ಯುದ್ಧವೇಕೆ? ಚರ್ಚೆ ಮಾಡಿ ಉಕ್ರೇನ್‌ ಸಮಸ್ಯೆ ಬಗೆಹರಿಸಿ


Team Udayavani, Mar 4, 2023, 6:00 AM IST

ಯುದ್ಧವೇಕೆ? ಚರ್ಚೆ ಮಾಡಿ ಉಕ್ರೇನ್‌ ಸಮಸ್ಯೆ ಬಗೆಹರಿಸಿ

ನ್ಯಾಟೋ ರಾಷ್ಟ್ರಗಳ ಜತೆಗೆ ಉಕ್ರೇನ್‌ ಹೆಚ್ಚಿನ ಸಾಮೀಪ್ಯ ಹೊಂದುತ್ತಿದೆ ಎಂಬ ಒಂದೇ ಕಾರಣಕ್ಕೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುತಿನ್‌ ಆ ದೇಶದ ಮೇಲೆ ದಾಳಿ ನಡೆಸಲು ಶುರು ಮಾಡಿ ಒಂದು ವರ್ಷ ಕಳೆದಿದೆ. ಐರೋಪ್ಯ ಒಕ್ಕೂಟ, ಯು.ಕೆ. ಸೇರಿದಂತೆ ಹಲವು ರಾಷ್ಟ್ರಗಳಿಗೆ ನೇರವಾಗಿ ಅದರ ಬಿಸಿ ತಟ್ಟಿದೆ. ಇದರ ಹೊರತಾಗಿಯೂ ಕೂಡ ದಾಳಿಯನ್ನು ನಿಲ್ಲಿಸಲು ಪ್ರಾಮಾಣಿಕ ಪ್ರಯತ್ನ ನಡೆಯುತ್ತಿಲ್ಲವೆಂದು ವಿಷಾದದಿಂದಲೇ ಹೇಳಬೇಕಾಗಿದೆ.

ಪ್ರಧಾನಿ ನರೇಂದ್ರ ಮೋದಿಯವರು ಕೂಡ ರಷ್ಯಾ ಅಧ್ಯಕ್ಷ ಪುತಿನ್‌ ಅವರನ್ನು ಖುದ್ದಾಗಿ ಭೇಟಿಯಾಗಿದ್ದ ವೇಳೆ ಈಗಿನ ಕಾಲಮಾನ ಯುದ್ಧಕ್ಕೆ ಹೇಳಿಸಿದ್ದೇ ಅಲ್ಲ. ಯಾವ ಭಿನ್ನಾಭಿಪ್ರಾಯ ಇದ್ದರೂ ಮುಖಾಮುಖೀ ಕುಳಿತು, ಚರ್ಚೆ ನಡೆಸಿ ಪರಿಹಾರ ಮಾಡುವುದೇ ಅದಕ್ಕೆ ಇರುವ ಯೋಗ್ಯ ಪರಿಹಾರ ಎಂದು ತಿಳಿ ಹೇಳಿದ್ದರು. ಈ ಅಂಶಕ್ಕೆ ಎಲ್ಲ ರಾಷ್ಟ್ರಗಳೂ ಸಹಮತವನ್ನು ವ್ಯಕ್ತಪಡಿಸಿದವು ನಿಜ. ಆದರೆ ಅದು ಕೃತಿಯಲ್ಲಿ ಮಾತ್ರ ಅನುಷ್ಠಾನವಾಗಲೇ ಇಲ್ಲ. ಹೊಸದಿಲ್ಲಿಯಲ್ಲಿ ನಡೆಯುತ್ತಿರುವ “ರೈಸಿನಾ ಡೈಲಾಗ್ಸ್‌’ ಮತ್ತು ಕ್ವಾಡ್‌ ರಾಷ್ಟ್ರಗಳ ವಿದೇಶಾಂಗ ಸಚಿವರ ಸಭೆಯಲ್ಲಿ ಕೂಡ ರಷ್ಯಾ-ಉಕ್ರೇನ್‌ ಬಿಕ್ಕಟ್ಟು ಚರ್ಚೆಯಾಗಿದೆ. ಆದರೆ ಯುದ್ಧ ನಿಲ್ಲಿಸುವ ಪ್ರಯತ್ನದ ಬಗ್ಗೆ ಮಾತುಗಳು ಭಾರತ ಹೊರತಾಗಿ ಯಾರಿಂದಲೂ ಬರಲಿಲ್ಲ.

