ಬೈಂದೂರು: ಕೈ-ಗೋಪಾಲ ಪೂಜಾರಿ; ಬಿಜೆಪಿಯಲ್ಲಿ ಪೈಪೋಟಿ


Team Udayavani, Mar 7, 2023, 6:15 AM IST

ಬೈಂದೂರು: ಕೈ-ಗೋಪಾಲ ಪೂಜಾರಿ; ಬಿಜೆಪಿಯಲ್ಲಿ ಪೈಪೋಟಿ

ಬೈಂದೂರು: ಉಡುಪಿ ಜಿಲ್ಲೆಯಲ್ಲಿಯೇ ಜಿದ್ದಾಜಿದ್ದಿಯ ಕಣವಾಗಿ ಮಾರ್ಪಡುತ್ತಿದೆ ಬೈಂದೂರು. ಕಾಂಗ್ರೆಸ್‌ನಿಂದ ಹುರಿಯಾಳು ಬಹುತೇಕ ಘೋಷಿತವಾಗಿದ್ದರೆ, ಬಿಜೆಪಿಯಿಂದ ಹಾಲಿ ಶಾಸಕರೊಂದಿಗೆ ಮತ್ತಷ್ಟು ಹೆಸರುಗಳು ಕೇಳಿಬರುತ್ತಿವೆ.

ಆದರೆ ಸೆಣಸಾಳುಗಳ ಹೆಸರು ಅಂತಿಮಗೊಳ್ಳುವ ಮೊದಲೇ ಒಂದು ಬಗೆಯ ತೇಜಿ ಕ್ಷೇತ್ರದಲ್ಲಿ ಎದ್ದು ಕಾಣತೊಡಗಿದೆ.

ಕಳೆದ ಬಾರಿ ಕಳೆದುಕೊಂಡಿದ್ದ ಕ್ಷೇತ್ರವನ್ನು ಗೆಲ್ಲಲೇಬೇಕೆಂಬ ಹುರುಪಿ­ನಲ್ಲಿದೆ ಕಾಂಗ್ರೆಸ್‌ ಬಣ. ಆದರೆ ಕ್ಷೇತ್ರವನ್ನು ಯಾವುದೇ ಕಾರಣಕ್ಕೂ ಬಿಟ್ಟು ಕೊಡಬಾರದೆಂದು ಮರು­ಪಟ್ಟು ಬಿಗಿಯುತ್ತಿದೆ ಬಿಜೆಪಿ. ಇದು ಉಡುಪಿ ಜಿಲ್ಲೆಯ ಗಡಿ ಕ್ಷೇತ್ರವಾದ, ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಗೊಳಪಟ್ಟ ಬೈಂದೂರು ವಿಧಾನಸಭಾ ಕ್ಷೇತ್ರದ ಸದ್ಯದ ರಾಜಕೀಯ ಚಿತ್ರಣ.

ಕಾಂಗ್ರೆಸ್‌ನಿಂದ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಮಾತ್ರ ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದ್ದು, ಬಹುತೇಕ ಅವರೇ ಅಭ್ಯರ್ಥಿಯಾಗಲಿದ್ದಾರೆ. ಈಗಾಗಲೇ 6 ಬಾರಿ ಸ್ಪರ್ಧಿಸಿ, 4 ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಇವರ ಏಳನೇ ಬಾರಿಯ ಅದೃಷ್ಟ ಪರೀಕ್ಷೆಯಿದು.

