ಮಹಿಳಾ ದಿನಾಚರಣೆ; ಯಕ್ಷಲೋಕದಲ್ಲಿ 25ನೇ ವರ್ಷಕ್ಕೆ ಕಾಲಿಟ್ಟ ಕರ್ನಾಟಕ ಮಹಿಳಾ ಯಕ್ಷಗಾನ ತಂಡ

ಬೆಳ್ಳಿ ಮಹೋತ್ಸವ ಸಂಭ್ರಮದಲ್ಲಿ ಯಕ್ಷ ಮಹಿಳಾ ತಂಡ : ಮಹಿಳಾ ದಿನಾಚರಣೆಯ ವಿಶೇಷ ಲೇಖನ

Team Udayavani, Mar 8, 2023, 9:34 AM IST

women yaksh

ಗತಕಾಲದ ಪರಂಪರೆಯ ಹಿರಿಮೆ, ದೈವೀ ಕಲೆಯೆಂಬ ಗರಿಮೆ, ಬಣ್ಣ-ಭಿನ್ನಾಣಗಳ ಕಲಾತ್ಮಕ ಕುಲುಮೆ, ಪುರಾಣ-ಇತಿಹಾಸಗಳ ಗೊಂಚಲಿನ ಮಹಿಮೆಯಿರುವ ಕರಾವಳಿ ಭಾಗದ ದೈವಿಕ ಕಲೆ ಹಾಗೂ ಕರ್ನಾಟಕದ ಶ್ರೀಮಂತ ಕಲೆ ಯಕ್ಷಗಾನ. ಭಾಗವತಿಕೆ-ಚಂಡೆ-ಮದ್ದಲೆಗಳ ಝೆಂಕಾರದ ನಡುವೆ ಹೆಜ್ಜೆ-ಗೆಜ್ಜೆಗಳ ವೈಭವದ ಜೊತೆಗೆ ವೇಷಭೂಷಣ ಎಲ್ಲರನ್ನು ಬಹುಬೇಗ ಆಕರ್ಷೀಸುವುದು ಈ ಕಲೆಯ ಸಾಮರ್ಥ್ಯ.

ಬಹಳ ಹಿಂದಿನಿಂದಲೂ ಗಂಡುಕಲೆ ಎಂದೇ ಪ್ರಚಲಿತದಲ್ಲಿದ್ದರೂ ಹೆಣ್ಣು ಕೂಡ ಗೆಜ್ಜೆ ಕಟ್ಟಿ ಹೆಜ್ಜೆ ಹಾಕಬಲ್ಲಳು ಎಂದು ಇತ್ತೀಚೆಗೆ ಅನೇಕ ಮಹಿಳೆಯರು ಸಾಬೀತು ಪಡಿಸಿದ್ದಾರೆ. ಆದರೆ 1998ರ ಸುಮಾರಿನ ಆ ಕಾಲದಲ್ಲಿ ಹೆಣ್ಣು ಗೆಜ್ಜೆ ಕಟ್ಟಿ ಕುಣಿಯುವುದು ಸ್ವಲ್ಪ ಕಷ್ಟದ ಪರಿಸ್ಥಿಯೇ ಇತ್ತು. ಈ ಸವಾಲುಗಳ ಮಧ್ಯದಲ್ಲೇ ಬೆಂಗಳೂರಿನಂತಹ ಮಹಾನಗರದಲ್ಲಿ ಮಹಿಳೆಯರನ್ನು ಒಗ್ಗೂಡಿಸಿ, ತರಬೇತಿ ನೀಡಿ ಮಹಿಳೆಯರು ಯಕ್ಷಗಾನವನ್ನು ಮಾಡಬಲ್ಲರು ಎಂದು ತೋರಿಸಿ ಸಾಧಿಸಿದವರು ಶ್ರೀಮತಿ ಗೌರಿ ಕೆ.

