ರಾಣೆಬೆನ್ನೂರು: ಈ ಬಾರಿಯೂ ನಗಲಿಲ್ಲ ಮನ್ಮಥ-ರತಿ ಜೋಡಿ


Team Udayavani, Mar 9, 2023, 7:35 AM IST

ಈ ಬಾರಿಯೂ ನಗಲಿಲ್ಲ ಜೀವಂತ ಕಾಮ-ರತಿ

ರಾಣೆಬೆನ್ನೂರು: ಇಲ್ಲಿನ ದೊಡ್ಡಪೇಟೆಯ ರಾಮಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ದೇವಸ್ಥಾನ ಸಮಿತಿ, ಶ್ರೀ ಶಕ್ತಿ ಯುವಕ ಸಂಘ ಹಾಗೂ ಜೆಬಿಸಿಸಿ ಆಶ್ರಯದಲ್ಲಿ ಮಂಗಳವಾರ ರಾತ್ರಿ ಹೋಳಿ ಹುಣ್ಣಿಮೆ ಅಂಗವಾಗಿ 64ನೇ ವರ್ಷದ ಜೀವಂತ ಕಾಮ-ರತಿಯರನ್ನು ಕೂಡ್ರಿಸಲಾಗಿತ್ತು. ಕಾಮನ ವೇಷದಲ್ಲಿ ಗದಿಗೆಪ್ಪ ರೊಡ್ಡನವರ ಹಾಗೂ ರತಿ ವೇಷದಲ್ಲಿ ಕುಮಾರ ಹಡಪದ ಸಂಜೆ 7.30ರಿಂದ ರಾತ್ರಿ 1 ಗಂಟೆವರೆಗೆ ಕುಳಿತಿದ್ದರು.

ಈ ವರ್ಷ ರಾತ್ರಿ 12.30ರವರೆಗೂ ನಗಿಸಲು ಬಂದ ಪ್ರೇಕ್ಷಕರು ಏನ್‌ ಕಾಮಣ್ಣ ಸ್ವಲ್ಪ ನಗಪಾ, ಏ ಕಾಮಣ್ಣ ನಿನ್ನ ರತಿಗೆ ಪಪ್ಪಿ ಕೊಡಲಾ, ಇಂಥ ಗಂಟು ಮಾರಿ ಹೆಣ್ಣ ಕಟಗೊಂಡು ಹೆಂಗಾರ ಸಂಸಾರ ಮಾಡತೀಯಪಾ ಮುಂತಾದ ಅಂಗಚೇಷ್ಟೆಗಳು, ಪೋಲಿ ಮಾತುಗಳು, ಬೈಗುಳ ಹಾಗೂ ಹಾಸ್ಯ ಚಟಾಕಿಗಳ ಮೂಲಕ ನಗಿಸಲು ಪ್ರಯತ್ನಿಸಿದರೂ ತುಟಿ ಬಿಚ್ಚಲಿಲ್ಲ. ನಗಿಸಲು ಬಂದವರೇ ನಕ್ಕು ಬಂದ ದಾರಿಗೆ ಸುಂಕವಿಲ್ಲ ಎಂದು ವಾಪಸ್‌ ಆದರು.

ಪುರುಷರು, ಮಹಿಳೆಯರು, ಮಕ್ಕಳು, ವಯೋವೃದ್ಧರು ರತಿ-ಕಾಮಣ್ಣರನ್ನು ವೀಕ್ಷಿಸಿ, ಹೊಟ್ಟೆ ಹುಣ್ಣಾಗುವಂತೆ ನಕ್ಕು, ಜಿದ್ದು ಕಟ್ಟಿ ಸೋತು ನಗಿಸಲಾಗದೆ ಗೊಣಗುತ್ತ ವಾಪಸ್‌ ಹೋದರು. ಜಾತಿ ಬೇಧಭಾವ, ಹಿಂದೂ ಮುಸ್ಲಿಂ, ಕ್ರೆ„ಸ್ತ ಎನ್ನದೇ ಎಲ್ಲರೂ ನಗಿಸಲು ಪ್ರಯತ್ನಿಸಿದರು.

ಮತ್ತೆ ಅಚ್ಚರಿ:
ಕಳೆದ 24 ವರ್ಷಗಳಿಂದ ಕಾಮನ ವೇಷವನ್ನು 44ರ ಹರೆಯದ ಗದಿಗೆಪ್ಪ ರೊಡ್ಡನವರ ಹಾಗೂ ರತಿ ವೇಷದಲ್ಲಿ 34ರ ಹರೆಯದ ಕುಮಾರ ಹಡಪದ ಯಶಸ್ವಿಯಾಗಿ ನಿರ್ವಹಿಸುತ್ತಾ ಬಂದಿದ್ದಾರೆ. ಉಳಿದ ದಿನಗಳಲ್ಲೂ ಸಹ ಸಾಕಷ್ಟು ಹಾಸ್ಯಪ್ರಜ್ಞೆ ಹೊಂದಿರುವ ಇವರಿಬ್ಬರೂ, ರತಿ-ಮನ್ಮಥರಾದಾಗ ಪರಕಾಯ ಪ್ರವೇಶ ಮಾಡಿದಂತೆ ಗಂಭೀರವದನರಾಗಿ ಕುಳಿತುಕೊಳ್ಳುವ ಪರಿ ಸಾರ್ವಜನಿಕರಿಗೆ ಕುತೂಹಲ ಹಾಗೂ ಅಚ್ಚರಿಯುಂಟು ಮಾಡುತ್ತದೆ.

ಇಲ್ಲಿಯವರೆಗೆ ಯಾರೂ ಕೂಡ ಇವರನ್ನು ನಗಿಸಿದ ಹಾಗೂ ಬಹುಮಾನ ಪಡೆದ ಉದಾಹರಣೆಗಳಿಲ್ಲ. ಇದರ ನಿಗೂಢತೆ 64 ವರ್ಷಗಳಿಂದ ರಹಸ್ಯವಾಗಿಯೇ ಉಳಿದಿದೆ. ಈ ವರ್ಷವೂ ಅದು ಮುಂದುವರಿದು ಬಹುಮಾನ ಘೋಷಿಸಿದವರ ಬಳಿ ಹಣ ಉಳಿಯುಂತಾಗಿದೆ.

ಟಾಪ್ ನ್ಯೂಸ್

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.