ಹುಬ್ಬಳ್ಳಿ:ನಿಮಗೂ ಬಿತ್ತಾ ಲಕ್ಕಿ ಡ್ರಾ ಟೋಪಿ? ಹೆಚ್ಚುತ್ತಿದೆ ಆನ್‌ಲೈನ್‌ ವಂಚನೆ

ಬಹುಮಾನಗಳು ಯಾವುದೇ ಕಾರಣಕ್ಕೂ ಸುಮ್ಮನೆ ಬರಲ್ಲ.

Team Udayavani, Mar 3, 2023, 10:05 AM IST

ಹುಬ್ಬಳ್ಳಿ:ನಿಮಗೂ ಬಿತ್ತಾ ಲಕ್ಕಿ ಡ್ರಾ ಟೋಪಿ? ಹೆಚ್ಚುತ್ತಿದೆ ಆನ್‌ಲೈನ್‌ ವಂಚನೆ

ಹುಬ್ಬಳ್ಳಿ: ವಾರ್ಷಿಕೋತ್ಸವ ಅಂಗವಾಗಿ ನಿಮಗೆ ಲಕ್ಕಿ ಡ್ರಾ ಬಂದಿದೆ. ಅದನ್ನು ಪಡೆಯಲು “ಹೀಗೆ ಮಾಡಿ’ ಎಂಬ ಸಂದೇಶ ಇಲ್ಲವೇ ಲೆಟರ್‌ ಬಂದಿದಿಯೇ? ಹಾಗಾದರೆ ಎಚ್ಚರಿಕೆಯಿಂದಿರಿ. ಸ್ವಲ್ಪ ಯಾಮಾರಿದರೂ ನಿಮ್ಮ “ಖಾತೆ ಖಾಲಿ’ ಆಗುತ್ತದೆ!

ಹೌದು, ಶುಭ ಸಂದೇಶಗಳ ನೆಪದಲ್ಲಿ “ವಿಶೇಷ ಬಹುಮಾನ’ಗಳ ಸಂದೇಶವುಳ್ಳ ವಿವಿಧ ಕಂಪನಿಯ ಹೆಸರಿನ ಪತ್ರಗಳು ಇತ್ತೀಚಿನ ದಿನಗಳಲ್ಲಿ ಮನೆ ಮನೆಗೆ ರಿಜಿಸ್ಟರ್‌ ಪೋಸ್ಟ್‌ನಲ್ಲಿ ಬರುತ್ತಿವೆ. ಇದಕ್ಕೆ ಮನಸೋತ ಎಷ್ಟೋ ಜನರು ಸಂಬಂಧಪಟ್ಟ ಸಂಖ್ಯೆಗೆ ಸಂಪರ್ಕಿಸಿ ಹಣ ಕಳೆದುಕೊಂಡು ಕೈಕೈ ಹಿಸುಕಿಕೊಳ್ಳುವಂತಾಗಿದೆ.ಇಂತಹ ಅನಾಮಧೇಯ ಪತ್ರ ಹಾಗೂ ಲಕ್ಕಿ ಡ್ರಾ ಕೂಪನ್‌ಗಳ ಬಗ್ಗೆ ಜಾಗೃತರಾಗಿರಿ ಎನ್ನುತ್ತಾರೆ ಸೈಬರ್‌ ಕ್ರೈಂ ಪೊಲೀಸ್‌ ಅಧಿಕಾರಿಗಳು.