ಇವರ ಪತಿ ಶ್ರೀನಿವಾಸ ಸಾಸ್ತಾನ ಯಕ್ಷಗಾನ ಗುರು ಮತ್ತು ಕಲಾವಿದರಾಗಿದ್ದರು. ಇವರ ಯಕ್ಷಗಾನ ತಂಡವನ್ನು ನೋಡಿ, ಪ್ರೇರಿತರಾಗಿ ಪುರುಷರಿಗಷ್ಟೇ ಸೀಮಿತವಾದ ಯಕ್ಷಗಾನವನ್ನು ಮಹಿಳೆಯರೂ ಮಾಡುವಲ್ಲಿ ಯಾಕೆ ಪ್ರಯತ್ನ ಪಡಬಾರದು ? ಮಹಿಳೆಯರಿಂದ ಅಸಾಧ್ಯವಾದದ್ದು ಏನೂ ಇಲ್ಲ ಎಂಬ ನಿಟ್ಟಿನಲ್ಲಿ “ಕರ್ನಾಟಕ ಮಹಿಳಾ ಯಕ್ಷಗಾನ” ಎಂಬ ತಂಡವನ್ನು ಕಟ್ಟಿದರು. ಪ್ರಸ್ತುತ ಜೆ.ಪಿ ನಗರದ ಆರ್ ಬಿ ಐ ಲೇಔಟ್ ನಲ್ಲಿ ತಮ್ಮ ಮನೆಯಲ್ಲಿ ಯಕ್ಷಗಾನದ ತರಬೇತಿ ನೀಡುತ್ತಿದ್ದಾರೆ. ವೃತ್ತಿಯಲ್ಲಿ ಬ್ಯಾಂಕ್ ಮ್ಯಾನೇಜರ್ ಆಗಿದ್ರೂ, ಇವರನ್ನು ಅತೀ ಹೆಚ್ಚು ಆಕರ್ಷಿಸಿದ್ದು ಯಕ್ಷಗಾನವಂತೆ.

ಈಗ ನಿವೃತ್ತಿಯ ಜೀವನದಲ್ಲೂ ಈ ಕಲೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಆಗೀನ ಕಾಲದಲ್ಲಿ ಮಹಿಳಾ ತಂಡವನ್ನು ಕಟ್ಟಿ ಬೆಳೆಸುವುದು ಕಷ್ಟವೇ ಆಗಿದ್ದರೂ, ಎದೆಗುಂದದೇ ಮುನ್ನಡೆಸುತ್ತಾ ಬಂದಿದ್ದಾರೆ. ಈ ಮಹಿಳಾ ತಂಡ ಪ್ರಸ್ತುತ 25ನೇ ವರ್ಷಕ್ಕೆ ಕಾಲಿಡುತ್ತಿರುವುದು ಸಂತಸದ ವಿಚಾರ. ಕಲೆ ಯಾರೊಬ್ಬರ ಸ್ವತ್ತಲ್ಲ ಯಾರು ಅದನ್ನು ಆಸಕ್ತಿಯಿಟ್ಟುಕೊಂಡು, ಸತತ ಪರಿಶ್ರಮ ಪಟ್ಟು ಕಲಿಯುತ್ತಾರೋ ಅವರಿಗೆ ಖಂಡಿತ ಕಲೆ ಒಲಿಯುತ್ತದೆ ಎನ್ನುವುದಕ್ಕೆ ಈ ತಂಡವೇ ಪ್ರತ್ಯಕ್ಷ ಸಾಕ್ಷಿ.

ಹೆಜ್ಜೆ-ಗೆಜ್ಜೆಗಳ ಸಮ್ಮಿಲನ, ಗಾನ-ನಾಟ್ಯಗಳ ಸಂಚಲನ, ವೇಷಭೂಷಣಗಳ ಸಂಕಲನ, ಚಂಡೆ-ಮದ್ದಲೆಗಳ ಹೊಮ್ಮಿಲನದ ಈ ಯಕ್ಷಗಾನ ನಮ್ಮನ್ನು ಸೆಳೆಯುವಂತೆ ಮಾಡುತ್ತದೆ. ಪುರುಷರಿಗಷ್ಟೇ ಈ ಯಕ್ಷಗಾನ ಒಲಿಯುವುದು ಎನ್ನುವವರ ಎದುರು ಪುಂಡುವೇಷದಿಂದ ಹಿಡಿದು ರಾಜ ಗಾಂಭೀರ್ಯವಿರುವ ಎಲ್ಲಾ ರೀತಿ ಪಾತ್ರಗಳನ್ನು ಮಾಡಿ ತೋರಿಸಿದವರು. ನಾಟ್ಯದಿಂದ ಹಿಡಿದು ಸಂಭಾಷಣೆಯಲ್ಲೂ ಹೊಸ ಸಂಚಲನವನ್ನು ಮೂಡಿಸಿ, ಯಕ್ಷಪ್ರೇಮಿಗಳನ್ನು ಆಕರ್ಷಿಸಿದವರು.

