ಕನಕಗಿರಿ:ವಿರೋಧಿಗಳಿಗೆ ಉತ್ತರ ನೀಡಲು ಸಕಾಲ: ಜನಾರ್ದನ ರೆಡ್ಡಿ
ಚಾರುಲ್ ವೆಂಕಟರಮಣ ದಾಸರಿಯನ್ನು ಬಾರಿ ಗೆಲ್ಲಿಸಿ ನನಗೆ ಶಕ್ತಿ ನೀಡಿ
Team Udayavani, Mar 9, 2023, 6:04 PM IST
ಕನಕಗಿರಿ: ನನ್ನ ರಾಜಕೀಯ ಬೆಳವಣಿಗೆ ಸಹಿಸಲಾಗದೇ, ನನ್ನನ್ನು ಹತ್ತಿಕ್ಕಲು ಪ್ರಯತ್ನಿಸುವವರಿಗೆ ಉತ್ತರ ನೀಡುವ ಸಮಯ ಬಂದಿದೆ ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಗಾಲಿ ಜನಾರ್ದನ ರೆಡ್ಡಿ ಹೇಳಿದರು. ಅವರು ಪಟ್ಟಣದ ಉತ್ಸವ ಮೈದಾನದಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ವತಿಯಿಂದ ಬುಧವಾರ ಏರ್ಪಡಿಸಿದ್ದ ಬೃಹತ್ ಸಮಾವೇಶ ಉದ್ಘಾಟಿಸಿ ಮಾತನಾಡಿದರು.
ದಕ್ಷಿಣ ಭಾರತದಲ್ಲಿ ಬಿಜೆಪಿ ಅಧಿಕಾರದ ಜೊತೆಗೆ ಬಿ. ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಲು ಮೂಲ ಕಾರಣ ನಾನು. ಕೆಲ ವಿರೋಧಿಗಳು ನನ್ನ ಬೆಳವಣಿಗೆ ಸಹಿಸಲಾಗದೇ ಇಲ್ಲಸಲ್ಲದೇ ನನ್ನ ವಿರುದ್ಧ ಆರೋಪ ಮಾಡಿ ಬಂಧನಕ್ಕೆ ಒಳಪಡಿಸಿದರು. ರಾಜ್ಯದಲ್ಲಿ ನೂತನವಾಗಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪಿಸುವ ಮೂಲಕ ಜನರ ಬೇಡಿಕೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ.
ನಮ್ಮ ಪಕ್ಷಕ್ಕೆ ರಾಜ್ಯದ ಜನತೆಯಿಂದ ಉತ್ತಮ ಸ್ಪಂದನೆ ದೊರೆಯುತ್ತಿದ್ದು, 31ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಸ್ಪರ್ಧೆ ಮಾಡುವುದರ ಜೊತೆಗೆ 25ರಿಂದ 30 ಸ್ಥಾನಗಳಲ್ಲಿ ಜಯ ಸಾ ಧಿಸಲಿದ್ದಾರೆ. ನಾವು ಬಹುಮತ ಹೊಂದದಿದ್ದರೂ ಉತ್ತಮವಾದ ಆಡಳಿತ ನೀಡುವ ಸರ್ಕಾರದ ಜೊತೆ ಕೈಗೂಡಿಸುವ ನಿಟ್ಟಿನಲ್ಲಿ ಜನರ ಬೇಡಿಕೆಗಳನ್ನು ಈಡೇರಿಸಲಾಗುವುದು.
ಕನಕಗಿರಿ ಕ್ಷೇತ್ರದಲ್ಲಿ ಒಬ್ಬ ನಾಯಕ ಕ್ಷೇತ್ರವನ್ನು ಅಭಿವೃದ್ಧಿ ಪಡಿಸದೇ ಆರೋಪಗಳಲ್ಲಿ ಸಿಲುಕಿ ವೀಡಿಯೋಗಳಲ್ಲಿ ರಾಜ್ಯಾದ್ಯಂತ ಪ್ರಚಾರವಾಗಿದ್ದಾರೆ. ಇನ್ನೊಬ್ಬರನ್ನು ನಾನೇ ರಾಜಕೀಯವಾಗಿ ಬೆಳೆಸಿದರು ಈಗಾಗಲೇ ಅವರ ದರ್ಪ ಜನರಿಗೆ ಬೇಸರವಾಗಿದೆ. ವಿದ್ಯಾವಂತ ಕೆಆರ್ಪಿ ಪಕ್ಷದ ಚಾರುಲ್ ವೆಂಕಟರಮಣ ದಾಸರಿಯನ್ನು ಬಾರಿ ಗೆಲ್ಲಿಸಿ ನನಗೆ ಶಕ್ತಿ ನೀಡಿ ಎಂದರು.
