ನಾವು ಕೇಳಿದ್ದು ಇನ್ನೂ ಈಡೇರದ್ದು; ಶಿಲಾನ್ಯಾಸವಾದದ್ದೇ ಭಾಗ್ಯ ಕೂಡಿ ಬರಲಿಲ್ಲ ಯೋಗ

ಮಹಿಳಾ ಪಾಲಿಟೆಕ್ನಿಕ್‌ನ ಜಾಗವನ್ನು ಅಂತಿಮಗೊಳಿಸಲಾಗಿತ್ತು

Team Udayavani, Mar 10, 2023, 10:40 AM IST

ನಾವು ಕೇಳಿದ್ದು ಇನ್ನೂ ಈಡೇರದ್ದು; ಶಿಲಾನ್ಯಾಸವಾದದ್ದೇ ಭಾಗ್ಯ ಕೂಡಿ ಬರಲಿಲ್ಲ ಯೋಗ

ಮಂಗಳೂರು: ದ.ಕ. ಜಿಲ್ಲೆಯ ಕಲಾವಿದರಿಗೆ ಸುಸಜ್ಜಿತ ರಂಗ ಮಂದಿರ ನಿರ್ಮಾಣವಾಗಬೇಕೆನ್ನುವುದು ಜಿಲ್ಲೆಯ ಕಲಾವಿದರು, ಕಲಾಭಿಮಾನಿಗಳ ಮೂರೂವರೆ ದಶಕಗಳಿಗೂ ಹಿಂದಿನ ಬೇಡಿಕೆ. ಪ್ರತೀ ಬಾರಿ ಹೊಸ ಸರಕಾರ ಆಡಳಿತಕ್ಕೆ ಬಂದಾಗ ಆರಂಭದಲ್ಲಿ ಈ ಬಗ್ಗೆ ಚರ್ಚೆ, ಸಭೆ ನಡೆಸಿ ಪ್ರಕ್ರಿಯೆಗಳನ್ನು ನಡೆಸಲಾಗುತ್ತದೆ.

ರಂಗ ಮಂದಿರಕ್ಕಾಗಿ ಐದಕ್ಕೂ ಅಧಿಕ ಬಾರಿ ಶಿಲಾನ್ಯಾಸವನ್ನೂ ನಡೆಸಲಾಗಿದೆ. ಆದರೆ ರಂಗ ಮಂದಿರ ಕಟ್ಟಡ ಮಾತ್ರ ತಲೆ ಎತ್ತಿಲ್ಲ! ತುಳು ಭಾಷೆಸೇರಿದಂತೆ ನಾಟಕ ಪ್ರದರ್ಶನ, ನೃತ್ಯ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಪ್ರದರ್ಶನಕ್ಕೆ ಸುಸಜ್ಜಿತ ರಂಗ ಮಂದಿರ ಬೇಕೆಂದು ಕಲಾವಿದರು ಹಾಗೂ ಕಲಾಭಿಮಾನಿಗಳು ಜಿಲ್ಲಾಡಳಿತ, ರಾಜಕಾರಣಿಗಳನ್ನು ಒತ್ತಾಯಿಸುತ್ತಾ ಬಂದರು. ಕೊನೆಗೆ ಹೋರಾಟ 2019ರಲ್ಲಿ ಹೊಸ ಸ್ವರೂಪ ಪಡೆದುಕೊಂಡು ಟ್ವಿಟರ್‌ ಅಭಿಯಾನದ ಮೂಲಕವೂ ಜನಪ್ರತಿನಿಧಿಗಳ ಗಮನ ಸೆಳೆದಿತ್ತು.