ರಾಮಾಯಣ, ಮಹಾಭಾರತ, ಪುರಾಣಗಳ ಪ್ರಸಂಗಗಳನ್ನು ಪ್ರದರ್ಶಿಸಿದ್ದಲ್ಲದೇ, ಸಾಮಾಜಿಕ ಸಂದೇಶಗಳನ್ನೊಳಗೊಂಡ ಅನೇಕ ಪ್ರಸಂಗಗಳನ್ನು ರಚಿಸಿ, ಪ್ರದರ್ಶಿಸಿ ಉತ್ತಮ ಪ್ರತಿಕ್ರಿಯೆ ಪಡೆದಿದೆ ಈ ತಂಡ. ಕನ್ನಡ ಭಾಷೆಯಲ್ಲೇ ನಡೆಯುವ ಯಕ್ಷಗಾನವನ್ನು ಕನ್ನಡೇತರರು ನೋಡಲಿ ಎಂದು ಹಿಂದಿ, ಇಂಗ್ಲೀಷ್ ಭಾಷೆಯಲ್ಲೂ ಯಕ್ಷಗಾನವನ್ನು ಪ್ರದರ್ಶಿಸಿದ್ದಾರೆ. ಕೋಟ ಶಿವರಾಮ ಕಾರಂತರ ‘ಯಕ್ಷಗಾನ ಬ್ಯಾಲೆ’ ಎಂಬ ವಿಶೇಷ ಪ್ರಯೋಗವನ್ನು ಪ್ರದರ್ಶನ ರೂಪದಲ್ಲಿ ನೀಡಿ, ಯಕ್ಷ ಪ್ರೇಮಿಗಳಿಂದ ಭೇಷ್ ಎನಿಸಿಕೊಂಡಿದ್ದಾರೆ. ಯುವ ಪೀಳಿಗೆಗೆ ಯಕ್ಷಗಾನದ ಪರಿಚಯವಾಗಲಿ ಎಂಬ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳಲ್ಲಿ ಉಚಿತವಾಗಿ ಪ್ರದರ್ಶನ ನೀಡಿ, ಕಲೆಯನ್ನು ಬೆಳೆಸುವಲ್ಲಿ ಸಾಕ್ಷಿಯಾಗಿದ್ದಾರೆ.

ಇಲ್ಲಿ ಯಾರೂ ವೃತ್ತಿಪರ ಕಲಾವಿದರಿಲ್ಲ, ಎಲ್ಲರೂ ಕಲೆಯ ಮೇಲಿನ ಪ್ರೀತಿಯಿಂದ ಯಕ್ಷಗಾನವನ್ನು ಅಪ್ಪಿಕೊಂಡವರೇ ಇರೋದು. ತಮ್ಮ ವೃತ್ತಿಯಲ್ಲಿ ಬೇರೆ ಬೇರೆ ಸ್ಥಾನವನ್ನು ಹೊಂದಿದವರು, ಯಕ್ಷಗಾನದಲ್ಲೂ ತಮಗೆ ಕೊಟ್ಟ ಪಾತ್ರಕ್ಕೆ ಉತ್ತಮ ಸ್ಥಾನ ಕೊಟ್ಟು ಪಾತ್ರಕ್ಕೆ ಜೀವ ತುಂಬುವ ಮಹಿಳಾ ಮಣಿಗಳು ಅದೆಷ್ಟೋ ಇಲ್ಲಿದ್ದಾರೆ. ಕರ್ನಾಟಕ ಮಾತ್ರವಲ್ಲದೇ ಕಡಲಿನಾಚೆಗೂ ಈ ಕರುನಾಡ ಕಲೆಯನ್ನು ಕೊಂಡೊಯ್ದಿದ್ದಾರೆ.

ಚೀನಾದ ನಂಜಿಂಗ್ ಸ್ಟೇಡಿಯಂ, ಅಮೇರಿಕಾದ ಅಕ್ಕ ಸಮ್ಮೇಳನ, ಲಾಸ್ ಎಂಜಲೀಸ್, ಜರ್ಮನಿಯ ಬರ್ಲಿನ್, ದುಬೈನ್ ನ ಇಂಡಿಯನ್ ಎಕ್ಸ್ಪೋ-2020 ಸೇರಿದಂತೆ, ಭಾರತದ ನಾನಾ ಭಾಗಗಳಲ್ಲೂ ಕಾರ್ಯಕ್ರಮ ನೀಡಿದ್ದಾರೆ. ಚಂಡೀಗಡ, ತಂಜಾವೂರು, ಒಡಿಸ್ಸಾ, ಚೆನೈ, ದೆಹಲಿ, ಶ್ರವಣಬೆಳಗೊಳ,ಮಂಡಿ, ಬೀದರ್, ಹಂಪಿ ಉತ್ಸವ, ಜಾನಪದ ಜಾತ್ರೆ, ಬೆಂಗಳೂರು ಹಬ್ಬ, ಕಿತ್ತೂರು ರಾಣಿ ಚೆನ್ನಮ್ಮ ಉತ್ಸವ, ಮೈಸೂರು ಉತ್ಸವ, ಅಖಿಲ ಕರ್ನಾಟಕ ಜೈನ ಮಹಿಳಾ ಉತ್ಸವ, ಸಹ್ಯಾದ್ರಿ ಉತ್ಸವ, ಸುವರ್ಣ ಕರ್ನಾಟಕ ಉತ್ಸವ, ಮಹಿಳಾ ಯಕ್ಷಗಾನ ಉತ್ಸವ, ಮೈಸೂರು ದಸರಾ ಹೀಗೆ ಬರೆಯುತ್ತಾ ಹೋದರೆ ಇವರು ನೀಡಿದ ಕಾರ್ಯಕ್ರಮದ ಪಟ್ಟಿ ಬೆಳೆಯುತ್ತಾ ಹೋಗುತ್ತದೆ.

