Video: 60ಕ್ಕೆ ನಿವೃತ್ತಿ…99 ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾದ ಆನೆಗೆ ಭಾವಪೂರ್ಣ ವಿದಾಯ

ಕೊಜಿಯಮುಟ್ಟಿ ಆನೆ ಶಿಬಿರದಲ್ಲಿ ಕುಮ್ಕಿ ಆನೆ ಕಲೀಮ್ ಮಂಗಳವಾರ (ಮಾರ್ಚ್ 07) ನಿವೃತ್ತಿ

Team Udayavani, Mar 8, 2023, 4:49 PM IST

60 ವರ್ಷಕ್ಕೆ ನಿವೃತ್ತಿ…99 ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾದ ಆನೆಗೆ ಭಾವಪೂರ್ಣ ವಿದಾಯ

ಚೆನ್ನೈ: ಸರ್ಕಾರಿ ನೌಕರರು, ಅಂಚೆ ಇಲಾಖೆ ನೌಕರರು, ಪೊಲೀಸ್ ಇಲಾಖೆ ಹೀಗೆ ಬಹುತೇಕ ಎಲ್ಲಾ ಇಲಾಖೆಗಳಲ್ಲಿ ಕಾರ್ಯನಿರ್ವಹಿಸಿ ನಿವೃತ್ತರಾದ ವೇಳೆ ಅವರನ್ನು ಗೌರವಪೂರ್ವಕವಾಗಿ ಬೀಳ್ಕೊಡಲಾಗುತ್ತದೆ. ಆದರೆ ಬರೋಬ್ಬರಿ 99 ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡು, ನಿವೃತ್ತಿಯಾದ (60ವರ್ಷ) “ಕಲೀಮ್” ಎಂಬ ಆನೆಗೆ ತಮಿಳುನಾಡಿನ ಕೊಜಿಯಮುಟ್ಟಿ ಆನೆ ಶಿಬಿರದಲ್ಲಿ ಭಾವಪೂರ್ಣ ಗೌರವ ರಕ್ಷೆಯೊಂದಿಗೆ ಬೀಳ್ಕೊಟ್ಟ ಅಪರೂಪದ ಘಟನೆ ನಡೆದಿದಿರುವುದಾಗಿ ವರದಿಯಾಗಿದೆ.

ಇದನ್ನೂ ಓದಿ:ವೈರಲ್: ರಶ್ಮಿಕಾ ಮಂದಣ್ಣ ಮೇಲೆ ಶುಭಮನ್‌ ಗಿಲ್‌ ಗೆ ಕ್ರಶ್;‌ ಸಾರಾಳನ್ನು ಮರೆತ್ರಾ ಗಿಲ್?

ಕಲೀಮ್ ಎಂಬ ಈ ಆನೆ ಈವರೆಗೆ 99 ರಕ್ಷಣಾ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿತ್ತು. ಇದೀಗ 60 ವರ್ಷ ಪ್ರಾಯವಾದ ಹಿನ್ನೆಲೆಯಲ್ಲಿ ನಿವೃತ್ತಿಯಾಗಿದ್ದು, ಆನೆಯ ಕಾರ್ಯಾಚರಣೆ ಕಾರ್ಯ ಮರೆಯಲು ಸಾಧ್ಯವಿಲ್ಲ. ಅದಕ್ಕಾಗಿ ಅರಣ್ಯಾಧಿಕಾರಿಗಳಿಂದ ಆನೆಗೆ ಗೌರವ ರಕ್ಷೆಯ ಮೂಲಕ ಬೀಳ್ಕೊಡಲಾಯಿತು ಎಂದು ತಮಿಳುನಾಡು ಸರ್ಕಾರದ ಅರಣ್ಯ ಮತ್ತು ಪರಿಸರ, ಹವಾಮಾನ ಬದಲಾವಣೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸುಪ್ರಿಯಾ ಸಾಹು ತಿಳಿಸಿದ್ದು, ಆನೆ ಕಲೀಮ್ ಶಿಬಿರದಲ್ಲಿ ಗೌರವ ರಕ್ಷೆ ಸ್ವೀಕರಿಸುತ್ತಿರುವ ವಿಡಿಯೋವನ್ನು ಟ್ವೀಟ್ ನಲ್ಲಿ ಶೇರ್ ಮಾಡಿದ್ದಾರೆ.

“ತಮಿಳುನಾಡಿನ ಕೊಜಿಯಮುಟ್ಟಿ ಆನೆ ಶಿಬಿರದಲ್ಲಿ ಕುಮ್ಕಿ ಆನೆ ಕಲೀಮ್ ಮಂಗಳವಾರ (ಮಾರ್ಚ್ 07) ನಿವೃತ್ತಿಯಾಗಿರುವುದು ನಮ್ಮ ಕಣ್ಣುಗಳನ್ನು ತೇವವಾಗಿಸಿದ್ದು, ಹೃದಯ ತುಂಬಿ ಬಂದಿರುವುದಾಗಿ” ಸುಪ್ರಿಯಾ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಅರಣ್ಯಾಧಿಕಾರಿಗಳಿಂದ ಗೌರವ ವಂದನೆ ಸ್ವೀಕರಿಸಿದ ಕಲೀಮ್:

ಅರಣ್ಯಾಧಿಕಾರಿಗಳಿಂದ ಆನೆ ಕಲೀಮ್ ಗೌರವ ವಂದನೆ ಸ್ವೀಕರಿಸಿದ್ದು, ಬಳಿಕ ಕಲೀಮ್ ತನ್ನ ಸೊಂಡಿಲನ್ನು ಎತ್ತಿ ಅಧಿಕಾರಿಗಳಿಗೆ ಪ್ರತಿವಂದನೆ ಸಲ್ಲಿಸಿ, ಘೀಳಿಟ್ಟಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ತಾನು ತನ್ನ ಕರ್ತವ್ಯವನ್ನು ಪೂರ್ಣಗೊಳಿಸಿರುವುದಾಗಿ ಮನದಟ್ಟು ಮಾಡಿಕೊಂಡಿರುವುದು ಕಲೀಮ್ ನಡವಳಿಕೆಯಲ್ಲಿ ಗಮನಿಸಬಹುದಾಗಿದ್ದು, ತಾನು ನಿವೃತ್ತಿಯಾಗಿರುವುದರಿಂದ ತನ್ನ ಸುತ್ತ, ಮುತ್ತಲಿದ್ದ ಪ್ರತಿಯೊಬ್ಬರಿಗೂ ಪ್ರೀತಿಯನ್ನು ತೋರ್ಪಡಿಸಿರುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.