ಹೇಗೆ ಸಂಪರ್ಕಿಸುತ್ತಾರೆ?: ನೀವು ಪ್ರತಿಷ್ಠಿತ ಕಂಪನಿಯ ಆನ್‌ಲೈನ್‌ ಶಾಪಿಂಗ್‌ನಲ್ಲಿ ವಸ್ತುಗಳನ್ನು ಖರೀದಿಸಿದ್ದರೆ ಅದರ ಜಾಡು ಹಿಡಿದುಕೊಂಡು ವಂಚಕರ ತಂಡವೊಂದು ನಿಮ್ಮ ವಿಳಾಸಕ್ಕೆ ರಿಜಿಸ್ಟರ್‌ ಪೋಸ್‌ rನಲ್ಲಿ ಪ್ರತಿಷ್ಠಿತ ಕಂಪನಿಯ ಆನ್‌ಲೈನ್‌ ಶಾಪಿಂಗ್‌ನ 6ನೇ ವಾರ್ಷಿಕೋತ್ಸವ ಅಂಗವಾಗಿ ಆಯೋಜಿಸಿರುವ ನೋಂದಾಯಿತ ಗ್ರಾಹಕರಿಗೆ ರ್‍ಯಾಂಡಮ್‌ ಲಕ್ಕಿ ಡ್ರಾ ಸ್ಪರ್ಧೆಯ ಬಹುಮಾನ ಗೆಲ್ಲಿ ಎಂಬ ಸ್ಕ್ರ್ಯಾಚ್‌ ಕಾರ್ಡ್ ನ ಲೆಟರ್‌ ಕಳುಹಿಸುತ್ತದೆ. ಅದರಲ್ಲಿ ಆ ಕಂಪನಿಯ
ಹೆಸರುಳ್ಳ ಸ್ಕ್ರ್ಯಾಚ್‌ ಆ್ಯಂಡ್‌ ವಿನ್‌-2023 ಎಂಬ ಕೂಪನ್‌ ಸಹ ಇಟ್ಟಿರುತ್ತಾರೆ.

ಅದನ್ನು ನಂಬಿ ನೀವು ಕೂಪನ್‌ ಕಾರ್ಡ್‌ ಅನ್ನು ಸ್ಕ್ರ್ಯಾಚ್‌ ಮಾಡಿದಾಗ ಬಹುಮಾನಿತ ವಸ್ತುವಿನ ಎಸ್‌ಎಸ್‌ಎಂ ಕೋಡ್‌ನೊಂದಿಗೆ ಅತ್ಯಾರ್ಷಕ ಬಹುಮಾನವು ನಿಮ್ಮದಾಗಿರುತ್ತದೆ. ಆಗ ನೀವು ಇನ್ನಿಲ್ಲದ ಭಾಗ್ಯ ನಮ್ಮದಾಯಿತು ಎಂದು ಇನ್ನಷ್ಟು ಖುಷಿಪಟ್ಟು ಪತ್ರದಲ್ಲಿ ಸೂಚಿಸಿದ ಸಹಾಯವಾಣಿ ಸಂಖ್ಯೆಗೆ ತಕ್ಷಣ ಸಂಪರ್ಕಿಸುತ್ತೀರಿ. ಆಗ ನಯವಂಚಕರಿಗೆ ಇಷ್ಟೇ ಸಾಕು ನಿಮ್ಮನ್ನು ಮೋಸಗೊಳಿಸಲು. ನಿಮ್ಮಿಂದ ಹಣ ಕಿತ್ತುಕೊಳ್ಳಲು.

ಅನಾಮಧೇಯರು ನಿಮಗೆ ಕಳುಹಿಸಿದ ಲೆಟರ್‌ ನೋಡಿದ ತಕ್ಷಣ ನಿಮಗೆ ಅದು ವಂಚನೆ ಮಾಡುವ ತಂಡದಿಂದ ಬಂದಿದ್ದು ಎಂಬ ಸಂಶಯವೇ ಬರುವುದಿಲ್ಲ. ಆ ರೀತಿ ಅವರು ಸಹ ಕಂಪನಿಯವರು ಕಳುಹಿಸುವ ಲೆಟರ್‌ ಪ್ರಕಾರವೇ ಹಲವು ಕರಾರು ಮತ್ತು ಷರತ್ತುಗಳುಳ್ಳ ಪತ್ರ ಕಳುಹಿಸಿರುತ್ತಾರೆ.

