ಚಿನ್ನಾಭರಣಗಳ ಮೇಲೆ ಎಚ್‌ಯುಐಡಿ ಹಾಲ್‌ಮಾರ್ಕ್‌ ಕಡ್ಡಾಯ

ಏ.1ರ ನಂತರ ಎಚ್‌ಯುಐಡಿ ನಂಬರ್‌ ಇಲ್ಲದ ಚಿನ್ನ ಮಾರಾಟ ಮಾಡುವಂತಿಲ್ಲ

Team Udayavani, Mar 6, 2023, 7:45 AM IST

ಚಿನ್ನಾಭರಣಗಳ ಮೇಲೆ ಎಚ್‌ಯುಐಡಿ ಹಾಲ್‌ಮಾರ್ಕ್‌ ಕಡ್ಡಾಯ

ಏ.1ರಿಂದ ಆರು ಸಂಖ್ಯೆಯ ಹಾಲ್‌ಮಾರ್ಕ್‌ ಯೂನಿಕ್‌ ಐಡೆಂಟಿಫಿಕೇಶನ್‌ ನಂಬರ್‌ (ಎಚ್‌ಯುಐಡಿ) ಇರುವ ಚಿನ್ನಾಭರಣ ಮಾರಾಟಕ್ಕೆ ಮಾತ್ರ ಅವಕಾಶವಿದೆ ಎಂದು ಕೇಂದ್ರ ಸರ್ಕಾರ ಆದೇಶಿಸಿದೆ. ಅದರ ಪ್ರಕಾರ, ಎಚ್‌ಯುಐಡಿ ನಂಬರ್‌ ಇಲ್ಲದ ಹಳೆಯ ಹಾಲ್‌ಮಾರ್ಕ್‌ ಚಿನ್ನಾಭರಣ ಮಾರಾಟಕ್ಕೆ ಮಾ.31ರ ನಂತರ ಅವಕಾಶವಿರುವುದಿಲ್ಲ.

ಏತಕ್ಕಾಗಿ ಈ ನಿರ್ಧಾರ?
ಗ್ರಾಹಕರ ಹಿತರಕ್ಷಣೆಯ ದೃಷ್ಟಿಯಿಂದ ಈ ಕ್ಷೇತ್ರದ ಪಾಲುದಾರರ ಸಭೆಯ ಬಳಿಕ ಗ್ರಾಹಕರ ವ್ಯವಹಾರಗಳ ಸಚಿವಾಲಯವು ಜ.18ರಂದು ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಂಡಿತು.

ಎಚ್‌ಯುಐಡಿ ನಂಬರ್‌ ಗುರುತಿಸುವುದು ಹೇಗೆ?:
ಚಿನ್ನದ ಪರಿಶುದ್ಧತೆಯನ್ನು ಪ್ರಮಾಣಿಕರಿಸಲು ಹಾಲ್‌ಮಾರ್ಕ್‌ ಕಡ್ಡಾಯವಾಗಿದೆ. ಈ ಹಿಂದೆ ಚಿನ್ನಾಬರಣದ ಮೇಲೆ ಬಿಐಎಸ್‌ ಲೋಗೊ, ಆಭರಣದ ಪರಿಶುದ್ಧತೆ ಪ್ರಮಾಣ, ಮಾರಾಟ ಮಾಡುವವರ ಲೋಗೊ ಹಾಗೂ ಹಾಲ್‌ಮಾರ್ಕಿಂಗ್‌ ಕೇಂದ್ರದ ಲೋಗೊ ಹಾಕಲಾಗುತ್ತಿತ್ತು. ಇನ್ನು ಮುಂದೆ ಆರು ಸಂಖ್ಯೆಯ ಎಚ್‌ಯುಐಡಿ ನಂಬರ್‌ ಹಾಕಲಾಗುತ್ತದೆ.