ಹೀಗೆ ರಂಗ ಮಂದಿರ ನಿರ್ಮಾಣದ ಪ್ರಸ್ತಾವ ಆರಂಭಗೊಂಡಾಗ 4 ಕೋಟಿ ರೂ. ಗಳಿದ್ದ ಯೋಜನಾ ವೆಚ್ಚ 24 ಕೋಟಿ ರೂ. ಗಳಿಗೇರಿತ್ತು. ಹಲವು ಜಾಗಗಳನ್ನು ಗುರುತಿಸಿ ಕೈಬಿಟ್ಟು ಕೊನೆಯದಾಗಿ 2010ರಲ್ಲಿ ಬೊಂದೇಲ್‌ ನ ಮಹಿಳಾ ಪಾಲಿಟೆಕ್ನಿಕ್‌ನ ಜಾಗವನ್ನು ಅಂತಿಮಗೊಳಿಸಲಾಗಿತ್ತು. ಆ ಸಂದರ್ಭದಲ್ಲಿ ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಶಿಲಾನ್ಯಾಸ ಮಾಡಿದ್ದರು.

24 ಕೋಟಿ ರೂ. ವೆಚ್ಚದ ಯೋಜನೆಯನ್ನು ಕೇಂದ್ರ ಸರಕಾರದ ಸಂಸ್ಕೃತಿ ಇಲಾಖೆಯ ಠಾಗೋರ್‌ ಕಲ್ಚರಲ್‌ ಕಾಂಪ್ಲೆಕ್ಸ್‌ ಸ್ಕೀಂನಡಿ ಶೇ. 60ರಷ್ಟು ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಉಳಿದ 9.6 ಕೋಟಿ ರೂ. ರಾಜ್ಯ ಸರಕಾರದ ಪಾಲು ಎಂದು ಅಂದಾಜಿಸಲಾಗಿತ್ತು. ಆದರೆ ಕೇಂದ್ರದ ಅನುದಾನ ದೊರೆಯದಾಗ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಡಿ ನಿರ್ಮಿಸಲು ಉದ್ದೇಶಿಸಲಾಯಿತು.

ಇವೆಲ್ಲವೂ ಆಗಿ, ಸ್ವಲ್ಪ ಸಮಯದ ಹಿಂದೆ ಕಲಾವಿದರ ಹೋರಾಟ, ಒತ್ತಡದ ಪರಿಣಾಮವಾಗಿ ಈ ಹಿಂದಿನ ಆಡ ಳಿತದ ಡಿಪಿಆರ್‌ ಬದಲಾವಣೆ ಮಾಡಿ ಅಂದಾಜು 9.9 ಕೋಟಿ ರೂ. ವೆಚ್ಚದಲ್ಲಿ ಡಿಪಿಆರ್‌ ತಾಂತ್ರಿಕ ಅನುಮೋದನೆಗಾಗಿ ಪೌರಾಡಳಿತ ಸಚಿವಾಲಯಕ್ಕೆ ಸಲ್ಲಿಕೆಯಾಯಿತು. ಇನ್ನೂ ಆಡಳಿತಾತ್ಮಕ ಅನುಮೋದನೆ ದೊರಕಿಲ್ಲ. ಕಲಾವಿದರು ಮತ ದಾರರಾಗಿ ಪರಿಗಣಿಸಲ್ಪಡದ ಕಾರಣವೇನೋ, ಸರಕಾರ ರಂಗ ಮಂದಿರ ಮನಸ್ಸು ಮಾಡುತ್ತಿಲ್ಲ ಎನ್ನುವುದು ಕಲಾವಿದರ ಅಳಲು.

-ಸತ್ಯ

ಟಾಪ್ ನ್ಯೂಸ್

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

1-wwwqe

HSC PARALI; ಲಕ್ಷದ್ವೀಪದಿಂದ ಮಂಗಳೂರಿಗೆ ಆಗಮಿಸಿದ ಹೈ ಸ್ಪೀಡ್ ಪರಲಿ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

16-uv-fusion

Aranthodu: ವಾಹನಗಳ ಮಧ್ಯೆ ಸರಣಿ ಅಪಘಾತ; ಬೈಕ್ ಸವಾರ ಗಂಭೀರ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

accident

Yellapur: ಟಿಪ್ಪರ್ ಗೆ ಢಿಕ್ಕಿಯಾಗಿ ಬೈಕ್ ಸಹಸವಾರೆ ಬಾಲಕಿ ಮೃತ್ಯು

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.