ಕರಾವಳಿಯ ಕಲಾವಿದನ ಕೈಚಳಕಕ್ಕೆ ಮನಸೋತ ಕೇಂದ್ರ ಸಚಿವೆ


Team Udayavani, Mar 5, 2023, 3:44 PM IST

KALAVIDA

ಉಡುಪಿ/ ಬ್ರಹ್ಮಾವರ: ಕರಾವಳಿಯ ಕಲಾವಿದನ ಕೈಚಳಕಕ್ಕೆ ಕೇಂದ್ರ ಸಚಿವೆಯೂ ಮನಸೋತಿದ್ದಾರೆ. ಉಪ್ಪೂರು ಕೊಳಲಗಿರಿಯ ಗಣೇಶ್‌ ಪೂಜಾರಿ ಹಾವಂಜೆ ರೂಪಿಸಿದ ಹಣೆ ಮೇಲೆ ಕ್ಯೂ ಆರ್‌ ಕೋಡ್‌ ಸಹಿತ ವಾಲಗದ ನಾದಕ್ಕೆ ಕುಣಿಯುವ ಬಸವನ ಕಲಾಕೃತಿ ಹಳ್ಳಿಗಳಲ್ಲಿಯೂ ಡಿಜಿಟಲ್‌ ವ್ಯವಹಾರವನ್ನು ಪ್ರತಿಬಿಂಬಿಸುತ್ತಿದೆ. ಕರಾವಳಿ ಯಕ್ಷಗಾನ ಕಲೆಯ ಒಲವುಳ್ಳ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಯಕ್ಷ ಮುಖವಾಡದಿಂದ ಪ್ರಭಾವಿತರಾಗಿ 100 ಮುಖವಾಡ ಕಳಿಸಲು ಸೂಚಿಸಿದ್ದರು.

ವಾಲಗ ನಾದಕ್ಕೆ ಕುಣಿವ ಡಿಜಿಟಲ್‌ ಕೋಲೆ ಬಸವನ ಸುಂದರ ಕಲಾಕೃತಿಯನ್ನು ಬೆಂಗಳೂರಿನಲ್ಲಿ ನಡೆದ ಜಿ20 ರಾಷ್ಟ್ರಗಳ ವಿತ್ತ ಸಚಿವರ ಶೃಂಗದಲ್ಲಿ ಪ್ರದರ್ಶನಕ್ಕಿಡಲಾಯಿತು. ಈ ಕಲಾ ಕೌಶಲಕ್ಕೆ ಮೆಚ್ಚುಗೆ ಜತೆಗೆ ವಿವಿಧೆಡೆಗಳಿಂದ ಅಪಾರ ಬೇಡಿಕೆಯೂ ವ್ಯಕ್ತವಾಗುತ್ತಿದೆ ಎನ್ನುತ್ತಾರೆ ಗಣೇಶ್‌ ಪೂಜಾರಿ ಹಾವಂಜೆ. ಇವರಿಗೆ ಬಾಲ್ಯದಲ್ಲಿ ಕಲಾಸಕ್ತಿಯಿದ್ದರೂ ಕಲಾ ಶಾಲೆಗೆ ತೆರಳುವ ಅನುಕೂಲ ಇರಲಿಲ್ಲ.

ಬಡತನದ ಹಿನ್ನೆಲೆಯಲ್ಲಿ 10ನೇ ತರಗತಿ ಬಳಿಕ ಮುಂಬಯಿ ಸೇರಿ ಕ್ಯಾಂಟೀನ್‌ನಲ್ಲಿ ಕೆಲಸ, ರಾತ್ರಿ ಶಾಲೆಗೆ ತೆರಳಿ ಪಿಯುಸಿ ಓದಿದರು. ಕಲಾವಿದನಾಗಿ ಸಾಧನೆ ಮಾಡುವ ತುಡಿತಕ್ಕೆ ಮುಂಬಯಿ ಮಾಯಾ ಜಗತ್ತು ಪ್ರೇರಣೆ ನೀಡಿತು. ಮಣಿಪಾಲದಲ್ಲಿ ಕಲ್ಚರ್‌ ಫ್ಯೂಚರ್‌ ಕ್ರಾಫ್ಟ್ ಸಂಸ್ಥೆ ಆರಂಭಿಸಿ ಕಲ್ಲು, ಗೆರಟೆ, ಬಟ್ಟೆ ಸಹಿತ ಪ್ರಾಕೃತಿಕ ವಸ್ತು ಕೈಗೆ ಸಿಕ್ಕಿದರೆ ಅದಕ್ಕೆ ಸುಂದರ ಕಲಾರೂಪ ನೀಡುವ ಕೌಶಲ ಇವರದ್ದು.