ಸ್ಕ್ರ್ಯಾಚ್‌ ಕಾರ್ಡ್‌ನಲ್ಲಿ ಅತ್ಯಾಕರ್ಷಕ ಬಹುಮಾನಗಳ ಆಮಿಷವೊಡ್ಡಿರುತ್ತಾರೆ. ಬಹುಮಾನ ಪಡೆಯಲು ಇಂತಹುದೆ ಸಂಖ್ಯೆಗೆ ಕರೆ ಮಾಡಿ ಹಾಗೂ ಸೂಚಿಸಿದ ವಾಟ್ಸ್‌ಆ್ಯಪ್‌ ಸಂಖ್ಯೆಗೆ ನಿಮ್ಮ ದಾಖಲೆಗಳನ್ನು ಕಳುಹಿಸಿ ಎಂದು ನಮೂದಿಸಿರುತ್ತಾರೆ.

ದಾಖಲೆ ಏನೇನು ಕೇಳುತ್ತಾರೆ?: ಕಂಪನಿಯ ಹೆಸರಿನಲ್ಲಿ ಅನಾಮಧೇಯರು ಕಳುಹಿಸಿದ ಪತ್ರದಲ್ಲಿ ಸೂಚಿಸಿದ ಮೊಬೈಲ್‌ ಸಂಖ್ಯೆಗೆ ನೀವು ಕರೆ ಮಾಡಿದರೆ, ಮೊದಲು ಅವರು ಹಲೋ ಮೀಶೋ ಎಂದೇ ಹಿಂದಿಯಲ್ಲಿ ಸಂಭೋಧನೆ ಮಾಡುತ್ತಾರೆ. ನಂತರ ನೀವು ಯಾವ ಭಾಷೆಯಲ್ಲಿ ಮಾತನಾಡುತ್ತಿರೋ ಅದೇ ಭಾಷೆಯಲ್ಲಿ ಮಾತನಾಡುತ್ತ, ಹೌದು ನಿಮಗೆ ನಮ್ಮ ಕಂಪನಿಯಿಂದ ಇಂತಹುದೆ ಬಹುಮಾನ ಪ್ರಾಪ್ತವಾಗಿದೆ.

ಅದನ್ನು ಪಡೆಯಲು ನೀವು ಮೊದಲು ನಿಮ್ಮ ಆಧಾರ ಕಾರ್ಡ್‌ ಹಾಗೂ ಮತದಾರರ ಗುರುತಿನ ಚೀಟಿಯ ಫೋಟೋ ಕಳುಹಿಸಿ. ಜತೆಗೆ ಭದ್ರತೆಗಾಗಿ ಶೇ.1ರಷ್ಟು ಹಣ ಪಾವತಿಸಿ. ನಂತರ ಬಹುಮಾನ ಪಡೆದ ಮೇಲೆ ಶೇ.3ರಷ್ಟು ತೆರಿಗೆ ಕಟ್ಟಬೇಕು. ಎಲ್ಲ ತೆರಿಗೆಯನ್ನು ಮುಂಗಡವಾಗಿ ಸಂಗ್ರಹಿಸಲಾಗುತ್ತದೆ. ಅದನ್ನು ಬಹುಮಾನಿತ ಹಣಕ್ಕೆ ಹೊಂದಾಣಿಕೆ ಮಾಡಲ್ಲ. 24 ತಾಸಿನೊಳಗೆ ಈ ಪ್ರಕ್ರಿಯೆ ಮಾಡದಿದ್ದರೆ ನಿಮಗೆ ದೊರೆತ ಬಹುಮಾನ ರದ್ದುಪಡಿಸಲಾಗುವುದು ಎಂದು ಹೇಳಿ ನಿಮ್ಮನ್ನು ನಂಬುಗೆ ಬರುವಂತೆ ಮಾಡುತ್ತಾರೆ.

