ದೇವರು ದೊಡ್ಡವನು…ಸಾಕಾರಗೊಂಡ ಎಮ್ಮೆಕರೆ ಅಂತಾರಾಷ್ಟ್ರೀಯ ಈಜುಕೊಳ
ಆಟದ ಮೈದಾನವೂ ಇರುವುದರಿಂದ ಆರಂಭದಲ್ಲಿ ಸ್ಥಳೀಯರಿಂದ ವಿರೋಧವೂ ವ್ಯಕ್ತವಾಗಿತ್ತು.
Team Udayavani, Mar 9, 2023, 11:05 AM IST
ಮಂಗಳೂರು: ಎಮ್ಮೆಕರೆಯಲ್ಲಿ ಅಂತಾರಾಷ್ಟ್ರೀಯ ಈಜುಕೊಳ ನಿರ್ಮಾಣ ಸಂಬಂಧ 2014 ಮತ್ತು ಅದಕ್ಕೂ ಪೂರ್ವ ದಲ್ಲಿ ಚಟುವಟಿಕೆ ಆರಂಭವಾಗಿತ್ತು. ಕೊನೆಗೂ ಅಂತಿಮ ಹಂತಕ್ಕೆ ಬಂದಿದ್ದು, ಶೀಘ್ರ ಉದ್ಘಾಟನೆಯಾಗುವ ಸಂಭವವಿದೆ.
ಇದುವರೆಗೆ ಈಜು ಸ್ಪರ್ಧೆಗೆ ತರಬೇತು ಪಡೆಯುವ ಕ್ರೀಡಾಪಟುಗಳು ಮಹಾನಗರ ಪಾಲಿಕೆಯ ಲೇಡಿಹಿಲ್ ಬಳಿಯ ಈಜುಕೊಳವನ್ನೇ ಆಶ್ರಯಿಸಬೇಕಿತ್ತು. ಈ ಕೊಳದಲ್ಲಿ ತರಬೇತಿ ಪಡೆಯುವುದು ಕಷ್ಟ ಎನ್ನುವುದನ್ನು ಅರಿತು, ಆಗ ಕ್ರೀಡಾ ಸಚಿವರಾಗಿದ್ದ ಅಭಯಚಂದ್ರ ಅವರು ಎಮ್ಮೆಕೆರೆಯಲ್ಲಿ ಈಜು ಕೊಳ ನಿರ್ಮಾಣಕ್ಕೆ ಮುನ್ನುಡಿ ಬರೆದಿದ್ದರು. ಆದರೆ ಅಲ್ಲಿ ಆಟದ ಮೈದಾನವೂ ಇರುವುದರಿಂದ ಆರಂಭದಲ್ಲಿ ಸ್ಥಳೀಯರಿಂದ ವಿರೋಧವೂ ವ್ಯಕ್ತವಾಗಿತ್ತು.
ಅದೂ ಇದೂ ಎನ್ನುತ್ತಾ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿತ್ತು. ಈಗ ಸ್ಮಾರ್ಟ್ ಸಿಟಿ ಯೋಜನೆಯಡಿ ಕಾಮಗಾರಿಯನ್ನು ಕೈಗೆತ್ತಿಕೊಂಡು, 24.94 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಈಜುಕೊಳ ನಿರ್ಮಿಸಲಾಗಿದೆ. ಮಾರ್ಚ್ ಅಂತ್ಯದೊಳಗೆ ಕಾಮಗಾರಿ ಮುಗಿಸುವ ಉದ್ದೇಶ ಸ್ಮಾರ್ಟ್ ಸಿಟಿ ಲಿಮಿಟೆಡ್ನದ್ದು. ಅದು ಸಾಧ್ಯವಾದರೆ ಹಳೆಯ ಯೋಜನೆ ಯೊಂದು ಸಾರ್ವಜನಿಕರ ಬಳಕೆಗೆ ಲಭಿಸಿದಂತಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru ಧಾರಾವಾಹಿ ದೃಶ್ಯದಲ್ಲಿ ಹೆಲ್ಮೆಟ್ ಇಲ್ಲದೆ ಸಂಚಾರ; ನಟಿಗೆ ದಂಡ!
ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ ! ವರ ಸಿಗದೆ ಪತ್ರಿಕಾ ಜಾಹೀರಾತಿನ ಮೊರೆ
Puttur:”ಸಾಯಿ’ ಎನ್ನುತ್ತಾ ಪುತ್ರನನ್ನು ಕೊಂದಳಾ ತಾಯಿ?
Rain ಗುಡುಗು-ಸಿಡಿಲು ಮಳೆ; ಓರ್ವ ಸಾವು, ಇಬ್ಬರಿಗೆ ಗಾಯ; ಏಕಾಏಕಿ ವರ್ಷಧಾರೆ, ಹಲವು ಕಡೆ ಹಾನಿ
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ; ಸಮಾಜಕ್ಕಾಗಿ ದುಡಿವ ತುಡಿತವುಳ್ಳವರಿಂದ ಸಂಸ್ಥೆ ಪ್ರಗತಿ
MUST WATCH
ಹೊಸ ಸೇರ್ಪಡೆ
SIT ಪ್ರಜ್ವಲ್ ಕರೆತರಲು ವಿದೇಶಕ್ಕೆ ಹೋಗುವುದಿಲ್ಲ: ಡಾ.ಜಿ.ಪರಮೇಶ್ವರ್ ಸ್ಪಷ್ಟನೆ
Bidar:ಪಾರ್ಕ್ ನಲ್ಲಿ ಅನ್ಯಕೋಮಿನ ಪುರುಷನೊಂದಿಗೆ ಇದ್ದ ಮಹಿಳೆ ಮೇಲೆ ಹಲ್ಲೆ
Pavithra Jayaram: ರಸ್ತೆ ಅಪಘಾತದಲ್ಲಿ ಖ್ಯಾತ ಕಿರುತೆರೆ ನಟಿ ಪವಿತ್ರ ಜಯರಾಂ ದುರ್ಮರಣ
Mother’s Day: ಅಮ್ಮ ಅಂದರೆ ಪ್ರೀತಿಯ ಕಡಲು, ಮಮತೆಯ ಮಡಿಲು
UP; ಪತ್ನಿಯನ್ನು ಇಬ್ಬರು ಪುರುಷರೊಂದಿಗೆ ಹೋಟೆಲ್ ರೂಮ್ ನಲ್ಲಿ ಕಂಡ ವೈದ್ಯ!; ರಾದ್ದಾಂತ