2018ರ ಚುನಾವಣೆಯಲ್ಲಿ ಗೋಪಾಲ ಪೂಜಾರಿ ಅವರನ್ನು 25,393 ಮತಗಳ ಅಂತರದಿಂದ ಸೋಲಿಸಿದ ಬಿಜೆಪಿಯ ಬಿ.ಎಂ. ಸುಕುಮಾರ್‌ ಶೆಟ್ಟಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದರು. ಈ ಬಾರಿಯೂ ಟಿಕೆಟ್‌ ಆಕಾಂಕ್ಷಿಗಳ ಪಟ್ಟಿಯಲ್ಲಿ ಮುಂಚೂಣಿಯಲ್ಲಿದ್ದಾರೆ. ಪಕ್ಷದ ಪ್ರಥಮ ಆಯ್ಕೆ ಇವರೇ ಆಗಬಹುದು. ಆದರೆ ಇವರೊಂದಿಗೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್‌ ಹೆಗ್ಡೆ, ಜಿ.ಪಂ. ಮಾಜಿ ಸದಸ್ಯ ಬಾಬು ಶೆಟ್ಟಿ, ಉದ್ಯಮಿ ಗೋವಿಂದ ಬಾಬು ಪೂಜಾರಿ, ಬಿಜೆಪಿ ಜಿಲ್ಲಾ ಮಾಜಿ ಪ್ರಧಾನ ಕಾರ್ಯದರ್ಶಿ ಗುರುರಾಜ್‌ ಗಂಟಿಹೊಳೆ, ಬೈಂದೂರು ಮಂಡಲದ ಮಾಜಿ ಅಧ್ಯಕ್ಷ ಪ್ರಣಯ್‌ ಕುಮಾರ್‌ ಶೆಟ್ಟಿ, ಉದ್ಯಮಿ ನಿತಿನ್‌ ನಾರಾಯಣ್‌ ಹೆಸರುಗಳೂ ಚಾಲ್ತಿಯಲ್ಲಿವೆ. ಹೆಗ್ಡೆಯವರಿಗೆ ಜಿಲ್ಲೆಯ ಎಲ್ಲಿಯಾದರೂ ಒಂದು ಕಡೆ ಸ್ಪರ್ಧೆಗೆ ಅವಕಾಶ ನೀಡಬೇಕೆಂದು ಆಗ್ರಹಿಸಿ ಅವರ ಬೆಂಬಲಿಗರೂ ಅಭಿಯಾನ ಆರಂಭಿಸಿದ್ದಾರೆ. ಹಳೆಯ ಕುಂದಾಪುರ ತಾಲೂಕು (ಬೈಂದೂರು ಒಳಗೊಂಡ) ಪರಿಚಯವಿರುವುದೂ ಅನುಕೂಲಕರ ಅಂಶಗಳೂ ಆಗಬಹುದು. ಇವರಲ್ಲದೇ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಉಪಾಧ್ಯಕ್ಷ ಕಿರಣ್‌ ಕುಮಾರ್‌ ಕೊಡ್ಗಿ, ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌ ಅವರ ಹೆಸರುಗಳೂ ಪಕ್ಷದ ಪಡಸಾಲೆಯಲ್ಲಿ ಓಡಾಡುತ್ತಿವೆ. ಇಷ್ಟಕ್ಕೇ ಮುಗಿಯಲಿಲ್ಲ. ಕಡೇಗಳಿಗೆಯಲ್ಲಿ ಕ್ಷೇತ್ರದಲ್ಲಿ ಪಕ್ಷಕ್ಕಾಗಿ ಶ್ರಮಿಸಿದವರೊಬ್ಬರ ಹೆಸರು ಅಚ್ಚರಿಯ ಆಯ್ಕೆಯಂತೆ ಉದ್ಭವಿಸುವ ಸಾಧ್ಯತೆಯೂ ಇದೆ.

ಕಾಂಗ್ರೆಸ್‌ನಿಂದ ಅಭ್ಯರ್ಥಿ ಆಯ್ಕೆ ಬಗ್ಗೆ ಗೊಂದಲ ಇಲ್ಲ. ಹಾಗಾಗಿ ಗೋಪಾಲ ಪೂಜಾರಿಯವರು ಕ್ಷೇತ್ರಾದ್ಯಂತ ತಿರುಗಾಟ ಆರಂಭಿಸಿದ್ದಾರೆ. ಬಿಜೆಪಿಯಿಂದಲೂ ಹಾಲಿ ಶಾಸಕ ಬಿ.ಎಂ. ಸುಕುಮಾರ್‌ ಶೆಟ್ಟಿ ಹಿಂದೆ ಉಳಿದಿಲ್ಲ. ಒಂದು ವೇಳೆ ಇವರಿಬ್ಬರು ಮತ್ತೆ ಎದು ರಾಳಿಗಳಾ­ದರೆ ಇದು ಇವರಿಬ್ಬರ ನಡುವಿನ ಮೂರನೇ ಹಣಾಹಣಿ. ಕಳೆದೆರಡು ಚುನಾ­ವಣೆಗಳಲ್ಲಿ ಇಬ್ಬರೂ ಒಂದೊಂದು ಬಾರಿ ಗೆದ್ದು ಪಾಯಿಂಟ್‌ ಸಮಗೊಂಡಿದೆ.

