮಾರ್ಚ್ ನಡೆಸುತ್ತಿಲ್ಲ

Team Udayavani, Mar 3, 2023, 3:09 PM IST

Supreme Court

ನವದೆಹಲಿ: ಮಾರ್ಚ್ 5 ರಂದು ತಮಿಳುನಾಡಿನಲ್ಲಿ ಯಾವುದೇ ರೂಟ್ ಮಾರ್ಚ್ ನಡೆಸುತ್ತಿಲ್ಲ ಎಂದು ಆರ್‌ಎಸ್‌ಎಸ್ ಸುಪ್ರೀಂ ಕೋರ್ಟ್‌ಗೆ ಭರವಸೆ ನೀಡಿದೆ.ರಾಜ್ಯದಲ್ಲಿ ಆರ್‌ಎಸ್‌ಎಸ್‌ಗೆ ತನ್ನ ರೂಟ್ ಮಾರ್ಚ್‌ಗೆ ಅನುಮತಿ ನೀಡಿದ ಮದ್ರಾಸ್ ಹೈಕೋರ್ಟ್ ಆದೇಶದ ವಿರುದ್ಧ ತಮಿಳುನಾಡು ಸರಕಾರದ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮಾರ್ಚ್ 17 ಕ್ಕೆ ಮುಂದೂಡಿದೆ.

ಗುಪ್ತಚರ ಮಾಹಿತಿ ಆಧರಿಸಿ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸುವ ಹಕ್ಕು ಸರಕಾರಕ್ಕೆ ಇದೆ ಎಂದು ತಮಿಳುನಾಡು ಸರಕಾರ ಸುಪ್ರೀಂ ಕೋರ್ಟ್‌ನಲ್ಲಿ ಗಂಭೀರ ವಾದ ಮಂಡಿಸಿದೆ.

ತಮಿಳುನಾಡಿನಾದ್ಯಂತ 24 ಸ್ಥಳಗಳಲ್ಲಿ ಆರ್‌ಎಸ್‌ಎಸ್ ಮೆರವಣಿಗೆಗೆ ಅನುಮತಿ ನಿರಾಕರಿಸಿದ ಮದ್ರಾಸ್ ಹೈಕೋರ್ಟ್ ಆದೇಶದ ವಿರುದ್ಧ ಆರ್‌ಎಸ್‌ಎಸ್ ಪರವಾಗಿ ಮೇಲ್ಮನವಿ ಸಲ್ಲಿಸಲಾಗಿತ್ತು. 23 ಸ್ಥಳಗಳಲ್ಲಿ ಸುತ್ತುಗೋಡೆಯೊಳಗೆ ಮೆರವಣಿಗೆ ನಡೆಸಲು ಅವಕಾಶ ನೀಡಲಾಗಿದೆ.

ನ್ಯಾಯಮೂರ್ತಿಗಳಾದ ವಿ. ರಾಮಸುಬ್ರಮಣಿಯನ್ ಮತ್ತು ಪಂಕಜ್ ಮಿಥಾಲ್ ಅವರ ಪೀಠವು ಮುಂದಿನ ದಿನಾಂಕದವರೆಗೆ ಮಾರ್ಚ್‌ನ ಉದ್ದೇಶಿತ ಮಾರ್ಗಗಳ ಕುರಿತು ಆರ್‌ಎಸ್‌ಎಸ್‌ನೊಂದಿಗೆ ಸಂವಾದ ನಡೆಸಲು ರಾಜ್ಯಕ್ಕೆ ಅನುಮತಿ ನೀಡಿದೆ.

ವಿಚಾರಣೆಯ ಸಂದರ್ಭದಲ್ಲಿ, ರಾಜ್ಯದ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹಟಗಿ, ರೂಟ್ ಮಾರ್ಚ್ ನಡೆಸಲು ಸರಕಾರವು ಸಂಪೂರ್ಣವಾಗಿ ಯಾತ್ರೆಗೆ ವಿರೋಧವಿಲ್ಲ ಆದರೆ ಸೂಕ್ಷ್ಮ ಸ್ಥಳಗಳಲ್ಲಿ ನಡೆಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್‌ಗೆ ಹೇಳಿದ್ದಾರೆ.

“ಪಿಎಫ್‌ಐ ಘಟನೆಗಳು ಮತ್ತು ನಿಷೇಧಗಳು ಇರುವುದರಿಂದ ಇದನ್ನು ಮಾಡಬೇಡಿ ಎಂದು ಹೇಳಿದ್ದೇವೆ. ಆದರೆ ಹೈಕೋರ್ಟ್ ಅವುಗಳನ್ನು ಎಲ್ಲಿ ನಡೆಸಲಿ ಎಂದು ಹೇಳುತ್ತದೆ. ಕಾನೂನು ಮತ್ತು ಸುವ್ಯವಸ್ಥೆ ಜವಾಬ್ದಾರಿ ರಾಜ್ಯದ ಮೇಲಿದೆ. ಈ ವಿಷಯವು ರಾಜ್ಯಕ್ಕೆ ಸಂಬಂಧಿಸಿದೆ ಮತ್ತು ಹೆಚ್ಚಿನ ಸಾರ್ವಜನಿಕ ಹಿತಾಸಕ್ತಿ ಹೊಂದಿದೆ. ಕೊಯಮತ್ತೂರಿನಲ್ಲಿ ನಡೆದ ಬಾಂಬ್ ಸ್ಫೋಟಗಳು, ಪಿಎಫ್‌ಐ ಘಟನೆಗಳು ಇತ್ಯಾದಿಗಳಿಗೆ ನ್ಯಾಯಾಲಯವು ತನ್ನ ಕಣ್ಣು ಮುಚ್ಚಲು ಸಾಧ್ಯವಿಲ್ಲ” ಎಂದು ಹಿರಿಯ ವಕೀಲರು ಹೇಳಿದ್ದಾರೆ.

