ನಾಪತ್ತೆಯಾಗಿದ್ದ ಕೌಕ್ರಾಡಿಯ ವೃದ್ಧೆ ಪತ್ತೆ: 3 ದಿನ ಅರಣ್ಯದಲ್ಲೇ ವಾಸ; ಎಲೆಗಳೇ ಆಹಾರ


Team Udayavani, Mar 8, 2023, 7:13 AM IST

ನಾಪತ್ತೆಯಾಗಿದ್ದ ಕೌಕ್ರಾಡಿಯ ವೃದ್ಧೆ ಪತ್ತೆ: 3 ದಿನ ಅರಣ್ಯದಲ್ಲೇ ವಾಸ; ಎಲೆಗಳೇ ಆಹಾರ

ಉಪ್ಪಿನಂಗಡಿ: ನೆರೆ ಮನೆಗೆ ಹೋಗಿ ವಾಪಸು ಬರುವಾಗ ದಾರಿ ತಪ್ಪಿ ನಾಪತ್ತೆಯಾಗಿ ಕಾಡು ಸೇರಿದ್ದ ವೃದ್ಧೆಯೋರ್ವರು ಮೂರು ದಿನಗಳ ಬಳಿಕ ಮತ್ತೆ ಮನೆ ಸೇರಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಫೆ.28ರಂದು ಸಂಜೆ ವೇಳೆ ನಾಪತ್ತೆಯಾಗಿದ್ದ ಕೌಕ್ರಾಡಿ ಗ್ರಾಮದ ಹೊಸಮಜಲು ಸಮೀಪದ ದೋಂತಿಲ ನಿವಾಸಿ ಐಸಮ್ಮ (80)ಅವರು ಮನೆಯಿಂದ ಸುಮಾರು 4 ಕಿ.ಮೀ. ದೂರದ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದ್ದಾರೆ. ಅರಣ್ಯದಲ್ಲೇ ಮೂರು ರಾತ್ರಿ ಹಾಗೂ ಎರಡು ಹಗಲು ಕಳೆದಿರುವ ಐಸಮ್ಮರವರು ಕಾಡಿನಲ್ಲಿದ್ದ ಎಲೆಗಳನ್ನೇ ತಿಂದು ಸುರಕ್ಷಿತವಾಗಿ ಮನೆ ಸೇರಿರುವುದರಿಂದ ಮನೆಯವರು ನಿಟ್ಟುಸಿರು ಬಿಟ್ಟಿದ್ದಾರೆ.

ಐಸಮ್ಮ ಅವರು ತುಸು ಮಾನಸಿಕ ಅಸ್ವಸ್ಥೆಯಿಂದ ಬಳಲುತ್ತಿದ್ದರು. ವಯೋ ಸಹಜವಾಗಿ ಮಾತನಾಡುವುದು ಕಡಿಮೆಯಾಗಿತ್ತು. ಆದರೆ ತಮ್ಮ ನೆರೆಯ ಮನೆಗಳಿಗೆ ದಿನಾಲೂ ಭೇಟಿ ನೀಡಿ ಅವರೊಂದಿಗೆ ಬೆರೆತು ರಾತ್ರಿಯಾಗುತ್ತಲೇ ತಮ್ಮ ಮನೆ ಸೇರುತ್ತಿದ್ದರು. ಎಂದಿನಂತೆ ಫೆ.28ರಂದು ಸಂಜೆ ಮನೆಯಿಂದ ಹೊರಟವರು ನಾಪತ್ತೆಯಾಗಿದ್ದರು. ರಾತ್ರಿಯಾದರೂ ಐಸಮ್ಮ ಅವರು ಮನೆಗೆ ಹಿಂದಿರುಗದೇ ಇದ್ದ ಹಿನ್ನೆಲೆಯಲ್ಲಿ ಅವರ ಮಗ ಮಹಮ್ಮದ್‌ ನೆರೆ ಮನೆಗಳಲ್ಲಿ, ವಿಚಾರಿಸಿದ್ದರು. ಆದರೆ ಎಲ್ಲಿಯೂ ಪತ್ತೆಯಾಗಿರಲಿಲ್ಲ.

ಏರ್ತಿಲ ಅರಣ್ಯದಲ್ಲಿ ಪತ್ತೆ
ಮಾ.3ರಂದು ಬೆಳಗ್ಗೆ ಹೊಸಮಜಲು ಹಾಲಿನ ಸೊಸೈಟಿಗೆ ಹಾಲು ತರುತ್ತಿದ್ದ ಶಿಜು ಅವರಿಗೆ ಮಣ್ಣಗುಂಡಿ ಸಮೀಪದ ಏರ್ತಿಲ ರಕ್ಷಿತಾರಣ್ಯದಲ್ಲಿ ವೃದ್ಧೆಯೋರ್ವರು ಅಲೆದಾಡುತ್ತಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಮಾಹಿತಿ ಹರಡಿ ಹುಡುಕಾಡಿದಾಗ ನಾಪತ್ತೆಯಾಗಿದ್ದ ಐಸಮ್ಮರವರು ಕಂಡು ಬಂದರು. ಅವರನ್ನು ಬಳಿಕ ಮನೆಗೆ ಕರೆದುಕೊಂಡು ಬರಲಾಯಿತು.

ತಾಯಿಗಾಗಿ ಮೂರು ದಿನ ನಾವು ಹುಡುಕಾಟ ನಡೆಸದ ಜಾಗವಿಲ್ಲ. ಅವರು ನಾಪತ್ತೆಯಾಗಿದ್ದ ಮೊದಲ ದಿನ ಕಾಡಿನಲ್ಲಿ ತಡರಾತ್ರಿ 2 ಗಂಟೆ ತನಕವೂ ಹುಡುಕಾಟ ನಡೆಸಿದ್ದೇವೆ. ಸ್ಥಳೀಯ ಯುವಕರ ತಂಡವೂ ಹುಡುಕಾಟದಲ್ಲಿ ಸಾಥ್‌ ನೆರವು ನೀಡಿದ್ದರು. ಆದರೂ ನಮಗೆ ಯಾವುದೇ ಸುಳಿವು ಸಿಗಲಿಲ್ಲ. ತಾಯಿ ಕ್ಷೇಮವಾಗಿ ಬರಲೆಂದು ಹರಕೆಯೂ ಹೇಳಿದ್ದೇವೆ. ಇದೀಗ ತಾಯಿ ಕ್ಷೇಮವಾಗಿ ಬಂದಿರುವುದು ಸಂತಸ ತಂದಿದೆ ಎಂದು ಅವರ ಮಗ ಮಹಮ್ಮದ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.