ಕನಕಗಿರಿ ಕ್ಷೇತ್ರದ ಅಭ್ಯರ್ಥಿ ಚಾರುಲ್ ವೆಂಕಟರಮಣ ದಾಸರಿ, ಕೆಆರ್ಪಿ ಪಕ್ಷದ ಜಿಲ್ಲಾಧ್ಯಕ್ಷ ಮನೋಹರ ಗೌಡ, ರಾಜ್ಯ ಮಹಿಳಾ ಶಕ್ತಿ ಕೇಂದ್ರ ಅಧ್ಯಕ್ಷೆ ಹೇಮಲತಾ ಮಾತನಾಡಿದರು. ಈ ವೇಳೆಯಲ್ಲಿ ಕನಕಗಿರಿ, ಕಾರಟಗಿ ತಾಲೂಕಿನಲ್ಲಿ ಸಾಧನೆಗೈದ ಮಹಿಳೆಯರನ್ನು ಸನ್ಮಾನಿಸಿ, ಗೌರವಿಸಲಾಯಿತು.
ಜಿಪಂ ಮಾಜಿ ಉಪಾಧ್ಯಕ್ಷ ವಿರೂಪಾಕ್ಷಗೌಡ ಹೇರೂರು, ಕೆಆರ್ಪಿಪಿ ಮಹಿಳಾ ಜಿಲ್ಲಾಧ್ಯಕ್ಷೆ ರಾಜೇಶ್ವರಿ, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಚನ್ನವೀರನಗೌಡ, ಜಿಲ್ಲಾ ವಕ್ತಾರ ಸಂಗಮೇಶ, ಯುವ ಮುಂದಾಳು ಚನ್ನಪ್ಪ ತೆಗ್ಗಿನಮನಿ, ಪ್ರಮುಖರಾದ ವಿರುಪನಗೌಡ ಹೇರೂರು, ಜಿಲಾನಿಭಾಷಾ, ಶಿವು ಸಜ್ಜನ, ಮಹೇಶ ಹಾದಿಮನಿ, ನಾಗರಾಜ ಬಾವಿಕಟ್ಟಿ, ಕರಿಬಸಪ್ಪ, ನಾಗರಾಜ, ರಮೇಶ ಆರ್ಯಾರ ಸೇರಿದಂತೆ ಇತರರು ಇದ್ದರು.
ಈ ಹಿಂದೆ ಪ್ರಾದೇಶಿಕ ಪಕ್ಷವನ್ನು ಕಟ್ಟಿದವರು ಅಧಿಕಾರ ಮಾಡುವಲ್ಲಿ ಯಶಸ್ವಿಯಾಗಿಲ್ಲ. ಜನಾರ್ದನ ರೆಡ್ಡಿ ಯಾವ ಲೆಕ್ಕ ಎನ್ನುವವರಿಗೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಉತ್ತರ ಸಿಗಲಿದೆ. ರಾಜ್ಯದ ಉದ್ದಗಲ್ಲಕ್ಕೂ ಸಂಚರಿಸಿ ಪಕ್ಷವನ್ನು ಸಂಘಟಿಸುವ ಬೆಳೆಸುವ ಪ್ರಾಮಾಣಿಕ ಪ್ರಯತ್ನವನ್ನು ಮಾಡುವಲ್ಲಿ ಯಶಸ್ವಿಯಾಗುತ್ತೇನೆ ಎಂಬ ವಿಶ್ವಾಸವಿದೆ.
ಗಾಲಿ ಜನಾರ್ದನ ರೆಡ್ಡಿ
ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