ಉಜಿರೆ ಆಸುಪಾಸು ಮೂರು ಕಡೆ ಬೆಂಕಿ ಪ್ರಕರಣ


Team Udayavani, Mar 4, 2023, 7:53 AM IST

ujire

ಬೆಳ್ತಂಗಡಿ: ಉಜಿರೆಯ ಎರಡು ಕಡೆ ಮತ್ತು ಮುಂಡಾಜೆಯಲ್ಲಿ ಬೆಂಕಿ ಅನಾಹುತ ಸಂಭವಿಸಿದ ಘಟನೆ ಶುಕ್ರವಾರ ನಡೆದಿದೆ.

ಮುಂಡಾಜೆ ಗ್ರಾಮದ ಕಡಂಬಳ್ಳಿ ಸಮೀಪ ಗುಡ್ಡದಲ್ಲಿ ಬೆಂಕಿ ಉಂಟಾಗಿ ಭೀತಿಯ ವಾತಾವರಣ ಸೃಷ್ಟಿಯಾಯಿತು. ವಿದ್ಯುತ್‌ ಪರಿವರ್ತಕದಿಂದ ಸಿಡಿದ ಕಿಡಿಗಳಿಂದ ಉಂಟಾದ ಬೆಂಕಿ ಸಮೀಪದ ಗುಡ್ಡವನ್ನು ಆವರಿಸಿ, ರಬ್ಬರ್‌ ತೋಟಕ್ಕೂ ನುಗ್ಗಿತು.

ತಕ್ಷಣ ಸ್ಪಂದಿಸಿದ ಸ್ಥಳೀಯ ಐವತ್ತಕ್ಕಿಂತ ಅದಕ್ಕೆ ಮಂದಿ ಬೆಂಕಿ ಇನ್ನಷ್ಟು ಹರಡದಂತೆ ಕ್ರಮ ಕೈಗೊಂಡ ಕಾರಣದಿಂದ ರಬ್ಬರ್‌ ತೋಟಕ್ಕೆ ಹೆಚ್ಚಿನ ಹಾನಿ ಉಂಟಾಗಿಲ್ಲ. ಬೆಂಕಿ ಉಂಟಾದ ಪರಿಸರದ ಸುತ್ತ ಮನೆಗಳು ಇದ್ದು, ಗಾಳಿಯು ಬೀಸುತ್ತಿದ್ದ ಕಾರಣ ಜನರಲ್ಲಿ ಭಯದ ವಾತಾವರಣ ಉಂಟಾಯಿತು. ಗುಡ್ಡದ ಅಲ್ಲಲ್ಲಿ ಸಣ್ಣ ಪ್ರಮಾಣದಲ್ಲಿ ಉರಿಯುತ್ತಿದ್ದ ಬೆಂಕಿಯನ್ನು ಸಂಜೆ ವೇಳೆಗೆ ಆಗಮಿಸಿದ ಅಗ್ನಿಶಾಮಕದಳ ನಂದಿಸಿತು.

ಉಜಿರೆಯ ನಿನ್ನಿಗಲ್ಲು ಪ್ರದೇಶದ ಅರಣ್ಯದಲ್ಲಿ ಬೆಂಕಿ ಕಂಡುಬಂದಿದ್ದು ಐದಾರು ಎಕರೆ ಪ್ರದೇಶಕ್ಕೆ ಹರಡಿತು. ಅಗ್ನಿಶಾಮಕ ದಳ, ಶೌರ್ಯ ವಿಪತ್ತು ತಂಡದ ಸದಸ್ಯರು ಹಾಗೂ ಸ್ಥಳೀಯರ ಸಹಕಾರದಲ್ಲಿ ಬೆಂಕಿಯನ್ನು ಹತೋಟಿಗೆ ತರಲಾಯಿತು. ಇದರಿಂದ ಹೆಚ್ಚಿನ ಪ್ರಮಾಣದ ಹಾನಿ ಉಂಟಾಗಿಲ್ಲ ಎಂದು ತಿಳಿದುಬಂದಿದೆ.