ಸಾವಿರಕ್ಕೂ ಅಧಿಕ ಕಾರ್ಯಕ್ರಮ. ಅದು ಬೇರೆ ಬೇರೆ ರಾಜ್ಯ ಹಾಗೂ ದೇಶದಲ್ಲಿ ಎನ್ನುವುದು ಇವರ ಸಾಧನೆಯ ಮಟ್ಟವನ್ನು ಎತ್ತಿ ತೋರಿಸುತ್ತದೆ. ಇದಲ್ಲದೇ ಆಕಾಶವಾಣಿ, ದೂರದರ್ಶನದಲ್ಲೂ ಇವರ ಕಾರ್ಯಕ್ರಮ ಪ್ರಸಾರವಾಗಿ ವೀಕ್ಷಕರ ಮೆಚ್ಚುಗೆಯ ಮಾತಿಗೆ ಸಾಕ್ಷಿಯಾಗಿದೆ. ಗೌರಿ ಇವರ ಸಾಧನೆಗೆ ಸಂದ ಪ್ರಶಸ್ತಿ-ಪುರಸ್ಕಾರಗಳ ಪಟ್ಟಿ ಕೂಡ ಹೆಮ್ಮರವಾಗಿ ಬೆಳೆಯುತ್ತಲೇ ಇದೆ.

ಪಾರಂಪರಿಕ ರಂಗ ಕಲೆಗಳ ಅನನ್ಯತೆ, ನೈಜತೆ, ಶ್ರೇಷ್ಠತೆಗೆ ಯಾವುದೇ ಕುತ್ತು ಬಾರದಂತೆ ಪಾರಂಪರಿಕ ಪ್ರಸಂಗಕ್ಕೆ ಅನುಗುಣವಾದ ವೇಷಭೂಷಣಗಳನ್ನು ರಂಗದಲ್ಲಿ ವಿಜೃಂಭಿಸುವ ಚಾಕಚಕ್ಯತೆಯನ್ನು ಈ ಮಹಿಳಾ ತಂಡ ಹೊಂದಿದೆ. ಒಟ್ಟಿನಲ್ಲಿ ಮಹಿಳೆಯರು ಮನಸ್ಸು ಮಾಡಿದರೆ ಏನೂ ಕೂಡ ಸಾಧಿಸಬಹುದೆಂದು ತೋರಿಸುವಲ್ಲಿ ಕರ್ನಾಟಕ ಮಹಿಳಾ ಯಕ್ಷಗಾನ ತಂಡ ಕೂಡ ಸಾಕ್ಷಿಯಾಗಿದೆ. ಯಕ್ಷಗಾನಂ ಗೆಲ್ಗೆ ಎಂದು ಹೇಳುವುದು ಮಾತ್ರವಲ್ಲ, ಯಕ್ಷಗಾನ ಗಲ್ಲಿ-ಗಲ್ಲಿಗೆ ಪ್ರದರ್ಶನವಾದಾಗಲೇ ಈ ಕಲೆ ಇನ್ನಷ್ಟು ಬೆಳೆಯಲು ಸಾಧ್ಯವಾಗುತ್ತದೆ. ಕಲೆ ಬೆಳೆಯಬೇಕಾದರೆ ಕಲಾವಿದರು ಬೆಳೆಯಬೇಕು, ಕಲಾವಿದರು ಬೆಳೆಯಬೇಕಾದರೆ ಪ್ರೇಕ್ಷಕರ ಸಂಖ್ಯೆ ಹೆಚ್ಚಾಗಿ ಅವರ ಪ್ರಶಂಸೆಯಿಂದ ಕಲಾವಿದ ಬೆಳೆಯಲು ಸಾಧ್ಯ. ಇಂತಹ ಕಲಾವಿದರ ಮೇಲೆ ನಿಮ್ಮೆಲ್ಲರ ಸಹಕಾರ, ಹಾರೈಕೆ ಸದಾ ಇರಲಿ..

