ಬಿಜೆಪಿಗೆ ನನ್ನ ಬೆಂಬಲ; ಮಂಡ್ಯ ಜಿಲ್ಲೆಗೆ ನಿಮ್ಮ ಕೊಡುಗೆ ಏನು?HDK ವಿರುದ್ಧ ಸುಮಲತಾ ಕಿಡಿ

ಮಂಡ್ಯದ ಅಭಿವೃದ್ಧಿಗಾಗಿ ಒಂದು ಹೆಜ್ಜೆ ಮುಂದೆ ಹೋಗಿದ್ದೇನೆ

Team Udayavani, Mar 10, 2023, 1:51 PM IST

ಬಿಜೆಪಿಗೆ ನನ್ನ ಬೆಂಬಲ; ಮಂಡ್ಯ ಜಿಲ್ಲೆಗೆ ನಿಮ್ಮ ಕೊಡುಗೆ ಏನು?HDK ವಿರುದ್ಧ ಸುಮಲತಾ ಕಿಡಿ

ಮಂಡ್ಯ: ಮಂಡ್ಯ ಜಿಲ್ಲೆಯ ಜನರಿಗೋಸ್ಕರ, ಅಭಿವೃದ್ಧಿಗಾಗಿ ನಾಲ್ಕು ವರ್ಷಗಳಲ್ಲಿ ಪ್ರಾಮಾಣಿಕ ಕೆಲಸ ಮಾಡಿದ್ದೇನೆ. ಆದರೆ ನಾಲ್ಕು ವರ್ಷಗಳಲ್ಲಿ ಅನೇಕ ಸವಾಲುಗಳನ್ನು ಎದುರಿಸಿದ್ದೇನೆ. ನನಗೆ ಪ್ರತಿಯೊಂದು ವಿಷಯದಲ್ಲೂ ಅವಮಾನ ಮಾಡಿದರು. ಜಿಲ್ಲೆಗಾಗಿ ನಾನು ಮಾಡಿರುವ ಕೆಲಸದ ಬಗ್ಗೆ ಲೌಡ್ ಸ್ಪೀಕರ್ ಹಾಕಿ ಹೇಳ್ಬೇಕಾ? ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತಿದರೆ ಕೆಲವರಿಗೆ ಭಯ. ಇದು ನಮ್ಮ ಭದ್ರ ಕೋಟೆ ಅಂತೀರಾ? ಈ ಭದ್ರಕೋಟೆಗೆ ಏನು ಮಾಡಿದ್ದೀರಿ? ಇಷ್ಟು ಪವರ್ ಇಟ್ಟುಕೊಂಡು ಇಷ್ಟು ವರ್ಷ ಏನ್ ಮಾಡಿದ್ದೀರಾ? ಮಂಡ್ಯ ಜಿಲ್ಲೆಗೆ ಜೆಡಿಎಸ್ ಕೊಡುಗೆ ಏನು…ಇದು ಪಕ್ಷೇತರ ಸಂಸದೆ ಸಮಲತಾ ಅಂಬರೀಶ್ ಶುಕ್ರವಾರ(ಮಾರ್ಚ್ 10) ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಹೆಸರನ್ನು ಉಲ್ಲೇಖಿಸದೇ ಪರೋಕ್ಷವಾಗಿ ವಾಗ್ದಾಳಿ ನಡೆಸಿದ ಪರಿ ಇದಾಗಿದೆ.

ಇಂದು ಬೆಳಗ್ಗೆ ದೇಗುಲಕ್ಕೆ ಭೇಟಿ ನೀಡಿದ ನಂತರ ಮಂಡ್ಯದ ಚಾಮುಂಡೇಶ್ವರಿ ನಗರದ ನಿವಾಸದಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಹೇಳಿದ್ದಿಷ್ಟು:

ನಾನು ಆಕಸ್ಮಿಕಾಗಿ ರಾಜಕೀಯಕ್ಕೆ ಬಂದಿದ್ದೇನೆ. ರಾಜಕೀಯ ಪ್ರವೇಶಿಸಿ ನಾಲ್ಕು ವರ್ಷಗಳಾಗಿವೆ. ಅಂದು ಚುನಾವಣೆ ವೇಳೆ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಪುತ್ರನನ್ನು ಎದುರಿಸಿ ನಿಂತಿದ್ದು ನನ್ನ ಸ್ವಾರ್ಥಕ್ಕಾಗಿ ಅಲ್ಲ. ಆ ಸಂದರ್ಭದಲ್ಲಿ ನನ್ನ ಬೆಂಬಲಕ್ಕೆ ನಿಂತಿದ್ದು ಅಂಬರೀಶ್ ಅವರ ಆಪ್ತರು, ಅಭಿಮಾನಿಗಳು ಮಾತ್ರ. ಜನ ನಮ್ಮನ್ನು ಪ್ರೀತಿಸಿ ಆಶೀರ್ವದಿಸಿದ್ದರಿಂದ ನಾನು ಬೇರೆ ಆಯ್ಕೆ ಹುಡುಕಲು ಹೋಗಲಿಲ್ಲ. ಮಂಡ್ಯ ಜಿಲ್ಲೆಯ ಜನರಿಗೋಸ್ಕರ ಹೋರಾಟ ಮಾಡಿದೆ, ಆದರೆ ನನಗೆ ಚುನಾವಣೆಯ ನಂತರವೂ ನನ್ನ ಅವಾಚ್ಯ ಶಬ್ದಗಳಿಂದ ನಿಂದಿಸಿದರು. ಎಲ್ಲಾ ಅವಮಾನ, ನೋವನ್ನು ಸಹಿಸಿಕೊಂಡು ಎಲ್ಲವನ್ನೂ ಪಣಕ್ಕಿಟ್ಟು ಮುಂದೆ ಬಂದಿದ್ದೇನೆ ಎಂದು ಸುಮಲತಾ ಹೇಳಿದರು.