ಮಣಿಪಾಲದ ಮಾಹೆ ವಿವಿ, ಕೆಎಂಸಿ ಸಹಿತ ದೇಶ-ವಿದೇಶದ ವಿದ್ಯಾರ್ಥಿಗಳಿಗೆ ಮಿನಿಯೇಚರ್‌ ಆರ್ಟ್‌, ಸ್ಮರಣಿಕೆ ರೂಪಿಸಿ 9 ವರ್ಷಗಳ ಕಾಲ ನೀಡಿದ್ದರು. ಬಳಿಕ ಸಂಸ್ಥೆಯನ್ನು ಹಾವಂಜೆಯ ಮನೆಯ ಬಳಿಗೆಸ್ಥಳಾಂತರಿಸಿದ್ದರು. ಇವರು ರೂಪಿಸಿದ ಕಲಾಕೃತಿಗಳು ವಿವಿಧ ರಾಷ್ಟ್ರ ಗಳಲ್ಲಿ ಭಾರತೀಯ ಕಲಾ ಶ್ರೀಮಂತಿಕೆಯ ಸೊಬಗು ಬಿಂಬಿಸುತ್ತಿವೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಸಂಸತ್ತಿನಲ್ಲಿ ಡಿಜಿಟಲ್‌ ಇಂಡಿಯಾ ಪ್ರಗತಿಯ ಕಿಮ್ಮತ್ತು, ಹಳ್ಳಿಗಳಲ್ಲಿಯೂ ನಡೆಯುವ ವ್ಯವಹಾರದ ಬಗ್ಗ  ಪ್ರಸ್ತಾವಿಸಿದ್ದರು. ಕರ್ನಾಟಕ, ತಮಿಳುನಾಡುವಿನಲ್ಲಿ ಸಂಕ್ರಾಂತಿ ಹಬ್ಬದ ವೇಳೆ ಬರುವ ಕೋಲೆ ಬಸವನಿಗೆ ಕೊಡುವ ಬಟ್ಟೆ, ಧಾನ್ಯ ಜೋಳಿಗೆಗೆ ಹಾಕಿದರೂ ನಗದು ಕೊಡಲಾಗದವರು ಬಸವನ ಹಣೆ ಮೇಲಿರುವ ಕ್ಯೂಆರ್‌ ಕೋಡ್‌ ಸ್ಕ್ಯಾನ್‌ ಮಾಡಿ ದುಡ್ಡು  ನೀಡುವಷ್ಟು ಡಿಜಿಟಲ್‌ ಇಂಡಿಯಾ ಯೋಜನೆ ಪ್ರಗತಿ ಸಾಧಿಸಿದ್ದನ್ನು ಶ್ಲಾಘಿಸಿದ್ದರು.

ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಜಿ20 ರಾಷ್ಟ್ರಗಳ ವಿತ್ತ ಸಚಿವರ, ಸೆಂಟ್ರಲ್‌ ಬ್ಯಾಂಕ್‌ ಮುಖ್ಯಸ್ಥರ ಸಭೆ ಹಿನ್ನೆಲೆಯಲ್ಲಿ ಈ ಹಿಂದೆ ಹೊಸದಿಲ್ಲಿ ಕರ್ನಾಟಕ ಭವನದ ವಿಶೇಷ ಕರ್ತವ್ಯಾಧಿಕಾರಿಯಾಗಿದ್ದ ಉಡುಪಿ ಜಿ.ಪಂ.ಸಿಇಒ ಪ್ರಸನ್ನ ಎಚ್‌. ಮುತುವರ್ಜಿಯಿಂದ ಗಣೇಶ್‌ ಹಾವಂಜೆ ಅವರು ಡಿಜಿಟಲ್‌ ಕೋಲೆ ಬಸವನ ಕಲಾಕೃತಿ ಹಾಗೂ ಗೋಡೆಯಲ್ಲಿ ತೂಗು ಹಾಕಬಹುದಾದ ಯಕ್ಷ ಮುಖವಾಡ, ಯಕ್ಷ ವೇಷದ ಎರಡು ಅಡಿಯ ಮೂರ್ತಿ ತಯಾರಿಸಿ ವಿಮಾನದಲ್ಲಿ ಹೊಸದಿಲ್ಲಿಗೆ ಕಳುಹಿಸಿದ್ದರು.

ಟಾಪ್ ನ್ಯೂಸ್

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.