ಸಮಾಯಾವಕಾಶ ನೀಡಲಾಗಿತ್ತು
2021ರ ಜು.1ರಲ್ಲೇ ಎಚ್‌ಯುಐಡಿ ನಂಬರ್‌ ಪರಿಚಯಿಸಲಾಗಿತ್ತು. ನಾಲ್ಕು ಸಂಖ್ಯೆಯ ಹಾಲ್‌ಮಾರ್ಕ್‌ ಇರುವ ಚಿನ್ನಾಭರಣ ಮಾರಾಟಕ್ಕೆ, ತಮ್ಮ ಬಳಿ ಇರುವ ಹಳೆಯ ಸ್ಟಾಕ್‌ಗಳ ಕ್ಲಿಯರೆನ್ಸ್‌ಗಾಗಿ ಚಿನ್ನಾಭರಣ ಮಾಲೀಕರಿಗೆ ಒಂದು ವರ್ಷ ಒಂಬತ್ತು ತಿಂಗಳು ಸರ್ಕಾರ ಅವಕಾಶ ನೀಡಿತ್ತು. ಚಿನ್ನಕ್ಕೆ ಎಚ್‌ಯುಐಡಿ ನಂಬರ್‌ ಕಡ್ಡಾಯಗೊಳಿಸಲು ಹಿಂದೆಯೇ ತೀರ್ಮಾನಿಸಲಾಗಿತ್ತು. ಅಗತ್ಯ ಸಮಾಯಾವಕಾಶ ನೀಡಿ 2023ರ ಏ.1ರಿಂದ ಕಡ್ಡಾಯವಾಗಿ ಜಾರಿಗೊಳಿಸಲಾಗುತ್ತಿದೆ.

ಹಳೆಯ ಚಿನ್ನದ ಗತಿ ಏನು?
ಗ್ರಾಹಕರ ಬಳಿ ಇರುವ ಹಳೆಯ ಚಿನ್ನಕ್ಕೆ ಮಾನ್ಯತೆ ಇದ್ದೇ ಇರುತ್ತದೆ. ಚಿನ್ನ ಕೊಳ್ಳುವವರು ಪರಿಶುದ್ಧತೆ ಆಧಾರದಲ್ಲಿ ಅದಕ್ಕೆ ಬೆಲೆ ಕಟ್ಟುತ್ತಾರೆ.

ವಂಚನೆಗೆ ಒಳಗಾದರೆ ಪರಿಹಾರ
2018ರ ಬ್ಯೂರೋ ಆಫ್ ಇಂಡಿಯನ್‌ ಸ್ಟಾಂಡರ್ಡ್‌ ನಿಯಮಗಳ ಸೆಕ್ಷನ್‌ 49ರ ಪ್ರಕಾರ, ಗ್ರಾಹಕರು ಖರೀದಿಸಿದ ಹಾಲ್‌ಮಾರ್ಕ್‌ ಆಭರಣದ ಮೇಲೆ ಗುರುತು ಮಾಡುವುದಕ್ಕಿಂತ ಕಡಿಮೆ ಶುದ್ಧತೆ ಇದೆ ಎಂದು ಕಂಡುಬಂದರೆ, ಆಗ ಖರೀದಿದಾರರು/ಗ್ರಾಹಕರು ಪರಿಹಾರಕ್ಕೆ ಅರ್ಹರಾಗಿರುತ್ತಾರೆ. ಶುದ್ಧತೆಯಲ್ಲಿ ಎಷ್ಟು ಕಡಿಮೆಯಿದೆ ಎಂಬ ಆಧಾರದಲ್ಲಿ ಅದರ ತೂಕದ ಎರಡು ಪಟ್ಟು, ಜತೆಗೆ ಪರೀಕ್ಷಾ ಶುಲ್ಕ ಸೇರಿ ಪರಿಹಾರ ನೀಡಬೇಕಾಗುತ್ತದೆ.

ಹಾರ್ಲ್ಮಾರ್ಕ್‌ ಪ್ರಯೋಜನ
ಹಾರ್ಲ್ಮಾರ್ಕ್‌ ಮಾಡಲಾದ ಆಭರಣಗಳು, ಪ್ರಮಾಣೀಕರಣ ಮತ್ತು ಗುಣಮಟ್ಟದ ದೃಢೀಕರಣವಾಗಿದ್ದು, ಅದು ಗ್ರಾಹಕರಿಗೆ ಚಿನ್ನದ ಶುದ್ಧತೆಯ ವಿಶ್ವಾಸವನ್ನು ನೀಡುತ್ತದೆ. ಇದು ಗ್ರಾಹಕರಿಗೆ ಜುವೆಲ್ಲರ್ನಿಂದ ವಂಚನೆಯನ್ನು ತಪ್ಪಿಸುತ್ತದೆ. ಎಷ್ಟು ಶುದ್ಧತೆಯ ಚಿನ್ನವನ್ನು ಖರೀದಿಸಲಾಗುತ್ತಿದೆ ಎಂಬ ಬಗ್ಗೆ ದೃಢೀಕರಣವನ್ನು ಗ್ರಾಹಕರು ಪಡೆಯುತ್ತಾರೆ.

ಟಾಪ್ ನ್ಯೂಸ್

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.