ವಂಚನೆ ಹೇಗೆ?
ನೀವು ಅವರ ಮಾತಿಗೆ ಮರುಳಾಗಿ ಹಾಗೂ ಬಹುಮಾನದ ಆಸೆಗೆ ಬಿದ್ದು ಅವರು ಹೇಳಿದಂತೆ ಮಾಡಿದರೆ ಮುಗಿಯಿತು. ನಿಮ್ಮ ಬ್ಯಾಂಕ್‌ ಖಾತೆಯಿಂದ ಹಣ ಹೋಯಿತೆಂದೆ ಅರ್ಥ. ಅವರು ಹೇಳಿದ ಹಾಗೆ ನಿಮ್ಮ ಆಧಾರ ಕಾರ್ಡ್‌ ಮತ್ತು ಮತದಾರರ ಗುರುತಿನ ಚೀಟಿ ಕಳುಹಿಸಿದರೆ ಸಾಕು. ಅದನ್ನು ದುರುಪಯೋಗ ಪಡಿಸಿಕೊಂಡು ಅದರ ಆಧಾರ ಮೇಲೆ ನಿಮ್ಮ ಹೆಸರಿನಲ್ಲಿ ಬ್ಯಾಂಕ್‌ನಲ್ಲಿ ಖಾತೆ ತೆರೆಯುತ್ತಾರೆ. ಅದಕ್ಕೆ ತಮ್ಮದೆಯಾದ ಮೊಬೈಲ್‌ ಸಂಖ್ಯೆ ಕೊಟ್ಟು ಜನರನ್ನು ಆ ಮೂಲಕ ವಂಚಿಸುತ್ತಾರೆ. ಅವರು ನಿಮ್ಮ ಹೆಸರಿನಲ್ಲಿ ಬೇರೆಯವರಿಗೆ ಮೋಸ ಎಸಗುತ್ತಿರುವ ಬಗ್ಗೆ ನಿಮಗೆ ತಿಳಿಯುವುದೇ ಇಲ್ಲ. ಆ ಖಾತೆಯ ನಿರ್ವಹಣೆಯನ್ನು ನಿಮಗೆ ಗೊತ್ತಾಗದಂತೆ ಅವರು ಮಾಡುತ್ತಾರೆ. ಹೀಗಾಗಿ ಇಂತಹ ವಂಚಕರ ಬಗ್ಗೆ ಸಾರ್ವಜನಿಕರು ಎಚ್ಚರವಾಗಿರಬೇಕು. ಯಾವುದೇ ಆಸೆ-ಆಮಿಷ ಹಾಗೂ ಬಹುಮಾನಗಳಿಗೆ ಮರುಳಾಗಬಾರದು ಎನ್ನುತ್ತಾರೆ ಸೈಬರ್‌ ಕ್ರೈಂ ಪೊಲೀಸರು.

