ಧಾರ್ಮಿಕ ಸೌಹಾರ್ದತೆಯ ಸಂದೇಶ: ದೇವಾಲಯದಲ್ಲಿ ಮುಸ್ಲಿಂ ಜೋಡಿಯ ವಿವಾಹ
ವಿಹೆಚ್ ಪಿ ಮತ್ತು ಆರ್ಎಸ್ಎಸ್ನ ಬೆಂಬಲ
Team Udayavani, Mar 6, 2023, 4:14 PM IST
ಶಿಮ್ಲಾ: ಧಾರ್ಮಿಕ ಸೌಹಾರ್ದತೆಯ ಸಂದೇಶ ನೀಡಲು ಹಿಮಾಚಲ ಪ್ರದೇಶದ ರಾಮ್ಪುರದ ಹಿಂದೂ ದೇವಾಲಯದ ಆವರಣದಲ್ಲಿ ಇಸ್ಲಾಮಿಕ್ ವಿವಾಹ ಪದ್ಧತಿಯಂತೆ ಮುಸ್ಲಿಂ ಜೋಡಿಯ ವಿವಾಹ ಭಾನುವಾರ ನೆರವೇರಿದೆ.
ವಿಶ್ವ ಹಿಂದೂ ಪರಿಷತ್ತಿನ ಠಾಕೂರ್ ಸತ್ಯನಾರಾಯಣ ದೇವಸ್ಥಾನದ ಆವರಣದಲ್ಲಿ ವಿವಾಹ ನೆರವೇರಿತು. ಮುಸ್ಲಿಂ ಮತ್ತು ಹಿಂದೂ ಸಮಾಜದ ಜನರೆಲ್ಲರೂ ಸಮಾರಂಭಕ್ಕೆ ಸಾಕ್ಷಿಯಾದರು. ದೇವಸ್ಥಾನದ ಆವರಣದಲ್ಲೇ ಮೌಲ್ವಿ, ಸಾಕ್ಷಿಗಳು ಮತ್ತು ವಕೀಲರ ಸಮ್ಮುಖದಲ್ಲಿ ನಿಕಾಹ ನೆರವೇರಿಸಲಾಯಿತು. ಧಾರ್ಮಿಕ ಸೌಹಾರ್ದತೆ ಹಾಗೂ ಸಹೋದರತ್ವದ ಸಂದೇಶ ಸಾರುವ ಉದ್ದೇಶವೇ ಪ್ರಮುಖವಾಗಿತ್ತು.
ಸತ್ಯನಾರಾಯಣ ದೇವಸ್ಥಾನ ಸಂಕೀರ್ಣವು ವಿಹೆಚ್ ಪಿ ಮತ್ತು ಆರ್ಎಸ್ಎಸ್ನ ಜಿಲ್ಲಾ ಕಚೇರಿಯಾಗಿದೆ ಎಂದು ದೇವಸ್ಥಾನ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ವಿನಯ್ ಶರ್ಮಾ ಎಎನ್ಐಗೆ ತಿಳಿಸಿದರು.
ವಿಹೆಚ್ ಪಿ ಮತ್ತು ಆರ್ಎಸ್ಎಸ್ಗಳು ಸಾಮಾನ್ಯವಾಗಿ ಮುಸ್ಲಿಂ ವಿರೋಧಿ ಎಂದು ಆರೋಪಿಸುತ್ತಾರೆ. ಆದರೆ ಇಲ್ಲೊಂದು ಮುಸ್ಲಿಂ ಜೋಡಿಯೊಂದು ಹಿಂದೂ ದೇವಾಲಯದ ಆವರಣದಲ್ಲಿ ಮದುವೆಯಾಗಿದೆ. ಇದು ಸನಾತನ ಧರ್ಮವು ಯಾವಾಗಲೂ ಎಲ್ಲರಿಗೂ ಮುಂದುವರಿಯಲು ಮತ್ತು ಎಲ್ಲರನ್ನೂ ಜೊತೆಯಲ್ಲಿ ಕರೆದೊಯ್ಯಲು ಪ್ರೇರೇಪಿಸುತ್ತದೆ ಎಂದು ತೋರಿಸಿ ಕೊಟ್ಟಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್