“ರೈಸಿನಾ ಡೈಲಾಗ್ಸ್‌’ನಲ್ಲಿ ಭಾಗವಹಿಸಿದ ರಷ್ಯಾ ವಿದೇಶಾಂಗ ಸಚಿವ ಸರ್ಗೆ ಲಾರ್ವೋ ಪಾಶ್ಚಿಮಾತ್ಯ ರಾಷ್ಟ್ರಗಳು ಪದೇ ಪದೆ ತಮ್ಮ ದೇಶವೇ ಬಿಕ್ಕಟ್ಟಿಗೆ ಕಾರಣ ಎಂಬಂತೆ ಗೂಬೆ ಕೂರಿಸುತ್ತಿವೆ ಎಂದು ಹೇಳಿ ಕೊಂಡಿದ್ದಾರೆ. ಜತೆಗೆ ಉಕ್ರೇನ್‌ ಅಧ್ಯಕ್ಷ ವೊಲೊಡಿ ಮಿರ್‌ ಝೆಲೆನ್‌ಸ್ಕಿ ಅವರಿಗೆ ಸಂಧಾನದ ಅವಕಾಶಗಳನ್ನು ಕೊಟ್ಟಿದ್ದರೂ ಅದನ್ನು ಪಾಶ್ಚಿಮಾತ್ಯ ರಾಷ್ಟ್ರಗಳ ಕುಮ್ಮಕ್ಕಿನಿಂದ ಒಪ್ಪಿಲ್ಲ ಎಂದು ದೂರಿದ್ದಾರೆ. ಝೆಲೆನ್‌ಸ್ಕಿ ಅವರನ್ನೂ ಕಾರ್ಯಕ್ರಮಕ್ಕೆ ಕರೆಸಬೇಕಾಗಿತ್ತು ಎಂದೂ ಅವರು ವಾದಿಸಿದ್ದಾರೆ.

ಇನ್ನು ಅಮೆರಿಕದ ವಿದೇಶಾಂಗ ಸಚಿವ ಆ್ಯಂಟನಿ ಬ್ಲಿಂಕನ್‌ ನಿರ್ಭಯದಿಂದ ರಷ್ಯಾ ಮುಂದುವರಿಸಿರುವ ದಾಳಿ ಮುಂದಿನ ದಿನಗಳಲ್ಲಿ ಇಂಥ ಕೃತ್ಯವೆಸಗುವ ರಾಷ್ಟ್ರಗಳಿಗೆ ಸಂದೇಶ ನೀಡೀತು ಎಂದು ಹೇಳಿದ್ದಾರೆ. ಅಮೆರಿಕ ಸರಕಾರ ಶಾಂತಿಪ್ರಿಯವೇ ಆಗಿದ್ದರೆ, ನ್ಯಾಟೋ ವತಿಯಿಂದ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ನೀಡುವ ಉಸಾಬರಿಯಾದರೂ ಏಕೆ ಎಂದು ಪ್ರಶ್ನಿಸಬೇಕಾಗುತ್ತದೆ. ವಿವಿಧ ರಾಷ್ಟ್ರಗಳ ಒಕ್ಕೂಟದ ವಿವಿಧ ಮಟ್ಟದ ಸಭೆ-ಸಮಾವೇಶಗಳಲ್ಲಿ ಇಂಥ ಬಿಕ್ಕಟ್ಟಿನ ಬಗ್ಗೆ ಚರ್ಚಿಸಲಾಗುತ್ತದೆ. ಆದರೆ ನಿರ್ಧಾರಾತ್ಮಕವಾಗಿ ಇರುವ ತಡೆಯುವ ಕ್ರಮಗಳು ನಡೆಯುತ್ತಿಲ್ಲ.