ಸುಮಾರು 100 ಕಿ.ಮೀ. ಪಶ್ಚಿಮ ಘಟ್ಟ ಹಾಗೂ 40 ಕಿ.ಮೀ. ಕರಾವಳಿ ಪ್ರದೇಶವನ್ನು ಹೊಂದಿರುವ ವಿಶಿಷ್ಟವಾದ ಕ್ಷೇತ್ರ ಬೈಂದೂರು. ಜಿಲ್ಲೆಯಲ್ಲಿಯೇ ಅತ್ಯಧಿಕ ಮತದಾರರನ್ನು ಹೊಂದಿರುವ ಹೆಗ್ಗಳಿಕೆಯೂ ಇದರದ್ದೇ. ತಾಲೂಕು ರಚನೆಯ ಬಳಿಕ ನಡೆಯುತ್ತಿರುವ ಎರಡನೇ ಚುನಾವಣೆ ಇದು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ನೇತೃತ್ವದಲ್ಲಿ ಬೃಹತ್‌ ಸಮಾವೇಶ ನಡೆದು ಬಿಜೆಪಿ ಶಕ್ತಿ ವರ್ಧನೆಯಾಗಿದ್ದರೆ, ಕಾಂಗ್ರೆಸ್‌ನ ಪ್ರಜಾಧ್ವನಿ ಯಾತ್ರೆಯೂ ಇಲ್ಲಿ ಸದ್ದು ಮಾಡಿದೆ. ಜೆಡಿಎಸ್‌ನಿಂದ ಅಭ್ಯರ್ಥಿಗಳ ಹೆಸರು ಇನ್ನೂ ಪ್ರಕಟವಾಗಬೇಕಿದೆ.

ಗೆಲ್ಲುವ ಅಭ್ಯರ್ಥಿಗೆ ಮಣೆ
ಬಿಜೆಪಿಗೆ ಈ ಕ್ಷೇತ್ರವನ್ನು ಕಳೆದುಕೊಳ್ಳಲು ಸುತರಾಂ ಇಷ್ಟವಿಲ್ಲ. ಹಾಗಾಗಿ ಗೆಲ್ಲುವ ಕುದುರೆಯ ಹುಡುಕಾಟದಲ್ಲಿ ಪಕ್ಷದ ವರಿಷ್ಠರಿದ್ದಾರೆ. ಅದೇ ಸಂದರ್ಭದಲ್ಲಿ ಪ್ರಯೋಗಕ್ಕೆ ಅವಕಾಶವಿದೆಯೇ ಎಂಬುದಾಗಿಯೂ ಇಣುಕಿ ನೋಡುತ್ತಿದ್ದಾರೆ. ಪ್ರಯೋಗಕ್ಕೆ ಇಳಿಯದೇ ಇದ್ದರೆ ಹಾಲಿ ಶಾಸಕರ ಹೆಸರೇ ಅಂತಿಮಗೊಳ್ಳಬಹುದು. ಒಂದುವೇಳೆ ಪ್ರಯೋಗಕ್ಕಿಳಿಯಲು ನಿರ್ಧರಿಸಿದರೆ ಅಳೆದೂ ತೂಗಿ ಹೊಸ ಹೆಸರನ್ನು ಸೂಚಿಸಬಹುದು. ದೊಡ್ಡ ರಿಸ್ಕ್ ಗೂ ಸಿದ್ಧವೆಂದಾದರೆ ಅಚ್ಚರಿಯ ಆಯ್ಕೆಯನ್ನು ಪ್ರಕಟಿಸಬಹುದು.

-ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Gadag

ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.