ನಾನು ಶಾಸಕನಾದ ಬಳಿಕ ಕ್ಷೇತ್ರದಲ್ಲಿ ಗೂಂಡಾಗಿರಿ ಸ್ತಬ್ಧ


Team Udayavani, Mar 10, 2023, 2:25 PM IST

TDY-18

ಕೆ.ಆರ್‌.ಪೇಟೆ: “ನಾನು ಶಾಸಕನಾದ ನಂತರ ಕೆ.ಆರ್‌ .ಪೇಟೆಯಲ್ಲಿ ಗೂಂಡಾಗಿರಿ ನಿಯಂತ್ರಣಕ್ಕೆ ಬಂದಿದೆ. ತಾಲೂಕಿನಲ್ಲಿ ಆರು ಜನ ಶಾಸಕರಿಲ್ಲ, ತಾಲೂಕಿಗೆ ಇರುವವನು ನಾನೊಬ್ಬನೇ ಶಾಸಕ. ಕ್ಷೇತ್ರದ ಜನತೆ ಆಶೀರ್ವಾದದ ಬಲದಿಂದ ಸತತವಾಗಿ 3 ಬಾರಿ ಶಾಸಕನಾಗಿ ಜನತೆಯ ಸೇವೆ ಮಾಡುತ್ತಿದ್ದೇನೆ’ ಎಂದು ಸಚಿವ ನಾರಾಯಣಗೌಡ ಹೇಳಿದರು.

ತಾಲೂಕಿನ ಬೂಕನಕೆರೆ ಹೋಬಳಿ ವಿಠಲಾಪುರ ಗ್ರಾಪಂ ವ್ಯಾಪ್ತಿಯ ಮಡುವಿನಮ್ಮ ದೇಗುಲ ಬಯಲಿನಲ್ಲಿ ನಡೆದ ತಮ್ಮ ಅಭಿಮಾನಿಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

3 ಬಾರಿ ಗೆಲ್ಲಿಸಿದ್ದಾರೆ: ನನ್ನ ರಾಜಕೀಯ ವಿರೋಧಿ ಗಳು ನಾನು ಮುಂಬೈಗೆ ಓಡಿಹೋಗುತ್ತೇನೆ, ಜನರ ಕೈಗೆ ಸಿಗಲ್ಲ ಎಂದೆಲ್ಲಾ ಅಪಪ್ರಚಾರ ನಡೆಸಿದ್ದಾರೆ. ತಾಲೂಕಿನ ಜನತೆ ನನ್ನ ಮೇಲೆ ವಿಶ್ವಾಸವನ್ನಿಟ್ಟು ಸತತ ವಾಗಿ 3ಬಾರಿ ಗೆಲ್ಲಿಸಿದ್ದಾರೆ. ಜನತೆಯ ಆಶೀರ್ವಾದ ವಿದ್ದರೆ ಮತ್ತೂಮ್ಮೆ ಶಾಸಕನಾಗಿ ಇತಿಹಾಸ ನಿರ್ಮಿಸುವ ಜತೆಗೆ ನಾನು ಸಚಿವನಾಗಿ ಮಂಜೂರು ಮಾಡಿಸಿ ತಂದಿರುವ 1700ಕೋಟಿ ರೂ.ಗಳಿಗೂ ಹೆಚ್ಚಿನ ಅಭಿ ವೃದ್ಧಿ ಕೆಲಸ ಅನುಷ್ಠಾನಗೊಳ್ಳಲಿವೆ ಎಂದು ತಿಳಿಸಿದರು.

ತಂದೆ-ತಾಯಿಯನ್ನು ಕಾಣುತ್ತೇನೆ: ಹಾಗೆಯೇ ಉಳಿಕೆ ಕೆಲಸವನ್ನು ಮುಂದುವರೆಸಿ ಕೆ.ಆರ್‌.ಪೇಟೆ ಯನ್ನು ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರವನ್ನಾಗಿ ಮಾಡಿ ತೋರಿಸುತ್ತೇನೆ. ನನ್ನ ರಾಜಕೀಯ ವಿರೋಧಿ ಗಳ ಟೀಕೆ-ಟಿಪ್ಪಣೆಗಳಿಗೆ ಅಭಿವೃದ್ಧಿ ಮೂಲಕ ಉತ್ತರ ನೀಡುತ್ತೇನೆ. ಕ್ಷೇತ್ರದ ಜನತೆ, ನನ್ನ ಅಭಿಮಾನಿಗಳು ರಾಜಕಾರಣದಲ್ಲಿ ಮುಂದುವರಿಯಿರಿ ಎಂದರೆ ರಾಜಕಾರಣ ಮಾಡ್ತೀನಿ ಇಲ್ಲದಿದ್ದರೆ ಒಬ್ಬ ಸಾಮಾನ್ಯ ಸೇವಕನಂತೆ ಜನಸಾಮಾನ್ಯರ ಕಷ್ಟಸುಖಗಳಿಗೆ ಸ್ಪಂದಿಸಿ ಕೆಲಸ ಮಾಡ್ತೀನಿ. ಈ ಮೂಲಕ ಕ್ಷೇತ್ರದ ಜನರಲ್ಲಿ ನನ್ನ ತಂದೆ-ತಾಯಿಯನ್ನು ಕಾಣುತ್ತೇನೆಂದರು.