ಪೊಲೀಸರು ನೀಡುವ ಎಚ್ಚರಿಕೆ ಏನು?
ಬಹುಮಾನಗಳು ಯಾವುದೇ ಕಾರಣಕ್ಕೂ ಸುಮ್ಮನೆ ಬರಲ್ಲ. ನೌಕರಿ ಸಿಕ್ಕಿದೆ, ವಾರ್ಷಿಕೋತ್ಸವದ ಹೆಸರಲ್ಲಿ ಬಹುಮಾನ ಕೊಡಲಾಗುವುದು, ನಿಮ್ಮ ಬ್ಯಾಂಕ್‌ ಖಾತೆ ಬ್ಲಾಕ್‌ ಆಗುತ್ತದೆ. ಬಹುಮಾನ ಬಂದಿದೆ ಎಂಬುದೆಲ್ಲ ನೂರಕ್ಕೆ ನೂರು ಮೋಸವಾಗಿದೆ. ಯಾವುದೇ ಕಾರಣಕ್ಕೂ ಇಂತಹ ಆಮಿಷಗಳಿಗೆ ಯಾರೂ ಮರುಳಾಗಬಾರದು. ಇಂತಹ ಸಂದೇಶಗಳು ನಿಮ್ಮ ಮೊಬೈಲ್‌ಗೆ ಬಂದರೆ ತಕ್ಷಣ ಅದನ್ನು ಡಿಲಿಟ್‌ ಮಾಡಬೇಕು. ಇಂತಹ ಆಮಿಷಗಳ ಬಗ್ಗೆ ನಿಮ್ಮ ವಿಳಾಸಕ್ಕೆ
ಲೆಟರ್‌ಗಳು ಬಂದರೆ ಸಮೀಪದ ಪೊಲೀಸ್‌ ಠಾಣೆ ಗಮನಕ್ಕೆ ತಂದರೆ ಅದರ ಬಗ್ಗೆ ಅವರು ಗಮನಹರಿಸುತ್ತಾರೆ.
ರಮನ್‌ ಗುಪ್ತಾ,
ಹು-ಧಾ ಪೊಲೀಸ್‌ ಆಯುಕ್ತ

ಶಿವಶಂಕರ ಕಂಠಿ

ಟಾಪ್ ನ್ಯೂಸ್

ಕಾರು ಅಪಘಾತ; ಅಪಾಯದಿಂದ ಪಾರಾದ ಚನ್ನವೀರ ಶಿವಾಚಾರ್ಯರು

Bidar; ಕಾರು ಅಪಘಾತ; ಅಪಾಯದಿಂದ ಪಾರಾದ ಚನ್ನವೀರ ಶಿವಾಚಾರ್ಯರು

Bidar; ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ

Bidar; ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

The Election Commission banned the BJP candidate from campaigning for 24 hours

W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ

17

Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parameshwar

CBI ಗೆ ಕೊಡುವ ಅಗತ್ಯವಿಲ್ಲ; ಅಂಜಲಿ ಪ್ರಕರಣ ಕೂಡ ಸಿಐಡಿಗೆ:ಡಾ.ಜಿ.ಪರಮೇಶ್ವರ್

1-qweeqwe

Hubballi; ನೇಹಾ, ಅಂಜಲಿ ನಿವಾಸಗಳಿಗೆ ಡಾ.ಜಿ.ಪರಮೇಶ್ವರ್ ಭೇಟಿ

Hubli; ಅಂಜಲಿ ಕುಟುಂಬಸ್ಥರಿಗೆ ಸರ್ಕಾರ ಪರಿಹಾರ ಘೋಷಿಸಬೇಕು: ಶಂಕರ ಪಾಟೀಲ್ ಮುನೇನಕೊಪ್ಪ

Hubli; ಅಂಜಲಿ ಕುಟುಂಬಸ್ಥರಿಗೆ ಸರ್ಕಾರ ಪರಿಹಾರ ಘೋಷಿಸಬೇಕು: ಶಂಕರ ಪಾಟೀಲ್ ಮುನೇನಕೊಪ್ಪ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

1-wqqewqeq

Hubli; ಜನರಲ್ಲಿ ಪೊಲೀಸರ ಬಗ್ಗೆ ನಂಬಿಕೆ ಹೋಗಿದೆ: ಎಡಿಜಿಪಿ ಹಿತೇಂದ್ರ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ಕಾರು ಅಪಘಾತ; ಅಪಾಯದಿಂದ ಪಾರಾದ ಚನ್ನವೀರ ಶಿವಾಚಾರ್ಯರು

Bidar; ಕಾರು ಅಪಘಾತ; ಅಪಾಯದಿಂದ ಪಾರಾದ ಚನ್ನವೀರ ಶಿವಾಚಾರ್ಯರು

Bidar; ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ

Bidar; ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

The Election Commission banned the BJP candidate from campaigning for 24 hours

W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.