ಪ್ರತಿಷ್ಠಿತ ಸಿಲಿಕಾನ್ ವ್ಯಾಲಿ ಬ್ಯಾಂಕ್ ಬಂದ್…ಅಮೆರಿಕದ 2ನೇ ಅತೀ ದೊಡ್ಡ Bank ವೈಫಲ್ಯ!

ಸ್ಟಾರ್ಟ್ ಅಪ್ ಇಂಡಸ್ಟ್ರಿ ಮೇಲೆ ದೊಡ್ಡ ಹೊಡೆತ ಬಿದ್ದಿತ್ತು.

Team Udayavani, Mar 11, 2023, 12:01 PM IST

ಪ್ರತಿಷ್ಠಿತ ಸಿಲಿಕಾನ್ ವ್ಯಾಲಿ ಬ್ಯಾಂಕ್ ಬಂದ್…ಅಮೆರಿಕದ 2ನೇ ಅತೀ ದೊಡ್ಡ Bank ವೈಫಲ್ಯ!

ವಾಷಿಂಗ್ಟನ್: ಅಮೆರಿಕದ ಪ್ರತಿಷ್ಠಿತ ಬ್ಯಾಂಕ್ ಗಳಲ್ಲಿ ಒಂದಾದ “ಸಿಲಿಕಾನ್ ವ್ಯಾಲಿ ಬ್ಯಾಂಕ್” ನ ಹೂಡಿಕೆದಾರರು ಮತ್ತು ಠೇವಣಿದಾರರು ಬರೋಬ್ಬರಿ 42 ಬಿಲಿಯನ್ ಡಾಲರ್ ನಷ್ಟು ಬೃಹತ್ ಮೊತ್ತದ ಹಣವನ್ನು ಹಿಂಪಡೆಯಲು ಪ್ರಯತ್ನಿಸಿದ ಪರಿಣಾಮ ಬ್ಯಾಂಕ್ ನ ನಗದು ವ್ಯವಹಾರದಲ್ಲಿ ಕೊರತೆ ಕಂಡು ಬಂದಿದ್ದು, ಈ ಹಿನ್ನೆಲೆಯಲ್ಲಿ ಬ್ಯಾಂಕ್ ಅನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಇದು ಅಮೆರಿಕದ ಹಣಕಾಸು ವಹಿವಾಟಿನ 2ನೇ ಅತೀ ದೊಡ್ಡ ಬ್ಯಾಂಕ್ ವೈಫಲ್ಯವಾಗಿದೆ ಎಂದು ವರದಿ ತಿಳಿಸಿದೆ.

ಇದನ್ನ ಓದಿ:ಚಾ.ನಗರ ಲೋಕಸಭಾ ಕ್ಷೇತ್ರದ ಅಭಿವೃದ್ಧಿಯ ಹರಿಕಾರ ಧ್ರುವನಾರಾಯಣ

ಬಿಕ್ಕಟ್ಟಿಗೆ ಕಾರಣವೇನು?

ಎಸ್ ವಿಬಿ ಮಾತೃ ಸಂಸ್ಥೆಯಾದ ಎಸ್ ವಿಬಿ ಫೈನಾಶ್ಶಿಯಲ್ ಗ್ರೂಪ್, ತನ್ನ ಭಾಗವಾಗಿರುವ 21 ಬಿಲಿಯನ್ ಡಾಲರ್ ನಷ್ಟು ಮೌಲ್ಯದ ಬಾಂಡ್ಸ್ ಮತ್ತು ಡಿಬೆಂಚರ್ಸ್ ಅನ್ನು ಮಾರಾಟ ಮಾಡುವುದಾಗಿ ಘೋಷಿಸಿದ ಬೆನ್ನಲ್ಲೇ ಹೂಡಿಕೆದಾರರು ಮತ್ತು ಠೇವಣಿದಾರರಲ್ಲಿ ಆತಂಕ ಹುಟ್ಟಿಸಲು ಕಾರಣವಾಗಿತ್ತು. ಇದರ ಮುಂದುವರಿದ ಭಾಗವಾಗಿ ಸಿಲಿಕಾನ್ ವ್ಯಾಲಿ ಬ್ಯಾಂಕ್ ನ ಗ್ರಾಹಕರು ಭಾರೀ ಪ್ರಮಾಣದ ಠೇವಣಿ ಹಿಂಪಡೆದಿದ್ದು, ಸ್ಟಾರ್ಟ್ ಅಪ್ ಇಂಡಸ್ಟ್ರಿ ಮೇಲೆ ದೊಡ್ಡ ಹೊಡೆತ ಬಿದ್ದಿತ್ತು.