ಹಿಂದಿನ ಪರಿಸ್ಥಿತಿಗೆ ಹೋಲಿಸಿದರೆ ಮಹಿಳೆಯರ ಸ್ಥಾನಮಾನ ಇಂದು ಪುರುಷರಿಗೆ ಸರಿ ಸಮಾನವಾಗಿದೆ. ಹಾಗಾಗಿ ಈಗೀನ ಸ್ಮರ್ಧಾತ್ಮಕ ಯುಗದಲ್ಲೀ ಬರೀ ಕೆಲಸದ ಒತ್ತಡ ಹಾಗೂ ಮನೆಯ ಜವಾಬ್ದಾರಿಗಳ ನಡುವೆ ಕುಗ್ಗದೇ, ಇಂತಹ ಕಲೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡರೆ ಮಹಿಳೆ ಇನ್ನಷ್ಟು ಬೆಳೆಯಬಹುದು. ಸ್ತ್ರೀ ಅಬಲೆ ಅಲ್ಲ, ಸಬಲೆ ಎನ್ನುವ ಸಾಲಿಗೆ ಅರ್ಥ ತುಂಬಲು ಸಾಧ್ಯ…

~ಲೇಖನ : ಚೈತ್ರ ರಾಜೇಶ್ ಕೋಟ

ಟಾಪ್ ನ್ಯೂಸ್

Dharwad: ಐಐಟಿ ನೂತನ ನಿರ್ದೇಶಕರಾಗಿ ಪ್ರೊ.ಮಹಾದೇವ ನೇಮಕ

Dharwad: ಐಐಟಿ ನೂತನ ನಿರ್ದೇಶಕರಾಗಿ ಪ್ರೊ.ಮಹಾದೇವ ನೇಮಕ

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌

Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್‌ ವಿರುದ್ಧ ಮೋದಿ ವಾಗ್ದಾಳಿ

Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್‌ ವಿರುದ್ಧ ಮೋದಿ ವಾಗ್ದಾಳಿ

8-kvasantha-bangera

K. Vasantha Bangera: ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ಅಸ್ತಂಗತ

15

Heavy Rain: ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್‌ಮೆಂಟ್‌ನ ಗೋಡೆ ಕುಸಿದು 7 ಮಂದಿ ಸಾವು

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

6-bantwala

Bantwala: ನೀರಿನ ಅಭಾವದಿಂದ ಕೃಷಿ ಹಾನಿ; ಮನನೊಂದು ಕೃಷಿಕ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

ಅಮಿತಾಭ್‌ ಟು ಶಾರುಖ್:‌ ಇಂದು ಕೋಟಿ ಕುಳರಾದ ಈ ನಟರ ಮೊದಲ ಸಂಪಾದನೆ ಎಷ್ಟಾಗಿತ್ತು ಗೊತ್ತಾ?

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

10-uv-fusion

Harekala Hajabba: ಕೋಟಿ ಒಡೆಯನಲ್ಲ, ಆದರೂ ಈತ ಕೋಟಿಗೊಬ್ಬ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Dharwad: ಐಐಟಿ ನೂತನ ನಿರ್ದೇಶಕರಾಗಿ ಪ್ರೊ.ಮಹಾದೇವ ನೇಮಕ

Dharwad: ಐಐಟಿ ನೂತನ ನಿರ್ದೇಶಕರಾಗಿ ಪ್ರೊ.ಮಹಾದೇವ ನೇಮಕ

ಸಮಾಜ – ಬ್ಯಾಂಕನ್ನು ಬಲಿಷ್ಠಗೊಳಿಸುವ ಶಕ್ತಿ ದೇವರು ಕರುಣಿಸಲಿ: ನಿತ್ಯಾನಂದ ಕೋಟ್ಯಾನ್‌

ಸಮಾಜ – ಬ್ಯಾಂಕನ್ನು ಬಲಿಷ್ಠಗೊಳಿಸುವ ಶಕ್ತಿ ದೇವರು ಕರುಣಿಸಲಿ: ನಿತ್ಯಾನಂದ ಕೋಟ್ಯಾನ್‌

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌

Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್‌ ವಿರುದ್ಧ ಮೋದಿ ವಾಗ್ದಾಳಿ

Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್‌ ವಿರುದ್ಧ ಮೋದಿ ವಾಗ್ದಾಳಿ

8-kvasantha-bangera

K. Vasantha Bangera: ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ಅಸ್ತಂಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.