ಮತ್ತೊಂದೆಡೆ, ಪಿಎಫ್‌ಐ ನಿಯಂತ್ರಿಸಲು ರಾಜ್ಯಕ್ಕೆ ಸಾಧ್ಯವಾಗದ ಕಾರಣ ಅವರು ಆರ್‌ಎಸ್‌ಎಸ್ ಪಥ ಸಂಚಲನವನ್ನು ನಿಷೇಧಿಸುತ್ತಿದ್ದಾರೆ ಎಂದು ಹಿರಿಯ ವಕೀಲ ಮಹೇಶ್ ಜೇಠ್ಮಲಾನಿ ವಾದಿಸಿದ್ದಾರೆ.

“ನಮಗೆ 3 ಜಿಲ್ಲೆಗಳಿಗೆ ಅನುಮತಿ ನೀಡಲಾಗಿದೆ. ಆದರೆ 41 ಜಿಲ್ಲೆಗಳಲ್ಲಿ ನಿಷೇಧಿಸಲಾಗಿದೆ. ಪಿಎಫ್‌ಐ ನಿಷೇಧದ ನಂತರ ಯಾವುದೇ ಘಟನೆಗಳು ನಡೆದಿಲ್ಲ.ನಿಮ್ಮ ಆತಂಕವೇನು ಎಂದು ಜೇಠ್ಮಲಾನಿ ಪ್ರಶ್ನಿಸಿದ್ದಾರೆ.

ಟಾಪ್ ನ್ಯೂಸ್

Kadaba ಕಾರು ಚರಂಡಿಗೆ ಬಿದ್ದು ಮಂಡ್ಯ ಮೂಲದ ವ್ಯಕ್ತಿ ಸಾವು

Kadaba ಕಾರು ಚರಂಡಿಗೆ ಬಿದ್ದು ಮಂಡ್ಯ ಮೂಲದ ವ್ಯಕ್ತಿ ಸಾವು

women trafficking

Honnali; ಕೆಲಸಕ್ಕೆಂದು ಕರೆದುಕೊಂಡು ಒಂದು ಲಕ್ಷ ರೂ ಗೆ ಮಹಿಳೆಯ ಮಾರಾಟ!

ಕಾರು ಅಪಘಾತ; ಅಪಾಯದಿಂದ ಪಾರಾದ ಚನ್ನವೀರ ಶಿವಾಚಾರ್ಯರು

Bidar; ಕಾರು ಅಪಘಾತ; ಅಪಾಯದಿಂದ ಪಾರಾದ ಚನ್ನವೀರ ಶಿವಾಚಾರ್ಯರು

Bidar; ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ

Bidar; ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

The Election Commission banned the BJP candidate from campaigning for 24 hours

W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bangla MP who came to Kolkata goes missing

ಕೋಲ್ಕತಾಗೆ ಬಂದ ಬಾಂಗ್ಲಾ ಸಂಸದ ನಾಪತ್ತೆ

Swati Maliwal case: Data destruction on Bibhav’s phone

Swati Maliwal case: ಬಿಭವ್‌ ಫೋನ್‌ನಲ್ಲಿ ದತ್ತಾಂಶ ನಾಶ

Former AAP leader Jagbir Singh joins BJP

New Delhi; ಆಪ್‌ ಮಾಜಿ ನಾಯಕ ಜಗ್ಬೀರ್‌ ಸಿಂಗ್‌ ಬಿಜೆಪಿ ಸೇರ್ಪಡೆ

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

The Election Commission banned the BJP candidate from campaigning for 24 hours

W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Kadaba ಕಾರು ಚರಂಡಿಗೆ ಬಿದ್ದು ಮಂಡ್ಯ ಮೂಲದ ವ್ಯಕ್ತಿ ಸಾವು

Kadaba ಕಾರು ಚರಂಡಿಗೆ ಬಿದ್ದು ಮಂಡ್ಯ ಮೂಲದ ವ್ಯಕ್ತಿ ಸಾವು

3 students of Indian origin passed away in Georgia

Georgia ಕಾರು ಅಪಘಾತ: ಭಾರತ ಮೂಲದ 3 ವಿದ್ಯಾರ್ಥಿಗಳ ಸಾವು

ಎನ್‌ಇಪಿ ರದ್ದು, ರಾಜಕೀಯ ಪ್ರೇರಿತ: ಬೊಮ್ಮಾಯಿ

Bidar; ಎನ್‌ಇಪಿ ರದ್ದು ರಾಜಕೀಯ ಪ್ರೇರಿತ: ಬೊಮ್ಮಾಯಿ

women trafficking

Honnali; ಕೆಲಸಕ್ಕೆಂದು ಕರೆದುಕೊಂಡು ಒಂದು ಲಕ್ಷ ರೂ ಗೆ ಮಹಿಳೆಯ ಮಾರಾಟ!

Bangla MP who came to Kolkata goes missing

ಕೋಲ್ಕತಾಗೆ ಬಂದ ಬಾಂಗ್ಲಾ ಸಂಸದ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.