ದೇಶದಲ್ಲಿ ಅಭಿವೃದ್ಧಿ ಆಗುತ್ತಿರುವುದು ಮೋದಿ ನೇತೃತ್ವದಲ್ಲಿ:

ನನ್ನ ಬೆಂಬಲ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಎಂದು ಸುಮಲತಾ ಘೋಷಿಸುವ ಮೂಲಕ ಬಿಜೆಪಿ ಸೇರ್ಪಡೆ ಖಚಿತಗೊಂಡಂತಾಗಿದೆ. ಕೋವಿಡ್ ನಿರ್ವಹಣೆಗಾಗಿ ನಾನು ನನ್ನ 4 ತಿಂಗಳ ವೇತನವನ್ನು ನೀಡಿದ್ದೇನೆ. ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ ದೇಶ ಅಭಿವೃದ್ಧಿ ಕಾಣುತ್ತಿದೆ. ಪಕ್ಷೇತರ ಸಂಸದೆಯಾಗಿದ್ದರೂ ಕೇಂದ್ರ ಸರ್ಕಾರ ಅನುದಾನ ನೀಡಿದೆ. ಕೇಂದ್ರದ ಹಲವು ಯೋಜನೆಗಳು ನಮಗೆ ಸಿಕ್ಕಿವೆ. ಮಂಡ್ಯದ ಅಭಿವೃದ್ಧಿಗಾಗಿ ಒಂದು ಹೆಜ್ಜೆ ಮುಂದೆ ಹೋಗಿದ್ದೇನೆ ಎಂದು ಹೇಳುವ ಮೂಲಕ ಸುಮಲತಾ ಅಂಬರೀಶ್ ಬಿಜೆಪಿಗೆ ಬಹುಪರಾಕ್ ಹೇಳಿದ್ದಾರೆ.

ಎರಡು ಸ್ಥಳಗಳಲ್ಲಿ ನನ್ನ ಮೇಲೆ ಹಲ್ಲೆಗೆ ಯತ್ನಿಸಿದ್ದರು:

ಸಂಸದೆ, ಮಹಿಳೆ ಎನ್ನುವುದನ್ನು ನೋಡದೇ ನನ್ನ ಶ್ರೀರಂಗಪಟ್ಟಣ, ಪಾಂಡವಪುರದಲ್ಲಿ ಅವಮಾನ ಮಾಡಿದ್ದರು. ಜಿಲ್ಲೆಯಲ್ಲಿ ಜನರು ರಾಜಕಾರಣದ ಭಾಷಣವನ್ನು ಕೇಳಿಕೊಂಡು ಇರಬೇಕಾ? ನಾನು ಮನಸ್ಸು ಮಾಡದಿದ್ದರೆ ಮೈಶುಗರ್ ಓಪನ್ ಆಗುತ್ತಿರಲಿಲ್ಲ. ಮಂಡ್ಯದ ಅಕ್ಕಪಕ್ಕದ ಜಿಲ್ಲೆಗಳೂ ಅಭಿವೃದ್ಧಿ ಆಗುತ್ತಿದೆ. ಕನ್ನಂಬಾಡಿ ಇಲ್ಲಾಂದ್ರೆ ಮಂಡ್ಯ ಜಿಲ್ಲೆಯೇ ಇಲ್ಲ. ಮಂಡ್ಯ ಜಿಲ್ಲೆಗೆ ಮಹಾರಾಜರು ಕೊಡುಗೆ ಕೊಟ್ಟಿದ್ದಾರೆ. ಮಂಡ್ಯ ಜಿಲ್ಲೆಯನ್ನು ನಾವು ಕಾಪಾಡಿಕೊಳ್ಳಬೇಕು. ಮಂಡ್ಯದಲ್ಲಿ ಬರೀ ರಾಜಕಾರಣನಾ, ಅಭಿವೃದ್ಧಿ ಬೇಡವಾ? ಎಂದು ಸುಮಲತಾ ಪ್ರಶ್ನಿಸಿದರು.

ಮಂಡ್ಯದ ತಾಯಿ ಮಕ್ಕಳ ಆಸ್ಪತ್ರೆಗಾಗಿ ಸತತ ಹೋರಾಟ ಮಾಡಿದ್ದೇನೆ. ನಾನು ಮನಸ್ಸು ಮಾಡಿದ್ದಕ್ಕೆ ಅಕ್ರಮ ಗಣಿಗಾರಿಕೆ ಸ್ಥಗಿತಗೊಂಡಿದೆ. ಆದರೆ ಅಕ್ರಮದ ವಿರುದ್ಧ ಹೋರಾಡಿದ ನನ್ನ ಮೇಲೆ ಎರಡು ಕಡೆಗಳಲ್ಲಿ ಹಲ್ಲೆ ನಡೆಸಲು ಯತ್ನಿಸಲಾಗಿತ್ತು ಎಂದು ಸುಮಲತಾ ಆರೋಪಿಸಿದ್ದಾರೆ.

ಟಾಪ್ ನ್ಯೂಸ್

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.