ಸ್ವಚ್ಚ ಆಡಳಿತ ವಿಧಾನ ಮೈಗೂಡಿಸಿಕೊಳ್ಳಿ: ಅಧಿಕಾರಿಗಳಿಗೆ ಸಚಿವ ಎಂಟಿಬಿ ನಾಗರಾಜು ಸೂಚನೆ


Team Udayavani, Mar 6, 2023, 2:46 PM IST

MTB

ಬೆಂಗಳೂರು: ಸ್ವಚ್ಛ, ದಕ್ಷ ಮತ್ತು ಪ್ರಾಮಾಣಿಕ ಆಡಳಿತ ವಿಧಾನವನ್ನು ಸರ್ಕಾರಿ ನೌಕರರು ಮೈಗೂಡಿಸಿಕೊಳ್ಳಬೇಕು. ಇದರಿಂದ ಸರ್ಕಾರದ ಆದಾಯ ಹೆಚ್ಚಿ ಜನಪರ ಯೋಜನೆಗಳ  ಪರಿಣಾಮಕಾರಿ ಅನುಷ್ಠಾನ ಸಾಧ್ಯವಾಗಲಿದೆ ಎಂದು ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ ಸಚಿವ ಎಂಟಿಬಿ ನಾಗರಾಜು ಹೇಳಿದ್ದಾರೆ.

ವಿಧಾನಸೌಧದಲ್ಲಿ ಇಂದು ಸಿಮ್ಯಾಕ್ ಸಂಸ್ಥೆಯು ಪೌರಾಡಳಿತ ಇಲಾಖೆಯ ಸಹಯೋಗದೊಂದಿಗೆ ಏರ್ಪಡಿಸಿದ್ದ ಸಮಾರಂಭದಲ್ಲಿ ಉತ್ತಮ ಪದ್ಧತಿಗಳ ದಾಖಲೀಕರಣವನ್ನು ಬಿಡುಗಡೆಗೊಳಿಸಿ ನಂತರ ಪ್ರಶಸ್ತಿ ಪ್ರದಾನ ಮಾಡಿ ಸಚಿವ ಎಂಟಿಬಿ ನಾಗರಾಜು ಮಾತನಾಡಿದರು.

ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ತೆರಿಗೆ ಸಂಗ್ರಹಕ್ಕೆ ಒತ್ತು ನೀಡಿದ್ದೇವೆ. ನೇರ ಪಾವತಿ ಮೂಲಕ ಆಸ್ತಿ ತೆರಿಗೆ ಸಂಗ್ರಹಕ್ಕೆ ಸಿದ್ಧತೆ ನಡೆದಿದೆ ಎಂದು ಸಚಿವರು ತಿಳಿಸಿದರು.

3885 ಕೋಟಿಯ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆಯಡಿಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕೈಗೊಳ್ಳಲಿರುವ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು, ಹಲವೆಡೆ ಟೆಂಡರ್ ಪ್ರಕ್ರಿಯೆ ಪೂರ್ಣ ಗೊಂಡು ಕಾಮಗಾರಿಗಳು ಆರಂಭವಾಗಿವೆ. 248 ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ 8691 ಕೋಟಿ ರೂ.ವೆಚ್ಚದಲ್ಲಿ ಕುಡಿಯುವ ನೀರು ಪೂರೈಸುವ ಅಮೃತ್-2.0 ಯೋಜನೆ ಪ್ರಗತಿಯಲ್ಲಿದೆ ಎಂದು ಸಚಿವ ಎಂಟಿಬಿ ನಾಗರಾಜು ತಿಳಿಸಿದರು.

ಇದೇ ಸಂದರ್ಭದಲ್ಲಿ ತ್ಯಾಜ್ಯ ಸಂಸ್ಕರಣೆಗಾಗಿ ಮಂಗಳೂರು ಮಹಾ ನಗರ ಪಾಲಿಕೆ, ಸಸಿ ನೆಡುವಿಕೆ ಮತ್ತು ಸಂಸ್ಕರಿತ ನೀರಿನ ಸದ್ಭಳಕೆಗಾಗಿ ಕಾರವಾರ ನಗರಸಭೆ ಹಾಗೂ ಹುಬ್ಬಳಿಯ ತೋಳನಕೆರೆ ಪುನರುಜ್ಜೀವನಕ್ಕಾಗಿ ಕೆಯುಐಡಿಎಫ್ ಸಿಗೆ ಸಚಿವರು ಪ್ರಶಸ್ತಿ ಪ್ರದಾನ ಮಾಡಿದರು.

ಸಮಾರಂಭದಲ್ಲಿ ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ರಾಕೇಶ್ ಸಿಂಗ್,ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಬಿಡಬ್ಲ್ಯೂಎಸ್ಎಸ್ ಬಿ ಅಧ್ಯಕ್ಷ ಎನ್. ಜಯರಾಮ್, ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಡಾ.ಅಜಯ್ ನಾಗಭೂಷಣ್, ಪೌರಾಡಳಿತ ಇಲಾಖೆ ನಿರ್ದೇಶಕಿ ಎನ್.ಮಂಜುಶ್ರೀ ಸೇರಿದಂತೆ ರಾಜ್ಯದಾದ್ಯಂತ ಆಗಮಿಸಿದ್ದ ಅಧಿಕಾರಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

1-qwewqewqe

Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.