ಎರಡೂ ಬಗೆಯ ಊಟ: ತಾಲೂಕಿನ ಎಲ್ಲಾ ಹೋಬ ಳಿಗಳಲ್ಲಿ ನನ್ನ ಅಭಿಮಾನಿಗಳು ಜನಸಾಮಾನ್ಯರು ಹಾಗೂ ಕಾರ್ಯಕರ್ತರೊಂದಿಗೆ ಕಷ್ಟಸುಖವನ್ನು ಹಂಚಿಕೊಳ್ಳಲು ಸಭೆ ನಡೆಸುತ್ತಿದ್ದಾರೆ. ತಾಲೂಕಿನ ಸಂತೇಬಾಚಹಳ್ಳಿ ಹೋಬಳಿ ಗವಿರಂಗನಾಥ ಕ್ಷೇತ್ರದಲ್ಲಿ ನಡೆದಿದ್ದು, ಶೀಳನೆರೆ ಹೋಬಳಿ ಅಭಿಮಾನಿಗಳ ಸಭೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆದಿದೆ. ಅತಿಥಿ ಸತ್ಕಾರ ಮಾಡುವುದು, ಊಟ ಹಾಕಿ ಆತಿಥ್ಯ ನೀಡುವುದು ನಾನು ನನ್ನ ಜೀವನದಲ್ಲಿ ಬೆಳೆಸಿಕೊಂಡು ಬಂದಿರುವ ಸಂಸ್ಕೃತಿ. ಮಾ.12ರಂದು ಅಕ್ಕಿಹೆಬ್ಟಾಳು ಹೋಬಳಿಯಲ್ಲಿ ಸಭೆ ನಡೆಯಲಿದೆ. ಮಾಂಸಾಹಾರಿ ಊಟ ಜನಸಾಮಾನ್ಯರಿಗೆ ಇಷ್ಟವಾದ್ದರಿಂದ ಬಾಡೂಟ ಮತ್ತು ಸಸ್ಯಾಹಾರಿ ಊಟ ಸೇರಿ ಎರಡೂ ಬಗೆಯ ಊಟದ ಕಾರ್ಯಕ್ರಮಗಳು ನಡೆಯುತ್ತಿವೆ ಎಂದು ಉತ್ತರಿಸಿದರು.

ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಶ್ರೀನಿವಾಸ್‌, ತಾಪಂ ಮಾಜಿ ಅಧ್ಯಕ್ಷ ಬಿ.ಜವರಾಯಿ ಗೌಡ, ಜಿಲ್ಲಾ ತೋಟದ ಬೆಳೆಗಾರರ ಸಂಘ ಹಾಫ್‌ ಕಾಮ್ಸ್‌ ಅಧ್ಯಕ್ಷ ಕೆ.ಜಿ.ತಮ್ಮಣ್ಣ, ಸೋಮನಹಳ್ಳಿ ಗ್ರಾಪಂ ಅಧ್ಯಕ್ಷ ಕಟ್ಟೆಕ್ಯಾತನಹಳ್ಳಿ ಪಾಪಣ್ಣ, ಪಿಕಾರ್ಡ್‌ ಬ್ಯಾಂಕಿನ ಅಧ್ಯಕ್ಷ ಕಾಂತರಾಜು, ಬೂಕನಕೆರೆ ಗ್ರಾಪಂ ಅಧ್ಯಕ್ಷೆ ಸುನಂದಮ್ಮ, ಉಪಾಧ್ಯಕ್ಷೆ ಜ್ಯೋತಿಮಂಜು, ಮುಖಂಡರಾದ ದೊದ್ದನಕಟ್ಟೆ ಪಾಂಡು, ಬಳ್ಳೇಕೆರೆ ಪ್ರವೀಣ್‌, ಮನುಶರತ್‌, ಸಚಿವರ ಆಪ್ತಸಹಾಯಕ ದಯಾನಂದ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.