ಜನ ಮತ್ತೆ ಬಿಜೆಪಿ ಅಧಿಕಾರಕ್ಕೆ ತಂದರೆ 80 ಪರ್ಸೆಂಟ್ ಕಮಿಷನ್ ಸರ್ಕಾರ ಬರಲಿದೆ: ಕೇಜ್ರಿವಾಲ್


Team Udayavani, Mar 4, 2023, 6:36 PM IST

tdy-23

 ದಾವಣಗೆರೆ: ಕರ್ನಾಟಕಕ್ಕೆ ಬೇಕಾಗಿರುವುದು ಡಬಲ್ ಎಂಜಿನ್ ಸರ್ಕಾರವಲ್ಲ. ಆಮ್ ಆದ್ಮಿ ಪಕ್ಷದ ಹೊಸ ಎಂಜಿನ್ ಸರ್ಕಾರ ಎಂದು ಆಮ್ ಆದ್ಮಿ ಪಕ್ಷ ರಾಷ್ಟ್ರೀಯ ಸಂಚಾಲಕ, ದೆಹಲಿ ಮುಖ್ಯಮಂತ್ರಿ  ಅರವಿಂದ್ ಕೇಜ್ರಿವಾಲ್ ಹೇಳಿದರು.

ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಶನಿವಾರ ನಗರದ ಹೈಸ್ಕೂಲ್ ಮೈದಾನದಲ್ಲಿ  ಸಂಘಟಿಸಿದ್ದ  ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

ತಮ್ಮ ಭಾಷಣದುದ್ದಕ್ಕೂ ಬಿಜೆಪಿಯ ವಿರುದ್ಧ ಹರಿಹಾಯ್ದ ಕೇಜ್ರಿವಾಲ್,  ಕರ್ನಾಟಕದಲ್ಲಿ ಈ ಹಿಂದೆ 20 ಪರ್ಸೆಂಟ್ ಕಮಿಶನ್‌ನ ಕಾಂಗ್ರೆಸ್ ಸರ್ಕಾರ ಇತ್ತು. ರಾಜ್ಯದಲ್ಲಿ  ಡಬಲ್ ಎಂಜಿನ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕಮಿಶನ್ ಡಬಲ್ ಆಗಿದ್ದು 40 ಪರ್ಸೆಂಟ್ ಕಮಿಶನ್ ಸರ್ಕಾರ ಬಂದಿದೆ. ಇದುವೇ ಡಬಲ್ ಎಂಜಿನ್ ಸರ್ಕಾರದ ಕೊಡುಗೆ. ಜನತೆ ಮತ್ತೆ  ಡಬಲ್ ಎಂಜಿನ್ ಸರ್ಕಾರವನ್ನು ಅಧಿಕಾರಕ್ಕೆ ತಂದರೆ ಕಮಿಶನ್ ಮತ್ತೆ ಡಬಲ್ ಆಗಿ 80 ಪರ್ಸೆಂಟ್ ಕಮಿಶನ್ ಸರ್ಕಾರ ಬರಲಿದೆ. ರಾಜ್ಯದ ಜನರು ಈ ಬಗ್ಗೆ ಗಂಭೀರವಾಗಿ ಆಲೋಚಿಸಬೇಕು ಎಂದರು.

ಕರ್ನಾಟಕದಲ್ಲಿ  ಜನರು ವಿದ್ಯಾವಂತರಿದ್ದಾರೆ; ಜಾಣರಿದ್ದಾರೆ. ದೇಶಭಕ್ತರೂ ಇದ್ದಾರೆ. ಆದರೆ, ಇಲ್ಲಿಯ ನಾಯಕರು ಮಾತ್ರ ಕೆಟ್ಟು ಹೋಗಿದ್ದಾರೆ. ರಾಜ್ಯದಲ್ಲಿ ಶೇ. ೪೦ಪರ್ಸೆಂಟ್ ಕಮಿಶನ್ ಸರ್ಕಾರವಿದ್ದು ಇಲ್ಲಿಯ ರಾಜಕೀಯ ನಾಯಕರು ಕರ್ನಾಟಕದ ಹೆಸರನ್ನು ದೇಶ ಮಟ್ಟದಲ್ಲಿ ಹಾಳು ಮಾಡಿದ್ದಾರೆ ಎಂದು ಟೀಕಿಸಿದರು.

ದೇಶದಲ್ಲಿ ಮಹಾರಾಷ್ಟ್ರ ಬಳಿಕ ಕರ್ನಾಟಕದಲ್ಲಿಯೇ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು ಆಮ್ ಆದ್ಮಿ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ರೈತರ ಎಲ್ಲ ಸಾಲ ಮನ್ನಾ ಮಾಡಿ ಅವರನ್ನು ಒಮ್ಮೆ ಸಾಲಮುಕ್ತರನ್ನಾಗಿ ಮಾಡಲಾಗುವುದು. ಕೃಷಿ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಒದಗಿಸುವ ಜತೆಗೆ ರೈತರ ಎಲ್ಲ ಸಮಸ್ಯೆಗಳ ಬಗ್ಗೆ ರೈತರೊಂದಿಗೆ ಚರ್ಚಿಸಿ ಪರಿಹರಿಸಲಾಗುವುದು.

ಆಮ್ ಆದ್ಮಿ ಪಕ್ಷ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದರೆ ಸರ್ಕಾರಿ ಶಾಲೆ, ಸರ್ಕಾರಿ ಆಸ್ಪತ್ರೆಗಳನ್ನು ಅಭಿವೃದ್ಧಿಸಲಾಗುವುದು. ಉಚಿತ ವಿದ್ಯುತ್, ಮನೆಗೊಬ್ಬರಿಗೆ ಉದ್ಯೋಗ ಒದಗಿಸಿಕೊಡಲಾಗುವುದು. ನಿರುದ್ಯೋಗಿಗಳಿಗೆ ಮಾಸಿಕ 3000ರೂ. ಭತ್ಯೆ ನೀಡಲಾಗುವುದು ಎಂದರು.

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್, ಪಕ್ಷದ ರಾಜ್ಯ ಪ್ರಮುಖರಾದ  ಪೃಥ್ವಿ ರೆಡ್ಡಿ, ಬ್ರಿಜೇಶ್ ಕಾಳಪ್ಪ, ವಿಜಯ ಶರ್ಮ, ಬಿ.ಟಿ. ನಾಗಣ್ಣ, ಮುಖ್ಯಮಂತ್ರಿ ಚಂದ್ರು, ಟೆನ್ನಿಸ್ ಕೃಷ್ಣ, ತುಷಾರ ಸ್ವಾಮಿ, ಡಾ. ವೆಂಕಟೇಶ್, ಶಾಂತಲಾ ದಾಮ್ಲೆ, ಉಷಾ ಮೋಹನ್, ಜಫರ್ ಮೊಹಿದ್ದೀನ್, ಶಿವರಪ್ಪ ಜೋಗಿನ್, ರವಿಚಂದ್ರ ನರವಂಶಿ ಇನ್ನಿತರರು ವೇದಿಕೆಯಲ್ಲಿದ್ದರು.

ಟಾಪ್ ನ್ಯೂಸ್

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.