ಒಂದು ವೇಳೆ, ಉಕ್ರೇನ್‌ ನ್ಯಾಟೋ ಒಕ್ಕೂಟ ಸೇರಿದ್ದರೂ ರಷ್ಯಾ ಕಳೆದು ಕೊಳ್ಳುವುದು ಏನೂ ಇರುತ್ತಿರಲಿಲ್ಲ. ಹೇಗಿದ್ದರೂ ಅದೊಂದು ಸಾರ್ವಭೌಮತ್ವ ಹೊಂದಿರುವ ರಾಷ್ಟ್ರ. ಲುಗಾನ್ಸ್‌$R ಮತ್ತು ಡಾನೆಸ್ಕ್ ಪ್ರದೇಶವನ್ನು ಹೊರತು ಪಡಿಸಿದರೆ, ಉಳಿದಂತೆ ಇರುವ ಭೂ ಪ್ರದೇಶ ಝೆಲೆನ್‌ಸ್ಕಿ ಸರಕಾರದ ಹಿಡಿತದಲ್ಲಿಯೇ ಇದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಮುಖ ರಾಷ್ಟ್ರಗಳ ಆಡಳಿತದ ಚುಕ್ಕಾಣಿ ಹಿಡಿದವರ ಪ್ರತಿಷ್ಠೆಗಾಗಿ ಜನ ಸಾಮಾನ್ಯರು ತೊಂದರೆಗೆ ಒಳಗಾಗುತ್ತಾರೆ. ಸದ್ಯದ ದಾಳಿಯಿಂದಾಗಿ ಹಲವು ರಾಷ್ಟ್ರಗಳಲ್ಲಿ ಗೋಧಿ ಸೇರಿದಂತೆ ಅಗತ್ಯ ವಸ್ತುಗಳ ಪೂರೈಕೆಯ ಸರಪಣಿಗೆ ವ್ಯತ್ಯಯ ಉಂಟಾಗುತ್ತಿದೆ. ನಮ್ಮ ದೇಶಕ್ಕೆ ಸಂಬಂಧಿಸಿದಂತೆ ನೋಡಿದಾಗ ನೇರವಾಗಿ ಅದರ ಪ್ರತಿಕೂಲ ಪರಿಣಾಮ ಉಂಟಾಗದೇ ಇದ್ದರೂ ಪರೋಕ್ಷ ಪರಿಣಾಮಗಳು ಉಂಟಾಗುತ್ತಿವೆ. ಈ ಹಿನ್ನೆಲೆಯಲ್ಲಿ ವಿವಿಧ ರಾಷ್ಟ್ರಗಳ ಒಕ್ಕೂಟಗಳು ಯುದ್ಧ ನಿಲ್ಲಿಸುವ ನಿಟ್ಟಿಲ್ಲಿ ರಂಗಕ್ಕೆ ಇಳಿದು, ಮತ್ತಷ್ಟು ಜೀವ ಹಾನಿ, ಆರ್ಥಿಕ ನಷ್ಟ ತಪ್ಪಿಸಲು ಮುಂದಾಗಬೇಕಾಗಿದೆ.

ಟಾಪ್ ನ್ಯೂಸ್

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

2nd PUC Exam-2 Result Declared; 35.25% students passed

2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ

13

Poonam Pandey: ನನ್ನ ಬೆತ್ತಲೆ ವಿಡಿಯೋ ಲೀಕ್‌ ಮಾಡಿದ್ದೇ ನನ್ನ ಮಾಜಿ ಗೆಳೆಯ – ಪೂನಂ ಪಾಂಡೆ

12-hondisi-bareyiri

YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

ಎಸ್‌ಎಸ್‌ಎಲ್‌ಸಿ ಗ್ರೇಸ್‌ ಮಾರ್ಕ್ಸ್ ರದ್ದು: ಪ್ರತಿಭಾವಂತರ ಶ್ರಮಕ್ಕೆ ಮನ್ನಣೆ 

Editorial; ರೈತರಿಗೆ ಸಕಾಲದಲ್ಲಿ ಹೊಸ ಸಾಲ ಸರಕಾರ ತುರ್ತಾಗಿ ಸ್ಪಂದಿಸಲಿ

Editorial; ರೈತರಿಗೆ ಸಕಾಲದಲ್ಲಿ ಹೊಸ ಸಾಲ ಸರಕಾರ ತುರ್ತಾಗಿ ಸ್ಪಂದಿಸಲಿ

ಪಿಒಕೆ

Editorial; ಪಿಒಕೆ: ಭುಗಿಲೆದ್ದ ಜನಾಕ್ರೋಶ ಇಕ್ಕಟ್ಟಿಗೆ ಸಿಲುಕಿದ ಪಾಕಿಸ್ಥಾನ

1—–ewqeq

Health; ರೋಗಮುಕ್ತ ಸಮಾಜಕ್ಕಾಗಿ ಆರೋಗ್ಯಯುತ ಆಹಾರ ಕ್ರಮ

ಶಾಂತಿಯುತ ಮತದಾನ: ಸಾಂಘಿಕ ಪ್ರಯತ್ನ ಸಫ‌ಲ…

ಶಾಂತಿಯುತ ಮತದಾನ: ಸಾಂಘಿಕ ಪ್ರಯತ್ನ ಸಫ‌ಲ…

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

New Kannada serial: ಕಿರುತೆರೆಯತ್ತ ದಿವ್ಯಾ ಉರುಡುಗ

New Kannada serial: ಕಿರುತೆರೆಯತ್ತ ದಿವ್ಯಾ ಉರುಡುಗ

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

14

Bank Of Bhagyalakshmi: ಬ್ಯಾಂಕ್‌ನತ್ತ ದೀಕ್ಷಿತ್‌ ಚಿತ್ತ

2nd PUC Exam-2 Result Declared; 35.25% students passed

2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ

15-indi

Indi: ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಬಾಲಕರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.