ಉಜಿರೆ ಹಳೆಪೇಟೆಯ ಹೆದ್ದಾರಿ ಸಮೀಪವಿರುವ ಲಾಡ್ಜ್ ಒಂದರ ಹಿಂಭಾಗದಲ್ಲಿ ಬೆಂಕಿ ಕಂಡುಬಂದಿದ್ದು ಅಗ್ನಿಶಾಮಕ ದಳದ ಸಹಕಾರದಲ್ಲಿ ನಂದಿಸಲಾಯಿತು.
ಸಮಯಕ್ಕೆ ಸಿಗದ ಅಗ್ನಿಶಾಮಕ ವಾಹನ.

ಮುಂಡಾಜೆಯ ಕಡಂಬಳ್ಳಿ ಪರಿಸರದಲ್ಲಿ ಬೆಂಕಿ ಕಂಡುಬಂದ ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲು ಬಿಎಸ್ಸೆಎನ್ನೆಲ್‌ನ ನೆಟ್‌ವರ್ಕ್‌ ಸಮಸ್ಯೆ ಅಡ್ಡಿಯಾಯಿತು. ಇದರಿಂದ ಅಗತ್ಯ ದೂರವಾಣಿ ಸಂಖ್ಯೆಗಳಿಗೆ ಕರೆ ಸಿಗದೆ ಪರದಾಟ ನಡೆಸಬೇಕಾಯಿತು. ಕೊನೆಗೆ ಅಗ್ನಿಶಾಮಕ ದಳದ ಸಿಬ್ಬಂದಿಯ ಮೊಬೈಲ್‌ ಸಂಖ್ಯೆಯನ್ನು ಸಂಗ್ರಹಿಸಿ ಕರೆ ಮಾಡಲಾಯಿತು. ಆದರೆ ಅಲ್ಲಿರುವ ಎರಡು ವಾಹನಗಳು ಬೇರೆಡೆಗೆ ತೆರಳಿದ್ದ ಕಾರಣದಿಂದ ಸಮಯಕ್ಕೆ ಸೇವೆ ದೊರೆಯದೆ ಬೆಂಕಿ ಪ್ರಕರಣ ನಡೆದ ಸುಮಾರು ಮೂರು ಗಂಟೆಗಳ ಬಳಿಕವಷ್ಟೇ ವಾಹನ ಆಗಮಿಸಿತು.

ಡಿ.ಎಫ್‌.ಒ. ಭೇಟಿ
ಮುಂಡಾಜೆಯ ಕಡಂಬಳ್ಳಿ ಹಾಗೂ ಇನ್ನಿತರ ಬೆಂಕಿ ಅನಾಹುತ ಉಂಟಾದ ಸ್ಥಳಗಳಿಗೆ ಜಿಲ್ಲಾ ಅಗ್ನಿಶಾಮಕ ದಳದ ಡಿ ಎಫ್ ಒ ಭರತ್‌ ಕುಮಾರ್‌ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾರ್ಗದರ್ಶನ ನೀಡಿದರು. ಮೆಸ್ಕಾಂ ಜೆಇ ಕೃಷ್ಣೇಗೌಡ, ಸಮಾಜಸೇವಕ ಸಚಿನ್‌ ಭಿಡೆ ಮತ್ತಿತರರು ಇದ್ದರು.

 

ಟಾಪ್ ನ್ಯೂಸ್

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Belthangady ವಿದ್ಯುತ್‌ ತಂತಿ ಮೇಲೆ ಬಿದ್ದ ಮರ; ವ್ಯಕ್ತಿಗೆ ಗಾಯ

Belthangady ವಿದ್ಯುತ್‌ ತಂತಿ ಮೇಲೆ ಬಿದ್ದ ಮರ; ವ್ಯಕ್ತಿಗೆ ಗಾಯ

1-asdsad

Bantwal; ರಿಕ್ಷಾ ಪಲ್ಟಿಯಾಗಿ ರಸ್ತೆಗೆ ಎಸೆಯಲ್ಪಟ್ಟ ಯುವಕ ಮೃತ್ಯು

1wewqewq

Bantwal; ಮಂಚಿಯಲ್ಲಿ ಹಿಟ್ ಆ್ಯಂಡ್ ರನ್: ಸ್ಕೂಟರ್ ಸವಾರ ಮೃತ್ಯು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-fff

Geneva Open ಟೆನಿಸ್‌: ಸುಮಿತ್‌ಗೆ ಸೋಲು

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.