ಈ ಬೆಳವಣಿಗೆಯ ನಡುವೆಯೇ ಫೆಡರಲ್ ಡೆಪಾಸಿಟ್ ಇನ್ಸೂರೆನ್ಸ್ ಕಾರ್ಪೋರೇಶನ್ (ಎಫ್ ಡಿಐಸಿ), ಸಿಲಿಕಾನ್ ವ್ಯಾಲಿ ಬ್ಯಾಂಕ್ ನ ಆಸ್ತಿ-ಪಾಸ್ತಿಯನ್ನು ತನ್ನ ವಶಕ್ಕೆ ತೆಗೆದುಕೊಂಡಿದೆ.

ದಶಕಗಳಷ್ಟು ಇತಿಹಾಸ ಹೊಂದಿರುವ ಸಿಲಿಕಾನ್ ವ್ಯಾಲಿ ಬ್ಯಾಂಕ್ ಪ್ರಮುಖವಾಗಿ ಠೇವಣಿ ಸಂಗ್ರಹ, ಟೆಕ್ ಸಂಸ್ಥೆಗಳಿಗೆ ಸಾಲ ನೀಡುವುದು, ಆನ್ ಲೈನ್ ಬ್ಯಾಂಕಿಂಗ್, ವಿದೇಶಿ ವಿನಿಮಯ ವಹಿವಾಟು ಸೇರಿದಂತೆ ಹಲವು ಸರ್ವೀಸ್ ಗಳನ್ನು ನೀಡುತ್ತಿತ್ತು. ಜಗತ್ತಿನಾದ್ಯಂತ ಎಸ್ ವಿ ಬಿ ಗ್ರಾಹಕರನ್ನು ಹೊಂದಿತ್ತು.

ಸಿಲಿಕಾನ್ ವ್ಯಾಲಿ ಬ್ಯಾಂಕ್ ನ ಆರ್ಥಿಕ ಸ್ಥಿತಿ ಡೋಲಾಯಮಾನವಾಗಿದೆ ಎಂಬ ಸುದ್ದಿ ಹೊರಬೀಳುತ್ತಿದ್ದಂತೆಯೇ ಎಸ್ ವಿಬಿ ಷೇರು ಮೌಲ್ಯ ಶೇ.60ರಷ್ಟು ಕುಸಿತ ಕಂಡಿತ್ತು. ಇದರ ಪರಿಣಾಮ 80 ಬಿಲಿಯನ್ ಡಾಲರ್ ನಷ್ಟು ನಷ್ಟ ಅನುಭವಿಸಿದೆ. ಆದರೂ ಹೂಡಿಕೆದಾರರ ಹಣ ಸುರಕ್ಷಿತವಾಗಿದೆ ಎಂದು ಭರವಸೆ ನೀಡಿತ್ತಾದರೂ ಗ್ರಾಹಕರಲ್ಲಿ ಆತಂಕ ಮೂಡಿಸಿತ್ತು. ಈ ನಿಟ್ಟಿನಲ್ಲಿ ಎಫ್ ಡಿಐಸಿ ಬ್ಯಾಂಕ್ ಅನ್ನು ತಾತ್ಕಾಲಿಕವಾಗಿ ಮುಚ್ಚಲು ಸೂಚನೆ ನೀಡಿದೆ.

ಠೇವಣಿ ವಾಪಸ್ ಕೊಡುತ್ತೇವೆ:

ಮಾರ್ಚ್ 13ರಂದು ಸಿಲಿಕಾನ್ ವ್ಯಾಲಿ ಬ್ಯಾಂಕ್ ನ ಕೇಂದ್ರ ಕಚೇರಿ ಮತ್ತು ಎಲ್ಲಾ ಶಾಖೆಗಳನ್ನು ತೆರೆಯಲಿದ್ದು, ವಿಮೆ ಹೊಂದಿರುವ ಠೇವಣಿದಾರರ ಹಣ ನೀಡುವುದಾಗಿ ಎಫ್ ಡಿಐಸಿ ಭರವಸೆ ನೀಡಿದೆ. ಆದರೆ ಎಫ್ ಡಿಐಸಿ ಪ್ರಕಾರ, 2022ರ ಅಂತ್ಯದ ವೇಳೆಗೆ ಬ್ಯಾಂಕ್ ನ 175 ಶತಕೋಟಿ ಡಾಲರ್ ಠೇವಣಿಗಳಲ್ಲಿ ಶೇ.89ರಷ್ಟು ಠೇವಣಿಗಳಿಗೆ ವಿಮೆ ಮಾಡಿಲ್ಲ. ಆ ಗ್ರಾಹಕರ ಠೇವಣಿ ಭವಿಷ್ಯ ಏನು ಎಂಬುದು ಅತಂತ್ರವಾಗಿದೆ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

1-wdsad

I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ

1-wwwqe

HSC PARALI; ಲಕ್ಷದ್ವೀಪದಿಂದ ಮಂಗಳೂರಿಗೆ ಆಗಮಿಸಿದ ಹೈ ಸ್ಪೀಡ್ ಪರಲಿ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

Uppinangady: ತೀವ್ರ ಜ್ವರ; ಅರ್ಚಕ ಸಾವು

Uppinangady: ತೀವ್ರ ಜ್ವರ; ಅರ್ಚಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.